Just In
- 30 min ago Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- 1 hr ago ರಾಂಗ್ ರೂಟ್ನಲ್ಲಿ ಬಂದು ಪ್ರಶ್ನಿಸಿದ ಬೈಕ್ ಸವಾರನಿಗೆ ಥಳಿಸಿದ ಕಾರು ಚಾಲಕ: ವಿಡಿಯೋ
- 14 hrs ago ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- 14 hrs ago ಭಾರತದ ನಂ.1 ಕಾರು... ದಾಖಲೆಯ ಮಾರಾಟ... 5.5 ಲಕ್ಷ ಬೆಲೆ... 34 ಕಿ.ಮೀ ಮೈಲೇಜ್
Don't Miss!
- News ಕನಕಪುರಕ್ಕೆ ಕಾಲಿಡಲು ಭಯ; ಕೋರ್ಟ್ಗೆ ಯತ್ನಾಳ್ ಹೇಳಿಕೆ!
- Finance ತನ್ನ 4 ವರ್ಷದ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರುಗಳನ್ನು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Movies ರಣ್ವೀರ್ ಸಿಂಗ್ ಗೆ ಶಕ್ತಿಮಾನ್ ಪಾತ್ರ ಮಾಡುವ ಅರ್ಹತೆ-ಯೋಗ್ಯತೆ ಇಲ್ಲ ; ಮುಖೇಶ್ ಖನ್ನಾ..!
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗುಜರಿ ಸೇರಲು ಸಜ್ಜಾದ 82 ಸಾವಿರ ಹಳೆಯ ವಾಹನಗಳು..!
ಆರ್ಟಿಒ ಅಧಿಕಾರಿಗಳು ಹಳೆಯ 82,000 ವಾಹನಗಳನ್ನು ಸಂಪೂರ್ಣವಾಗಿ ನಾಶ ಪಡಿಸಲು ತೀರ್ಮಾನಿಸಿದ್ದಾರೆ. ಯಾವ ಆರ್ಟಿಒ ಅಧಿಕಾರಿಗಳು, ಯಾವ ವಾಹನಗಳನ್ನು, ಯಾವ ಕಾರಣಕ್ಕೆ ನಾಶ ಪಡಿಸಲು ಬಯಸಿದ್ದಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ.
ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಬಳಕೆಯಿಂದ ಹಲವಾರು ಸಮಸ್ಯೆಗಳು ಎದುರಾಗುತ್ತವೆ. ಮುಖ್ಯವಾಗಿ ಅವುಗಳು ಬಿಡುಗಡೆಗೊಳಿಸುವ ಹೊಗೆಯಿಂದಾಗಿ ಗ್ಲೋಬಲ್ ವಾರ್ಮಿಂಗ್ ಹಾಗೂ ವಾಯು ಮಾಲಿನ್ಯದಂತಹ ಹಲವಾರು ಸಮಸ್ಯೆಗಳು ಉಂಟಾಗುತ್ತಿವೆ.
ಆದ ಕಾರಣ ಕೇಂದ್ರ ಸರ್ಕಾರ ಹಾಗೂ ಹಲವಾರು ರಾಜ್ಯ ಸರ್ಕಾರಗಳು ಈ ಸಮಸ್ಯೆಗೆ ಪರಿಹಾರ ಹುಡುಕಿ, ಈ ಸಮಸ್ಯೆಯನ್ನು ಕೊನೆಗಾಣಿಸಲು ಬಯಸಿವೆ. ಇವುಗಳ ಜೊತೆಗೆ ವಾಯು ಮಾಲಿನ್ಯವನ್ನು ತಡೆಗಟ್ಟಲು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ.
ಚಾರ್ಜಿಂಗ್ ಸ್ಟೇಷನ್ನಂತಹ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಇನ್ನಿತರ ಕಾರಣಗಳಿಂದಾಗಿ ಜನರೂ ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳು ಹಲವಾರು ಸಮಸ್ಯೆಗಳಿಗೆ ಮೂಲವಾಗಿವೆ.
ಈ ಕಾರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂಧನ ವಾಹನಗಳ ಬಳಕೆಯನ್ನು ಕಡಿಮೆಗೊಳಿಸುವ ಸಲುವಾಗಿ ಹಲವಾರು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿವೆ. ದೆಹಲಿಯಲ್ಲಿನ ವಾಯು ಮಾಲಿನ್ಯವನ್ನು ಗಮನಿಸಿದರೆ, ಪರಿಸ್ಥಿತಿಯ ಗಂಭೀರತೆಯ ಬಗ್ಗೆ ತಿಳಿಯಲಿದೆ. ಆದ ಕಾರಣ ಅಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ದೆಹಲಿ ಸರ್ಕಾರವು ಹಲವು ನೀತಿಗಳನ್ನು ರೂಪಿಸುತ್ತಿದೆ.
ದೆಹಲಿಯಲ್ಲಿನ ಮಾಲಿನ್ಯವನ್ನು ಗಮನದಲ್ಲಿಟ್ಟು ಕೊಂಡು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು 2015ರಲ್ಲಿ ಸುತ್ತೋಲೆಯೊಂದನ್ನು ಹೊರಡಿಸಿದೆ. ಈ ಸುತ್ತೋಲೆಯ ಪ್ರಕಾರ, 15 ವರ್ಷಕ್ಕೂ ಹೆಚ್ಚು ಹಳೆಯದಾದ ಪೆಟ್ರೋಲ್ ಹಾಗೂ 10 ವರ್ಷಕ್ಕೂ ಹೆಚ್ಚು ಹಳೆಯದಾದ ಡೀಸೆಲ್ ವಾಹನಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಆದ ಕಾರಣ ಗಾಜಿಯಾಬಾದ್ನ ಆರ್ಟಿಒ 82,000ಕ್ಕೂ ಹೆಚ್ಚು ವಾಹನಗಳನ್ನು ಗುಜರಿ ಹಾಕಿದೆ. ಈ ಯೋಜನೆಯನ್ನು ಎರಡು ಹಂತಗಳಲ್ಲಿ ಹಮ್ಮಿಕೊಳ್ಳಲಾಗಿದೆ. ದೆಹಲಿ ಎನ್ಸಿಆರ್ ವ್ಯಾಪ್ತಿಯಲ್ಲಿರುವ 15 ವರ್ಷಕ್ಕೂ ಹಳೆಯ ಡೀಸೆಲ್ ಹಾಗೂ 10 ವರ್ಷ ಹಳೆಯದಾದ ಪೆಟ್ರೋಲ್ ಎಂಜಿನ್ ವಾಹನಗಳನ್ನು ರಿ-ರಿಜಿಸ್ಟ್ರರ್ ಮಾಡಬೇಕಿದೆ.
MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್
ಇದರ ಜೊತೆಗೆ ಹಳೆಯ ವಾಹನಗಳನ್ನು ದೆಹಲಿಯ ಹೊರಗೆ ವರ್ಗಾಯಿಸುವುದು. ಇದಕ್ಕಾಗಿ ಆರ್ಟಿಒ ಅಧಿಕಾರಿಗಳಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕಾಗುತ್ತದೆ. ಈ ರೀತಿಯ ವಾಹನಗಳಿಗಾಗಿ ಇತ್ತೀಚಿಗೆ ಈ ಆರ್ಟಿಒ ಅರ್ಜಿಯನ್ನು ವಿತರಿಸಿತ್ತು. ಈ ವಾಹನಗಳ ಪೈಕಿ ಕೆಲವು ವಾಹನಗಳನ್ನು ಮಾತ್ರ ರಿ-ರಿಜಿಸ್ಟರ್ ಮಾಡಲಾಯಿತು. ಉಳಿದ ವಾಹನಗಳನ್ನು ತಿರಸ್ಕರಿಸಲಾಯಿತು.
MOST READ: ಹಳೆಯದಾದಷ್ಟು ದುಬಾರಿಯಾಗುತ್ತವೆ ಈ ಜನಪ್ರಿಯ ಬೈಕುಗಳು
ಗಾಜಿಯಾಬಾದ್ನ ಆರ್ಟಿಒ ಕಚೇರಿ, ಹಳೆಯ ವಾಹನಗಳನ್ನು ರಿಜಿಸ್ಟರ್ ಮಾಡುವುದಿಲ್ಲವೆಂದು ತಿಳಿಸಿದೆ. ಈ ವಾಹನಗಳನ್ನು ರಸ್ತೆಗಳಲ್ಲಿ ಚಲಾಯಿಸುವುದು ಕಂಡು ಬಂದರೆ ಅಂತಹ ವಾಹನಗಳ ಮಾಲೀಕರ ವಿರುದ್ಧ ಮೋಟಾರು ವಾಹನ ಕಾಯ್ದೆಯನ್ವಯ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ತಿಳಿಸಿದೆ.
MOST READ: ಜೆಸಿಬಿ ಯಂತ್ರವು ಹಳದಿ ಬಣ್ಣದಲ್ಲೇ ಏಕಿರುತ್ತೆ?
ಆದ ಕಾರಣ ಅಂತಹ ವಾಹನಗಳನ್ನು ಗುಜರಿಗೆ ಸೇರಿಸ ಬೇಕಾಗಿದೆ. ಗುಜರಿ ಸೇರುವ ಅಂತಹ ವಾಹನಗಳನ್ನು ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ. ಈ ಬಗ್ಗೆ ದೆಹಲಿ ಎನ್ಸಿಆರ್ನ ಆರ್ಟಿಒ ಅಧಿಕಾರಿ ವಿಶ್ವಜಿತ್ ಸಿಂಗ್ರವರು ಪ್ರತಿಕ್ರಿಯೆ ನೀಡಿದ್ದಾರೆ.
2018ರ ಜುಲೈನಲ್ಲಿ ಸಾರ್ವಜನಿಕ ಪ್ರಕಟಣೆ ಹೊರಡಿಸಿ ದೆಹಲಿಯ ಹೊರಗೆ ವಾಹನಗಳನ್ನು ತೆಗೆದುಕೊಂಡು ಹೋಗಲು ನೋ ಅಬ್ಜಕ್ಷನ್ ಸರ್ಟಿಫಿಕೇಟ್ ಪಡೆಯುವಂತೆ ಸೂಚಿಸಲಾಗಿತ್ತು. ಆದರೆ ಕೆಲವರು ಮಾತ್ರ ಅರ್ಜಿ ಸಲ್ಲಿಸಿದ್ದರು.
ಹಳೆಯ ವಾಹನಗಳ ರಿಜಿಸ್ಟ್ರೇಷನ್ಗಾಗಿ 60 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಕೆಲವರು ಮಾತ್ರ ರಿಜಿಸ್ಟರ್ ಮಾಡಿಸಿದರು. ಉಳಿದವರು ರಿಜಿಸ್ಟರ್ ಮಾಡಿಸಲು ವಿಫಲರಾದರು. ರಿ-ರಿಜಿಸ್ಟರ್ ಮಾಡಿಸದ ವಾಹನಗಳನ್ನು ಗುಜರಿಗೆ ಸೇರಿಸಲಾಗುವುದೆಂದು ಹೇಳಿದರು.