Just In
- 45 min ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 1 hr ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 1 hr ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 2 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- News ಕಾಂಗ್ರೆಸ್ ಸರ್ಕಾರ ನೀಡಿತ್ತು ಖಾಲಿ ಚೊಂಬು; ಮೋದಿ ಅದನ್ನು ಅಕ್ಷಯವನ್ನಾಗಿಸಿದ್ದಾರೆ: ಎಚ್ಡಿಡಿ
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಧಾರಣ ರೈತನ ಹೊಸ ಆವಿಷ್ಕಾರವನ್ನು ಪ್ರಶಂಸಿದ ಆನಂದ್ ಮಹೀಂದ್ರಾ
ಹಾಸಿಗೆ ಇದ್ದಷ್ಟೇ ಕಾಲು ಚಾಚು ಎಂಬ ಗಾದೆಯನ್ನು ನಮ್ಮಲ್ಲಿ ಹಲವರು ನಂಬಿದರೆ, ಇನ್ನು ಕೆಲವರು ಅಗತ್ಯವಿದ್ದಲ್ಲಿ ಹೊಸ ಆಲೋಚನೆಗಳನ್ನು ಮಾಡಿ ಆಗಬೇಕಾದ ಕಾರ್ಯವನ್ನು ಮುಗಿಸಲು ಮುಂದಾಗುತ್ತಾರೆ. ಇಲ್ಲಿ ನಡೆದಿದ್ದು ಕೂಡಾ ಅದೆನೇ. ಈ ರೈತ ಮಾಡಿದ ಒಂದು ಹೊಸ ಆವಿಷ್ಕಾರಕ್ಕೆ ಆಟೋ ದಿಗ್ಗಜ ಆನಂದ್ ಮಹೀಂದ್ರಾರವರಿಂದ ಪ್ರಶಂಸೆಯನ್ನು ಪಡೆದಿದ್ದಾನೆ.
ಮಹೀಂದ್ರಾ ಸಂಸ್ಥೆಯು ದೇಶದ ಅತಿ ದೊಡ್ಡ ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾಗಿದ್ದು, ಕೇವಲ ಕಾರುಗಳನ್ನು ಮಾತ್ರವಲ್ಲದೆ ದ್ವಿಚಕ್ರ ವಾಹನ ಹಾಗು ಟ್ರ್ಯಾಕ್ಟರ್ ಮತ್ತು ಇನ್ನಿತರೆ ವಾಣಿಜ್ಯ ವಾಹನಗಳನ್ನು ಜಾಗತಿಕ ಮಟ್ಟದಲ್ಲಿ ಮಾರಾಟದೊಂದಿಗೆ ಶ್ರೇಷ್ಠ ಆಟೋ ಉತ್ಪಾದನಾ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಇದೆಲ್ಲದರ ಹಿಂದೆ ಮಹೀಂದ್ರಾ ಆಂಡ್ ಮಹೀಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹೀಂದ್ರಾ ಅವರ ಹೊಸ ಹೊಸ ಆಲೋಚನಾ ಶ್ರಮವಿದೆ ಎಂದರೆ ತಪ್ಪಾಗಲಾರದು.
ಯಾಕೆಂದರೇ ಆನಂದ್ ಮಹೀಂದ್ರಾರವರ ಜೀವನವನ್ನು ಹಲವರು ಆದರ್ಶವಾಗಿಟ್ಟುಕೊಂಡು ಅವರಂತೆಯೇ ಹೆಸರುವಾಸಿಯಾಗಬೇಕು ಎಂಬ ಕನಸನ್ನಿಟ್ಟುಕೊಂಡಿದ್ದಾರೆ. ಆನಂದ್ ಮಹೀಂದ್ರಾರವರು ಕೇವಲ ಆಟೋಮೊಬೈಲ್ ಉದ್ಯಮದಲ್ಲಿ ಮಾತ್ರವಲ್ಲದೆಯೆ ಸಾಮಾಜಿಕ ಜಾಲತಾಣಗಳಲ್ಲಿಯೂ ಫೇಮಸ್.
ಆನಂದ್ ಮಹೀಂದ್ರಾರವರು ಸಾಮಾಜಿಕ ಜಾಲತಾಣವದ ಟ್ವಿಟರ್ನಲ್ಲಿ ಸಮಾಜದಲ್ಲಾಗುವ ಕೆಲಸಗಳಿಗೆ ಪ್ರತಿಕ್ರಿಯಿಸುತ್ತಾ, ಅವರಿವರ ಕಾಲೆಳೆದು ಹಾಸ್ಯ ಚಟಾಕಿಯನ್ನು ಸಿಡಿಸುತ್ತಾ, ಹಾಗೆಯೇ ಭಾರತೀಯರ ಆವಿಷ್ಕಾರಗಳ ಬಗ್ಗೆ ಪೋಸ್ಟ್ ಮಾಡುತ್ತಾ ಅವರನ್ನು ಪ್ರಶಂಶಿಸುವ ಕಾರ್ಯಗಳನ್ನು ಮಾಡುತ್ತಿರುತ್ತಾರೆ. ಹೀಗೆಯೇ ಆನಂದ್ ಮಹೀಂದ್ರಾರವರು ಮಾಡಿದ ಹೊಸ ಟ್ವೀಟ್ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಾದ ಮಾಹಿತಿಯನ್ನು ತಿಳಿಯಲು ಮುಂದಕ್ಕೆ ಓದಿರಿ..
ಇರುವ ಉಪಕರಣಗಳಲ್ಲೇ ವ್ಯವಸಾಯ ಮಾಡುತ್ತಾ ಜೀವನ ಸಾಗಿಸುತ್ತಿರುವ ನಮ್ಮ ರೈತರು ಅವಶ್ಯಕತೆ ಇದ್ದಾಗ ಮತ್ತು ಆ ಅವಶ್ಯಕತೆಯನ್ನು ಪೂರೈಸಲು ಸಾಧ್ಯವಿರದಾಗ ಹೊಸ ಆವಿಷ್ಕಾರಗಳನ್ನು ಮಾಡಿ ಕಾರ್ಯವನ್ನು ಸಂಪೂರ್ಣಗೊಳಿಸುತ್ತಾರೆ. ಈತ ಮಾಡಿದ್ದು ಕೂಡಾ ಅದೆ, ಟ್ಯಾಕ್ಟರ್ ಮುಂಭಾಗದಲ್ಲಿ ಮಂಚವನ್ನು ಸಿಗಿಸಿಕೊಂಡು ವ್ಯವಸಾಯಕ್ಕೆ ಸಹಾಯಕವಾಗುವ ಹಾಗೆ ಮಾರ್ಪಾಡು ಮಾಡಿದ್ದಾನೆ.
|
ಈ ರೈತನ ಆವಿಷ್ಕಾರವನ್ನು ಮೆಚ್ಚಿದ ಆನಂದ್ ಮಹೀಂದ್ರಾರವರು, ತಮ್ಮ ಟ್ವಿಟರ್ ಖಾತೆಯಲ್ಲಿ ನಮ್ಮ ರೈತರು ಮನಸು ಮಾಡಿದರೆ ಏನನ್ನಾದರು ಮಾಡಬಲ್ಲರು ಎಂಬುದಕ್ಕೆ ಇದೊಂದು ಸಾಕ್ಷಿ ಎಂದು ಪೋಸ್ಟ್ ಮಾಡಿದ್ದಾರೆ.
ಆನಂದ್ ಮಹೀಂದ್ರಾ ಮಾಡಿರುವ ಟ್ವೀಟ್ನಲ್ಲಿ 'ಅವಶ್ಯಕತೆಯೇ ಆವಿಷ್ಕಾರದ ತಾಯಿ' ಎಂಬ ಸಾಲುಗಳು ನಮ್ಮ ಭಾರತೀಯರೇ ಕಂಡುಹಿಡಿದಿರಬೇಕು! ಇಲ್ಲಿ ನೋಡಿ ವ್ಯವಸಾಯಕ್ಕೆ ಮತ್ತು ನಿರ್ಮಾಣ ಕ್ಷೇತ್ರಗಳಲ್ಲಿ ಬಳಸಬಹುದಾದ ಹಾಗೆ ಒಂದು ಹೊಸ ಉತ್ಪನ್ನವನ್ನು ಈ ರೈತ ತಯಾರು ಮಾಡಿದ್ದಾನೆ ಎಂದು ಹೇಳಿದ್ದಾರೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?
ಆನಂದ್ ಮಹೀಂದ್ರಾರವರು ಮಾಡಲಾದ ಟ್ವೀಟ್ಗೆ 466ಕ್ಕು ಹೆಚ್ಚಿನ ಕಮೆಂಟ್ಸ್, 3.1 ಸಾವಿರಕ್ಕು ಹೆಚ್ಚಿನ ರೀಟ್ವೀಟ್ಗಳು ಮತ್ತು 17ಸಾವಿರಕ್ಕು ಹೆಚ್ಚಿನ ಮಂದಿ ಲೈಕ್ ಮಾಡಿದ್ದಾರೆ. ನಿಜಕ್ಕೂ ಈ ವಿಡಿಯೋ ಸಧ್ಯಕ್ಕೆ ವೈರಲ್ ಆಗಿದ್ದು, ಈ ವಿಡಿಯೋ ಎಲಿನದ್ದು ಮತ್ತು ಇದನ್ನು ಮೊದಲಿಗೆ ಯಾರು ಪೋಸ್ಟ್ ಮಾಡಿದ್ದಾರೆ ಎಂಬುದು ಇನ್ನು ತಿಳಿದುಬಂದಿಲ್ಲ.