Just In
- 7 min ago ಕಾಶ್ಮೀರ ಟು ಕನ್ಯಾಕುಮಾರಿ ಟ್ರಿಪ್ ಮುಗಿಸಿದ ಎಲೆಕ್ಟ್ರಿಕ್ ಸ್ಕೂಟರ್: ಗೇಮ್ ಚೇಂಜರ್ ಸದ್ಯದಲ್ಲೇ ಅಖಾಡಕ್ಕೆ
- 55 min ago Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
- 1 hr ago ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
- 2 hrs ago 28 ಲಕ್ಷದ ಬೈಕನ್ನು ಲೀಲಾಜಾಲವಾಗಿ ಓಡಿಸಿದ ಲೇಡಿ ಸೂಪರ್ಸ್ಟಾರ್: ಇಂತಹ ಗರ್ಲ್ಫ್ರೆಂಡ್ ಬೇಕೆಂದ ನೆಟ್ಟಿಗರು!
Don't Miss!
- News Mysore Candidate : ಮೈಸೂರಿನಲ್ಲಿ ಬಿಜೆಪಿಯಿಂದ ರಾಜವಂಶಸ್ಥ: ಕಾಂಗ್ರೆಸ್ ಲೆಕ್ಕಾಚಾರವೇನು?
- Finance ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್: 73 ಕಿಮೀ ಯೋಜನೆಗೆ ಬಿಡ್ ಮಾಡಿದ್ದು ಕೇವಲ ಒಂದು ಕಂಪನಿ!
- Technology iPhone: ಐಫೋನ್ 16 ನಲ್ಲಿ ಆಪಲ್ನಿಂದ ನಿರೀಕ್ಷಿಸಬಹುದಾದ ದೊಡ್ಡ ನವೀಕರಣಗಳಿವು!ಇಷ್ಟ ಆಗದೇ ಇರದು
- Sports IPL 2024: RCB ಫ್ಯಾನ್ಸ್ ಕಂಡರೆ ಹೆಚ್ಚು ಹೆದರುತ್ತೇನೆ; ಅವೇಶ್ ಖಾನ್
- Lifestyle ನಿಮಗೆ ಬೀಳುವ ಕನಸುಗಳ ಹಿಂದಿರುವ ಅರ್ಥ, ಉದ್ದೇಶವೇನು ಗೊತ್ತಾ?
- Movies ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!
ದೇಶಾದ್ಯಂತ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯಿಂದಾಗಿ ಅಪಘಾತಗಳ ಸಂಖ್ಯೆಯು ಸಹ ವರ್ಷದಿಂದ ವರ್ಷಕ್ಕೆ ದ್ವಿಗುಣಗೊಳ್ಳುತ್ತಿದ್ದು, ರಸ್ತೆ ನಿಮಯ ಉಲ್ಲಂಘನೆಯಿಂದಾಗಿ ಪ್ರತಿ ವರ್ಷ ಸಾವಿರಾರು ವಾಹನ ಸವಾರರು ತಮ್ಮ ಜೀವನ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ನಿರ್ಲಕ್ಷ್ಯದ ವಾಹನ ಸವಾರಿ ಅಂದ್ರೆ ತಪ್ಪಾಗುವುದಿಲ್ಲ.
ಹೀಗಾಗಿರುವಾಗಲೇ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಒಂದನ್ನು ಪ್ರಕಟಿಸಿದ್ದು, ಮೂರನೇ ವ್ಯಕ್ತಿಯಿಂದಾಗುವ ವಾಹನ ಹಾನಿಗೆ ಥರ್ಡ್ ಪಾರ್ಟಿ ವಿಮೆ ಸಾಧ್ಯವಿಲ್ಲ ಎಂಬ ಆದೇಶ ನೀಡಿದೆ. ಹೀಗಾಗಿ ವಾಹನ ಮಾಲೀಕರು ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವ ಮುನ್ನ ಹತ್ತು ಬಾರಿ ಯೋಚಿಸುವುದು ಒಳೀತು.
ಹೈಕೋರ್ಟ್ ತೀರ್ಪಿನ ಪ್ರಕಾರ, ನಿಮ್ಮ ಬೈಕ್ ಅಥವಾ ಕಾರುನ್ನು ನಿಮ್ಮ ಸ್ನೇಹಿತರೋ ಅಥವಾ ಸಂಬಂಧಿಯೋ ಹೊರಗೆ ತೆಗೆದುಕೊಂಡು ಹೋದ ವೇಳೆ ನಿರ್ಲಕ್ಷ್ಯದಿಂದ ಆಗುವ ದುರಂತಗಳಿಗೆ ವಿಮಾ ಸಂಸ್ಥೆಯು ಜವಾಬ್ದಾರಿಯಾಗಿರುವುದಿಲ್ಲ ಎಂದಿದೆ.
ಇಲ್ಲಿ ಮುಖ್ಯವಾಗಿ ಗಮನಿಸಬೇಕಾದ ವಿಚಾರ ಅಂದ್ರೆ, ಮೂರನೇ ವ್ಯಕ್ತಿಯು ನಿಮ್ಮ ವಾಹನಗಳನ್ನು ವಾಹನವನ್ನು ತೆಗೆದುಕೊಂಡು ಹೋಗಿದ್ದಾಗ ಮತ್ತೊಂದು ವಾಹನಕ್ಕೆ ತಗುಲಿ ಆಗುವ ದುರಂತಗಳಿಗೆ ಮಾತ್ರವೇ ವಿಮೆ ಸಂಸ್ಥೆಯು ನಷ್ಟ ಭರಿಸಲಿದೆ.
ಹೀಗಾಗಿ ಮೂರನೇ ವ್ಯಕ್ತಿಯ ಕೈಯಲ್ಲಿ ಇದ್ದಾಗ ನಿಮ್ಮ ವಾಹನಗಳು ನಿಯಂತ್ರಣ ತಪ್ಪಿ ಉರುಳಿಬಿದ್ದು, ಇಲ್ಲವೇ ಮರಗಳಿಗೆ ಡಿಕ್ಕಿ ಹೊಡೆದು, ಇಲ್ಲವೇ ಸ್ಕೀಡ್ ಆಗಿ ಆದ ಅನಾಹುತಗಳಿಗೆ ಪರಿಹಾರ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಇದಕ್ಕೆಲ್ಲಾ ವಾಹನ ಮಾಲೀಕನೇ ಜವಾಬ್ದಾರಿಯಾಗಿಬೇಕು ಎಂದಿದೆ.
ಬೆಂಗಳೂರಿನಲ್ಲಿ ನಡೆದ ಘಟನೆಯೊಂದರ ಪರಿಹಾರ ಕೋರಿ ಥರ್ಡ್ ಪಾರ್ಟಿ ವಿಮೆಗಾಗಿ ಅರ್ಜಿ ಸಲ್ಲಿಸಿದ್ದಾಗ ವಿಮಾ ಸಂಸ್ಥೆಯು ಅರ್ಜಿದಾರರ ಬೇಡಿಕೆಯನ್ನು ನಿರಾಕರಿಸಿತ್ತು. ಹೀಗಾಗಿ ಹೈಕೋರ್ಟ್ ಮೆಟ್ಟೇರಿದ್ದ ಅರ್ಜಿದಾರನ ಮನವಿಯನ್ನು ತಿರಸ್ಕರಿಸಿದ ಕೋರ್ಟ್ ಈ ರೀತಿಯಾಗಿ ಆದೇಶ ನೀಡಿದೆ.
ಇದರಿಂದಾಗಿ ವಾಹನ ಮಾಲೀಕರು ಬೇರೆಯವರ ಕೈಗೆ ವಾಹನ ನೀಡುವುದಕ್ಕೂ ಮುನ್ನ ಈ ಬಗ್ಗೆ ಯೋಚನೆ ಮಾಡಿಬೇಕಾದ ಅವಶ್ಯಕತೆಯಿದ್ದು, ಒಂದು ವೇಳೆ ಬೇರೆಯವರ ಕೈಗೆ ವಾಹನ ನೀಡಿದರೂ ಅದರಿಂದಾಗುವ ನಷ್ಟಕ್ಕೆ ನೀವೇ ಹೊಣೆಯಾಗಬೇಕಾಗುತ್ತೆ.
ಮೋಟಾರು ವಿಮೆ ಕಡ್ಡಾಯ ಏಕೆ? ಇದರ ಅಗತ್ಯವೇನು?
ಮೋಟಾರು ವಿಮೆ ಎಂಬುದು ವಾಹನ ವಿಮೆ, ಜಿಎಪಿ ವಿಮೆ, ಕಾರು ವಿಮೆ ಎಂಬ ಹೆಸರಿನಿಂದಲೂ ಅರಿಯಲ್ಪಡುತ್ತದೆ. ಇದು ಪ್ರಮುಖವಾಗಿಯೂ ಕಾರು, ಟ್ರಕ್, ಮೋಟಾರ್ ಸೈಕಲ್ ಅಥವಾ ಇತರ ರಸ್ತೆ ಅಪಘಾತಗಳಿಗೆ ಸುರಕ್ಷತೆಯನ್ನು ಒದಗಿಸುತ್ತದೆ.
ವಾಹನ ಅಪಘಾತ ಸಂಭವಿಸಿದಂತಹ ಪರಿಸ್ಥಿತಿಯಲ್ಲಿ ದೈಹಿಕ ಗಾಯ ಅಥವಾ ವಾಹನಗಳಿಗೆ ಹಾನಿಯಂಟಾದ ಸಂದರ್ಭದಲ್ಲಿ ಹಣಕಾಸಿನ ರಕ್ಷಣೆ ಒದಗಿಸುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ವಾಹನ ವಿಮೆ ನೆರವಿನಿಂದ ವಾಹನಗಳಿಗೆ ಹಾನಿ ಸಂಭವಿಸಿದ್ದಲ್ಲಿ ಅದರ ದುರಸ್ತಿಗೆ ಸಂಭವಿಸಬಹುದಾದ ವೆಚ್ಚವನ್ನು ಹಾಗೆಯೇ ವ್ಯಕ್ತಿಯ ಚಿಕಿತ್ಸೆಗೆ ಬೇಕಾಗಿರುವ ಆರ್ಥಿಕ ರಕ್ಷಣೆ ಸಿಗಲಿದೆ.
ಮೋಟಾರು ವಿಮೆಯ ಅಗತ್ಯವೇನು?
ಭಾರತೀಯ ಮೋಟಾರು ವಾಹನ ಕಾಯ್ದೆ 1988 ಪ್ರಕಾರ ಎಲ್ಲ ವಾಹನಗಳ ಮಾಲಿಕರು ಕಾರು ವಿಮೆ ಮಾಡಿಸತಕ್ಕದ್ದು. ಒಂದು ವೇಳೆ ಅಪಘಾತ ಸಂದರ್ಭದಲ್ಲಿ ವ್ಯಕ್ತಿಯ ಸುರಕ್ಷತೆ ಹಾಗೂ ಪರಿಹಾರ ಒದಗಿಸುವುದು ಮುಖ್ಯ. ಬಹುಶಃ ನಿಮ್ಮ ವಾಹನ ನೀವು ಖರೀದಿಸುವ ವಸ್ತುಗಳಲ್ಲಿ ಅತ್ಯಂತ ದುಬಾರಿಯಾಗಿರಬಹುದು. ವಿಮೆಯು ಈ ಸ್ವತ್ತಿಗೆ ರಕ್ಷಣೆ ಒದಗಿಸುವುದಲ್ಲದೆ ಅಪಘಾತ, ಹಾನಿ ಅಥವಾ ಕಳ್ಳತನ ಸಂಭವಿಸಿದ ಸಂದರ್ಭದಲ್ಲಿ ಆರ್ಥಿಕ ನಷ್ಟವನ್ನು ನಿಭಾಯಿಸಲು ಸಹಕಾರಿಯಾಗುತ್ತದೆ.
ಮತ್ತೊಂದು ಕಾರಣವೆಂದರೆ ಚಾಲನೆ ಮಾಡುವಾಗ, ಈ ಕೆಳಕಂಡವರ ಸುರಕ್ಷತೆ ನೋಡುವುದು ಸಹ ನಿಮ್ಮ ಜವಾಬ್ದಾರಿಯಾಗಿರುತ್ತದೆ.
ಸಹ ಪ್ರಯಾಣಿಕರು,
ನಿಮ್ಮ ಸಹ ಚಾಲಕರು,
ಇತರ ಜನರ ಆಸ್ತಿ,
ಪಾದಚಾರಿಗಳು,
ಸ್ವತ: ನೀವೇ
ಮೋಟಾರು ವಿಮೆ!
ಅನಿರೀಕ್ಷಿತವಾಗಿ ಸಂಭವಿಸಬಹುದಾದ ಅಪಘಾತ ಅಥವಾ ವಾಹನ ಕಳವು ಸಂದರ್ಭದಲ್ಲಿ ಸಂಭಾವ್ಯ ಗಾಯ, ಹಾನಿಗಳಿಗೆ ವಿಮೆ ರಕ್ಷಣೆಯನ್ನು ಒದಗಿಸುತ್ತದೆ. ಇವೆಲ್ಲದಕ್ಕಿಂತಲೂ ಮಿಗಿಲಾಗಿ ನಮ್ಮ ದೇಶದಲ್ಲಿ ನೀವು ಕಾರು ರಸ್ತೆಗಿಳಿಸುವ ಮೊದಲಾಗಿ ಮೂರನೇ ವ್ಯಕ್ತಿ ಮೋಟಾರು ವಿಮೆ ಹೊಂದಿರಬೇಕಾಗಿರುವುದು ಕಡ್ಡಾಯವಾಗಿದೆ.
ಮೋಟಾರು ವಿಮಾ ಪಾಲಿಸಿಗಳ ಅವಧಿಯೆಷ್ಟು?
ಎಲ್ಲ ಸಂದರ್ಭದಲ್ಲಿಯೂ ನಿಮ್ಮ ಕಾರಿಗೆ ರಕ್ಷಣೆ ಒದಗಿಸುವುದು ಅತಿ ಅಗತ್ಯವಾಗಿದೆ. ಸಾಮಾನ್ಯವಾಗಿ ಮೋಟಾರು ವಿಮೆ ಕರಾರು ಒಂದು ವರ್ಷಕ್ಕೆ ಮಾತ್ರ ಅನ್ವಯವಾಗಿರುತ್ತದೆ.
ಮೋಟಾರು ವಿಮಾ ಪಾಲಿಸಿಗಳಲ್ಲಿ ಎಷ್ಟು ವಿಧ?
ಕಾರು ವಿಮಾ ಪಾಲಿಸಿಯಲ್ಲಿ ಎರಡು ವಿಧಗಳಿವೆ. ಪಾಲಿಸಿ 'ಎ' ಎಂಬುದು ಮೂರನೇ ವ್ಯಕ್ತಿ ವಿಮಾ ಹಾಗೂ ಪಾಲಿಸಿ 'ಬಿ' ಎಂಬುದು ಸಮಗ್ರ ಪಾಲಿಸಿಯಾಗಿದೆ. ಮೊದಲನೆಯ ಪಾಲಿಸಿಯಲ್ಲಿ ವಿಮೆಯೂ ಅಪಘಾತಕ್ಕೆ ಪರಿಹಾರ ನೀಡುವುದು ಮೂರನೇ ವ್ಯಕ್ತಿಗೆ ಮಾತ್ರ. ಅಂದರೆ ಕಾರಿಗೆ ಆಗುವ ಹಾನಿಯನ್ನು ಇದು ಒಳಗೊಂಡಿರುವುದಿಲ್ಲ. ಎರಡನೇಯದ್ದಲ್ಲಿ ವಾಹನಕ್ಕಾಗುವ ನಷ್ಟವನ್ನು ಭರಿಸುತ್ತದೆ. ಇದರಂತೆ ಪಾಲಿಸಿ ಆಧಾರದಲ್ಲಿ ನಷ್ಟ ಪರಿಹಾರ ದೊರಕುತ್ತದೆ.
ವಿಮೆಯ ಕಂತಿನ ಮೇಲೆ ಪರಿಣಾಮ ಬೀರುವ ಅಂಶಗಳು ಯಾವುವು?
ಎಂಜಿನ್ ಘನ ಸಾಮರ್ಥ್ಯ (cubic capacity),
ವಾಹನದ ವಯಸ್ಸು,
ಭೌಗೋಳಿಕ ವಲಯ,
ಮಾದರಿ ವಿಧ,
ವಿಮೆ ಮೌಲ್ಯ (Insured declared value)
ಮೂರನೇ ವ್ಯಕ್ತಿಯ ವಾಹನ ವಿಮೆ ಅಪಾಯ ನೀತಿ ಎಂದರೇನು?
ಮೊದಲನೆಯ ಪಾಲಿಸಿಯಲ್ಲಿ ವಿಮೆಯೂ ಅಪಘಾತಕ್ಕೆ ಪರಿಹಾರ ನೀಡುವುದು ಮೂರನೇ ವ್ಯಕ್ತಿಗೆ ಮಾತ್ರ. ಅಂದರೆ ಕಾರಿಗೆ ಆಗುವ ಹಾನಿಯನ್ನು ಇದು ಒಳಗೊಂಡಿರುವುದಿಲ್ಲ.
MOST READ: ಹೊಸ ಸ್ಯಾಂಟ್ರೋ ಕಾರು ಖರೀದಿಗೆ ಬುಕ್ಕಿಂಗ್ ಆರಂಭ- ಬೆಲೆ ಎಷ್ಟಿರಲಿದೆ ಗೊತ್ತಾ?
ಮೂರನೇ ವ್ಯಕ್ತಿ ವಿಮೆಯು ಕೆಳಗಿನ ನಷ್ಟಗಳನ್ನು ಒಳಗೊಳ್ಳುತ್ತದೆ.!
ನಿಮ್ಮ ವಿಮಾ ವಾಹನದಿಂದಾಗಿ ಮೂರನೇ ವ್ಯಕ್ತಿಗೆ ಯಾವುದೇ ಶಾಶ್ವತ ಗಾಯ ಅಥವಾ ಮರಣ ಸಂಭವಿಸಿದ್ದಲ್ಲಿ ಹಾಗೆಯೇ ನಿಮ್ಮ ವಿಮಾ ವಾಹನದಿಂದಾಗಿ ಯಾವುದೇ ಹಾನಿ ಸಂಭವಿಸಿದ್ದಲ್ಲಿ (ವಾಹನ ಹೊರತುಪಡಿಸಿ) ಇದು ರಕ್ಷಣೆಯನ್ನು ಒದಗಿಸುತ್ತದೆ. ಈ ಪಾಲಿಸಿಯಲ್ಲಿ ವಿಮೆಯೂ ಮೂರನೇ ವ್ಯಕ್ತಿಯ ಆಸ್ತಿಯ ಯಾವುದೇ ನಷ್ಟ ಸಂಭವಿಸಿದ್ದಲ್ಲಿ ಖಾಸಗಿ ಕಾರಿಗೆ 7.5 ಲಕ್ಷ ರು. ಹಾಗೂ ದ್ವಿಚಕ್ರವಾಗಿದ್ದಲ್ಲಿ ರು. 1 ಲಕ್ಷದ ವರಗೆ ರಕ್ಷಣೆಯನ್ನು ಒದಗಿಸುತ್ತದೆ.
ಸಮಗ್ರ ಮೋಟಾರ್ ವಿಮಾ ನೀತಿ ಎಂದರೇನು?
ಸಮಗ್ರ ವಾಹನ ವಿಮೆಯು ಮೂರನೇ ವ್ಯಕ್ತಿ ಪಾಲಿಸಿಗಿಂತ ತುಂಬಾ ವಿಭಿನ್ನವಾಗಿದ್ದು, ವಾಹನಕ್ಕಾಗುವ ಎಲ್ಲ ನಷ್ಟವನ್ನು ಭರಿಸುತ್ತದೆ. ಇದರಂತೆ ಪಾಲಿಸಿ ಆಧಾರದಲ್ಲಿ ನಷ್ಟ ಪರಿಹಾರ ದೊರಕುತ್ತದೆ. ಇದರಲ್ಲಿ ಥರ್ಡ್ ಪಾರ್ಟಿ ಜತೆಗೆ ಬೆಂಕಿ, ಅಪಘಾತ, ಕಳವು, ಪ್ರವಾಹ, ಭೂಕಂಪ, ಗಲಭೆ ಇತ್ಯಾದಿ ಅನಿಷ್ಟಗಳಿಂದಾಗಿ ವಾಹನಕ್ಕಾಗುವ ನಷ್ಟಗಳ ಜತೆಗೆ ಸಹ ಪ್ರಯಾಣಿಕ ಸೇರಿದಂತೆ ಮಾಲಿಕರಿಗಾಗುವ ನಷ್ಟವನ್ನು ಭರಿಸುತ್ತದೆ.
ಜೊತಗೆ ಸಮಗ್ರ ವಿಮೆಯಲ್ಲಿ ಮ್ಯೂಸಿಕ್ ಸಿಸ್ಟಂ, ಎಸಿ ಮುಂತಾದ ಕಾರು ಆಕ್ಸೆಸರಿಗಳಿಗೂ ವಿಮೆ ದೊರಕುತ್ತವೆ. ಇದಕ್ಕಾಗಿ ಹೆಚ್ಚುವರಿ ವಿಮೆ ಭರಿಸಬೇಕಾಗುತ್ತದೆ. ಒಟ್ಟಿನಲ್ಲಿ ಇದು ದುಬಾರಿ ಎನಿಸಿಕೊಂಡರೂ ಸಮಗ್ರ ವಿಮೆ ಮಾಡಿಸಿದರೆ ಉತ್ತಮ.
ನೊ ಕ್ಲೈಂ ಬೋನಸ್ (ಎನ್ಸಿಬಿ) ಎಂದರೇನು?
ಸುಲಭವಾಗಿ ಹೇಳಬೇಕೆಂದರೆ ಅಪಘಾತ ನಡೆಸದ ಚಾಲಕರು ನೋ ಕ್ಲೈಂ ಬೋನಸ್(ಎನ್ಸಿಬಿ)ಗೆ ಅರ್ಹರಾಗುತ್ತಾರೆ. ಅಂದರೆ ಮೊದಲ ವಿಮಾ ಅವಧಿಯಲ್ಲಿ ಕ್ಲೈಮ್ ಮಾಡದಿದ್ದಲ್ಲಿ ಮುಂದಿನ ಪಾಲಿಸಿಯಲ್ಲಿ ಡಿಸ್ಕೌಂಟ್ ದೊರಕಲಿದೆ.
ಹಾಗೆಯೇ ಒಂದು ವಿಮಾ ಕಂಪನಿಯಿಂದ ಇನ್ನೊಂದು ವಿಮಾ ಕಂಪನಿಗೆ ಬದಲಾದಲೂ ಎನ್ಸಿಬಿ ಸೌಲಭ್ಯ ಮುಂದುವಿರಿಸಿಕೊಂಡು ಹೋಗಬಹುದು. ಐದು ವರ್ಷದ ವರೆಗೂ ಯಾವುದೇ ಕ್ಲೈಮ್ ಮಾಡದಿದ್ದಲ್ಲಿ ಪ್ರೀಮಿಯಂನಲ್ಲಿ ಶೇ. 50ರಷ್ಟು ಡಿಸ್ಕೌಂಟ್ ಪಡೆಯಬಹುದು.
ಎನ್ಸಿಬಿ ಸೌಲಭ್ಯ ಇಂತಿದೆ:
ಒಂದು ವರ್ಷದ ವರೆಗೂ ಕ್ಲೈಮ್ ಮಾಡದಿದ್ದಲ್ಲಿ- 20%
2 ವರ್ಷದ ವರೆಗೂ ಕ್ಲೈಮ್ ಮಾಡದಿದ್ದಲ್ಲಿ- 25% ಸತತ
3 ವರ್ಷದ ವರೆಗೆ ಕ್ಲೈಮ್ ಮಾಡದಿದ್ದಲ್ಲಿ- 35% ಸತತ
4 ವರ್ಷದ ವರೆಗೆ ಕ್ಲೈಮ್ ಮಾಡದಿದ್ದಲ್ಲಿ- 45% ಸತತ
5 ವರ್ಷದ ವರೆಗೆ ಕ್ಲೈಮ್ ಮಾಡದಿದ್ದಲ್ಲಿ- 50%
MOST READ: ಟ್ರಾಫಿಕ್ ಪೊಲೀಸ್ರಿಂದ ತಪ್ಪಿಸಿಕೊಳ್ಳಬಹುದು ಆದ್ರೆ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ.!
ಆಟೋ ದುರಸ್ತಿ ಮತ್ತು ವಾಹನ ವಿಮೆ ನಡುವೆ ವ್ಯತ್ಯಾಸ ಏನು?
ಆಟೋ ದುರಸ್ತಿ ವಿಮಾ ಪಾಲಿಸಿಯು, ಕಾರಿಗೆ ಹಾನಿಯುಂಟಾದ ನಿರ್ದಿಷ್ಟ ಪ್ರದೇಶದ ನಷ್ಟ ಪರಿಹಾರವನ್ನು ಮಾತ್ರ ಭರಿಸುತ್ತದೆ. ಇನ್ನೊಂದೆಡೆ ವಾಹನ ವಿಮಾ ಪಾಲಿಸಿಯು ವಾಹನ ಮಾಲಿಕ ಹಾಗೂ ವಾಹನ ವಿಮಾ ಸಂಸ್ಥೆಯ ನಡುವೆ ಕರಾರು ಹೊಂದಿರುತ್ತಲ್ಲದೆ ನಿರ್ದಿಷ್ಟ ಸಮಯದಲ್ಲಿ ಕಾರಿಗೆ ಹಾನಿ ಸಂಭವಿಸಿದ ಎಲ್ಲ ಭಾಗಗಳ ಪರಿಹಾರ ಭರಿಸುತ್ತದೆ.
ವಿಮೆ ಕ್ಲೈಮ್ ಮಾಡಲು ಬೇಕಾಗಿರುವ ದಸ್ತಾವೇಜುಗಳು?
ವಿಮಾ ಪಾಲಿಸಿಯ ಅಸಲಿ ಪತ್ರ,
ವಾಹನದ ರಿಜಿಸ್ಟ್ರೇಷನ್ ಬುಕ್,
ಡ್ರೈವಿಂಗ್ ಲೈಸನ್ಸ್ನ ಅಸಲಿ ಪತ್ರ,
ಅಪಘಾತದ ಎಫ್ಐಆರ್ ಪತ್ರ,
ಮೂರನೇ ವ್ಯಕ್ತಿಯ ಅಪಘಾತದ ರಶೀದಿ,
ವಾಹನ ಡ್ಯಾಮೇಜ್ ರಿಪೇರಿ ರಶೀದಿ
ಪರಿಹಾರ.!
ಈ ಎಲ್ಲ ದಾಖಲೆಗಳನ್ನು ಸಮರ್ಪಿಸಿದ ಬಳಿಕ ವಿಮಾ ಕಂಪನಿಯು ಓರ್ವ ಸರ್ವೆಯರನ್ನು ನೇಮಕಗೊಳಿಸುತ್ತಿದ್ದು, ಅವರು ಸತ್ಯಾಸತ್ಯತೆಯನ್ನು ಪರೀಶೀಲಿಸಿ ಹಾನಿಗೊಳಗಾದ ಕಾರನ್ನು ಪರಿಕ್ಷೀಸಿ ರಿಪೇರಿ ಅಂದಾಜು ಲೆಕ್ಕ ಹಾಕುತ್ತಾರೆ. ಹಾಗಾಗಿ ಕಾರು ವಿಮೆ ಸರ್ವೇಯರ್ ತಪಾಸಣೆ ಮಾಡಿದ ಬಳಿಕವಷ್ಟೇ ದುರಸ್ತಿ ಮಾಡಬೇಕು. ಕಾರು ದುರಸ್ತಿಗೊಳಿಸಿದ ಬಳಿಕ ಅಂತಿಮ ಅಂದಾಜು ಸ್ಟ್ಯಾಂಪ್ ರಶೀದಿ ಕಾರು ವಿಮಾ ಕಂಪನಿಗೆ ಸಲ್ಲಿಸಬೇಕಾಗುತ್ತದೆ. ಹಾಗೊಂದು ವೇಳೆ ನಿಮ್ಮ ಕಾರು ಕಳವಾಗಿದ್ದಲ್ಲಿ, ವಿಮಾ ಕಂಪನಿ ಜತೆ ಹತ್ತಿರದ ಪೊಲೀಸ್ ಸ್ಟೇಷನ್ನಲ್ಲಿ ದೂರು ದಾಖಲಿಸಬೇಕಾಗುತ್ತದೆ. ಅಲ್ಲದೆ ಮೊದಲು ಕಾರು ನೊಂದಾವಣಿ ಮಾಡಿದ್ದ ಆರ್ಸಿ ಆಫೀಸಿನಲ್ಲೂ ಪ್ರಕರಣ ದಾಖಲಿಸಬೇಕಾಗುತ್ತದೆ.
ಆ ಬಳಿಕ ನಕಲಿ ಆರ್ಸಿ ಬುಕ್ ಗಿಟ್ಟಿಸಿಕೊಳ್ಳಬೇಕಾಗುತ್ತದೆ. ಇನ್ನು ಕಳ್ಳತನ ಪ್ರಕರಣದಲ್ಲಿ ಆರ್ಟಿಒ ಮತ್ತು ಪೊಲೀಸ್ಗೆ ಕಳವಾದ ಕಾರು ವಾಪಾಸ್ ಗಿಟ್ಟಿಸಿಕೊಳ್ಳುವ ಕಾರ್ಯವಿಧಾನ ಪೂರ್ತಿಗೊಳಿಸಲು ನಿರ್ದಿಷ್ಟ ಸಮಯ ತೆಗೆದುಕೊಳ್ಳುವುದರಿಂದ ವಿಮೆ ಕ್ಲೈಮ್ ಮಾಡಲು ಹೆಚ್ಚು ಸಮಯ ತಗಲುತ್ತದೆ.