Just In
- 25 min ago ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- 1 hr ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- 2 hrs ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 3 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
Don't Miss!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಲ್, ಡೀಸೆಲ್ ಮಾರಾಟಕ್ಕೂ ಹೊಡೆತ ಕೊಟ್ಟ ಹೊಸ ಟ್ರಾಫಿಕ್ ರೂಲ್ಸ್
ಕೇಂದ್ರ ಸರ್ಕಾರವು ಇತ್ತೀಚಿಗೆ ಜಾರಿಗೆ ತಂದ ಹೊಸ ಮೋಟಾರು ವಾಹನ ಕಾಯ್ದೆಯಿಂದಾಗಿ ಇಂಧನ ಮಾರಾಟ ಕುಸಿಯುತ್ತಿದೆ ಎಂದು ವರದಿಗಳು ತಿಳಿಸಿವೆ. ಭಾರತವು ಸ್ಥಳೀಯವಾಗಿ ಯಾವುದೇ ವಾಹನಗಳನ್ನು ಉತ್ಪಾದಿಸಿದರೂ, ಇಂಧನ ಪೂರೈಕೆಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ.
ಭಾರತವು, ಕಚ್ಚಾ ತೈಲವನ್ನು ಇರಾನ್ ಹಾಗೂ ಅರಬ್ ದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಪ್ರತಿ ಬಾರಿ ಇಂಧನವನ್ನು ಆಮದು ಮಾಡಿಕೊಳ್ಳುವಾಗ ಭಾರೀ ಬೆಲೆಯನ್ನು ನೀಡಿ ಖರೀದಿಸಲಾಗುತ್ತಿದೆ. ಈ ಹಣಕಾಸಿನ ಹೊರೆಯನ್ನು ತಪ್ಪಿಸಲು ಕೇಂದ್ರ ಸರ್ಕಾರವು ಇಂಧನ ಬಳಕೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಪ್ರಯತ್ನಗಳನ್ನು ಮಾಡುತ್ತಿದೆ.
ಇದೇ ವೇಳೆ, ಭಾರತದಲ್ಲಿ ಲಭ್ಯವಿರುವ ಹೈಡ್ರೋಕಾರ್ಬನ್ ಹಾಗೂ ಮೀಥೆನ್ ಅನಿಲವನ್ನು ಹೊರತೆಗೆಯಲು ಪ್ರಯತ್ನಿಸುತ್ತಿದೆ. ಈ ಅನಿಲಗಳು ತಮಿಳುನಾಡಿನ ತಂಜೂರು, ನಾಗೈ, ಪುದುಕ್ಕೊಟ್ಟೈ ಹಾಗೂ ಕಾವೇರಿ ಡೆಲ್ಟಾ ಮುಂತಾದ ಪ್ರದೇಶಗಳಲ್ಲಿ ಹೇರಳವಾಗಿ ದೊರೆಯುತ್ತವೆ.
ಕೆಲವು ಪ್ರದೇಶಗಳಲ್ಲಿ ಈಗಾಗಲೇ ಹೈಡ್ರೋಕಾರ್ಬನ್ ಹೊರತೆಗೆಯುವ ಕೆಲಸವು ಆರಂಭವಾಗಿದೆ. ಕೆಲ ಪ್ರದೇಶಗಳಲ್ಲಿ ಪ್ರತಿಭಟನೆಯಿಂದಾಗಿ ಅನಿಲವನ್ನು ಹೊರತೆಗೆಯುವ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ. ಇಂಧನ ವಿಷಯದಲ್ಲಿ ಭಾರತವು ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ.
ಭಾರತದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆಯು ಹೆಚ್ಚುತ್ತಿದೆ. ಜೊತೆಗೆ ಡೀಸೆಲ್ ಹಾಗೂ ಪೆಟ್ರೋಲ್ ವಾಹನಗಳಿಂದ ಹೊರಹೊಮ್ಮುವ ವಿಷಕಾರಿ ಹೊಗೆ ಪರಿಸರಕ್ಕೆ ಹಾನಿಕಾರಕವಾಗಿದೆ. ಆದ್ದರಿಂದ, ಈ ಎಲ್ಲ ಸಮಸ್ಯೆಯನ್ನು ಹೋಗಲಾಡಿಸಲು, ಇಂಧನ ವಾಹನಗಳ ಬಳಕೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ಈ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ.
ವಾಹನ ಸವಾರರಿಂದ ಉಂಟಾಗುವ ಸಂಚಾರ ಉಲ್ಲಂಘನೆಯ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು ಹೊಸ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಹೊಸ ಕಾಯ್ದೆಯು ಇತ್ತೀಚೆಗೆ ಜಾರಿಗೆ ಬಂದಿದೆ. ಈ ಕಾಯ್ದೆಯ ಪ್ರಕಾರ, ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಗುತ್ತಿದೆ.
ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದಲ್ಲಿ ದಂಡವನ್ನು ವಿಧಿಸಲಾಗುತ್ತಿದೆ. ಈ ಕಾರಣಕ್ಕಾಗಿ ಈ ಹೊಸ ಕಾಯ್ದೆಯು ಸಾರ್ವಜನಿಕರಲ್ಲಿ ಹೆಚ್ಚಿನ ಗೊಂದಲವನ್ನುಂಟು ಮಾಡಿದೆ. ದೇಶಾದ್ಯಂತ ಭಾರೀ ಪ್ರಮಾಣದ ದಂಡವನ್ನು ವಿಧಿಸುತ್ತಿರುವ ಹಲವು ಪ್ರಕರಣಗಳು ದಾಖಲಾಗುತ್ತಿವೆ. ಇದು ಜನರಲ್ಲಿ ತೀವ್ರ ಭಯ ಹಾಗೂ ಗೊಂದಲಕ್ಕೆ ಕಾರಣವಾಗಿದೆ.
MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್
ಆದ್ದರಿಂದ, ಅನೇಕ ವಾಹನ ಚಾಲಕರು ತಮ್ಮ ವಾಹನಗಳನ್ನು ಚಲಾಯಿಸುವುದನ್ನು ಬಿಟ್ಟು ಸಾರ್ವಜನಿಕ ಸಾರಿಗೆಗಳಲ್ಲಿ ಸಂಚರಿಸುತ್ತಿರುವ ಬಗ್ಗೆ ವರದಿಗಳಾಗಿವೆ. ಆಟೋ ಎಕನಾಮಿಕ್ ಟೈಮ್ಸ್ ವರದಿಗಳ ಪ್ರಕಾರ, ಒರಿಸ್ಸಾದಲ್ಲಿ ಹೊಸ ಕಾನೂನು ಜಾರಿಗೆ ಬಂದ ನಂತರ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟವು ಗಣನೀಯವಾಗಿ ಕುಸಿದಿದೆ.
MOST READ: ಜೆಸಿಬಿ ಯಂತ್ರವು ಹಳದಿ ಬಣ್ಣದಲ್ಲೇ ಏಕಿರುತ್ತೆ?
ಇದಕ್ಕೆ ಮುಖ್ಯ ಕಾರಣ ಹೊಸ ಮೋಟಾರ್ ವಾಹನ ಕಾಯ್ದೆ. ಏಕೆಂದರೆ, ಸಣ್ಣಪುಟ್ಟ ಸಂಚಾರಿ ನಿಯಮಗಳ ಉಲ್ಲಂಘನೆಗಾಗಿಯೂ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಗುತ್ತಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ, ಜನರು ತಮ್ಮ ವಾಹನಗಳಿಗಿಂತ ಹೆಚ್ಚಾಗಿ ಸಾರ್ವಜನಿಕ ವಾಹನಗಳನ್ನು ಬಳಸಲು ಆರಂಭಿಸಿದ್ದಾರೆ.
MOST READ: ಹೊಸ ನಿಯಮದಿಂದ ಟ್ರಾಕ್ಟರ್ ಡ್ರೈವರ್ಗೂ ಬಿತ್ತು ಭಾರೀ ದಂಡ..!
ಸಾರ್ವಜನಿಕರ ಈ ನಿರ್ಧಾರದಿಂದಾಗಿ, ಒಡಿಶಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಮಾರಾಟ ತೀವ್ರ ಕುಸಿತ ಕಂಡಿದೆ. ಹೀಗಾಗಿ, ಪೆಟ್ರೋಲ್ ಮಾರಾಟವು ದಿನಕ್ಕೆ 4,08,000 ಲೀಟರ್ ಹಾಗೂ ಡೀಸೆಲ್ ಮಾರಾಟವು ದಿನಕ್ಕೆ 12,45,000 ಲೀಟರ್ನಷ್ಟು ಕುಸಿದಿದೆ.
ಈಗಾಗಲೇ ಮಾರಾಟದಲ್ಲಿ ಕುಸಿತವನ್ನು ಎದುರಿಸುತ್ತಿರುವ ಆಟೋಮೊಬೈಲ್ ಉದ್ಯಮಕ್ಕೆ, ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟದಲ್ಲಿನ ಕುಸಿತವು ದೊಡ್ಡ ಹೊಡೆತ ನೀಡಿದೆ. ಒಡಿಶಾ ಸರ್ಕಾರವು ಸುಮಾರು ರೂ.5 ಕೋಟಿಯಷ್ಟು ನಷ್ಟವನ್ನು ಅನುಭವಿಸಿದೆ.
ಪೆಟ್ರೋಲ್ ಮಾರಾಟದ ಕುಸಿತದಿಂದ ರೂ. 58 ಲಕ್ಷದಿಂದ ರೂ.81 ಲಕ್ಷ ಹಾಗೂ ಡೀಸೆಲ್ ಮಾರಾಟದ ಕುಸಿತದಿಂದ ರೂ.1.78ಕೋಟಿ ರೂಪಾಯಿಗಳ ನಷ್ಟವನ್ನು ಉಂಟಾಗಿರುವುದಾಗಿ ಸರ್ಕಾರದ ಇಂಧನ ಮಾರಾಟಗಾರರ ಸಂಘವು ತಿಳಿಸಿದೆ.