Just In
- 14 min ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- 25 min ago ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- 28 min ago ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- 1 hr ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
Don't Miss!
- News Hubballi: ರಾಜ್ಯ ಸರ್ಕಾರದ ವಿರುದ್ಧ ಭಾರೀ ಪ್ರತಿಭಟನೆ: ನೇಹಾ ನಿವಾಸಕ್ಕೆ ಶ್ರೀಗಳು, ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಪೊಲೀಸ್ ಅಭಯ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇ ಮೊಲಿಬಿಟಿ ಪ್ರಚಾರಕ್ಕಾಗಿ ಮಹೀಂದ್ರಾದಿಂದ 50 ಎಲೆಕ್ಟ್ರಿಕ್ ಕಾರುಗಳ ಹಸ್ತಾಂತರ
ಮಹೀಂದ್ರಾ ಸಂಸ್ಥೆಯು ಕರ್ನಾಟಕ ಸರ್ಕಾರಕ್ಕೆ 50 ಎಲೆಕ್ಟ್ರಿಕ್ ಕಾರುಗಳನ್ನು ಹಸ್ತಾಂತರ ಮಾಡುವ ಮೂಲಕ ಇ ಮೊಲಿಬಿಟಿ ಪ್ರಚಾರಕ್ಕಾಗಿ ಬೃಹತ್ ಯೋಜನೆ ರೂಪಿಸಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸದ್ಯ ದೇಶದಲ್ಲೇ ಅತಿ ಹೆಚ್ಚು ಎಲೆಕ್ಟ್ರಿಕ್ ಕಾರುಗಳನ್ನು ಬಳಕೆ ಮಾಡುತ್ತಿರುವ ನಗರಗಳ ಪೈಕಿ ಮೊದಲ ಸ್ಥಾನದಲ್ಲಿದ್ದು, ಇದೇ ಉದ್ದೇಶದಿಂದ ಮಹೀಂದ್ರಾ ಸಂಸ್ಥೆಯು ಕರ್ನಾಟಕ ಸರ್ಕಾರಕ್ಕೆ 50 ಎಲೆಕ್ಟ್ರಿಕ್ ಕಾರುಗಳನ್ನು ಹಸ್ತಾಂತರ ಮಾಡುವ ಮೂಲಕ ಇ ಮೊಲಿಬಿಟಿ ಪ್ರಚಾರಕ್ಕಾಗಿ ಬೃಹತ್ ಯೋಜನೆ ರೂಪಿಸಿದೆ.
ಬೆಂಗಳೂರು ಮೂಲದ ಭಾಗೀರಥಿ ಗ್ರೂಪ್ ಜೊತೆಗೂಡಿರುವ ಮಹೀಂದ್ರಾ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ 50 ವೆರಿಟೊ ಸೆಡಾನ್ ಎಲೆಕ್ಟ್ರಿಕ್ ಕಾರುಗಳನ್ನು ಹಸ್ತಾಂತರಿಸುವ ಮೂಲಕ ಇ ಮೊಲಿಬಿಟಿ ಜಾಗೃತಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೊರಿದೆ.
Recommended Video
ವಿಧಾನಸೌಧದ ಮುಂಭಾಗದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಇ ಮೊಲಿಬಿಟಿ ಜಾಗೃತಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೊರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಆರ್.ವಿ.ದೇಶಪಾಂಡೆ, ಭವಿಷ್ಯ ವಾಹನಗಳ ಕುರಿತು ಅಭಿಯಾನ ಆರಂಭಿಸಿರುವ ಮಹೀಂದ್ರಾ ಸಂಸ್ಥೆ ದಿಟ್ಟಹೆಜ್ಜೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಕರ್ನಾಟಕದಲ್ಲಿ ಇ ಮೊಲಿಬಿಟಿ ಸಂಶೋಧನೆ ಮತ್ತು ಯಶಸ್ವಿಗಾಗಿ 5 ವರ್ಷಗಳ ಅವಧಿಗೆ ಬರೋಬ್ಬರಿ 400 ಕೋಟಿ ಬಂಡವಾಳ ಹೂಡಿಕೆ ಮಾಡಿರುವ ಮಹೀಂದ್ರಾ ಎಲೆಕ್ಟ್ರಿಕ್ ವಿಭಾಗವು, ಮುಂಬರುವ ದಿನಗಳಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟದ ಗುರಿಹೊಂದಿದೆ.
ಈ ಬಗ್ಗೆ ಮಾತನಾಡಿರುವ ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳ ವಿಭಾಗದ ಸಿಇಒ ಮಹೇಶ್ ಬಾಬು, ಇ ಮೊಲಿಬಿಟಿ ಜಾಗೃತಿ ಕಾರ್ಯಕ್ರಮಕ್ಕಾಗಿ ಕರ್ನಾಟಕ ಸರ್ಕಾರದ ಜೊತೆಗೂಡಿರುವುದು ಹರ್ಷ ತಂದಿದ್ದು, ಭವಿಷ್ಯದಲ್ಲಿ ಕರ್ನಾಟಕವು ಎಲೆಕ್ಟ್ರಿಕ್ ಕಾರುಗಳಿಗೆ ಉತ್ತಮ ಮಾರುಕಟ್ಟೆಯಾಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.
ಇದಷ್ಟೇ ಅಲ್ಲದೇ ವೆರಿಟೊ ಇವಿ ಕಾರುಗಳ ಜೊತೆ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಎಲೆಕ್ಟ್ರಿಕ್ ರಿಕ್ಷಾಗಳನ್ನು ಜಾಗೃತಿ ಕಾರ್ಯಕ್ರಮಕ್ಕಾಗಿ ಬಳಕೆ ಮಾಡಿಕೊಂಡಿರುವ ಮಹೀಂದ್ರಾ ಮತ್ತು ಭಾಗೀರಥಿ ಗ್ರೂಪ್ ಸಂಸ್ಥೆಗಳು, ಹೆಚ್ಚುತ್ತಿರುವ ಪರಿಸರ ಮಾಲಿನ್ಯ ತಡೆಗೆ ಹೊಸ ಆಯಾಮ ನೀಡಲಿವೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಮುಂಚೂಣಿ ಸಾಧಿಸಿರುವ ಏಕೈಕ ಸಂಸ್ಥೆ ಅಂದ್ರೆ ಅದು ಮಹೀಂದ್ರಾ ಮಾತ್ರ. ಇತ್ತೀಚೆಗೆ ಟಾಟಾ ಮೋಟಾರ್ಸ್ ಸಂಸ್ಥೆ ಕೂಡಾ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯನ್ನು ಆರಂಭಿಸಿದ್ದು, ಪರಿಸರ ಮಾಲಿನ್ಯ ತಡೆಯಲು ಎಲೆಕ್ಟ್ರಿಕ್ ಕಾರುಗಳು ಬಹುಮುಖ್ಯ ಪಾತ್ರವಹಿಸುವ ಭರವಸೆ ಹೊತ್ತು ರಸ್ತೆಗಿಳಿಯುತ್ತಿವೆ.
Trending On DriveSpark Kannada:
ರಾಯಲ್ ಎನ್ಫೀಲ್ಡ್ ಖರೀದಿ ಮಾಡೋದಕ್ಕೆ ಗ್ರಾಹಕರು ಯಾಕೆ ಹಿಂದೇಟು ಹಾಕ್ತಾರೆ ಗೊತ್ತಾ?