Just In
- 8 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 9 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 9 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 11 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇವಲ 40 ರೂಪಾಯಿಗೆ ಪೆಟ್ರೋಲ್ ಮಾರಲು ಮುಂದಾಗಿರುವ ಬಾಬಾ ಷರತ್ತು ಏನು.?
ದೇಶದ ಹಲವಾರು ಪ್ರಮುಖ ನಗರಗಳಲ್ಲಿ ಪೆಟ್ರೋಲ್ನ ಬೆಲೆಯು ರೂ. 80ಕ್ಕಿಂತಾ ಜಾಸ್ತಿ ಇದ್ದು, ಇನ್ನು ಮಹಾರಾಷ್ಟ್ರದ ಕೆಲವು ನಗರಗಳಲ್ಲಿ ರೂ.90 ಅನ್ನು ದಾಟಿದೆ. ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಇಂಧನಗಳ ಬೆಲೆಯಿಂದ ಜನಸಾಮಾನ್ಯರು ಕಷ್ಟ ಪಡುತ್ತಿದ್ದಾರೆ.
ಏರಿಕೆಯ ಹಾದಿಯಲ್ಲಿರುವ ಇಂಧನ ಬೆಲೆಯನ್ನು ಕಡಿತಗೊಳಿಸಲು ಹೊಸ ಆಲೋಚನೆಗಳನ್ನು ಮಾಡಲಾಗುತ್ತಿದ್ದು, ಕೆಲವರು ಇಂಧನದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ತಮ್ಮ ತಮ್ಮ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಮಾಡುತ್ತಿದ್ದಾರೆ.
ನಿನ್ನೆಯಷ್ಟೆ ಕರ್ನಾಟಕ ಸರ್ಕಾರವು ಸಹ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸಿ ಪ್ರತೀ ಲೀಟರ್ ಪೆಟ್ರೋಲ್ ಹಾಗು ಡೀಸೆಲ್ನ ಮೇಲಿನ ಬೆಲೆಯಲ್ಲಿ ರೂ.2 ಕಡಿಮೆ ಮಾಡಲಾಗಿದ್ದು, ಇದೇ ಯೋಜನೆಯನ್ನು ಇನ್ನಿತರೆ ರಾಜ್ಯ ಸರ್ಕಾರಗಳು ಜಾರಿಗೆ ಮುಂದಾಗಿವೆ.
ಇಂಧನದ ಬೆಲೆ ಏರಿಕೆಯ ಮೇಲೆ ಯಾವುದೇ ರೀತಿಯ ಬದಲಾವಣೆಯನ್ನು ಮಾಡದ ಕೇಂದ್ರ ಸರ್ಕಾರವನ್ನು ದೂಷಿಸುತ್ತಾ ಕರ್ನಾಟಕದ ರಾಜ್ಯ ಸರ್ಕಾರವು ತೆಗೆದುಕೊಂಡ ತೀರ್ಪಿನಂತೆಯೇ ತಮ್ಮ ತಮ್ಮ ರಾಜ್ಯ ಸರ್ಕಾರಗಳು ಕೂಡಾ ತೆಗೆದುಕೊಳ್ಳಬೇಕೆಂದು ಜನ ಸಾಮಾನ್ಯರು ಬಯಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಯೋಗಗುರು ಬಾಬಾ ರಾಮ್ದೇವ್ ಅವರು ಕೇಂದ್ರ ಸರ್ಕಾರವು ನಮಗೆ ಸಹಕರಿಸುವ ಮೂಲಕ ತೆರಿಗೆಯಲ್ಲಿ ಕೆಲವು ವಿನಾಯ್ತಿ ನೀಡಿದ್ದೆ ಆದಲ್ಲಿ ನಾನು ಒಂದು ಲೀಟರ್ ಪೆಟ್ರೋಲ್ ಅನ್ನು ಕೇವಲ ರೂ.35 ರಿಂದ 40ಕ್ಕೆ ಮಾರಲು ಸಿದ್ಧವಿರುದಾಗಿ ಎನ್ಡಿಟಿವಿ ಯೂತ್ ಕಾಂಕ್ಲೇವ್ ಟುಡೆ ಕಾರ್ಯಕ್ರಮದಲ್ಲಿ ಹೇಳಿಕೊಂಡಿದ್ದಾರೆ.
ಬಾಬಾ ರಾಮ್ದೇವ್ ಅವರು ತೆಗೆದುಕೊಂಡ ಈ ಸಂಚಲನಾತ್ಮಕ ಹೇಳಿಕೆಯು ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಜೊತೆಗೆ ಮೋದಿಯವರು ಜನಸಾಮಾನ್ಯರಿಗೆ ಉಪಯುಕ್ತವಾದ ಎಷ್ಟೊ ಯೋಜನೆಗಳನ್ನು ನೀಡುತ್ತಲೇ ಬಂದಿದ್ದಾರೆ. ಆದ್ರೆ ಮೂರು ತಿಂಗಳಿನಿಂದ ಏರಿಕೆಯಾಗುತ್ತಿರುವ ಇಂಧನದ ಬೆಲೆಯಿಂದಾಗಿ ಜನರು ಗೊಂದಲದಲ್ಲಿದ್ದರು ಯಾವುದೇ ನಿರ್ಣಯವನ್ನು ತೆಗೆದುಕೊಳ್ಳದಿರುವುದು ಆಶ್ಚರ್ಯಕರವಾಗಿದೆ ಎಂದಿದ್ದಾರೆ.
ಇಷ್ಟೇ ಅಲ್ಲದೆ ಇಂಧನಗಳ ಮೇಲೆ ಈಗಿರುವ ತೆರಿಗೆಯನ್ನು ತೊಲಗಿಸಿ ಜಿಎಸ್ಟಿ ಅಡಿ ಇಂಧನಗಳನ್ನು ಮಾರಾಟ ತರುವ ಅವಶ್ಯವಿರುದಾಗಿ 'ಎನ್ಡಿಟಿವಿ' ನಡೆಸಿದ ಯೂತ್ ಕಾಂಕ್ಲೇವ್ ಟುಡೆ ಕಾರ್ಯಕ್ರಮದಲ್ಲಿ ಬಾಬಾ ರಾಮ್ದೇವ್ ಈ ರೀತಿಯಾಗಿ ಹೇಳಿಕೊಂಡಿದ್ದಾರೆ.
MOST READ: ಮದುವೆ ಮನೆಯಲ್ಲಿ ಗೆಳೆಯರ ಸ್ಪೆಷಲ್ ಗಿಫ್ಟ್ ನೋಡಿ ನವದಂಪತಿ ಫುಲ್ ಶಾಕ್.!?
ದೇಶದಲ್ಲಿರುವ ಬಹುತೇಕ ಮಂದಿ ಪ್ರಧಾನಿ ಮೋದಿಯವರ ಕಾರ್ಯವನ್ನು ಮೆಚ್ಚುತ್ತಲೇ ಇದ್ದಾರೆ. ಆದ್ರೆ ಅವರ ಕಾರ್ಯನಿರ್ವಹಣೆಯಲ್ಲಿ ಕೆಲ ಬದಲಾವಣೆ ಅವಶ್ಯಕತೆ ಇದೆ ಎಂದಿರುವ ಬಾಬಾ ರಾಮ್ದೇವ್ ಅವರು, ಕಳೆದ 2-3 ತಿಂಗಳಿನಿಂದ ಇಂಧನಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಷ್ಟ ಪಡುತ್ತಿದ್ದಾರೆ. ಈಗಲಾದ್ರು ಪ್ರಧಾನಿಯವದು ಎಚ್ಚೆತ್ತುಕೊಳ್ಳದಿದ್ದರೆ 2019ರ ಲೋಕಸಭಾ ಚುನಾವಣೆಯಲ್ಲಿ ತೊಂದರೆಯಾಗಬಹುದು ಎಂದಿದ್ದಾರೆ.
2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರದ ವೇಳೆ ರಾಮ್ದೇವ್ ಮತ್ತು ಇನ್ನಿತರೆ ನಾಯಕರು ಕೇಂದ್ರದಲ್ಲಿದ್ದ ಮನಮೋಹನ್ ಸಿಂಗ್ ಅವರ ಸರ್ಕಾರದ ಮೇಲೆ ಆಕ್ರಮಣ ಮಾಡಿದ್ದನ್ನು ನೆನೆದಿರುವ ಅವರು, ಮೋದಿಯವರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರೂ.35-40 ಕ್ಕೆ ಇಳಿಯಲಿದೆ ಎಂದು ಜನರಿಗೆ ಭರವಸೆ ನೀಡಿದ್ದರು. ಆದ್ರೆ ಇದೀಗ ರಾಷ್ಟ್ರದಲ್ಲಿನ ಪ್ರಮುಖ ನಗರಗಳಲ್ಲಿ ಪೆಟ್ರೋಲ್ನ ಬೆಲೆಯು ರೂ.90ಕ್ಕೆ ಹೆಚ್ಚಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಆದ್ರೆ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ನೀಡುವ ಮಾರ್ಗದ ಬಗ್ಗೆ ಯಾವುದೇ ಸ್ಪಷ್ಟನೆ ನೀಡದ ಬಾಬಾ ರಾಮ್ದೇವ್ ಹೇಳಿಕೆ ಸಾಕಷ್ಟು ಪರ-ವಿರೋಧ ಕಮೆಂಟ್ಗಳು ಕೇಳಿಬರುತ್ತಿದ್ದು, ಒಂದು ವೇಳೆ ರಾಮ್ದೇವ್ ಅವರು ರೂ.40ಕ್ಕೆ ಪೆಟ್ರೋಲ್ ಮಾಡಿದ್ದೆ ಆದಲ್ಲಿ ಅದೊಂದು ಅದ್ಭುತ ಎಂದೇ ಹೇಳಬೇಕಾಗುತ್ತೆ.
ದಿನದಿಂದ ದಿನಕ್ಕೆ ಏರಿಕೆಯಾಗಿತ್ತಿರುವ ಇಂಧನದ ಬೆಲೆಯ ತಲೆನೋವಿನಿಂದ ಹೊರಬರಲು ಒಂದೇ ಮಾರ್ಗ ಅಂದ್ರೆ ಅದು ವಿದ್ಯುತ್ ವಾಹನಗಳನ್ನು ಬಳಸುವುದು. ಹೀಗಾಗಿ ಬೆಂಗಳೂರಿನ ಮೂಲದ ಅಥೆರ್ ಸಂಸ್ಥೆಯು ಬಿಡುಗಡೆಗೊಳಿಸಿರುವ ಹೊಸ ಎಲೆಕ್ಟ್ರಿಕ್ ಸ್ಕೂಟರ್ಗಳ ಚಿತ್ರಗಳು ಇಲ್ಲಿದೆ ನೋಡಿ.