Just In
- 3 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 3 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 4 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 5 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Movies ಮಾನ್ವಿತಾ ಮದುವೆಯಾಗ್ತಿರೋ ಆ ಅದೃಷ್ಟವಂತ ಇವ್ರೇ; ಟಗರು ಪುಟ್ಟಿ ಲೈಫ್ ಪಾರ್ಟನರ್ ಫುಲ್ ಡೀಟೆಲ್ಸ್
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಟ್ರಕ್ ಚಾಲಕನ ಮೇಲೆ ಬಿತ್ತು 2 ಲಕ್ಷ ದಂಡ..!
ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ಸಂಚಾರಿ ನಿಯಮವನ್ನು ಉಲ್ಲಂಘನೆಗೆ ವಾಹನ ಸವಾರರಿಗೆ ದಾಖಲೆಯ ಪ್ರಮಾಣದಲ್ಲಿ ದಂಡವನ್ನು ವಿಧಿಸುತ್ತಿದ್ದಾರೆ. ಇದೀಗ ಸಂಚಾರ ನಿಯಮ ಉಲ್ಲಂಘಿಸಿದ ಟ್ರಕ್ ಚಾಲಕನೋರ್ವನಿಗೆ ಬರೋಬ್ಬರಿ 2 ಲಕ್ಷ ರೂಪಾಯಿ ದಂಡ ವಿಧಿಸುವ ಮೂಲಕ ಟ್ರಾಫಿಕ್ ಪೊಲೀಸರು ಹೊಸ ದಾಖಲೆ ಸೃಷ್ಟಿಸಿದ್ದಾರೆ.
ಓವರ್ ಲೋಡ್ ಸೇರಿದಂತೆ ಇತರ ಸಂಚಾರ ನಿಮಯ ಉಲ್ಲಂಘನೆಗೆ ದಾಖಲೆ ಪ್ರಮಾಣದ ದಂಡ ಹಾಕಲಾಗಿದೆ. ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ಬಳಿಕ ದೇಶದಲ್ಲಿ ವಿಧಿಸಿದ ದುಬಾರಿ ಮೊತ್ತ ಇದಾಗಿದೆ . ಈ ಹಿಂದೆ ಒಡಿಶಾದಲ್ಲಿ ಲಾರಿ ಚಾಲಕರೊಬ್ಬರಿಗೆ ರೂ. 86,000 ದಂಡ ವಿಧಿಸಿದರು. ಅಂತೆಯೇ ರಾಜಸ್ಥಾನದ ಟ್ರಕ್ ಡ್ರೈವರ್ ಒಬ್ಬನಿಗೆ ಬರೋಬ್ಬರಿ ರೂ. 1.41 ಲಕ್ಷ ದಂಡ ಹಾಕಲಾಗಿತ್ತು.
ಅದುವೇ ದೇಶದಲ್ಲಿಯೇ ಅತ್ಯಧಿಕ ದಂಡವಾಗಿತ್ತು, ಈ ಬೆನ್ನಲ್ಲೇ ದೆಹಲಿಯಲ್ಲಿ ಟ್ರಕ್ ಚಾಲಕನಿಗೆ 2 ಲಕ್ಷ ದಂಡ ವಿಧಿಸುವ ಮೂಲಕ ಹಿಂದಿನ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ. ಒವರ್ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಹರಿಯಾಣ ಮೂಲದ ಟ್ರಕ್ ಚಾಲಕ ದೆಹಲಿಯ ಜಿ.ಟಿ. ಕರ್ನಲ್ ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ದೆಹಲಿ ಟ್ರಾಫಿಕ್ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆಗೆ 2 ಲಕ್ಷ ರೂ. ದಂಡ ವಿಧಿಸಿದ್ದಾರೆ.
ಹರಿಯಾಣ ಮೂಲದ ರಾಮ್ ಕಿಶನ್ ಎಂಬಾತನು 25 ಟನ್ ಭಾರವನ್ನು ಸಾಗಿಸಲು ಪರವಾನಗಿ ಅನ್ನು ಹೊಂದಿದ್ದರು. ಆದರೆ ಆತನ ಟ್ರಕ್ ಪೊಲೀಸರ ಕೈಗೆ ಸಿಕ್ಕಿಬಿದ್ದಾಗ 43 ಟನ್ ಭಾರದ ಲೋಡ್ ಅನ್ನು ಮಾಡಿದ್ದ, ಅಂದರೆ ಪರವಾನಗಿ ಪಡೆದಿರುವುದಕ್ಕಿಂತ 18 ಟನ್ ಹೆಚ್ಚಿನ ಲೋಡ್ ಅನ್ನು ಮಾಡಿದ್ದನು.
ಬಳಿಕ ರೂ. 2,00,500 ಲಕ್ಷ ದೆಹಲಿಯ ರೋಹಿಣಿ ನ್ಯಾಯಾಲಯದಲ್ಲಿ ರಾಮ್ ಕಿಶನ್ ಎಂಬಾತ ಟ್ರಾಫಿಕ್ ಉಲ್ಲಂಘನೆ ದಂಡವನ್ನು ಪಾವತಿಸಿ ಟ್ರಕ್ ಬಿಡಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಚಾಲಕ ಡ್ರೈವಿಂಗ್ ಲೈಸೆನ್ಸ್ ಹೊಂದಿರಲಿಲ್ಲ ಹೀಗೆ 10 ಸಂಚಾರಿ ನಿಯಮಗಳ ಉಲ್ಲಂಘನೆಗಾಗಿ ದುಬಾರಿ ದಂಡ ವಿಧಿಸಲಾಗಿದೆ ಎಂಬ ವರದಿ ಇದೆ.
ಹಿಂದಿನ ದುಬಾರಿ ಮೊತ್ತದ ದಂಡದ ಪ್ರಕರಣದಲ್ಲಿ, ರಾಜಸ್ಥಾನದ ಭಗವಾನ್ ರಾಮ್ ಎಂಬ ಟ್ರಕ್ ಮಾಲಿಕನಿಗೆ ಟ್ರಕ್ನಲ್ಲಿ ನಿಯಮಕ್ಕಿಂತ ಹೆಚ್ಚಿನ ಸರಕು ತುಂಬಿದ್ದಕ್ಕಾಗಿ ಓವರ್ಲೋಡ್ ನಿಯಮದನ್ವಯ ದಂಡ ವಿಧಿಸಲಾಗಿತ್ತು. ಸೆಪ್ಟೆಂಬರ್ 5 ರಂದು ದೆಹಲಿ ಟ್ರಾಫಿಕ್ ಪೊಲೀಸರು ದಂಡ ವಿಧಿಸಿ ಟ್ರಕ್ ವಶಕ್ಕೆ ಪಡೆದಿದ್ದರು. ಬಳಿಕ ಸೆಪ್ಟೆಂಬರ್ 9 ರಂದು ಕೋರ್ಟ್ನಲ್ಲಿ ದಂಡ ಪಾವತಿಸಿ ವಾಹನ ಮಾಲಿಕನು ಟ್ರಕ್ ಅನ್ನು ಬಿಡಿಸಿಕೊಂಡರು
ರಾಜಸ್ಥಾನದ ಭಗವಾನ್ ರಾಮ್ ಪ್ರಕರಣದಲ್ಲಿ ಟ್ರಕ್ನಲ್ಲಿ ನಿಯಮಕ್ಕಿಂತ ಹೆಚ್ಚಿಗೆ ತುಂಬಿಸಲಾಗಿದ್ದ ಸರಕಿಗೆ ಮೊದಲ ಒಂದು ಟನ್ಗೆ 20 ಸಾವಿರ ಮತ್ತು ಆ ನಂತರ ಪ್ರತಿಯೊಂದು ಟನ್ಗೆ 2 ಸಾವಿರದಂತೆ ಓವರ್ಲೋಡ್ ಮಾಡಿದ್ದಕ್ಕಾಗಿ ಒಟ್ಟು ರೂ. 48 ಸಾವಿರ ದಂಡ ವಿಧಿಸಲಾಗಿದೆ. ಅಲ್ಲದೇ ಆರ್ಸಿ ಮತ್ತು ಪರವಾನಿಗೆ ಇಲ್ಲದ್ದಕ್ಕಾಗಿ ಪ್ರತ್ಯೇಕವಾಗಿ ದಂಡ ವಿಧಿಸಲಾಗಿದೆ. ಎಲ್ಲಾ ಸೇರಿ ಡ್ರೈವರ್ಗೆ ರೂ. 70,800 ಮತ್ತು ಇಷ್ಟೇ ಮೊತ್ತದ ದಂಡವನ್ನು ಟ್ರಕ್ ಮಾಲಿಕನಿಗೆ ವಿಧಿಸಲಾಗಿದೆ. ಹೀಗಾಗಿ ದಂಡದ ಒಟ್ಟು ಮೊತ್ತ ರೂ. 1,41,600 ದಂಡ ವಿಧಿಸಿದ್ದರು.
MOST READ: ಸೀಟ್ ಬೆಲ್ಟ್ ಧರಿಸದ ಪೊಲೀಸರನ್ನೇ ಅಡ್ಡಗಟ್ಟಿದ ಭೂಪ..!
ಸಂಚಾರಿ ನಿಯಮ ಉಲ್ಲಂಘನೆಗೆ ದುಬಾರಿ ದಂಡದ ವಿಧಿಸುವುದನ್ನು ಕಂಡಿಸಿ ಯುವ ಕಾಂಗ್ರೆಸ್ ಸದಸ್ಯರು ಸೆಪ್ಟೆಂಬರ್ 11 ರಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಮನೆ ಮುಂದೆ ಧರಣಿ ನಡೆಸಿದ್ದರು. ಪ್ರತಿಭಟನೆಯಲ್ಲಿ ಸ್ಕೂಟರನ್ನು ಎಸೆದು ತೀವ್ರವಾಗಿ ಅಕ್ರೋಶ ವ್ಯಕ್ತಪಡಿಸಿದರು. ಇದೆ ರೀತಿ ದೇಶದಲ್ಲಿ ಹಲವು ಕಡೆಗಳಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
MOST READ: ತಡೆದು ನಿಲ್ಲಿಸಿದ್ದು ಒಂದು ಕಾರಣಕ್ಕೆ, ದಂಡ ವಿಧಿಸಿದ್ದು ಇನ್ನೊಂದಕ್ಕೆ..!
ಆದರೆ ದೇಶದಲ್ಲಿ ಅಪಘಾತದ ಸಂಖ್ಖೆ ದಿನೇ ದಿನೇ ಹೆಚ್ಚುತ್ತಲೇ ಇದೆ. ಇದನ್ನು ತಡೆಯಲು ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಪ್ರಯೋಜನವಾಗಿಲ್ಲ, ಅಷ್ಟೇ ಅಲ್ಲದೇ ಈ ಹಿಂದೆ ಸಂಚಾರಿ ನಿಯಮ ಜಾರಿಯಲ್ಲಿದ್ದಾಗ ಅದನ್ನು ಗಾಳಿಗೆ ತೂರುವವರ ಸಂಖ್ಖೆ ಹೆಚ್ಚದಾಗ ಕೇಂದ್ರ ಸರ್ಕಾರ ಹೆಚ್ಚಿನ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೊಳಪಡಿಸುವ ರೀತಿಯ ಹೊಸ ಮೋಟಾರು ವಾಹನ ತಿದ್ದುಪಡಿ ವಿಧೇಯಕ ಜಾರಿಗೆ ತಂದರು. ಆದರೆ ದಂಡ ಪ್ರಮಾಣ ತುಂಬಾ ದುಬಾರಿಯಾಗಿದ್ದು, ಮಧ್ಯಮವರ್ಗದವರನ್ನು ಸಂಕಷ್ಟಕ್ಕೆ ಇಡಾಗುತ್ತಾರೆ ಎಂಬ ಸಾರ್ವಜನಿಕರ ವಾದವನ್ನು ಸರ್ಕಾರ ಯಾವ ರೀತಿ ಪರಿಗಣಿಸುತ್ತಾರೆ ಎಂಬುವುದನ್ನು ಕಾದು ನೋಡಬೇಕು.
Source: IndiaToday