Just In
- 4 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 4 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 6 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 7 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕಾಗಿ ಕೇಂದ್ರದಿಂದ ಸದ್ಯದಲ್ಲೇ ಮಹತ್ವದ ನಿರ್ಧಾರ..!
ಹೆಚ್ಚುತ್ತಿರುವ ಇಂಧನ ಬೆಲೆಗಳು ಮತ್ತು ಕಚ್ಚಾತೈಲ ಆಮದು ವಿಚಾರದಲ್ಲಿ ಆಗುತ್ತಿರುವ ಅಂತರಾಷ್ಟ್ರೀಯ ಸಂಘರ್ಷದಿಂದಾಗಿ ದೇಶದ ಪ್ರಗತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದ್ದು, ಈ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅವಲಂಬನೆಯನ್ನು ತಗ್ಗಿಸಲು ಕೇಂದ್ರ ಸರ್ಕಾರವು ಪರ್ಯಾಯ ಇಂಧನಗಳ ಬಳಕೆ ಮೇಲೆ ಹೆಚ್ಚಿನ ಒತ್ತು ನೀಡುವಂತಹ ಹಲವು ಹೊಸ ಯೋಜನೆಯನ್ನು ಜಾರಿಗೆ ಮಾಡಲು ಮುಂದಾಗಿದೆ.
2030ರ ಹೊತ್ತಿಗೆ ವಿಶ್ವಾದ್ಯಂತ ಶೇ.99ರಷ್ಟು ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸುವ ಉದ್ದೇಶದಿಂದ ವಿಶ್ವದ ಪ್ರಮುಖ ರಾಷ್ಟ್ರಗಳು ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಪೂರಕವಾದ ಮಾರುಕಟ್ಟೆ ಒದಗಿಸುತ್ತಿದ್ದು, ಇದೀಗ ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ದ್ವಿಗುಣಗೊಳಿಸುವ ಸಲುವಾಗಿ ಬೃಹತ್ ಯೋಜನೆಯೊಂದನ್ನು ಜಾರಿ ಮಾಡಲು ಮುಂದಾಗಿದೆ.
ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ಕಾರುಗಳನ್ನ ಖರೀದಿಗೆ ಪೂರಕವಾದ ವಾತಾವರಣ ನಿರ್ಮಿಸಲು ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸ ಯೋಜನೆಗಳಿಗೆ ಚಾಲನೆ ನೀಡಲಿದೆ.
ಕೇಂದ್ರ ಬಹತ್ ಕೈಗಾರಿಕಾ ಅಭಿವೃದ್ಧಿ ಸಚಿವಾಲಯವು ಕೇಂದ್ರ ಸಚಿವ ಸಂಪುಟಕ್ಕೆ ಹೊಸ ಶಿಫಾರಸ್ಸು ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳ ಮಾರಾಟ ಮತ್ತು ಬಳಕೆಯನ್ನು ಹೆಚ್ಚಿಸಲು ಮೊದಲು ಎಲೆಕ್ಟ್ರಿಕ್ ಕಾರುಗಳ ಆಮದು ಮತ್ತು ಬಿಡಿಭಾಗಗಳ ಮೇಲಿನ ಆಮದು ಸುಂಕಗಳನ್ನು ತಗ್ಗಿಸುವಂತೆ ಮನವಿ ಮಾಡಿದೆ.
ಇದಕ್ಕೆ ಕೇಂದ್ರ ಸಚಿವ ಸಂಪುಟ ಸಹ ಸಕಾರಾತ್ಮಕವಾಗಿಯೇ ಪ್ರಕ್ರಿಯಿಸಿದ್ದು, ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ತ್ವರಿತಗತಿಯ ಬೆಳವಣಿಗೆ ಆಗಬೇಕಿದ್ದಲ್ಲಿ ಆಮದು ಸುಂಕಗಳನ್ನು ತಗ್ಗಿಸುವ ಅನಿವಾರ್ಯತೆ ಕುರಿತಂತೆ ಕೇಂದ್ರಕ್ಕೆ ಬಹತ್ ಕೈಗಾರಿಕಾ ಅಭಿವೃದ್ಧಿ ಸಚಿವಾಲಯವು ಮನವರಿಕೆ ಮಾಡಿದೆ.
ಸದ್ಯ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಎಲೆಕ್ಟ್ರಿಕ್ ಕಾರುಗಳು ಖರೀದಿಗೆ ಲಭ್ಯವಿದ್ದು, ಎಲೆಕ್ಟ್ರಿಕ್ ಕಾರು ಖರೀದಿಗೆ ಆಸಕ್ತಿ ಇದ್ದರೂ ಸಹ ಬಹುತೇಕ ಗ್ರಾಹಕರು ಕೆಲವು ಕಾರಣಾಂತರಗಳಿಂದ ಅವುಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಇರುವ ಪ್ರಮುಖ ಎಲೆಕ್ಟ್ರಿಕ್ ಕಾರುಗಳು ಸಾಮಾನ್ಯ ಕಾರುಗಳಿಂತ ಎರಡು ಮೂರು ಪಟ್ಟು ಹೆಚ್ಚು ಬೆಲೆ ಹೊಂದಿರುವುದಲ್ಲದೇ, ಅಗತ್ಯ ಚಾರ್ಜಿಂಗ್ ಸ್ಟೆಷನ್ಗಳು ಇಲ್ಲದಿರುವುದು ಸಹ ಇವಿ ಕಾರುಗಳ ಖರೀದಿಯು ವ್ಯರ್ಥ ಎನ್ನುವ ಭಾವನೆ ಗ್ರಾಹಕರಲ್ಲಿದೆ.
ಹೀಗಾಗಿ ಎಲೆಕ್ಟ್ರಿಕ್ ಕಾರುಗಳ ಆಮದು ಮೇಲಿನ ಸುಂಕ ತಗ್ಗಿಸುವುದರಿಂದ ಕಾರಿನ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವುದಲ್ಲದೇ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರಿರುವ ಕಚ್ಚಾ ತೈಲ ಆಮದು ಮೇಲಿನ ಅವಲಂಬನೆಯು ಸಹ ತಗ್ಗಲಿದೆ.
ಮಹೀಂದ್ರಾ ಹೊರತು ಪಡಿಸಿ ಬಹುತೇಕ ವಾಹನ ಉತ್ಪಾದನಾ ಸಂಸ್ಥೆಗಳು ಹೊಸ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯ ಬೀಡಿಭಾಗಗಳಿಗಾಗಿ ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಗಳನ್ನೇ ಅವಲಂಬನೆ ಮಾಡಿದ್ದು, ಇದು ಸಹಜವಾಗಿಯೇ ಎಲೆಕ್ಟ್ರಿಕ್ ಕಾರುಗಳ ಬೆಲೆ ಹೆಚ್ಚಳಕ್ಕೆ ಕಾರಣ ಎನ್ನಬಹುದು.
MOST READ: ಜನಸಾಮಾನ್ಯರ ಮೇಲೆ ಕೇಸ್ ಜಡಿಯುವ ಪೊಲೀಸರಿಗೆ ಡಿಸಿಎಂ ಪುತ್ರಿಯ ದರ್ಬಾರ್ ಯಾಕೆ ಕಾಣಿಸ್ತಾ ಇಲ್ಲ?
ಇದರಲ್ಲಿ ಮಹೀಂದ್ರಾ ಸಂಸ್ಥೆ ಮಾತ್ರ ಸ್ಥಳೀಯವಾಗಿ ಬೀಡಿಭಾಗಗಳನ್ನು ಬಳಕೆ ಮಾಡುತ್ತಿದೆಯಾದ್ರು ಎಲೆಕ್ಟ್ರಿಕ್ ಕಾರುಗಳಿಗೆ ಬೇಕಿರುವ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯಕ್ಕಾಗಿ ಚೀನಾ ಮತ್ತು ತೈವಾನ್ ಮಾರುಕಟ್ಟೆಯನ್ನೇ ನೆಚ್ಚಿಕೊಂಡಿದ್ದು, ಇದನ್ನು ಸಹ ಸ್ಥಳೀಯವಾಗಿಯೇ ನಿರ್ಮಾಣ ಮಾಡಲು ಈಗಾಗಲೇ ಮಹತ್ವದ ಯೋಜನೆಯೊಂದಕ್ಕೆ ಚಾಲನೆ ನೀಡಲಾಗಿದೆ.
ಕೇಂದ್ರದ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಂಸ್ಥೆಯೊಂದಿಗೆ ಕೈ ಜೋಡಿಸಿರುವ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಮತ್ತು ರಾಶಿ ಸೋಲಾರ್ ಪವರ್ ಸಂಸ್ಥೆಗಳು ಲೀಥಿಯಂ ಅಯಾನ್ ಬ್ಯಾಟರಿ ಅಭಿವೃದ್ಧಿಗಾಗಿ ಪರಸ್ಪರ ಸಹಿ ಹಾಕಿದ್ದು, ಸ್ಥಳೀಯವಾಗಿ ಸದ್ಯದಲ್ಲೇ ಲೀಥಿಯಂ ಅಯಾನ್ ಬ್ಯಾಟರಿಗಳನ್ನು ಉತ್ಪಾದನೆ ಆರಂಭ ಮಾಡಲಿವೆ.
ಇದರಿಂದಾಗಿ ಇಷ್ಟುಗಳ ಕಾಲ ಲೀಥಿಯಂ ಅಯಾನ್ ಬ್ಯಾಟರಿಗಳ ಆಮದು ಮಾಡಿಕೊಳ್ಳಲು ಚೀನಾ, ಜಪಾನ್, ಮಂಗೋಲಿಯಾ ದೇಶಗಗಳನ್ನೇ ಅವಲಂಭಿಸಿದ್ದ ಭಾರತಕ್ಕೆ ಹೊಸ ಯೋಜನೆಯಿಂದ ಭಾರೀ ಪ್ರಮಾಣದ ಆದಾಯ ಹರಿದು ಬರುವುದಲ್ಲದೇ ಸ್ಥಳೀಯವಾಗಿ ನಿರ್ಮಾಣವಾಗುವುದರಿಂದ ಎಲೆಕ್ಟ್ರಿಕ್ ಕಾರುಗಳನ್ನ ಖರೀದಿಸುವ ಗ್ರಾಹಕರಿಗೂ ಇದರಿಂದ ಲಾಭವಾಗಲಿದೆ.
MOST READ: ಹೈವೆನಲ್ಲಿ ದರೋಡೆ ಮಾಡುತ್ತಿದ್ದ ಖದೀಮರಿಗೆ ಡಿಸಿಪಿ ಅಣ್ಣಾಮಲೈ ಮಾಸ್ಟರ್ ಸ್ಟ್ರೋಕ್..!
ಇನ್ನು ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಮತ್ತಷ್ಟು ಆಫರ್ಗಳನ್ನು ನೀಡಲು ಯೋಜನೆ ರೂಪಿಸಿರುವ ಕೇಂದ್ರ ಸರ್ಕಾರವು ಸಬ್ಸಡಿ ಯೋಜನೆ, ಮೂರು ವರ್ಷದ ತನಕ ಟ್ರೋಲ್ ಫ್ರಿ ಮತ್ತು ಎರಡು ವರ್ಷಗಳ ಇನ್ಸುರೆನ್ಸ್, ಬಿಡಿಭಾಗಗಳ ಖರೀದಿ ಮೇಲೆ ರಿಯಾಯ್ತಿ ದರ ಅನ್ವಯವಾಗುವಂತೆ ನಿಯಮ ರೂಪಿಸುತ್ತಿದೆ.