Just In
- 38 min ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 56 min ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 1 hr ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- 1 hr ago ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಓಲಾ ಮತ್ತು ಉಬರ್ ಸಂಸ್ಥೆಗಳ ವಿರುದ್ಧ ತಿರುಗಿಬಿದ್ದ ಕ್ಯಾಬ್ ಚಾಲಕರು
ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳನ್ನು ಒದಗಿಸುವಲ್ಲಿ ಭಾರೀ ಜನಪ್ರಿಯತೆ ಪಡೆದಿರುವ ಓಲಾ ಮತ್ತು ಉಬರ್ ಸಂಸ್ಥೆಗಳ ವಿರುದ್ಧ ದೇಶಾದ್ಯಂತ ಕ್ಯಾಬ್ ಚಾಲಕರು ಪ್ರತಿಭಟನೆ ನಡೆಸುತ್ತಿದ್ದು, ದೇಶದ ಪ್ರಮುಖ ನಗರಗಳಲ್ಲಿ ಕ್ಯಾಬ್ ಸೇವೆಗಳ ಸ್ಥಗಿತ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.
ಕ್ಯಾಬ್ ಸೇವೆಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿ ಓಲಾ ಮತ್ತು ಉಬರ್ ಸಂಸ್ಥೆಗಳು ಸದ್ಯ ಲಾಭದ ಹಾದಿಯಲ್ಲಿದ್ದರೂ, ಕ್ಯಾಬ್ ಮಾಲೀಕರ ಕಷ್ಟ ಹೇಳತಿರದು. ಇಂಧನಗಳ ಬೆಲೆ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ಕ್ಯಾಬ್ ಮಾಲೀಕರು ಓಲಾ ಮತ್ತು ಉಬರ್ ಸಂಸ್ಥೆಯ ಕಠಿಣ ನಿಲುವಿನ ವಿರುದ್ಧ ತಿರುಗಿಬಿದ್ದಿದ್ದಾರೆ.
ಮೊದಮೊದಲು ಕ್ಯಾಬ್ ಸೇವೆಗಳ ಮೂಲಕ ಕೈತುಂಬ ಹಣ ಸಂಪಾದನೆ ಮಾಡುತ್ತಿದ್ದ ಚಾಲಕರು ಇಂದು ದುಡಿದ ಹಣವನ್ನು ಓಲಾ ಮತ್ತು ಉಬರ್ ಸಂಸ್ಥೆಗಳನ್ನು ಉದ್ಧಾರ ಮಾಡಲು ಹೆಣಗಾಡುವಂತಾಗಿದ್ದು, ಬಂದ ಲಾಭಾಂಶದಲ್ಲಿ ಸಮಪಾಲು ನೀಡುವಂತೆ ಕ್ಯಾಬ್ ಚಾಲಕರು ಬೀದಿಗಿಳಿದಿದ್ದಾರೆ.
ಕೆಳೆದ 2016ರ ಹಿಂದಷ್ಟೇ ಓಲಾ ಮತ್ತು ಉಬರ್ ಕ್ಯಾಬ್ ಸೇವೆಗಳಲ್ಲಿ ಪ್ರತಿ ಕಿಲೋ ಮೀಟರ್ಗೆ ರೂ.15ರಿಂದ ರೂ.20 ಆದಾಯ ಗಳಿಸುತ್ತಿದ್ದ ಚಾಲಕರು ಇಂದು ಪ್ರತಿ ಕಿಲೋ ಮೀಟರ್ಗೆ ರೂ. 4.30 ಪೈಸೆಯಿಂದ ರೂ. 6 ತನಕ ಮಾತ್ರವೇ ಲಾಭಂಶ ತೆಗದುಕೊಳ್ಳುತ್ತಿದ್ದಾರೆ.
ಕೇವಲ 2 ವರ್ಷಗಳ ಅಂತರದಲ್ಲಿ ಶೇ. 50 ರಿಂದ ಶೇ.80 ರಷ್ಟು ಲಾಭಾಂಶ ಕಡಿತಗೊಂಡಿದ್ದು, ಇದರ ಮಧ್ಯೆ ಇಂಧನಗಳ ಬೆಲೆ ಏರಿಕೆ, ಹೆಚ್ಚಿರುವ ವಿಮಾ ಮೊತ್ತಗಳು ಮತ್ತು ಸಾರಿಗೆ ಸಂಸ್ಥೆಯ ತೆರಿಗೆಗಳು ಸೇರಿ ಕ್ಯಾಬ್ ಚಾಲಕರನ್ನು ಮತ್ತಷ್ಟು ಹೈರಾಣಾಗಿಸಿವೆ.
ಇದರೊಂದಿಗೆ ಪ್ರೋತ್ಸಾಹಧನದ ಮೇಲೂ ಹಲವು ಕಠಿಣ ನಿಯಮಗಳನ್ನು ಜಾರಿ ತರುತ್ತಿರುವ ಓಲಾ ಮತ್ತು ಉಬರ್ ಸಂಸ್ಥೆಗಳು ಕ್ಯಾಬ್ ಚಾಲಕರ ಆದಾಯದ ಮೇಲೆ ವ್ಯತರಿಕ್ತ ಪರಿಣಾಮ ಬೀರಲು ಕಾರಣವಾಗಿದ್ದು, ಇದನ್ನು ಸರಿಪಡಿಸುವಂತೆ ಕ್ಯಾಬ್ ಚಾಲಕರು ಕಳೆದ ಎರಡು ದಿನಗಳಿಂದ ದೇಶದ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಲಾಭಾಂಶಕ್ಕೆ ಹೊಡೆತ ನೀಡುತ್ತಿರುವ ಕೆಲವು ಚಾಲಕರ ವಿರೋಧಿ ನಿಯಮಗಳನ್ನು ತಿದ್ದುಪಡಿ ತರುವಂತೆ ನಡೆಸುತ್ತಿರುವ ಕ್ಯಾಬ್ ಚಾಲಕರ ಪ್ರತಿಭಟನೆ ನಿನ್ನೆಯಿಂದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಂಬೈ ಮತ್ತು ದೆಹಲಿಯಲ್ಲಿ ಶೇ.80ರಷ್ಟು ಕ್ಯಾಬ್ಗಳು ತಮ್ಮ ಸೇವೆಯನ್ನು ಸ್ಥಗಿತಗೊಳಿಸಿವೆ.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾದ ಹ್ಯುಂಡೈ ಹೊಸ ಸ್ಯಾಂಟ್ರೋ
ಇದಲ್ಲದೆ ಓಲಾ ಮತ್ತು ಉಬರ್ ಸಂಸ್ಥೆಗಳು ಕ್ಯಾಬ್ ಚಾಲಕರ ಬೇಡಿಕೆಗೆ ಮಣಿಹಾಕದಿರುವುದು ಕ್ಯಾಬ್ ಚಾಲಕರ ಆಕ್ರೋಶವನ್ನ ಹೆಚ್ಚಿಸುವಂತೆ ಮಾಡಿದ್ದು, ಕ್ಯಾಬ್ ಸೇವೆಗಳನ್ನು ನೆಚ್ಚಿಕೊಂಡ ಪ್ರಯಾಣಿಕರು ಪರದಾಡುವಂತಾಗಿದೆ.
ಇನ್ನು ಉಬರ್ ಸಂಸ್ಥೆ ಮಾತ್ರವೇ ಕ್ಯಾಬ್ ಚಾಲಕರ ಪ್ರತಿಭಟನೆ ಬಗ್ಗೆ ಮಾತನಾಡಿದ್ದು, ಚಾಲಕ ಸಮುದಾಯದ ಬೇಡಿಕೆಗಳನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಸುಳಿವು ನೀಡಿದ್ದರೂ ಸಹ ಯಾವುದೇ ಲಿಖಿತ ಹೇಳಿಕೆ ನೀಡದಿರುವುದು ಕ್ಯಾಬ್ ಚಾಲಕರ ಅಸಮಾಧಾನಕ್ಕೆ ಕಾರಣವಾಗಿದೆ.
MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!
ಮಾಹಿತಿಗಳ ಪ್ರಕಾರ, ಇಂದು ಕೂಡಾ ಕ್ಯಾಬ್ ಚಾಲಕರ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಲಾಗಿದ್ದು, ಮುಂಬೈ, ದೆಹಲಿ ಮತ್ತು ದೆಹಲಿ ಎನ್ಸಿಆರ್ನಲ್ಲಿರುವ ಕ್ಯಾಬ್ ಸೇವೆಗಳ ಸ್ಥಗಿತದಿಂದಾಗಿ ಪ್ರಯಾಣಿಕರಿಗೂ ಇದರ ಬಿಸಿ ತಟ್ಟಿದೆ.
ಹ್ಯುಂಡೈ ಹೊಸ ಸ್ಯಾಂಟ್ರೋ ಕಾರಿನ ಫೋಟೋ ಗ್ಯಾಲರಿ..!