Just In
- 5 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 5 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 6 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 8 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಿತಿ ಮೀರಿದ ಮಾಲಿನ್ಯ- ಬೆಂಗಳೂರಿನಲ್ಲಿ ಸದ್ಯದಲ್ಲೇ ಗುಜುರಿ ಸೇರಲಿವೆ ಹಳೆಯ ವಾಹನಗಳು..!?
ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಜನಸಂಖ್ಯೆಗಿಂತ ವಾಹನಗಳ ಸಂಖ್ಯೆಯೇ ಹೆಚ್ಚಾಗುತ್ತಿದ್ದು, ಹೀಗಿರುವಾಗ ವಾಹನಗಳ ಸಂಖ್ಯೆಗೆ ಕಡಿವಾಣ ಹಾಕಲು ಮುಂದಾಗಿರುವ ಕರ್ನಾಟಕ ಸರ್ಕಾರವು ಸದ್ಯದಲ್ಲೇ ಕೆಲವು ಕಠಿಣ ಸಾರಿಗೆ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ.
ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯಿಂದಾಗಿ ಮಾಲಿನ್ಯ ಪ್ರಮಾಣವು ವರ್ಷದಿಂದ ವರ್ಷಕ್ಕೆ ದ್ವಿಗುಣಗೊಳ್ಳುತ್ತಿದೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊನ್ನೆಯಷ್ಟೇ ಖಡಕ್ ವಾರ್ನ್ ಮಾಡಿದ್ದ ಸುಪ್ರೀಂಕೋರ್ಟ್, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿರುವ ಹಳೆಯ ಕಾರುಗಳನ್ನು ಬ್ಯಾನ್ ಮಾಡುವಂತೆ ಆದೇಶ ನೀಡಿತ್ತು.
ಸುಪ್ರೀಂಕೋರ್ಟ್ ತೀರ್ಪಿನಂತೆ ಇನ್ಮುಂದೆ ದೆಹಲಿಯಲ್ಲಿ 10 ವರ್ಷ ಮೇಲ್ಪಟ್ಟ ಡೀಸೆಲ್ ಮತ್ತು 15 ಮೇಲ್ಪಟ್ಟ ಪೆಟ್ರೋಲ್ ಕಾರುಗಳು ರಸ್ತೆಗಿಳಿಯದಂತೆ ನಿಷೇಧ ಹೇರಲಾಗಿದ್ದು, ತಕ್ಷಣವೇ ಹೊಸ ಕಾಯ್ದೆ ಜಾರಿಗೆ ಬರುವಂತೆ ಹೊಸ ನಿಯಮವನ್ನು ರೂಪಿಸಿ ಎಂದು ಕೇಂದ್ರ ಸಾರಿಗೆ ಇಲಾಖೆಗೆ ಮಹತ್ವದ ನಿರ್ದೇಶನವನ್ನು ನೀಡಿದೆ.
ಸಮ-ಬೆಸ ಪದ್ದತಿಯಂತೆ ಕಾರುಗಳ ಓಡಾಟಕ್ಕೆ ಅನುಮತಿಯ ಹೊರತಾಗಿಯೂ ಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹಳೆಯ ಕಾರುಗಳನ್ನು ಬ್ಯಾನ್ ಮಾಡಲಾಗಿದ್ದು, ಈ ಹಿಂದೆ ನ್ಯಾಷನಲ್ ಗ್ರೀನ್ ಟ್ರಿಬ್ಯೂನಲ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದೆ.
ಇದ್ಕಕಾಗಿಯೇ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ತತ್ಕ್ಷಣವೇ ಸಾಮಾಜಿಕ ಮಾಧ್ಯಮ ಖಾತೆ ತೆರೆದು ಜನಸಾಮಾನ್ಯರಿಗೆ ಮಾಲಿನ್ಯದ ಬಗ್ಗೆ ದೂರು ನೀಡುವುದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಹ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಇದೀಗ ಬೆಂಗಳೂರಿನಲ್ಲೂ ಇದೇ ತಂತ್ರವನ್ನು ಪಾಲಿಸಲು ಕರ್ನಾಟಕ ಸರ್ಕಾರ ಕೂಡಾ ಚಿಂತನೆ ನಡೆಸಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ನೀತಿ ಜಾರಿಗೆ ಬರಲಿದೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ 20 ವರ್ಷ ಮೇಲ್ಪಟ್ಟ ವಾಹನಗಳಿಗೆ ನಿಷೇಧ.. ?!
ರಾಷ್ಟ್ರ ರಾಜಧಾನಿ ದೆಹಲಿ ನಂತರ ಅತಿ ಹೆಚ್ಚು ವಾಯುಮಾಲಿನ್ಯ ನಗರ ಎಂಬ ಆತಂಕ ಮೂಡಿಸಿರುವ ಬೆಂಗಳೂರಿನಲ್ಲಿ 20 ವರ್ಷಕ್ಕಿಂತ ಹಳೆಯ ವಾಹನಗಳನ್ನು ನಿಷೇಧ ಮಾಡುವ ಕುರಿತಂತೆ ಮಹತ್ವದ ನಿರ್ಣಯ ಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರವು, ಸಾರಿಗೆ ಇಲಾಖೆ, ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಚರ್ಚೆ ನಡೆಸಿದೆ.
ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನಗಳಿಗೆ ಕಡಿವಾಣ ಹಾಕುವ ಸಂಬಂಧ ಕೆಲವು ಹೊಸ ನೀತಿ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಹೊಸ ವಾಹನಗಳ ನೋಂದಣಿ ತಡೆಯುವ ಬದಲು ಮಾಲಿನ್ಯಕ್ಕೆ ಕಾರಣವಾಗಿರುವ ಹಳೆಯ ವಾಹನಗಳಿಗೆ ಬ್ರೇಕ್ ಹಾಕಲು ಚಿಂತನೆ ನಡೆಸಿದೆ.
1 ಕೋಟಿ ತಲುಪಿದ ವಾಹನಗಳ ಸಂಖ್ಯೆ..!
ಸದ್ಯ ಬೆಂಗಳೂರಿನಲ್ಲಿ 80 ಲಕ್ಷಕ್ಕೂ ಹೆಚ್ಚು ನೋಂದಣಿ ಪಡೆದ ವಾಹನಗಳಿದ್ದು, ಹೊರಗಿನಿಂದ ಬಂದು ಹೋಗುವ ವಾಹನಗಳ ಸಂಖ್ಯೆಯು ಲೆಕ್ಕಕ್ಕಿಲ್ಲ. ಜೊತೆಗೆ ಪ್ರತಿ ದಿನ ಬೆಂಗಳೂರಿನಲ್ಲಿ 2500ಕ್ಕೂ ಹೆಚ್ಚು ಹೊಸ ವಾಹನಗಳು ನೋಂದಣಿ ಪಡೆದುಕೊಳ್ಳುತ್ತಿದ್ದು, ಇದು ಹೀಗೆ ಮುಂದುವರಿದಲ್ಲಿ 2020ಕ್ಕೆ ಒಂದು ಕೋಟಿ ತಲುಪಲಿದೆಯೆಂತೆ.
ಕಳೆದ ತಿಂಗಳ ಹಿಂದಷ್ಟೇ 32 ಸಾವಿರ ಹಳೆಯ ವಾಹನಗಳ ಹೊಗೆ ತಪಾಸಣೆ ಮಾಡಿದ್ದ ರಾಜ್ಯ ಮಾಲಿನ್ಯ ನಿಯಂತ್ರಣವು, 14% ರಷ್ಟು ಪೆಟ್ರೋಲ್ ವಾಹನಗಳು ಹಾಗೂ 25% ರಷ್ಟು ಡೀಸೆಲ್ ವಾಹನಗಳಿಂದ ವಿಷಕಾರಿ ಅನಿಲ ಬರುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ ತಂದಿತ್ತು.
ಮುಂದುವರಿದು, ಬೆಂಗಳೂರು ನಗರದಲ್ಲಿ ಬೃಹತ್ ಗಾತ್ರದ ವಾಹನಗಳ ಸಂಚಾರವನ್ನು ರಿಂಗ್ ರಸ್ತೆಗಳತ್ತ ಡೈವರ್ಟ್ ಮಾಡಬೇಕು ಎಂದು ಮನವಿ ಮಾಡಿದ್ದ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು, ಕಾನೂನು ಮೀರಿದವರಿಗೆ ದೊಡ್ಡ ಪ್ರಮಾಣದ ದಂಡ ವಿಧಿಸಬೇಕು ಎಂಬ ಸಲಹೆ ನೀಡಿತ್ತು.
ಅದ್ರೆ ಈ ಬಗ್ಗೆ ಮೊದಮೊದಲ ಅಸಡ್ಡೆ ಮಾಡಿದ್ದ ರಾಜ್ಯ ಸರ್ಕಾರವು ಇದೀಗ ಎಚ್ಚೆತ್ತಿಕೊಂಡಿದ್ದು, ಹೊಸ ವಾಹನ ಖರೀದಿದಾರರನ್ನು ಸಾರ್ವಜನಿಕ ಸಾರಿಗೆ ಬಳಸುವಂತೆ ಉತ್ತೇಜಿಸಲು ಅಧಿಕ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಬಸ್ಗಳನ್ನು ರಸ್ತೆಗಿಳಿಸುವ ಕುರಿತಂತೆ ನಿರ್ಣಯ ಕೈಗೊಂಡಿದೆ.
MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!
ಕಾರ್ ಪೂಲಿಂಗ್ ಮೊರೆ ಹೋದ ಸರ್ಕಾರ..!
ಇಷ್ಟು ದಿನ ಕಾರ್ ಪೂಲಿಂಗ್ ವಿರುದ್ಧ ಕ್ರಮ ಜರಗಿಸುತ್ತಿದ್ದ ರಾಜ್ಯ ಸರ್ಕಾರವು ಇದೀಗ ಮಾಲಿನ್ಯ ನಿಯಂತ್ರಣಕ್ಕಾಗಿ ಕಾರ್ ಪೂಲಿಂಗ್ ಮಾಡಿ ಎನ್ನುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಸಾವಿರಾರು ಐಟಿ ಸಂಸ್ಥೆಗಳಿದ್ದು, ಕಾರ್ಪೋರೆಟ್ ಉದ್ಯೋಗಿಗಳು ಕಾರು ಪೂಲಿಂಗ್ ಅಳವಡಿಕೆ ಮಾಡಿಕೊಂಡಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಸಾಕಷ್ಟು ಸಹಕಾರಿಯಾಗಲಿದೆ ಎಂದಿದ್ದಾರೆ.
ಏನಿದು ಕಾರ್ ಪೂಲಿಂಗ್..?
ನಗರದಲ್ಲಿ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಜಾಸ್ತಿಯಾಗಿದೆ. ಇದರಿಂದ ಜನರು ವಿವಿಧ ಖಾಯಿಲೆಗಳಿಂದ ಬಳಲುವ ಸಾಧ್ಯತೆಯೂ ಇದೆ. ಅಷ್ಟೇ ಯಾಕೆ ಒಬ್ಬರೇ ಆಟೋ ಅಥವಾ ನಿಮ್ಮ ಆಟೋದಲ್ಲಿ ಪಯಣಿಸುವಾಗ ಅದಕ್ಕೆ ಅಗತ್ಯವಿರುವ ಪೆಟ್ರೋಲ್ ಹಾಕಿಸಬೇಕು. ನಗರದಲ್ಲಿ ಅಗತ್ಯಕ್ಕಿಂತ ಹೆಚ್ಚು ವಾಹನಗಳಿಂದ ಮಾಲಿನ್ಯ ಹೆಚ್ಚಿದೆ. ಇವೆಲ್ಲವನ್ನು ಮನಗಂಡಿರುವ ಬೆಂಗಳೂರು ಸಂಚಾರ ಪೊಲೀಸ್ ಕಾರ್ ಪೂಲಿಂಗ್ ಅಥವಾ ಕಾರ್ ಶೇರಿಂಗ್ ಪರಿಕಲ್ಪನೆಯನ್ನು ಜಾರಿಗೆ ತಂದಿದೆ.
MOST READ: ದೀಪಾವಳಿ ಹಬ್ಬಕ್ಕಾಗಿ ಉದ್ಯೋಗಿಗಳಿಗೆ 1600 ಕಾರುಗಳನ್ನು ಗಿಫ್ಟ್ ನೀಡಿದ ಉದ್ಯಮಿ..!
ಪೆಟ್ರೋಲ್ ದರ ದುಬಾರಿಯಾಗಿಬಿಟ್ಟಿದೆ. ಹೆಚ್ಚಿನವರು ಕಾರು ಖರೀದಿಸುವ ಯೋಚನೆ ಕೈಬಿಟ್ಟಿರಬಹುದು. ಕಾರು ಮಾಲಿಕರುಗಳಿಗೆ ಕಾರೀಗ ಹೊರೆಯಾಗಿರಬಹುದು. ಇಂತಹ ಸಮಯದಲ್ಲಿ ಬೆಂಗಳೂರಿನಂತಹ ನಗರಗಳಲ್ಲಿ ಕಾರ್ ಪೂಲಿಂಗ್ ಉತ್ತಮ ಆಯ್ಕೆಯಾಗಿರಲಿದೆ. ಇನ್ನು ಚುಟುಕಾಗಿ ಹೇಳುವುದಾದರೆ ನಾಲ್ಕು ಜನ ಪ್ರತ್ಯೇಕ ಕಾರುಗಳನ್ನು ಬಳಸುವುದಕ್ಕೆ ಬದಲಾಗಿ ನಾಲ್ಕು ಜನ ಒಂದೇ ಕಾರನ್ನು ಹಂಚಿಕೊಂಡು ತಮ್ಮ ಕಚೇರಿ ಮತ್ತಿತರ ಸ್ಥಳಕ್ಕೆ ಸಂಚರಿಸುವ ವಿಧಾನನೇ ಕಾರ್ ಪೂಲಿಂಗ್.
ಒಟ್ಟಿನಲ್ಲಿ ಮಾಲಿನ್ಯ ನಿಯಂತ್ರಿಸುವ ನಿಟ್ಟಿನಲ್ಲಿ ಹೊಸ ಕ್ರಮಕೈಗೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರವು ಸದ್ಯ 20 ವರ್ಷ ಮೇಲ್ಪಟ್ಟ ವಾಹನಗಳನ್ನು ನಿಷೇಧದ ಕುರಿತಂತೆ ಸದ್ಯದಲ್ಲೇ ಮಹತ್ವದ ನಿರ್ಧಾರವನ್ನು ಪ್ರಕಟಿಸಲಿದ್ದು, ವಾಹನಗಳ ವಿಮೆ, ಪಾರ್ಕಿಂಗ್ ಶುಲ್ಕಗಳನ್ನು ಸಹ ಹೆಚ್ಚುಸುವ ಬಗ್ಗೆ ಚರ್ಚಿಸಲಾಗಿದೆ.