Just In
- 54 min ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 1 hr ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 2 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- 2 hrs ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
Don't Miss!
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನೆಗಾಗಿ ಕೇಂದ್ರದಿಂದ ಬೃಹತ್ ಯೋಜನೆ..
ಎಲೆಕ್ಟ್ರಿಕ್ ಬ್ಯಾಟರಿ ಉತ್ಪಾದನೆಗಾಗಿ ಕೇಂದ್ರ ಸರ್ಕಾರವು ಬೃಹತ್ ಯೋಜನೆಯನ್ನು ರೂಪಿಸಿದ್ದು, ಹೊಸ ಯೋಜನೆಯಿಂದಾಗಿ ಎಲೆಕ್ಟ್ರಿಕ್ ಕಾರುಗಳ ಬೆಲೆಗಳಲ್ಲೂ ಭಾರೀ ಬದಲಾವಣೆಯಾಗುವುದಲ್ಲದೇ ಅಗ್ಗದ ಬೆಲೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಾಗುವ ನೀರಿಕ್ಷೆಗಳಿವೆ.
ಇಷ್ಟು ದಿನಗಳ ಕಾಲ ಎಲೆಕ್ಟ್ರಿಕ್ ಕಾರುಗಳ ನಿರ್ಮಾಣಕ್ಕಾಗಿ ಬೇಕಿದ್ದ ಮುಖ್ಯ ತಾಂತ್ರಿಕ ಅಂಶವಾದ ಲೀಥಿಯಂ ಅಯಾನ್ ಬ್ಯಾಟರಿ ಉತ್ಪನ್ನಗಳಿಗಾಗಿ ವಿದೇಶಿ ಮಾರುಕಟ್ಟೆಗಳನ್ನೇ ಅವಲಂಬಿಸಬೇಕಾದ ಅನಿವಾರ್ಯತೆಗಳಿದ್ದವು. ಆದ್ರೆ ಇನ್ಮುಂದೆ ಉತ್ತಮ ಗುಣಮಟ್ಟದ ಲೀಥಿಯಂ ಅಯಾನ್ ಬ್ಯಾಟರಿಗಳು ಭಾರತದಲ್ಲೇ ಸಿದ್ದವಾಗಲಿದ್ದು, ಇದರಿಂದ ಕಾರುಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಲಿದೆ.
ಈ ಸಂಬಂಧ ಕೇಂದ್ರದ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಂಸ್ಥೆಯೊಂದಿಗೆ ಕೈ ಜೋಡಿಸಿರುವ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಮತ್ತು ರಾಶಿ ಸೋಲಾರ್ ಪವರ್ ಸಂಸ್ಥೆಗಳು ಲೀಥಿಯಂ ಅಯಾನ್ ಬ್ಯಾಟರಿ ಅಭಿವೃದ್ಧಿಗಾಗಿ ಪರಸ್ಪರ ಸಹಿ ಹಾಕಿದ್ದು, ಸ್ಥಳೀಯವಾಗಿ ಸದ್ಯದಲ್ಲೇ ಲೀಥಿಯಂ ಅಯಾನ್ ಬ್ಯಾಟರಿಗಳನ್ನು ಉತ್ವಾದನೆಯನ್ನ ಆರಂಭ ಮಾಡಲಿದ್ದಾರೆ.
ಹೊಸ ಯೋಜನೆ ಕುರಿತು ಮಾತನಾಡಿರುವ ತಂತ್ರಜ್ಞಾನ ಮತ್ತು ವಿಜ್ಞಾನ ಖಾತೆಯ ಕೇಂದ್ರ ಸಚಿವ ಹರ್ಷವರ್ದನ್ ಅವರು, ಇವಿ ವಾಹನಗಳ ಉತ್ಪಾದನೆಗಾಗಿ ದೇಶದಲ್ಲಿ ಹೆಚ್ಚುತ್ತಿರುವ ಲೀಥಿಯಂ ಅಯಾನ್ ಬ್ಯಾಟರಿ ಬೇಡಿಕೆಯನ್ನ ನಿಭಾಯಿಸಲು ಕೇಂದ್ರ ಸರ್ಕಾರವು ಬದ್ಧವಾಗಿದ್ದು, ರಾಶಿ ಸೋಲಾರ್ ಪವರ್ ಸಂಸ್ಥೆಯು ಸಿದ್ದಪಡಿಸಿರುವ ಬೃಹತ್ ಯೋಜನೆಯು ಭಾರತೀಯ ಆಟೋ ಉದ್ಯಮದಲ್ಲಿ ಹೊಸ ಬದಲಾವಣೆಗೆ ಕಾರಣವಾಗಲಿದೆ ಎಂದಿದ್ದಾರೆ.
ಹೀಗಾಗಿ ಲೀಥಿಯಂ ಅಯಾನ್ ಬ್ಯಾಟರಿಗಳನ್ನ ಸಿದ್ದಪಡಿಸಲಿರುವ ಬೆಂಗಳೂರು ಮೂಲದ ರಾಶಿ ಸೋಲಾರ್ ಪವರ್ ಸಂಸ್ಥೆಗೆ ಕೇಂದ್ರದ ಎಲೆಕ್ಟ್ರೋ ಕೆಮಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಂಸ್ಥೆ ಮತ್ತು ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಸಂಸ್ಥೆಯು ಬ್ಯಾಟರಿ ತಂತ್ರಜ್ಞಾನ ಸುಧಾರಣೆಗಾಗಿ ಸಹಾಯ ಮಾಡಲಿವೆ.
ಮೂಲಗಳ ಪ್ರಕಾರ, ರಾಶಿ ಸೋಲಾರ್ ಪವರ್ ಸಂಸ್ಥೆಯು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ತನ್ನ ಮೊದಲ ಬ್ಯಾಟರಿ ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡುತ್ತಿರುವ ಬಗ್ಗೆ ಮಾಹಿತಿಗಳಿದ್ದು, ಲೀಡ್ ಬ್ಯಾಟರಿಗಳಿಂತಲೂ ಅಗ್ಗವಾಗಲಿರುವ ಸ್ಥಳೀಯ ಲೀಥಿಯಂ ಅಯಾನ್ ಬ್ಯಾಟರಿಗಳು ಪ್ರತಿ ಕೆವಿ(ಕಿಲೋ ವ್ಯಾಟ್) ಗೆ ರೂ.1,500 ವೆಚ್ಚ ತಗ್ಗಬಹುದು ಎಂದು ಅಂದಾಜಿಸಲಾಗಿದೆ.
ಇದರಿಂದಾಗಿ ಇಷ್ಟುಗಳ ಕಾಲ ಲೀಥಿಯಂ ಅಯಾನ್ ಬ್ಯಾಟರಿಗಳ ಆಮದು ಮಾಡಿಕೊಳ್ಳಲು ಚೀನಾ, ಜಪಾನ್, ಮಂಗೋಲಿಯಾ ದೇಶಗಗಳನ್ನೇ ಅವಲಂಭಿಸಿದ್ದ ಭಾರತಕ್ಕೆ ಹೊಸ ಯೋಜನೆಯಿಂದ ಭಾರೀ ಪ್ರಮಾಣದ ಆದಾಯ ಹರಿದು ಬರುವುದಲ್ಲದೇ ಸ್ಥಳೀಯವಾಗಿ ನಿರ್ಮಾಣವಾಗುವುದರಿಂದ ಎಲೆಕ್ಟ್ರಿಕ್ ಕಾರುಗಳನ್ನ ಖರೀದಿಸುವ ಗ್ರಾಹಕರಿಗೂ ಇದರಿಂದ ಲಾಭವಾಗಲಿದೆ.
ಬದಲಾದ ತೆರಿಗೆ ನೀತಿ
2030ರ ಹೊತ್ತಿಗೆ ವಿಶ್ವಾದ್ಯಂತ ಶೇ.99ರಷ್ಟು ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸುವ ಉದ್ದೇಶದಿಂದ ವಿಶ್ವದ ಪ್ರಮುಖ ರಾಷ್ಟ್ರಗಳು ಎಲೆಕ್ಟ್ರಿಕ್ ಕಾರುಗಳ ಮಾರಾಟಕ್ಕೆ ಪೂರಕವಾದ ಮಾರುಕಟ್ಟೆ ಒದಗಿಸುತ್ತಿದ್ದು, ಇದೀಗ ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ಕಾರುಗಳ ಬೆಲೆ ತಗ್ಗಿಸುವ ಉದ್ದೇಶ ಮಹತ್ವದ ನಿರ್ಣಯವೊಂದನ್ನ ಕೈಗೊಂಡಿದೆ.
ಕೇಂದ್ರ ಸರ್ಕಾರವು ಪ್ರಮುಖ 80 ದಿನಬಳಕೆ ವಸ್ತುಗಳ ಮೇಲಿನ ಜಿಎಸ್ಟಿ ಪ್ರಮಾಣವನ್ನು ಇಳಿಕೆ ಮಾಡಿದ್ದು, ಇದರಲ್ಲಿ ಎಲೆಕ್ಟ್ರಿಕ್ ಕಾರುಗಳ ಮುಖ್ಯ ಮುಖ್ಯ ತಾಂತ್ರಿಕ ಅಂಶವಾದ ಎಲೆಕ್ಟ್ರಿಕ್ ಬ್ಯಾಟರಿಗಳ ಮೇಲಿನ ಜಿಎಸ್ಟಿ ತೆರಿಗೆ ಪ್ರಮಾಣವನ್ನು ತಗ್ಗಿಸಿರುವುದು ಇವಿ ಕಾರುಗಳ ಮೇಲಿನ ಬೆಲೆ ಇಳಿಕೆಗೆ ಸಹಕಾರಿಯಾಗುವುದರ ಜೊತೆಗೆ ಮಾರಾಟಕ್ಕೂ ಅನುಕೂಲವಾಗಲಿದೆ.
ಎಲೆಕ್ಟ್ರಿಕ್ ಬ್ಯಾಟರಿಗಳ ಮೇಲೆ ಇಷ್ಟು ದಿನ ಇದ್ದ ಶೇ.28ರಷ್ಟು ಜಿಎಸ್ಟಿ ತೆರಿಗೆಯು ಇನ್ಮುಂದೆ ಶೇ.18ಕ್ಕೆ ಇಳಿಕೆಯಾಗಲಿದ್ದು, ಪರಿಸರಕ್ಕೆ ಪೂರಕವಾಗಿರುವ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ದಿ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹಲವು ಜನಪರ ಯೋಜನೆಗಳನ್ನ ರೂಪಿಸಿತ್ತಿದೆ.
ಒಟ್ಟಿನಲ್ಲಿ ಸ್ಥಳೀಯವಾಗಿಯೇ ಲೀಥಿಯಂ ಅಯಾನ್ ಬ್ಯಾಟರಿಗಳ ಉತ್ಪಾದನೆ ಮತ್ತು ಜಿಎಸ್ಟಿ ತೆರಿಗೆಗಳಲ್ಲಿ ಆದ ಬದಲಾವಣೆಯು ಎಲೆಕ್ಟ್ರಿಕ್ ಕಾರು ಉತ್ಪಾದನೆ ಮತ್ತು ಮಾರಾಟ ಉತ್ತಮ ಅವಕಾಶ ಕಲ್ಪಿಸಿದಂತಾಗಿದ್ದು, ಇದು ಮುಂಬರುವ ದಿನಗಳಲ್ಲಿ ಭಾರತೀಯ ಆಟೋ ಉದ್ಯಮವನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುವುದರಲ್ಲಿ ಯಾವುದೇ ಅನುಮಾನವಿಲ್ಲ.