Just In
- 40 min ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 46 min ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 1 hr ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 2 hrs ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
Don't Miss!
- News Voter Guide: ಮತದಾನ ಮಾಡುವ ಮುನ್ನ ಈ ಅಂಶಗಳ ಬಗ್ಗೆ ಗಮನವಿರಲಿ
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
400 ಅಡಿ ಕಂದಕಕ್ಕೆ ಉರುಳಿದ ಫೋರ್ಡ್ ಎಂಡೀವರ್ ಹೊಸ ಕಾರು...
ದೇಶಾದ್ಯಂತ ಪ್ರತಿ 10 ನಿಮಿಷಕ್ಕೊಂದು ಭೀಕರ ಅಪಘಾತ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಬಹುತೇಕ ಪ್ರಕರಣಗಳಲ್ಲಿ ಸುರಕ್ಷಾ ಕ್ರಮಗಳಿಲ್ಲದೇ ಪ್ರಾಣಹಾನಿ ಹೆಚ್ಚುತ್ತಿರುವುದನ್ನು ನಾವು ಗಮನಿಸಬಹುದಾಗಿದೆ.
Recommended Video
ದೇಶಾದ್ಯಂತ ಪ್ರತಿ 10 ನಿಮಿಷಕ್ಕೊಂದು ಭೀಕರ ಅಪಘಾತ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಬಹುತೇಕ ಪ್ರಕರಣಗಳಲ್ಲಿ ಸುರಕ್ಷಾ ಕ್ರಮಗಳಿಲ್ಲದೇ ಪ್ರಾಣಹಾನಿ ಹೆಚ್ಚುತ್ತಿರುವುದನ್ನು ನಾವು ಗಮನಿಸಬಹುದಾಗಿದ್ದು, ನಿನ್ನೆಯಷ್ಟೇ ನಡೆದ ಅಪಘಾತ ಪ್ರಕರಣವೊಂದನ್ನು ಗಮನಿಸಿದರೇ ಸುರಕ್ಷಾ ಕ್ರಮಗಳಿಗೆ ಹೆಚ್ಚಿನ ಒತ್ತು ಏಕೆ ನೀಡಬೇಕು ಎಂಬುವುದು ಸ್ಪಷ್ಟವಾಗುತ್ತೆ.
ಕಾರುಗಳಲ್ಲಿ ಅಳವಡಿಸಲಾಗಿರುವ ಸುರಕ್ಷಾ ಕ್ರಮ ಬಗೆಗೆ ಹೆಚ್ಚಿನ ಒತ್ತು ನೀಡುತ್ತಿಲ್ಲವಾದ್ದರಿಂದ ಅಪಘಾತಗಳ ತೀವ್ರತೆ ಹೆಚ್ಚುತ್ತಿದ್ದು, ನಿನ್ನೆ ನಡೆದ ಅಪಘಾತ ಪ್ರಕರಣವೊಂದರಲ್ಲಿ ಫೋರ್ಡ್ ಎಂಡೀವರ್ ಬರೋಬ್ಬರಿ 400 ಅಡಿ ಕಂದಕಕ್ಕೆ ಉಳಿಬಿದ್ದಿದ್ದರೂ ಕಾರಿನಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕನಕವಳ್ಳಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಕ್ಕೆಂದು ಬಂದಿದ್ದ ಫೋರ್ಡ್ ಎಂಡೀವರ್ ಎಸ್ಯುವಿ ಕಾರೊಂದು ವೇಗದಲ್ಲಿದ್ದಾಗ ನಿಯಂತ್ರಣ ತಪ್ಪಿ 400 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ 7 ಜನ (ಚಾಲಕ ಸೇರಿ) ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಗಂಭೀರ ಗಾಯಗಳನ್ನು ಹೊರತುಪಡಿಸಿ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕುಟುಂಬ ಸಮೇತರಾಗಿ ಕೊಲ್ಲಾಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಗುಡ್ಡಗಾಡು ಪ್ರದೇಶವಾಗಿರುವ ಸಿಂಧುದುರ್ಗ ಮಾರ್ಗದಲ್ಲಿ ಕಾರು ಚಾಲಕನಿಗೆ ಸರಿಯಾದ ಮಾಹಿತಿ ಇಲ್ಲದ ಹಿನ್ನೆಲೆ ಕಾರು ಚಾಲನೆ ನಿಯಂತ್ರಣಕ್ಕೆ ಸಿಕ್ಕಿಲ್ಲ.
ಆದ್ರೆ ಕಾರಿನಲ್ಲಿ ಏರ್ಬ್ಯಾಗ್ ಸೌಲಭ್ಯ ಮತ್ತು ಬಲಿಷ್ಠವಾದ ಕಾರಿನ ಬಾಡಿ ಕಿಟ್ ಕಾರಿನಲ್ಲಿದ್ದವರ ಪ್ರಾಣ ಉಳಿಸಿದ್ದು, ಗಾಯಗೊಂಡಿದ್ದ ಏಳು ಜನಕ್ಕೂ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆ ನಡೆದಾಗ ಸ್ಥಳೀಯರೇ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸೇರಿದ್ದು, ನಡೆದ ಘಟನೆ ಬಗ್ಗೆ ಕಾರಿನ ಮಾಲೀಕ ಜಿತೇಂದ್ರ ಸಿಂಗ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಫೋರ್ಡ್ ಎಂಡೀವರ್ ಕಾರಿನಲ್ಲಿ ಒದಗಿಸಲಾಗಿರುವ ಸುರಕ್ಷಾ ತಂತ್ರಜ್ಞಾನಗಳೇ ನಮ್ಮ ಜೀವ ಉಳಿಯಲು ಕಾರಣವಾಗಿದ್ದು, 400 ಅಡಿ ಕಂದಕಕ್ಕೆ ಬಿದ್ದ ನಾವು ಜೀವಂತವಾಗಿ ಬಂದಿರುವುದೇ ಪವಾಡ ಎಂದಿದ್ದಾರೆ.
ಹೀಗಾಗಿ ಪ್ರತಿಯೊಬ್ಬ ಕಾರು ಮಾಲೀಕರು ಕೂಡಾ ಕಾರಿನಲ್ಲಿರುವ ಸುರಕ್ಷಾ ಕ್ರಮಗಳ ಬಗ್ಗೆ ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿರುವ ಜಿತೇಂದ್ರ ಸಿಂಗ್, ಬಲಿಷ್ಠವಾಗಿ ನಿರ್ಮಾಣಗೊಂಡಿರುವ ಫೋರ್ಡ್ ಎಂಡೀವರ್ ಕಾರುಗಳ ಬಗ್ಗೆ ಮೆಚ್ಚುಗೆ ಕೂಡಾ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರು ಮಾಲೀಕ ಜಿತೇಂದ್ರ ಸಿಂಗ್ ಅವರು ಘಟನೆ ಬಗ್ಗೆ ಮಾತನಾಡಿರುವ ವಿಡಿಯೋ ಇಲ್ಲಿದೆ ನೋಡಿ.
Trending On DriveSpark Kannada:
ಸುಖಕರ ಕಾರು ಪ್ರಯಾಣಕ್ಕೆ ಕಡ್ಡಾಯವಾಗಿ ಬೇಕು ಈ 9 ಆಕ್ಸೆಸರಿಗಳು..