Just In
- 8 min ago ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- 38 min ago ಕಾಶ್ಮೀರ ಟು ಕನ್ಯಾಕುಮಾರಿ ಟ್ರಿಪ್ ಮುಗಿಸಿದ ಎಲೆಕ್ಟ್ರಿಕ್ ಸ್ಕೂಟರ್: ಗೇಮ್ ಚೇಂಜರ್ ಅಖಾಡಕ್ಕೆ
- 1 hr ago Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
- 2 hrs ago ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
Don't Miss!
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Sports IPL ಬಿಡಿ, WPLನಲ್ಲಿ ಆರ್ಸಿಬಿಗೆ ಗೆದ್ದ ಮೊತ್ತಕ್ಕೂ ಸಮವಿಲ್ಲ PSL ವಿಜೇತರಿಗೆ ಸಿಕ್ಕ ಬಹುಮಾನ
- Lifestyle ಕೆಜಿಎಫ್ ಎಲ್ ಡೊರಾಡೊ ಕಥೆ ಕೇಳಿದ್ದೀರಾ? ಇದು ಸಮುದ್ರದಲ್ಲಿ ಮುಳುಗಿದ ಎಲ್ ಡೊರಾಡೊ ಹಡಗಿನ ಕಥೆ..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Technology iPhone: ಐಫೋನ್ 16 ನಲ್ಲಿ ಆಪಲ್ನಿಂದ ನಿರೀಕ್ಷಿಸಬಹುದಾದ ದೊಡ್ಡ ನವೀಕರಣಗಳಿವು!ಇಷ್ಟ ಆಗದೇ ಇರದು
- Movies ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನ ಮಾಲೀಕರೇ ಇತ್ತ ಕಡೆ ಗಮನಹರಿಸಿ- ಇಲ್ಲವಾದ್ರೆ ನಿಮ್ಮ ವಾಹನವೂ ಸೀಜ್ ಆಗಬಹುದು..!
ಕೇವಲ ವಾಹನಗಳನ್ನು ಖರೀದಿ ಮಾಡುವುದು ಅಷ್ಟೇನು ದೊಡ್ಡ ವಿಚಾರವಲ್ಲ. ಆದ್ರೆ ಮೋಟಾರ್ ವೆಹಿಕಲ್ ಕಾಯ್ದೆ ಪ್ರಕಾರ ಕೆಲವು ನಿಯಮಗಳನ್ನು ತಪ್ಪದೇ ಪಾಲನೆ ಮಾಡಬೇಕಿರುವುದು ನಮ್ಮ ಕರ್ತವ್ಯ. ಹೀಗಿದ್ದರೂ ಬಹುತೇಕ ವಾಹನ ಮಾಲೀಕರು ಥರ್ಡ್ ಪಾರ್ಟಿ ವಿಮೆ ವಿಚಾರದಲ್ಲಿ ಮಾಡುವ ಕೆಲವೊಂದು ಸಣ್ಣಪುಟ್ಟ ತಪ್ಪುಗಳು ಬೇರೆಯದ್ದೆ ಅನಾಹುತಕ್ಕೆ ಎಡೆಮಾಡಿಕೊಡುತ್ತವೆ. ಹೀಗಾಗಿ ನಿಮ್ಮ ಬಳಿಯ ವಾಹನವಿದ್ದಲ್ಲಿ ಈ ವಿಚಾರವನ್ನು ತಪ್ಪದೇ ತಿಳಿದುಕೊಳ್ಳುವುದು ಒಳಿತು.
ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಹೊಸ ವಾಹನಗಳ ಸಂಖ್ಯೆಯು ದ್ವಿಗುಣಗೊಳ್ಳುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ಅಪಘಾತಗಳ ಸಂಖ್ಯೆಯು ಕೂಡಾ ಏರಿಕೆಯಾಗುತ್ತಿದೆ. ಇದರಿಂದ ಪ್ರತಿವರ್ಷ ಸಾವಿರಾರು ಜನ ಅಮಾಯಕರು ಪ್ರಾಣಕಳೆದುಕೊಳ್ಳುತ್ತಿದ್ದು, ಥರ್ಡ್ ಪಾರ್ಟಿ ವಿಮೆ ಹೊಂದದ ವಾಹನ ಮಾಲೀಕರ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ಕೇಂದ್ರ ಸಾರಿಗೆ ಇಲಾಖೆಯು ಪರಿಹಾರಕ್ಕಾಗಿ ವಾಹನಗಳನ್ನು ಸೀಜ್ ಮಾಡಲು ಮುಂದಾಗಿದೆ.
ಅಂದ್ರೆ, ನಿಮ್ಮ ಬಳಿಯಿರುವ ವಾಹನವು ಯಾವುದಾದರೂ ಅಪಘಾತದಲ್ಲಿ ಭಾಗಿಯಾಗಿ ಥರ್ಡ್ ಪಾರ್ಟಿ ವಿಮೆ ಹೊಂದದೆ ಇದ್ರೆ ಅಂತಹ ವಾಹನಗಳನ್ನು ಸೀಜ್ ಮಾಡಿ ಹರಾಜು ಹಾಕುವ ಅವಕಾಶವಿದ್ದು, ಅದರಿಂದ ಬಂದ ಹಣದಿಂದ ಅಪಘಾತದ ನಷ್ಟ ಭರಿಸಲು ಮುಂದಾಗಿದೆ.
ಒಂದು ವೇಳೆ ವಾಹನವು ಥರ್ಡ್ ಪಾರ್ಟಿ ವಿಮಾ ಪಾಲಿಸಿ ಹೊಂದಿದ್ದಲ್ಲಿ ಆ ವಾಹನದಿಂದ ಮೂರನೇ ವ್ಯಕ್ತಿಗೆ ಆಗುವ ನಷ್ಟಕ್ಕೆ ವಿಮಾ ಸಂಸ್ಥೆಗಳೇ ಪರಿಹಾರ ಭರಿಸಲಿದ್ದು, ಇದರಲ್ಲಿ ವಿಮೆ ಹೊಂದಿರದ ವಾಹನಗಳಿಗೆ ಇನ್ಮುಂದೆ ಸಂಕಷ್ಟ ತಪ್ಪಿದ್ದಲ್ಲ ಎನ್ನಬಹುದು.
ಇತ್ತೀಚೆಗೆ ಸುಪ್ರೀಂಕೋರ್ಟ್ ಜಾರಿಗೆ ತಂದಿರುವ ಹೊಸ ನಿಯಮದ ಪ್ರಕಾರ, ಹೊಸ ಕಾರುಗಳು ಮೂರು ವರ್ಷದ ಮತ್ತು ಬೈಕ್ಗಳು ಐದು ವರ್ಷದ ಥರ್ಡ್ ಪಾರ್ಟಿ ವಿಮೆಯನ್ನು ಕಡ್ಡಾಯವಾಗಿ ಹೊಂದಿರಬೇಕಿದ್ದು, ಅವಧಿ ಮುಗಿದ ಬಳಿಕ ಬಹುತೇಕ ವಾಹನ ಮಾಲೀಕರು ಸರಿಯಾದ ಸಮಯಕ್ಕೆ ವಿಮೆ ಪಾವತಿ ಮಾಡದಿರುವುದು ಅಪಘಾತದಲ್ಲಿ ಗಾಯಗೊಂಡ ಮತ್ತು ಸಾವಪ್ಪಿನ್ನದವರಿಗೆ ಪರಿಹಾರ ನೀಡಲು ತೊಂದರೆಯಾಗುತ್ತಿದೆ.
ಇದರಿಂದ ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಹೊಸ ನಿಯಮ ಜಾರಿಗೆ ತರುತ್ತಿರುವ ಕೇಂದ್ರ ಸಾರಿಗೆ ಇಲಾಖೆಯು ಥರ್ಡ್ ಪಾರ್ಟಿ ಹೊಂದಿರದ ವಾಹನಗಳಿಂದ ಆಗುವ ನಷ್ಟ ಪರಿಹಾರ ಪಾವತಿಸಲು ಸೀಜ್ ಮಾಡಿ ಹರಾಜು ಹಾಕಲು ಮುಂದಾಗಿದ್ದು, ಒಂದು ವೇಳೆ ನೀವು ಕೂಡಾ ಥರ್ಡ್ ಪಾರ್ಟಿ ವಿಮೆ ಇಲ್ಲದಿದ್ದಲ್ಲಿ ಇಂದೇ ಖರೀದಿಸುವುದು ಒಳಿತು.
ಇದಲ್ಲದೆ ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ಕೂಡಾ ಮಹತ್ವದ ತೀರ್ಪು ಒಂದನ್ನು ಪ್ರಕಟಿಸಿದ್ದು, ಮೂರನೇ ವ್ಯಕ್ತಿಯಿಂದಾಗುವ ವಾಹನ ಹಾನಿಗೆ ಥರ್ಡ್ ಪಾರ್ಟಿ ವಿಮೆ ಸಾಧ್ಯವಿಲ್ಲ ಎಂಬ ಆದೇಶ ನೀಡಿದೆ. ಹೀಗಾಗಿ ವಾಹನ ಮಾಲೀಕರು ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವ ಮುನ್ನ ಹತ್ತು ಬಾರಿ ಯೋಚಿಸಿ.
ಹೈಕೋರ್ಟ್ ಆದೇಶದ ಪ್ರಕಾರ, ನಿಮ್ಮ ಬೈಕ್ ಅಥವಾ ಕಾರುನ್ನು ನಿಮ್ಮ ಸ್ನೇಹಿತರೋ ಅಥವಾ ಸಂಬಂಧಿಯೋ ಹೊರಗೆ ತೆಗೆದುಕೊಂಡು ಹೋದ ವೇಳೆ ನಿರ್ಲಕ್ಷ್ಯದಿಂದ ಆಗುವ ದುರಂತಗಳಿಗೆ ವಿಮಾ ಸಂಸ್ಥೆಯು ಜವಾಬ್ದಾರಿಯಾಗಿರುವುದಿಲ್ಲ ಎಂದಿದೆ.
ಇದರಿಂದಾಗಿ ವಾಹನ ಮಾಲೀಕರು ಬೇರೆಯವರ ಕೈಗೆ ವಾಹನ ನೀಡುವುದಕ್ಕೂ ಮುನ್ನ ಈ ಬಗ್ಗೆ ಯೋಚನೆ ಮಾಡಿಬೇಕಾದ ಅವಶ್ಯಕತೆಯಿದ್ದು, ಒಂದು ವೇಳೆ ಬೇರೆಯವರ ಕೈಗೆ ವಾಹನ ನೀಡಿದರೂ ಅದರಿಂದಾಗುವ ನಷ್ಟಕ್ಕೆ ನೀವೇ ಹೊಣೆಯಾಗಬೇಕಾಗುತ್ತೆ ಎನ್ನುವುದನ್ನು ಮರೆಯಬಾರದು.
ಮೋಟಾರು ವಿಮೆ ಕಡ್ಡಾಯ ಏಕೆ? ಇದರ ಅಗತ್ಯವೇನು?
ಮೋಟಾರು ವಿಮೆ ಎಂಬುದು ವಾಹನ ವಿಮೆ, ಜಿಎಪಿ ವಿಮೆ, ಕಾರು ವಿಮೆ ಎಂಬ ಹೆಸರಿನಿಂದಲೂ ಕರೆಯಲಾಗುತ್ತೆ. ಇದು ಪ್ರಮುಖವಾಗಿಯೂ ಕಾರು, ಟ್ರಕ್, ಮೋಟಾರ್ ಸೈಕಲ್ ಅಥವಾ ಇತರ ರಸ್ತೆ ಅಪಘಾತಗಳಿಗೆ ಸುರಕ್ಷತೆಯನ್ನು ಒದಗಿಸುತ್ತದೆ.
MOST READ: ವರ್ಷದ ಹಿಂದೆ ರೂ. 5 ಸಾವಿರಕ್ಕೂ ಗತಿ ಇಲ್ಲ ಎಂದಿದ್ದ ಈ ನಟ ಇವತ್ತು 4 ಕೋಟಿ ಮೌಲ್ಯದ ಬೆಂಟ್ಲಿ ಕಾರಿನ ಒಡೆಯ
ಮೋಟಾರು ವಿಮೆಯ ಅಗತ್ಯವೇನು?
ಭಾರತೀಯ ಮೋಟಾರು ವಾಹನ ಕಾಯ್ದೆ 1988 ಪ್ರಕಾರ ಎಲ್ಲ ವಾಹನಗಳ ಮಾಲಿಕರು ಕಾರು ವಿಮೆ ಮಾಡಿಸತಕ್ಕದ್ದು. ಒಂದು ವೇಳೆ ಅಪಘಾತ ಸಂದರ್ಭದಲ್ಲಿ ವ್ಯಕ್ತಿಯ ಸುರಕ್ಷತೆ ಹಾಗೂ ಪರಿಹಾರ ಒದಗಿಸುವುದು ಮುಖ್ಯ. ಬಹುಶಃ ನಿಮ್ಮ ವಾಹನ ನೀವು ಖರೀದಿಸುವ ವಸ್ತುಗಳಲ್ಲಿ ಅತ್ಯಂತ ದುಬಾರಿಯಾಗಿರಬಹುದು. ವಿಮೆಯು ಈ ಸ್ವತ್ತಿಗೆ ರಕ್ಷಣೆ ಒದಗಿಸುವುದಲ್ಲದೆ ಅಪಘಾತ, ಹಾನಿ ಅಥವಾ ಕಳ್ಳತನ ಸಂಭವಿಸಿದ ಸಂದರ್ಭದಲ್ಲಿ ಆರ್ಥಿಕ ನಷ್ಟವನ್ನು ನಿಭಾಯಿಸಲು ಸಹಕಾರಿಯಾಗುತ್ತದೆ.
ಮತ್ತೊಂದು ಕಾರಣವೆಂದರೆ ಚಾಲನೆ ಮಾಡುವಾಗ, ಈ ಕೆಳಕಂಡವರ ಸುರಕ್ಷತೆ ನೋಡುವುದು ಸಹ ನಿಮ್ಮ ಜವಾಬ್ದಾರಿಯಾಗಿರುತ್ತದೆ.
ಸಹ ಪ್ರಯಾಣಿಕರು,
ನಿಮ್ಮ ಸಹ ಚಾಲಕರು,
ಇತರ ಜನರ ಆಸ್ತಿ,
ಪಾದಚಾರಿಗಳು,
ಸ್ವತ: ನೀವೇ
ಮೋಟಾರು ವಿಮೆ!
ಅನಿರೀಕ್ಷಿತವಾಗಿ ಸಂಭವಿಸಬಹುದಾದ ಅಪಘಾತ ಅಥವಾ ವಾಹನ ಕಳವು ಸಂದರ್ಭದಲ್ಲಿ ಸಂಭಾವ್ಯ ಗಾಯ, ಹಾನಿಗಳಿಗೆ ವಿಮೆ ರಕ್ಷಣೆಯನ್ನು ಒದಗಿಸುತ್ತದೆ. ಇವೆಲ್ಲದಕ್ಕಿಂತಲೂ ಮಿಗಿಲಾಗಿ ನಮ್ಮ ದೇಶದಲ್ಲಿ ನೀವು ಕಾರು ರಸ್ತೆಗಿಳಿಸುವ ಮೊದಲಾಗಿ ಮೂರನೇ ವ್ಯಕ್ತಿ ಮೋಟಾರು ವಿಮೆ ಹೊಂದಿರಬೇಕಾಗಿರುವುದು ಕಡ್ಡಾಯವಾಗಿದೆ.
MOST READ: ರಸ್ತೆಗಿಳಿದ ಹೊಸ ಜಾವಾ ಬೈಕ್ಗಳು- ರಾಯಲ್ ಎನ್ಫೀಲ್ಡ್ಗೆ ತಳಮಳ ಶುರು..!
ಮೋಟಾರು ವಿಮಾ ಪಾಲಿಸಿಗಳ ಅವಧಿಯೆಷ್ಟು?
ಎಲ್ಲ ಸಂದರ್ಭದಲ್ಲಿಯೂ ನಿಮ್ಮ ಕಾರಿಗೆ ರಕ್ಷಣೆ ಒದಗಿಸುವುದು ಅತಿ ಅಗತ್ಯವಾಗಿದೆ. ಸಾಮಾನ್ಯವಾಗಿ ಮೋಟಾರು ವಿಮೆ ಕರಾರು ಒಂದು ವರ್ಷಕ್ಕೆ ಮಾತ್ರ ಅನ್ವಯವಾಗಿರುತ್ತದೆ.
ಮೋಟಾರು ವಿಮಾ ಪಾಲಿಸಿಗಳಲ್ಲಿ ಎಷ್ಟು ವಿಧ?
ಕಾರು ವಿಮಾ ಪಾಲಿಸಿಯಲ್ಲಿ ಎರಡು ವಿಧಗಳಿವೆ. ಪಾಲಿಸಿ 'ಎ' ಎಂಬುದು ಮೂರನೇ ವ್ಯಕ್ತಿ ವಿಮಾ ಹಾಗೂ ಪಾಲಿಸಿ 'ಬಿ' ಎಂಬುದು ಸಮಗ್ರ ಪಾಲಿಸಿಯಾಗಿದೆ. ಮೊದಲನೆಯ ಪಾಲಿಸಿಯಲ್ಲಿ ವಿಮೆಯೂ ಅಪಘಾತಕ್ಕೆ ಪರಿಹಾರ ನೀಡುವುದು ಮೂರನೇ ವ್ಯಕ್ತಿಗೆ ಮಾತ್ರ. ಅಂದರೆ ಕಾರಿಗೆ ಆಗುವ ಹಾನಿಯನ್ನು ಇದು ಒಳಗೊಂಡಿರುವುದಿಲ್ಲ. ಎರಡನೇಯದ್ದಲ್ಲಿ ವಾಹನಕ್ಕಾಗುವ ನಷ್ಟವನ್ನು ಭರಿಸುತ್ತದೆ. ಇದರಂತೆ ಪಾಲಿಸಿ ಆಧಾರದಲ್ಲಿ ನಷ್ಟ ಪರಿಹಾರ ದೊರಕುತ್ತದೆ.
ಮೂರನೇ ವ್ಯಕ್ತಿ ವಿಮೆಯು ಕೆಳಗಿನ ನಷ್ಟಗಳನ್ನು ಒಳಗೊಳ್ಳುತ್ತದೆ.!
ನಿಮ್ಮ ವಿಮಾ ವಾಹನದಿಂದಾಗಿ ಮೂರನೇ ವ್ಯಕ್ತಿಗೆ ಯಾವುದೇ ಶಾಶ್ವತ ಗಾಯ ಅಥವಾ ಸಾವು ಸಂಭವಿಸಿದ್ದಲ್ಲಿ ಹಾಗೆಯೇ ನಿಮ್ಮ ವಿಮಾ ವಾಹನದಿಂದಾಗಿ ಯಾವುದೇ ಹಾನಿ ಸಂಭವಿಸಿದ್ದಲ್ಲಿ (ವಾಹನ ಹೊರತುಪಡಿಸಿ) ಇದು ರಕ್ಷಣೆಯನ್ನು ಒದಗಿಸುತ್ತದೆ. ಈ ಪಾಲಿಸಿಯಲ್ಲಿ ವಿಮೆಯೂ ಮೂರನೇ ವ್ಯಕ್ತಿಯ ಆಸ್ತಿಯ ಯಾವುದೇ ನಷ್ಟ ಸಂಭವಿಸಿದ್ದಲ್ಲಿ ಖಾಸಗಿ ಕಾರಿಗೆ 7.5 ಲಕ್ಷ ರು. ಹಾಗೂ ದ್ವಿಚಕ್ರವಾಗಿದ್ದಲ್ಲಿ ರು. 1 ಲಕ್ಷದ ವರಗೆ ರಕ್ಷಣೆಯನ್ನು ಒದಗಿಸುತ್ತದೆ.
MOST READ: ಅಪಘಾತ ಮಾಡಿದ 17 ವರ್ಷ ಬಾಲಕನಿಗೆ ಕೋರ್ಟ್ ನೀಡಿದ ಶಿಕ್ಷೆ ಕೇಳಿದ್ರೆ ನಿಮಗೆ ಅಚ್ಚರಿಯಾಗುತ್ತೆ.!
ಸಮಗ್ರ ಮೋಟಾರ್ ವಿಮಾ ನೀತಿ ಎಂದರೇನು?
ಸಮಗ್ರ ವಾಹನ ವಿಮೆಯು ಮೂರನೇ ವ್ಯಕ್ತಿ ಪಾಲಿಸಿಗಿಂತ ತುಂಬಾ ವಿಭಿನ್ನವಾಗಿದ್ದು, ವಾಹನಕ್ಕಾಗುವ ಎಲ್ಲ ನಷ್ಟವನ್ನು ಭರಿಸುತ್ತದೆ. ಇದರಂತೆ ಪಾಲಿಸಿ ಆಧಾರದಲ್ಲಿ ನಷ್ಟ ಪರಿಹಾರ ದೊರಕುತ್ತದೆ. ಇದರಲ್ಲಿ ಥರ್ಡ್ ಪಾರ್ಟಿ ಜತೆಗೆ ಬೆಂಕಿ, ಅಪಘಾತ, ಕಳವು, ಪ್ರವಾಹ, ಭೂಕಂಪ, ಗಲಭೆ ಇತ್ಯಾದಿ ಅನಿಷ್ಟಗಳಿಂದಾಗಿ ವಾಹನಕ್ಕಾಗುವ ನಷ್ಟಗಳ ಜತೆಗೆ ಸಹ ಪ್ರಯಾಣಿಕ ಸೇರಿದಂತೆ ಮಾಲಿಕರಿಗಾಗುವ ನಷ್ಟವನ್ನು ಭರಿಸುತ್ತದೆ.
ಜೊತಗೆ ಸಮಗ್ರ ವಿಮೆಯಲ್ಲಿ ಮ್ಯೂಸಿಕ್ ಸಿಸ್ಟಂ, ಎಸಿ ಮುಂತಾದ ಕಾರು ಆಕ್ಸೆಸರಿಗಳಿಗೂ ವಿಮೆ ದೊರಕುತ್ತವೆ. ಇದಕ್ಕಾಗಿ ಹೆಚ್ಚುವರಿ ವಿಮೆ ಭರಿಸಬೇಕಾಗುತ್ತದೆ. ಒಟ್ಟಿನಲ್ಲಿ ಇದು ದುಬಾರಿ ಎನಿಸಿಕೊಂಡರೂ ಸಮಗ್ರ ವಿಮೆ ಮಾಡಿಸಿದರೆ ಉತ್ತಮ.