Just In
- 19 min ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 25 min ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 1 hr ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 2 hrs ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
Don't Miss!
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆದ್ದಾರಿಗಳಲ್ಲಿ ಇನ್ಮುಂದೆ 100 ಕಿಮಿ ಸ್ಪೀಡ್ನಲ್ಲಿ ಹೋಗಬಹುದಂತೆ....
ಹೆದ್ದಾರಿಗಳಲ್ಲಿ ವಾಹನಗಳ ವೇಗದ ಮಿತಿ ಹೆಚ್ಚಿಸುವ ಮಹತ್ವದ ಪ್ರಸ್ತಾವನೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ಸೂಚಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಿಗೆ ಗಂಟೆಗೆ 100 ಕಿ.ಮೀ ಮತ್ತು ಎಕ್ಸ್ಪ್ರೆಸ್ ವೇಗಳಲ್ಲಿ ಗಂಟೆಗೆ 120ಕಿಮಿ ವೇಗದ ಮೀತ
ಹೆದ್ದಾರಿಗಳಲ್ಲಿ ವಾಹನಗಳ ವೇಗದ ಮಿತಿ ಹೆಚ್ಚಿಸುವ ಮಹತ್ವದ ಪ್ರಸ್ತಾವನೆಗೆ ಕೇಂದ್ರ ಸರ್ಕಾರವು ಒಪ್ಪಿಗೆ ಸೂಚಿಸಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಿಗೆ ಗಂಟೆಗೆ 100 ಕಿ.ಮೀ ಮತ್ತು ಎಕ್ಸ್ಪ್ರೆಸ್ ವೇಗಳಲ್ಲಿ ಗಂಟೆಗೆ 120ಕಿಮಿ ವೇಗದ ಮೀತಿ ಜಾರಿ ಮಾಡಲು ಮುಂದಾಗಿದೆ.
ಇನ್ನು ಹೊಸ ನಿಯಮದ ಪ್ರಕಾರ ನಗರದೊಳಗಿನ ಕಾರುಗಳಿಗೆ ಗಂಟೆಗೆ 70 ಕಿ.ಮೀ. ವೇಗ ಮತ್ತು ಬೈಕ್ಗಳಿಗೆ 60 ಕಿ.ಮೀ. ವೇಗದ ಮಿತಿಯನ್ನು ನಿಗದಿ ಪಡಿಸಲಾಗುತ್ತಿದ್ದು, ಇದೀಗ ಅಧಿಸೂಚನೆ ಹೊರಡಿಸಲು ಹೊಸ ಪ್ರಸ್ತಾವನೆಯನ್ನು ಕಾನೂನು ಸಚಿವಾಲಯಕ್ಕೆ ವರ್ಗಾಯಿಸಿದೆ.
ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಮಂತ್ರಿ ನಿತಿನ್ ಗಡ್ಕರಿ ಅವರು ಬುಧವಾರದಂದು ನಗರದ ರಸ್ತೆಗಳು ಮಾತ್ರವಲ್ಲದೇ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್ ಪ್ರೆಸ್ ವೇಗಳಲ್ಲಿನ ಪರಿಷ್ಕೃತ ವೇಗದ ಮಿತಿಯನ್ನು ಹೆಚ್ಚಿಸಲು ಸಮ್ಮತ ಸೂಚಿಸಿದ್ದಾರೆ.
ಹೀಗಾಗಿ ಇದು ಪ್ರಾಯೋಗಿಕವಾಗಿ ಸ್ಥಳೀಯ ಆಡಳಿತ ವ್ಯಾಪ್ತಿಗಳಲ್ಲಿ ಬರುವ ರಸ್ತೆಗಳಲ್ಲಿ ಪರಿಷ್ಕೃತ ವೇಗ ಜಾರಿಯಾಗಲಿದೆ ಎನ್ನಲಾಗಿದ್ದು, ಇದಕ್ಕೂ ಮುನ್ನ ಆಯಾ ರಾಜ್ಯ ಸರ್ಕಾರಗಳು ಸಹ ಒಪ್ಪಿಗೆ ಸೂಚಿಸುವ ಅವಶ್ಯಕತೆ ಕೂಡಾ ಇದೆ.
ಕೇವಲ ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ ವೇಗಳಲ್ಲಿನ ವೇಗದ ಮೀತಿಯನ್ನು ಮಾತ್ರ ಹೆಚ್ಚಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕಿದ್ದು, ಸ್ಥಳೀಯವಾಗಿ ಸಂಪರ್ಕ ಸಾಧಿಸುವ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿನ ವೇಗದ ಮೀತಿಯನ್ನು ಆಯಾ ರಾಜ್ಯ ಸರ್ಕಾರಗಳೇ ಅಂತಿಮಗೊಳಿಸಲಿವೆ.
ಇದಲ್ಲದೇ ವಾಣಿಜ್ಯ ವಾಹನಗಳ ಮಿತಿಯನ್ನು ರಾ.ಹೆದ್ದಾರಿಗಳಲ್ಲಿ ಪ್ರತಿ ಗಂಟೆಗೆ 100 ಕಿ.ಮೀ ಮತ್ತು ನಗರಗಳ ವ್ಯಾಪ್ತಿಯಲ್ಲಿ ಗಂಟೆಗೆ 60 ಕಿ.ಮೀ ಗೆ ಹೆಚ್ಚಿಸಲಾಗಿದ್ದು, ರಾ.ಹೆದ್ದಾರಿಗಳಲ್ಲಿ ಮೋಟಾರ್ ಸೈಕಲ್ಗಳ ಮಿತಿಯನ್ನು ಗಂಟೆಗೆ 80 ಕಿ.ಮೀ ಗೆ ಹೆಚ್ಚಿಸಿದೆ.
ಅಪಘಾತಗಳ ಸಂಖ್ಯೆ ದ್ವಿಗುಣವಾಗುತ್ತಾ?
ಹೌದು, ಹೊಸ ಯೋಜನೆಯಿಂದಾಗಿ ವಾಹನಗಳ ಇಂಧನ ದಕ್ಷತೆ ಮತ್ತು ಪ್ರಯಾಣದ ಅವಧಿ ತಗ್ಗುವ ಮೂಲಕ ಆದಾಯದಲ್ಲಿ ಏರಿಕೆಯಾಗುತ್ತೆ ಎಂಬ ಉದ್ದೇಶವಿದ್ದರೂ ವಾಹನಗಳ ವೇಗದಿಂದ ಭಾರತೀಯ ರಸ್ತೆಗಳಲ್ಲಿ ಏರಿಕೆಯಾಗುವ ಅಪಘಾತಗಳ ಸಂಖ್ಯೆ ಬಗ್ಗೆಯೂ ಎಚ್ಚರಿಕೆ ವಹಿಸುವಬೇಕಾದ ಅವಶ್ಯಕತೆಯಿದೆ.
ವರದಿಗಳ ಪ್ರಕಾರ ಸದ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲೇ ಪ್ರತಿ ವರ್ಷ 1.50 ಲಕ್ಷಕ್ಕಿಂತ ಹೆಚ್ಚು ಜನ ದುರ್ಮರಣಕ್ಕಿಡಾಗುತ್ತಿದ್ದು, ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ವಾಹನಗಳ ಮಿತಿ ನಿರ್ಧರಿಸುವುದು ಕೇಂದ್ರದ ಮುಂದಿರುವ ಸವಾಲು.
ಈ ಮಧ್ಯೆ ಕೇಂದ್ರ ಸರ್ಕಾರವು ಮುಂದಿನ 5 ವರ್ಷಗಳ ಅವಧಿಯಲ್ಲಿ ಸಂಪೂರ್ಣ ನಿಯಂತ್ರಣ ಸಾಧಿಸಬಲ್ಲ 1 ಸಾವಿರ ಕಿ.ಮೀ ಎಕ್ಸ್ಪ್ರೆಸ್ ವೇ ನಿರ್ಮಾಣ ಮಾಡಲು ಮುಂದಾಗಿದ್ದು, ಈ ರಸ್ತೆಗಳಲ್ಲಿ ಸುರಕ್ಷಾ ಮಾನದಂಡಗಳೊಂದಿಗೆ ಕಾರುಗಳು ಗಂಟೆಗೆ 130 ರಿಂದ 140 ಕಿಮಿ ವೇಗದಲ್ಲಿ ಚಾಲನೆ ಮಾಡಬಹುದಾದ ವ್ಯವಸ್ಥೆಯಿರುತ್ತದೆ.
ಒಟ್ಟಿನಲ್ಲಿ ವಾಹನ ವೇಗದ ಮಿತಿಯನ್ನು ಹೆಚ್ಚಿಸುತ್ತಿರುವುದು ಗಮನಾರ್ಹ ಸಂಗತಿಯಾಗಿದ್ದರೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಇಂತಹ ಯೋಜನೆಗಳನ್ನು ಜಾರಿಗೆ ತಂದಲ್ಲಿ ಅಭಿವೃದ್ಧಿಗಿಂತ ಅನಾಹುತಗಳೇ ಹೆಚ್ಚು ಎನ್ನಬಹುದು.