Just In
- 1 hr ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 15 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
- 17 hrs ago Air Taxi: ಬೆಂಗಳೂರು ಸೇರಿ ಈ ನಗರಗಳಲ್ಲಿ ಏರ್ ಟ್ಯಾಕ್ಸಿ.. ಆಕಾಶದಲ್ಲೇ ಆಫೀಸ್ಗೆ ಹೋಗಬಹುದು, ಕಡಿಮೆ ಖರ್ಚು!
- 17 hrs ago ಐಷಾರಾಮಿ ಸ್ಪೋರ್ಟ್ಸ್ ಕಾರಿನಂತೆ ಮಾರ್ಪಾಡಾದ ಬಡವರ ಮಾರುತಿ ಆಲ್ಟೋ ಕಾರಿಗೆ ನೆಟ್ಟಿಗರು ಫಿದಾ
Don't Miss!
- News ಮಾಜಿ ಶಾಸಕ ಎಂ. ಕೃಷ್ಣಾರೆಡ್ಡಿ ವಿರುದ್ಧದ ಪ್ರಕರಣಕ್ಕೆ ಕೋರ್ಟ್ ತಡೆ
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Finance ರಿಲಯನ್ಸ್ ಇಂಡಸ್ಟ್ರೀಸ್ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಪ್ರಕಟ; ನಿವ್ವಳ ಲಾಭ 18,951 ಕೋಟಿ ರೂಪಾಯಿ
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Technology ಇಂದು ಮೊಟೊ G64 5G ಫೋನ್ ಫಸ್ಟ್ ಸೇಲ್!..ಈ ಫೋನಿನ ಪ್ಲಸ್ ಪಾಯಿಂಟ್ ಏನು?
- Movies ಈ ಬಾಲಿವುಡ್ ನಟ-ನಟಿಯರು ಭಾರತದಲ್ಲಿ ಯಾಕೆ ಮತ ಚಲಾಯಿಸಲ್ಲ; ಕಾರಣವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಕಾಡೆ ಮಲಗಿರುವ ಆಟೋ ಉದ್ಯಮಕ್ಕೆ ಮತ್ತೆ ಚುರುಕು ನೀಡಿದ ಕೇಂದ್ರ ಸರ್ಕಾರ..!
ಸತತ ಕುಸಿತದಿಂದ ಕಂಗೆಟ್ಟಿರುವ ಭಾರತೀಯ ಆಟೋಮೊಬೈಲ್ ಉದ್ಯಮ ಚೇತರಿಕೆಗೆ ಮುಂದಾಗಿರುವ ಕೇಂದ್ರ ಸರ್ಕಾರವು ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದೆ. ಆರ್ಥಿಕ ಸಚಿವಾಲಯದ ಉನ್ನತಾಧಿಕಾರಿಗಳ ಜೊತೆಗಿನ ಮಹತ್ವದ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕುಸಿಯುತ್ತಿರುವ ಆಟೋ ಉದ್ಯಮಕ್ಕಾಗಿ ಮಹತ್ವದ ಕ್ರಮ ಗಳನ್ನು ಕೈಗೊಂಡಿರುವುದಾಗಿ ಪ್ರಕಟಿಸಿದ್ದಾರೆ.
ಆಟೋಮೊಬೈಲ್ ಕ್ಷೇತ್ರದ ಅವನತಿಯು ದೇಶದ ಒಟ್ಟಾರೆ ಆರ್ಥಿಕ ಕುಸಿತದ ಪ್ರತಿಬಿಂಬವಾಗಿದ್ದು, ಈ ಹಿನ್ನೆಲೆ ಆಟೋ ಉದ್ಯಮವನ್ನು ರಕ್ಷಿಸುವುದು ನಮ್ಮ ಮೊದಲ ಆದ್ಯತೆಯಾಗಿರುವ ಬಗ್ಗೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂಧನ ಆಧರಿತ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ನಿರ್ಬಂಧಿಸುವ ಸಂಬಂಧ ಕಳೆದ ಕೆಲ ದಿನಗಳ ಹಿಂದೆ ಜಾರಿಗೆ ತರಲಾಗಿದ್ದ ನೋಂದಣಿ ಶುಲ್ಕ ಹೆಚ್ಚಳ, ದುಬಾರಿ ಸೆಸ್ ಸೇರಿದಂತೆ ಹಲವು ಕಠಿಣ ಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿರುವುದಾಗಿ ತಿಳಿಸಲಾಗಿದೆ.
ಇದರೊಂದಿಗೆ ಭವಿಷ್ಯ ವಾಹನಗಳ ಮಾದರಿಯಾದ ಎಲೆಕ್ಟ್ರಿಕ್ ವಾಹನಗಳಿಗೆ ವಿಶೇಷ ಆದ್ಯತೆಯನ್ನು ಮುಂದುವರಿಸುವ ಸ್ಪಷ್ಟನೆ ನೀಡಲಾಗಿದ್ದು, ಹಂತ ಹಂತವಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಕಡಿತಗೊಳಿಸುವುದು ನಿಶ್ಚಿತ ಎಂದಿದ್ದಾರೆ.
ಹೀಗಾಗಿ ಸದ್ಯಕ್ಕೆ ಎಲೆಕ್ಟ್ರಿಕ್ ವಾಹನಗಳ ಜೊತೆಗೆ ಬಿಎಸ್-4 ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟ ಮುಂದುವರಿಯಲಿದ್ದು, ಭವಿಷ್ಯದಲ್ಲಿ ಇಂಧನ ಆಧಾರಿತ ವಾಹನ ಬೇಡಿಕೆಯನ್ನು ತಗ್ಗಿಸಿ ಎಲೆಕ್ಟ್ರಿಕ್ ಮಾದರಿಗಳತ್ತ ಹೆಚ್ಚು ಗಮನಹರಿಸುವುದು ಕೇಂದ್ರದ ಮೊದಲ ಗುರಿ ಎನ್ನಲಾಗಿದೆ.
ಗುಜುರಿ ಸೇರಲಿವೆ ಹಳೆಯ ವಾಹನಗಳು?
ಹೊಸ ವಾಹನಗಳ ಜೊತೆಗೆ ಮಾಲಿನ್ಯ ಉತ್ಪಾದನೆಯನ್ನು ಪರಿಣಾಮಕಾರಿ ತಗ್ಗಿಸುವುದನ್ನು ಪ್ರಮುಖ ಯೋಜನೆಯಾಗಿ ಘೋಷಿಸುತ್ತಿರುವ ಕೇಂದ್ರ ಸರ್ಕಾರವು ಸದ್ಯದಲ್ಲೇ 15 ವರ್ಷ ಮೇಲ್ಪಟ್ಟ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ಹೊಸ ಸ್ಕ್ರಾರ್ಪಿಂಗ್ ನೀತಿ ಅಡಿ ಗುಜುರಿ ಸೇರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಬಗ್ಗೆ ಸುಳಿವು ನೀಡಿದೆ. ಇದರಿಂದ ಹೊಸ ವಾಹನಗಳ ಅಭಿವೃದ್ದಿ ಮತ್ತು ಸ್ಕ್ರಾರ್ಪಿಂಗ್ನಿಂದ ಬೀಡಿಭಾಗಗಳ ಮರುಬಳಕೆಯಿಂದ ವಾಹನ ಉತ್ಪಾದನಾ ವೆಚ್ಚವನ್ನು ತಗ್ಗಿಸಬಹುದು ಎನ್ನಲಾಗಿದೆ.
ವಾಹನ ಬಡ್ಡಿದರಗಳಲ್ಲಿ ಇಳಿಕೆ
ಗ್ರಾಹಕರಿಗೆ ಹೊಸ ವಾಹನಗಳ ಖರೀದಿಗೆ ಸಹಕಾರಿಯಾಗುವಂತೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಮತ್ತು ಎಲೆಕ್ಟ್ರಿಕ್ ವಾಹನ ಮಾರಾಟದ ಮೇಲೂ ಹೆಚ್ಚು ಗಮನಹರಿಸುತ್ತಿರುವುದಾಗಿ ಹೇಳಿರುವ ಕೇಂದ್ರ ಸರ್ಕಾರವು ಭವಿಷ್ಯ ವಾಹನಗಳ ಮೇಲೆ ಗಮನಿಹರಿಸುವಂತೆ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಮಹತ್ವದ ಸೂಚನೆ ನೀಡಿದೆ.
ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್ಟಿ ಪ್ರಮಾಣವನ್ನು ಶೇ. 12ರಿಂದ ಶೇ.5ಕ್ಕೆ ಇಳಿಕೆ, ಆದಾಯ ತೆರಿಗೆ ರೂ.1.50 ಲಕ್ಷದ ತನಕ ವಿನಾಯ್ತಿ ಸೇರಿದಂತೆ ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದು, ಸರ್ಕಾರಿ ಇಲಾಖೆಗಳಿಗೆ ಹೊಸ ವಾಹನಗಳನ್ನು ಖರೀದಿಸಲು ಮತ್ತು ಹಳೆಯ ವಾಹನಗಳನ್ನು ಬದಲಿಸಲು ಹಾಕಲಾಗಿದ್ದ ನಿಷೇಧವನ್ನು ತೆಗೆದುಹಾಕಲಾಗಿದೆ.
ಇನ್ನು ಆಟೋ ಉತ್ಪಾದನಾ ನಿಯಮಾವಳಿಗಳಲ್ಲಿ ನಿರಂತರ ಬದಲಾವಣೆ ಮತ್ತು ಇಂಧನ ಆಧರಿತ ವಾಹನಗಳ ನೋಂದಣಿಯ ಮೇಲೆ ಗರಿಷ್ಠ ಪ್ರಮಾಣದ ಜಿಎಸ್ಟಿ ಶುಲ್ಕ ವಿಧಿಸುತ್ತಿರುವುದು ದೇಶಿಯ ಆಟೋ ಮಾರುಕಟ್ಟೆಯಲ್ಲಿ ಪ್ರತಿಕೂಲಕರ ವಾತಾವರಣ ಸೃಷ್ಠಿಯಾಗಿತ್ತು.
ಜೊತೆಗೆ ಸಾಂಪ್ರಾದಾಯಿಕ ವಾಹನಗಳ ಮೇಲಿನ ಜಿಎಸ್ಟಿ ಹೆಚ್ಚಳದಿಂದ ಹೊಸ ವಾಹನ ಮಾರಾಟದ ಮೇಲೆ ಅಷ್ಟೇ ಅಲ್ಲದೇ ಆಟೋ ಉದ್ಯಮವನ್ನೇ ನೆಚ್ಚಿಕೊಂಡಿರುವ ಲಕ್ಷಾಂತರ ಸಣ್ಣ ಉದ್ಯಮಗಳ ಮೇಲೂ ಇದು ಪರಿಣಾಮ ಬೀರಿದೆ ಹೊಸ ವಾಹನಗಳ ಮಾರಾಟ ಪ್ರಮಾಣವು 2019ರ ಆರಂಭದಿಂದಲೇ ಕುಸಿತ ಕಾಣುತ್ತಿದ್ದು, ಕಳೆದ 19 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಮಾಣಿಕರ ವಾಹನಗಳ ಮಾರಾಟ ಪ್ರಮಾಣವು ಶೇ.30ಕ್ಕೆ ಕುಸಿತ ಕಂಡಿದೆ.
2018ರ ಜುಲೈ ಅವಧಿಗೂ 2019ರ ಜುಲೈ ಅವಧಿಯಲ್ಲಿನ ವಾಹನಗಳ ಮಾರಾಟ ಪ್ರಮಾಣಕ್ಕೆ ಹೋಲಿಕೆ ಮಾಡಿದ್ದಲ್ಲಿ, ಕಳೆದ ವರ್ಷದ ಜುಲೈನಲ್ಲಿ ಒಟ್ಟು 2,90,931 ಪ್ರಯಾಣಿಕ ವಾಹನಗಳು ಮಾರಾಟವಾದರೇ ಪ್ರಸಕ್ತ ವರ್ಷದ ಜುಲೈ ಅವಧಿಯಲ್ಲಿ ಕೇವಲ 2,00,790 ಪ್ರಯಾಣಿಕ ವಾಹನಗಳು ಮಾರಾಟವಾಗಿವೆ.
ಈ ಹಿನ್ನಲೆ ಆಟೋ ಉದ್ಯಮದ ಕುಸಿತವನ್ನು ತಡೆಯಲು ಮಧ್ಯಪ್ರವೇಶಿಸಿರುವ ಕೇಂದ್ರ ಸರ್ಕಾರವು ಮಹತ್ವದ ಕ್ರಮಗಳನ್ನು ಪ್ರಕಟಿಸಿದ್ದು, ಮುಂಬರುವ ದಿನಗಳಲ್ಲಿ ಆಟೋಉದ್ಯಮವು ಮತ್ತೆ ಹಳಿಗೆ ಬರುವ ವಿಶ್ವಾಸ ವ್ಯಕ್ತವಾಗಿದೆ.