Just In
- 9 min ago ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- 33 min ago Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- 50 min ago ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- 1 hr ago Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
Don't Miss!
- News Rameshwar Cafe: ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣ: ದಾಳಿಗೆ ಸಹಾಯ ಮಾಡಿದ ವ್ಯಕ್ತಿ ಬಂಧನ- ತೀರ್ಥಹಳ್ಳಿ ಉಗ್ರನೊಂದಿಗೆ ಸಂಪರ್
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮತದಾನ ನಿಮ್ಮ ಹಕ್ಕು' - ಬಿಎಂಟಿಸಿ ಇಂದ ಎಲೆಕ್ಷನ್ ಜಾಗೃತಿ ಕಾರ್ಯಕ್ರಮ
ದೇಶದಾದ್ಯಂತ ಏಪ್ರಿಲ್-ಮೇ 2019 ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಅನುಸಾರ ಹಲವಾರು ಪ್ರಾಂತ್ಯಗಳಲ್ಲಿ ಪ್ರಚಾರವು ಅದ್ದೂರಿಯಾಗಿ ನಡೆಯುತ್ತಿದೆ. ಸಧ್ಯಕ್ಕೆ ದೇಶದೆಲ್ಲೆಡೆ ನಮ್ಮ ಮಂಡ್ಯನಲ್ಲಿ ನಡೆಯುತ್ತಿರುವ ಪ್ರಚಾರದ ಬಗ್ಗೆ ಇಡೀ ದೇಶವೇ ತಿರುಗಿ ನೋಡುತ್ತಿದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗುವ ಮುಂದಿನ ಪ್ರಧಾನಿಯ ಕೈಯಲ್ಲಿ ನಮ್ಮ ದೇಶದ ಮುಂದಿನ ಐದು ವರ್ಷದ ಭವಿಷ್ಯ ಇರುವ ಕಾರಣ, ಪ್ರಜೆಗಳಾದ ನಾವು ನಮ್ಮ ಮುಂದಿನ ಐದು ವರ್ಷದ ಭವಿಷ್ಯವನ್ನ ನಾವು ನೀಡುವ ಮತಗಳ ಮೂಲಕ ಸರಿಯಾದ ಪ್ರಧಾನಿಯನ್ನು ಮತ್ತು ಪ್ರಾಂತ್ಯಗಳ ಸಂಸತ್ತಿನ ಸದಸ್ಯರನ್ನ ಆಯ್ಕೆ ಮಾಡಿಕೊಳ್ಳುವ ಹಕ್ಕು ಮತ್ತು ಜವಾಬ್ದಾರಿ ನಮ್ಮ ಮೇಲಿದೆ.
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈ ವರ್ಶ ಮಾತ್ರ ತುಂಬಾ ಕಡಿಮೆ ಜನರು ಮತ ಹಾಕಿರುವುದಾಗಿ ಅಂಕಿ ಅಂಧಗಳು ಸಹ ಹೇಳುತ್ತಿದೆ. ಇದಕೆ ಕಾರಣ ಕೆಲವರಿಗೆ ಈ ಹಿಂದೆ ಅವರಿಗೆ ಅವರ ಕ್ಷೇತ್ರಗಳಲ್ಲಿ ಸರಿಯಾದ ಅಭಿವೃದ್ದಿಯಾಗಲಿಲ್ಲವೆಂದು, ಮತ್ತು ಮತ ಹಾಕಲು ತಮ್ಮ ತಮ್ಮ ಖಚೇರಿಗಳಲ್ಲಿ ರಜೆ ನೀಡಲಿಲ್ಲವಾದ ಕಾರಣ ಹಲವರು ತಮ್ಮ ಮತವನ್ನ ನೀಡಲಿಲ್ಲ.
ಆದ್ರೆ, ನಮ್ಮ ಬಿಎಂಟಿಸಿ ಮಾತ್ರ ಈ ಬಾರಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಟಿಕೆಟ್ಗಳಲ್ಲಿ ಮತದ ಬಗೆಗಿನ ಎಚ್ಚರಿಕೆಯನ್ನು ಪ್ರಿಂಟ್ ಮಾಡಲಾಗಿದೆ. ಬಿಎಂಟಿಸಿ ಬಸ್ಗಳಲ್ಲಿ ಸಂಚರಿಸುವ ಹಲವರು ಮಧ್ಯವರ್ಗದ ನಾಗರೀಕರಾಗಿದ್ದು, ಮೊದಲು ಇವರಿಗೆ ಚುನಾವಣೇಯ ಬಗ್ಗೆ ಅರಿವನ್ನು ಮೂಡಿಸುವ ಸಲುವಾಗಿ ಇಂತಹ ಹೆಜ್ಜೆಯನ್ನು ತೆಗೆದುಕೊಂಡಿದೆ.
ಬಿಎಂಟಿಸಿ ಬಸ್ಗಳಲ್ಲಿ ನೀಡುತ್ತಿರುವ ಟಿಕೆಟ್ಗಳ ಮೇಲೆ 'ಮತದಾನ ನಿಮ್ಮ ಹಕ್ಕು ದಯವಿಟ್ಟು ನಿಮ್ಮ ಮತ ಚಲಾಯಿಸಿ' ಎಂದು ಎಲ್ಲಾ ಟಿಕೆಟ್ಗಳ ಮೇಲೆ ಪ್ರಿಂಟ್ ಮಾಡಿಸಲಾಗಿದೆ. ಈ ಮುಂದೆ ಪಾಂಪ್ಲೆಟ್, ದೊಡ್ಡ ಬ್ಯಾನರ್ಗಳು ಮತ್ತು ಇನ್ನಿತರೆ ಮಾಧ್ಯಮಗಳಲ್ಲಿ ಜಾಹಿರಾತು ನೀಡುವ ರೀತಿಯಲ್ಲಿ ಪ್ರಚಾರವನ್ನ ನೀಡಲಾಗಿದೆ.
ಆದರೆ ಕಾಲ ಬದಲಾಗುತ್ತಿದ್ದಂತೆ ಟೆಕ್ನಾಲಜಿಯು ಅಭಿವೃದ್ದಿಯಾಗುತ್ತಿರುವ ಪ್ರಸ್ತುತ ಜಗತ್ತಿನಲ್ಲಿ ಬಿಎಂಟಿಸಿ ಇಂತಹ ಹೆಜ್ಜೆಯನ್ನು ತೆಗೆದುಕೊಂಡಿದ್ದು, ಪ್ರತೀಯೊಬ್ಬ ನಾಗರೀಕನು ಕಡ್ದಾಯವಾಗಿ ತಮ್ಮ ಮತವನ್ನ ಚಲಾಯಿಸಬೇಕು ಎಂಬ ಉದ್ದೇಶದಿಂದ ಈ ಕಾರ್ಯವನ್ನು ಮಾಡಲಾಗಿದೆ.
ಬೆಂಗಳೂರಿನಲ್ಲಿ ರಸ್ತೆಗಿಳಿಯಲು ಸಜ್ಜಾದ 3 ಸಾವಿರ ಎಲೆಕ್ಟ್ರಿಕ್ ಬಸ್ಗಳು..!
ಬೆಂಗಳೂರಿನ ಜನತೆಯ ಜೀವಾಳವಾಗಿರುವ ಬಿಎಂಟಿಸಿ ಸಂಸ್ಥೆಯು ಹೊಸ ಬದಲಾವಣೆಗಳೊಂದಿಗೆ ವಿಶ್ವದರ್ಜೆ ಸೇವೆಗಳನ್ನು ನೀಡಲು ಸಜ್ಜಾಗುತ್ತಿದ್ದು, ಮಾಲಿನ್ಯ ಉತ್ಪಾದನೆಯಲ್ಲಿ ದೊಡ್ಡ ಪಾಲು ಹೊಂದಿರುವ ಸಾಂಪ್ರಾದಾಯಿಕ ಡೀಸೆಲ್ ಬಸ್ಗಳಿಗೆ ಗುಡ್ ಬೈ ಹೇಳುವುದು ಖಚಿತವಾಗಿದೆ.
ಈ ಸಂಬಂಧ ಕರ್ನಾಟಕ ಸರ್ಕಾರವು ಇ-ವಾಹನ ಉತ್ತೇಜನ ನೀತಿಯನ್ನು ಸಹ ಜಾರಿಗೊಳಿಸಿದ್ದು, ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಪ್ರಮಾಣವನ್ನು ಹೆಚ್ಚಳ ಮಾಡುವುದಕ್ಕಾಗಿ ಆಟೋ ಸಂಸ್ಥೆಗಳಿಗೆ ಭರ್ಜರಿ ಆಫರ್ ನೀಡುತ್ತಿದೆ.
ಕರ್ನಾಟಕದ ಯಾವುದೇ ಭಾಗದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕಗಳನ್ನು ತೆರೆಯುವ ಆಟೋ ಸಂಸ್ಥೆಗಳಿಗೆ ಇಂತಿಷ್ಟು ವರ್ಷಗಳ ತನಕ ತೆರಿಗೆ ವಿನಾಯ್ತಿ ಮತ್ತು ಕಡಿಮೆ ಅವಧಿಯಲ್ಲಿ ಪೂರ್ಣಪ್ರಮಾಣದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಘೋಷಣೆ ಮಾಡಿದೆ.