Just In
- 13 min ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- 1 hr ago ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- 1 hr ago Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- 1 hr ago ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
Don't Miss!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದಲ್ಲಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ರೆ ಸಿಗಲಿದೆ ಭಾರೀ ಬಹುಮಾನ..
ಅಪಘಾತಗಳ ಸಂದರ್ಭದಲ್ಲಿ ಬಹುತೇಕ ಜನ ಗಾಯಾಳುಗಳ ನೆರವಿಗೆ ಬರಲು ಹಿಂದೇಟು ಹಾಕುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದಕ್ಕೆ ಕಾರಣ, ಎಲ್ಲಿ ನಮ್ಮ ವಿರುದ್ಧ ಕೇಸ್ ದಾಖಲಾಗುತ್ತದೆಯೋ, ಎಲ್ಲಿ ಕೋರ್ಟ್, ಕಚೇರಿ ಎಂದು ತಿರುಗಾಡುವ ಪ್ರಸಂಗಗಳು ಎದುರಾಗುತ್ತವೆಯೋ ಎಂದು ಎಷ್ಟೋ ಮಂದಿ ಸಂತ್ರಸ್ತರ ನೆರವಿಗೆ ಹೋಗದೇ ಇರುವುದನ್ನು ಪ್ರತೀ ನಿತ್ಯ ನೋಡುತ್ತಿರುತ್ತೇವೆ. ಆದ್ರೆ ಇದೀಗ ಆ ಭಯ ಬೇಡವೇ ಬೇಡ.
ಕಳೆದ ವರ್ಷವೇ ಸುಪ್ರೀಂಕೋರ್ಟ್ ಅಪಘಾತದಲ್ಲಿ ಸಂತ್ರಸ್ತರಿಗೆ ನೆರವಾಗುವ ಆಪತ್ಭಾಂದವರಿಗೆ ಬೆಂಬಲ ಸೂಚಿಸಿ ಹೊಸ ನಿಯಮಾವಳಿಗಳನ್ನು ಪ್ರಕಟಿಸಿದ್ದಲ್ಲದೇ, ಅಪಘಾತಗಳು ಸಂಭವಿಸಿದಾಗ ಯಾರು ಬೇಕಾದರು ಭಯವಿಲ್ಲದೆಯೇ ಸಂತ್ರಸ್ತರಿಗೆ ನೆರವಾಗಬಹುದು ಎಂದು ಹೇಳಿತ್ತು. ಅಂತೆಯೇ ಹೊಸ ನಿಯಮ ಜಾರಿ ಮಾಡಿದ್ದ ಕೇಂದ್ರ ಸರ್ಕಾರವು ಸಹ ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಅಪಘಾತದಲ್ಲಿ ಸಂತ್ರಸ್ತರಿಗೆ ನೆರವಾಗುವ ಆಪತ್ಭಾಂದವರಿಗೆ ವಿಶೇಷ ಬಹುಮಾನ ನೀಡಲು ಮುಂದಾಗಿದೆ.
ಹೌದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರೇ ಈ ವಿಚಾರವನ್ನ ಪ್ರಸ್ತಾಪಿಸಿದ್ದು, ಗೃಹ ಇಲಾಖೆಯ ಅನುಮೊದನೆ ನಂತರ ಈ ಬಗ್ಗೆ ಅಧಿಕೃತವಾಗಿ ಹೊಸ ಯೋಜನೆಯನ್ನು ಜಾರಿಯಾಗಲಿದೆ ಎಂದಿದ್ದಾರೆ.
'ಜೀವನ್ ರಕ್ಷಾ ಪದಕ್'
ಅಪಘಾತದಲ್ಲಿ ಗಾಯಾಳುಗಳ ನೆರವಿಗೆ ಧಾವಿಸಿ ಪ್ರಾಣ ಉಳಿಸಲು ನೆರವಾಗುವ ಆಪತ್ಭಾಂದವರಿಗೆ ಕೇಂದ್ರ ಸರ್ಕಾರವು ಜೀವನ್ ರಕ್ಷಾ ಪದಕ್ ನೀಡಲಿದ್ದು, ಅಪಘಾತದಲ್ಲಿ ಸಿಲುಕಿ ಪ್ರಾಣಕಳೆದಕೊಳ್ಳುವವರ ಸಂಖ್ಯೆಯನ್ನ ತಡೆಯಲು ಇದು ನೆರವಾಗಲಿದೆ ಎನ್ನಲಾಗಿದೆ.
ಇದಕ್ಕಾಗಿಯೇ ಕೆಲವು ಮಾನದಂಡಗಳನ್ನ ತರುತ್ತಿರುವ ಕೇಂದ್ರ ಸರ್ಕಾರವು, ಅಪಘಾತವಾದ ತಕ್ಷಣವೇ ಗಾಯಾಳುಗಳ ರಕ್ಷಣೆ ಧಾವಿಸಿ ಅಗತ್ಯ ವೈದ್ಯಕೀಯ ಸೌಲಭ್ಯಕ್ಕೆ ನೆರವಾಗುವಂತಹ ವ್ಯಕ್ತಿಗಳಿಗೆ 'ಜೀವನ್ ರಕ್ಷಾ ಪದಕ್' ನೀಡಿ ಗೌರವಿಸುವುದರ ಜೊತೆಗೆ ನಗದು ಬಹುಮಾನವನ್ನು ಸಹ ನೀಡಲು ಚಿಂತನೆ ನಡೆಸಿದೆ.
ಸದ್ಯ ಕೇಂದ್ರ ಗೃಹ ಇಲಾಖೆಯ ಜೊತೆ ಮಾತುಕತೆ ನಡೆಸಿರುವ ಕೇಂದ್ರ ಸಾರಿಗೆ ಇಲಾಖೆಯು ಹೊಸ ಯೋಜನೆಯ ಅನುಮೋದನೆಗಾಗಿ ಎದುರು ನೋಡುತ್ತಿದ್ದು, ಅಪಘಾತದಲ್ಲಿ ಸಂತ್ರಸ್ತರಿಗೆ ನೆರವಾಗುವ ಆಪತ್ಭಾಂದವರಿಗೆ ನಗದು ಬಹುಮಾನ ನೀಡುವ ಸಂಬಂಧ ಹಣಕಾಸು ಇಲಾಖೆಯ ಸಹಾಯವು ಸಹ ಇಲ್ಲಿ ಕೋರಲಾಗಿದೆ.
ಅಪಘಾತಗಳಲ್ಲಿ ಸಾವನ್ನಪ್ಪುವರರ ಸಂಖ್ಯೆಯನ್ನ ತಡೆಯುವ ಸಂಬಂಧ ಈ ಯೋಜನೆಗೆ ಅನುಮೊದನೆ ಸಿಗುವುದು ಬಹುತೇಕ ಖಚಿತವಾಗಿದ್ದು,ಮುಂದಿನ ಕೆಲವೇ ತಿಂಗಳಲ್ಲಿ ಈ ಮಹತ್ವದ ಯೋಜನೆ ಜಾರಿಯಾಗಲಿದೆ ಎಂದು ಸಚಿವ ನಿತಿನ್ ಗಡ್ಕರಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಈ ಯೋಜನೆಯು ಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆಯನ್ನ ತಗ್ಗಿಸಲು ನೆರವಾಗಲಿದ್ದು, ಅಪಘಾತವಾದಾಗ ಗಾಯಾಳುಗಳ ನೆರವಿಗೆ ಹಿಂದೇಟು ಹಾಕುವವರನ್ನು ಇದು ಬೆಂಬಲಿಸಲು ಸಹಕಾರಿಯಾಗಲಿದೆ ಎನ್ನಬಹುದು.
ಇನ್ನು ಈ ಹಿಂದೆ ಸುಪ್ರೀಂ ಹೊರಡಿಸಿರುವ ಹೊಸ ನಿಯಮಾವಳಿಯ ಪ್ರಕಾರ, ಅಪಘಾತ ಸಂಭವಿಸಿದ ನಂತರ ಸಂತ್ರಸ್ತನ ನೆರವಿಗೆ ಬರುವ ವ್ಯಕ್ತಿಯನ್ನು ಪೊಲೀಸರು ಹೆಸರು ಮತ್ತು ಸಂಪರ್ಕ ಕುರಿತ ಮಾಹಿತಿಯನ್ನು ಬಹಿರಂಗಗೊಳಿಸುವಂತೆ ಬಲವಂತೆ ಮಾಡುವಂತಿಲ್ಲ ನಿಯಮವು ಈಗಾಗಲೇ ಜಾರಿಯಲ್ಲಿದೆ.
ಇದಲ್ಲದೇ ಒಂದು ವೇಳೆ ಸ್ವಯಂಪ್ರೇರಿತರಾಗಿ ಹೆಸರು ಮತ್ತು ಸಂಪರ್ಕ ಮಾಹಿತಿಯನ್ನು ಪೊಲೀಸರಿಗೆ ನೀಡಿದರೆ, ಪೊಲೀಸರು ಒಂದೇ ಬಾರಿಗೆ ವಿಚಾರಣೆ ಪ್ರಕ್ರಿಯೆನ್ನು ಮುಗಿಸಬೇಕು. ವ್ಯಕ್ತಿಯನ್ನು ಪದೇಪದೇ ನ್ಯಾಯಾಲಯ, ಪೊಲೀಸ್ ಠಾಣೆಯೆಂದು ಅಲೆಸುವಂತಿಲ್ಲ ಎಂದು ಹೇಳಿದೆ. ಹೀಗಾಗಿ ಅಪಘಾತದಲ್ಲಿ ಗಾಯಾಳುಗಳಿಗೆ ನೀವು ಯಾವುದೇ ಭಯವಿಲ್ಲದೇ ನೆರವಿಗೆ ಧಾವಿಸಿ ಜೀವವನ್ನು ಉಳಿಸಬಹುದಾಗಿದೆ.
ಪರಿಹಾರದ ಮೊತ್ತದಲ್ಲೂ ದುಪ್ಪಟ್ಟು..!
ಅಪಘಾತದಲ್ಲಿ ಸಾವನ್ನಪ್ಪಿದ ಮತ್ತು ಗಂಭೀರವಾಗಿ ಗಾಯಗೊಂಡ ಸಂತ್ರಸ್ತರಿಗೆ ಇದುವರೆಗೆ ಒದಗಿಸಲಾಗುತ್ತಿದ್ದ ಪರಿಹಾರದ ಮೊತ್ತವನ್ನು ಇದೀಗ ಹತ್ತು ಪಟ್ಟು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರವು ಮೃತರ ಕುಟುಂಬಗಳ ನೆರವಿಗೆ ಧಾವಿಸಿದೆ.
ಸದ್ಯ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರವು ರೂ. 50 ಸಾವಿರ ಪರಿಹಾರ ನೀಡುತ್ತಿದ್ದು, ಅಪಘಾತಗಳಲ್ಲಿ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ರೂ.25 ಸಾವಿರ ಪರಿಹಾರ ಒದಗಿಸುತ್ತಿದೆ.
ಆದ್ರೆ ಅಲ್ಪ ಪ್ರಮಾಣದ ಪರಿಹಾರದ ಮೊತ್ತದಿಂದ ಕೆಲವು ಕುಟುಂಬಗಳು ಆರ್ಥಿಕವಾಗಿ ಪರದಾಡುವಂತಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಪರಿಹಾರ ಮೊತ್ತವನ್ನು 50 ಸಾವಿರದಿಂದ 5 ಲಕ್ಷ ಹೆಚ್ಚಿಸಿದ್ದು, ಗಾಯಾಳುಗಳಿಗೆ 25 ಸಾವಿರದಿಂದ 2.5 ಲಕ್ಷ ಪರಿಹಾರ ಒದಗಿಸುವ ಸುತ್ತೋಲೆಗೆ ಸಹಿ ಹಾಕಿದೆ.
ಕೇಂದ್ರ ಸರ್ಕಾರ ಹೊಸ ನಿಯಮದಂತೆ, ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರು 5 ಲಕ್ಷ ಪರಿಹಾರಕ್ಕೆ ಅರ್ಹರಾಗಿದ್ದು, ಕೆಲವು ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತರ ಕುಟುಂಬಗಳು ಇನ್ನು ಹೆಚ್ಚಿನ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಸಹ ಅವಕಾಶ ನೀಡಿದೆ.