Just In
- 48 min ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- 1 hr ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 1 hr ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 2 hrs ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
400 ಅಡಿ ಕಂದಕಕ್ಕೆ ಉರುಳಿದ ಫೋರ್ಡ್ ಎಂಡೀವರ್ ಹೊಸ ಕಾರು...
ದೇಶಾದ್ಯಂತ ಪ್ರತಿ 10 ನಿಮಿಷಕ್ಕೊಂದು ಭೀಕರ ಅಪಘಾತ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಬಹುತೇಕ ಪ್ರಕರಣಗಳಲ್ಲಿ ಸುರಕ್ಷಾ ಕ್ರಮಗಳಿಲ್ಲದೇ ಪ್ರಾಣಹಾನಿ ಹೆಚ್ಚುತ್ತಿರುವುದನ್ನು ನಾವು ಗಮನಿಸಬಹುದಾಗಿದೆ.
Recommended Video
ದೇಶಾದ್ಯಂತ ಪ್ರತಿ 10 ನಿಮಿಷಕ್ಕೊಂದು ಭೀಕರ ಅಪಘಾತ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಬಹುತೇಕ ಪ್ರಕರಣಗಳಲ್ಲಿ ಸುರಕ್ಷಾ ಕ್ರಮಗಳಿಲ್ಲದೇ ಪ್ರಾಣಹಾನಿ ಹೆಚ್ಚುತ್ತಿರುವುದನ್ನು ನಾವು ಗಮನಿಸಬಹುದಾಗಿದ್ದು, ನಿನ್ನೆಯಷ್ಟೇ ನಡೆದ ಅಪಘಾತ ಪ್ರಕರಣವೊಂದನ್ನು ಗಮನಿಸಿದರೇ ಸುರಕ್ಷಾ ಕ್ರಮಗಳಿಗೆ ಹೆಚ್ಚಿನ ಒತ್ತು ಏಕೆ ನೀಡಬೇಕು ಎಂಬುವುದು ಸ್ಪಷ್ಟವಾಗುತ್ತೆ.
ಕಾರುಗಳಲ್ಲಿ ಅಳವಡಿಸಲಾಗಿರುವ ಸುರಕ್ಷಾ ಕ್ರಮ ಬಗೆಗೆ ಹೆಚ್ಚಿನ ಒತ್ತು ನೀಡುತ್ತಿಲ್ಲವಾದ್ದರಿಂದ ಅಪಘಾತಗಳ ತೀವ್ರತೆ ಹೆಚ್ಚುತ್ತಿದ್ದು, ನಿನ್ನೆ ನಡೆದ ಅಪಘಾತ ಪ್ರಕರಣವೊಂದರಲ್ಲಿ ಫೋರ್ಡ್ ಎಂಡೀವರ್ ಬರೋಬ್ಬರಿ 400 ಅಡಿ ಕಂದಕಕ್ಕೆ ಉಳಿಬಿದ್ದಿದ್ದರೂ ಕಾರಿನಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಕನಕವಳ್ಳಿ ಬಳಿ ಈ ಘಟನೆ ನಡೆದಿದ್ದು, ಪ್ರವಾಸಕ್ಕೆಂದು ಬಂದಿದ್ದ ಫೋರ್ಡ್ ಎಂಡೀವರ್ ಎಸ್ಯುವಿ ಕಾರೊಂದು ವೇಗದಲ್ಲಿದ್ದಾಗ ನಿಯಂತ್ರಣ ತಪ್ಪಿ 400 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದ 7 ಜನ (ಚಾಲಕ ಸೇರಿ) ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಗಂಭೀರ ಗಾಯಗಳನ್ನು ಹೊರತುಪಡಿಸಿ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕುಟುಂಬ ಸಮೇತರಾಗಿ ಕೊಲ್ಲಾಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಗುಡ್ಡಗಾಡು ಪ್ರದೇಶವಾಗಿರುವ ಸಿಂಧುದುರ್ಗ ಮಾರ್ಗದಲ್ಲಿ ಕಾರು ಚಾಲಕನಿಗೆ ಸರಿಯಾದ ಮಾಹಿತಿ ಇಲ್ಲದ ಹಿನ್ನೆಲೆ ಕಾರು ಚಾಲನೆ ನಿಯಂತ್ರಣಕ್ಕೆ ಸಿಕ್ಕಿಲ್ಲ.
ಆದ್ರೆ ಕಾರಿನಲ್ಲಿ ಏರ್ಬ್ಯಾಗ್ ಸೌಲಭ್ಯ ಮತ್ತು ಬಲಿಷ್ಠವಾದ ಕಾರಿನ ಬಾಡಿ ಕಿಟ್ ಕಾರಿನಲ್ಲಿದ್ದವರ ಪ್ರಾಣ ಉಳಿಸಿದ್ದು, ಗಾಯಗೊಂಡಿದ್ದ ಏಳು ಜನಕ್ಕೂ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆ ನಡೆದಾಗ ಸ್ಥಳೀಯರೇ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸೇರಿದ್ದು, ನಡೆದ ಘಟನೆ ಬಗ್ಗೆ ಕಾರಿನ ಮಾಲೀಕ ಜಿತೇಂದ್ರ ಸಿಂಗ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಫೋರ್ಡ್ ಎಂಡೀವರ್ ಕಾರಿನಲ್ಲಿ ಒದಗಿಸಲಾಗಿರುವ ಸುರಕ್ಷಾ ತಂತ್ರಜ್ಞಾನಗಳೇ ನಮ್ಮ ಜೀವ ಉಳಿಯಲು ಕಾರಣವಾಗಿದ್ದು, 400 ಅಡಿ ಕಂದಕಕ್ಕೆ ಬಿದ್ದ ನಾವು ಜೀವಂತವಾಗಿ ಬಂದಿರುವುದೇ ಪವಾಡ ಎಂದಿದ್ದಾರೆ.
ಹೀಗಾಗಿ ಪ್ರತಿಯೊಬ್ಬ ಕಾರು ಮಾಲೀಕರು ಕೂಡಾ ಕಾರಿನಲ್ಲಿರುವ ಸುರಕ್ಷಾ ಕ್ರಮಗಳ ಬಗ್ಗೆ ಹೆಚ್ಚಿನ ಒತ್ತು ನೀಡಬೇಕೆಂದು ಹೇಳಿರುವ ಜಿತೇಂದ್ರ ಸಿಂಗ್, ಬಲಿಷ್ಠವಾಗಿ ನಿರ್ಮಾಣಗೊಂಡಿರುವ ಫೋರ್ಡ್ ಎಂಡೀವರ್ ಕಾರುಗಳ ಬಗ್ಗೆ ಮೆಚ್ಚುಗೆ ಕೂಡಾ ವ್ಯಕ್ತಪಡಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರು ಮಾಲೀಕ ಜಿತೇಂದ್ರ ಸಿಂಗ್ ಅವರು ಘಟನೆ ಬಗ್ಗೆ ಮಾತನಾಡಿರುವ ವಿಡಿಯೋ ಇಲ್ಲಿದೆ ನೋಡಿ.
Trending On DriveSpark Kannada:
ಸುಖಕರ ಕಾರು ಪ್ರಯಾಣಕ್ಕೆ ಕಡ್ಡಾಯವಾಗಿ ಬೇಕು ಈ 9 ಆಕ್ಸೆಸರಿಗಳು..