Just In
- 8 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 9 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 10 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 11 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಮೋಟಾರು ಕಾಯ್ದೆಯ ನಂತರ ಕಡಿಮೆಯಾಯಿತೇ ಅಪಘಾತ ಪ್ರಮಾಣ?
ಭಾರತದಲ್ಲಿ ಹೆಚ್ಚಿನ ಪ್ರಮಾಣದ ರಸ್ತೆ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಹೆಚ್ಚಿನ ಪ್ರಮಾಣದ ದಂಡವನ್ನು ವಿಧಿಸಲಾಗುತ್ತಿರಲಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವು ಭಾರೀ ಪ್ರಮಾಣದ ದಂಡವನ್ನು ವಿಧಿಸುವ ಹೊಸ ಕಾಯ್ದೆಯನ್ನು ಸೆಪ್ಟೆಂಬರ್ 1ರಿಂದ ಜಾರಿಗೊಳಿಸಿತು.
ಹೊಸ ಕಾಯ್ದೆಯನ್ವಯ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಗುತ್ತಿದೆ. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರ ಪ್ರಯತ್ನದ ಫಲವಾಗಿ ಹೊಸ ಮೋಟಾರು ವಾಹನ ಕಾಯ್ದೆಯನ್ನು ಸಂಸತ್ತಿನಲ್ಲಿ ಅನುಮೋದಿಸಲಾಯಿತು.
ಸೆಪ್ಟೆಂಬರ್ 1ರಿಂದ ಜಾರಿಗೊಳಿಸಿದ ಭಾರೀ ಪ್ರಮಾಣದ ದಂಡ ವಿಧಿಸುತ್ತಿದ್ದ ಕಾರಣಕ್ಕೆ ಹೊಸ ಕಾಯ್ದೆಯ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು. ಕೆಲವು ರಾಜ್ಯ ಸರ್ಕಾರಗಳೂ ಸಹ ಈ ಕಾಯ್ದೆಯನ್ನು ವಿರೋಧಿಸಿದ್ದವು.
ಭಾರೀ ಪ್ರಮಾಣದ ದಂಡದಿಂದಾಗಿ ರಸ್ತೆ ಅಪಘಾತಗಳು ಕಡಿಮೆಯಾಗುತ್ತವೆ ಎಂಬುದು ಕೇಂದ್ರ ಸರ್ಕಾರದ ಅಭಿಪ್ರಾಯವಾಗಿದೆ. ಈ ಕಾರಣಕ್ಕೆ ಕೇಂದ್ರ ಸರ್ಕಾರವು ದಂಡದ ಪ್ರಮಾಣವನ್ನು ಕಡಿಮೆಗೊಳಿಸಲಿಲ್ಲ.
ಹೊಸ ಕಾಯ್ದೆಯು ಜಾರಿಗೆ ಬಂದ ನಂತರ ಹಲವು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಸ್ತೆ ಅಪಘಾತಗಳು ಕಡಿಮೆಯಾಗಿವೆ ಎಂದು ಕೇಂದ್ರ ಸರ್ಕಾರವು ಹೇಳಿದೆ. ಈ ಮಾಹಿತಿಯನ್ನು ಕೇಂದ್ರ ಸರ್ಕಾರವು ಸಂಸತ್ತಿನಲ್ಲಿ ನೀಡಿದೆ.
ಹೊಸ ಕಾಯ್ದೆಯು ಜಾರಿಗೆ ಬಂದ ನಂತರ ಚಂಡೀಗಢದಲ್ಲಿನ ಅಪಘಾತ ಪ್ರಮಾಣವು 75%ನಷ್ಟು ಕಡಿಮೆಯಾಗಿದೆ. ಈ ವರ್ಷದ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ಚಂಡೀಗಢದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ಕೇಂದ್ರ ಸರ್ಕಾರವು ಹೇಳಿದೆ.
2018ರ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ 8 ರಸ್ತೆ ಅಪಘಾತಗಳು ನಡೆದಿದ್ದವು. ಪುದುಚೇರಿಯಲ್ಲಿ ಕಳೆದ ವರ್ಷದ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ ಈ ವರ್ಷದ ಇದೇ ಅವಧಿಯಲ್ಲಿ ರಸ್ತೆ ಅಪಘಾತ ಪ್ರಮಾಣವು 31%ನಷ್ಟು ಕಡಿಮೆಯಾಗಿದೆ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ಈ ಮಾಹಿತಿಯನ್ನು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿರವರು ರಾಜ್ಯ ಸಭೆಗೆ ಲಿಖಿತ ಹೇಳಿಕೆಯಲ್ಲಿ ನೀಡಿದ್ದಾರೆ. ಉತ್ತರಖಂಡ, ಚಂಡೀಗಢ ಹಾಗೂ ಪುದುಚೇರಿಯಲ್ಲಿ ರಸ್ತೆ ಅಪಘಾತ ಪ್ರಮಾಣವು ಕಡಿಮೆಯಾಗಿದೆ. ಕಳೆದ ವರ್ಷ ಈ ಎರಡು ತಿಂಗಳ ಅವಧಿಯಲ್ಲಿ 78 ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.
MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!
ಈ ಪ್ರಮಾಣವು ಈ ವರ್ಷ 22%ನಷ್ಟು ಕುಸಿತಗೊಂಡಿದೆ. ಈ ವರ್ಷದ ಇದೇ ಅವಧಿಯಲ್ಲಿ 61 ಜನರು ಮೃತಪಟ್ಟಿದ್ದಾರೆ. ಗುಜರಾತ್ನಲ್ಲಿ ಈ ಪ್ರಮಾಣವು 14%ನಷ್ಟು ಕಡಿಮೆಯಾಗಿದೆ. ಕಳೆದ ವರ್ಷ ಈ ಅವಧಿಯಲ್ಲಿ 557 ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.
MOST READ: ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?
ಈ ವರ್ಷದ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ಗುಜರಾತ್ನಲ್ಲಿ ರಸ್ತೆ ಅಪಘಾತದಲ್ಲಿ 480 ಜನರು ಮೃತಪಟ್ಟಿದ್ದಾರೆ. ಬಿಹಾರದಲ್ಲಿಯೂ ಈ ಪ್ರಮಾಣವು ಕಡಿಮೆಯಾಗಿದೆ. ಕಳೆದ ವರ್ಷ ಈ ಅವಧಿಯಲ್ಲಿ 459 ಜನರು ಬಿಹಾರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.
ಈ ವರ್ಷ 411 ಜನರು ವಿವಿಧ ರಸ್ತೆ ಅಪಘಾತಗಳಲ್ಲಿ ಮೃತಪಟ್ಟಿದ್ದಾರೆ. ಇದರಿಂದಾಗಿ ಬಿಹಾರದಲ್ಲಿನ ರಸ್ತೆ ಅಪಘಾತದ ಪ್ರಮಾಣವು 10.5%ನಷ್ಟು ಕಡಿಮೆಯಾಗಿದೆ. ಇದೇ ವೇಳೆ ಉತ್ತರ ಪ್ರದೇಶದಲ್ಲಿನ ರಸ್ತೆ ಅಪಘಾತ ಪ್ರಮಾಣವೂ ಸಹ 10%ನಷ್ಟು ಕಡಿಮೆಯಾಗಿದೆ.
ಕಳೆದ ವರ್ಷದ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ಉತ್ತರ ಪ್ರದೇಶದಲ್ಲಿ 1,503 ಜನರು ಮೃತಪಟ್ಟಿದ್ದರು. ಈ ವರ್ಷದ ಇದೇ ಅವಧಿಯಲ್ಲಿ 1,355 ಜನರು ಮೃತಪಟ್ಟಿದ್ದಾರೆ. ಕೇರಳದಲ್ಲಿಯೂ ರಸ್ತೆ ಅಪಘಾತ ಪ್ರಮಾಣವು ಕಡಿಮೆಯಾಗಿದೆ.
ಕಳೆದ ವರ್ಷದ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಿನಲ್ಲಿ ಕೇರಳದಲ್ಲಿ 321 ಜನರು ರಸ್ತೆ ಅಪಘಾತಗಳಿಗೆ ಬಲಿಯಾಗಿದ್ದರು. ಈ ವರ್ಷದ ಇದೇ ಅವಧಿಯಲ್ಲಿ 314 ಜನ ಸಾವನ್ನಪ್ಪಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2.1%ನಷ್ಟು ಕಡಿಮೆಯಾಗಿದೆ.
ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೊಳಿಸಿದಾಗ ಭಾರೀ ಪ್ರಮಾಣದ ಪ್ರತಿಭಟನೆಗಳು ನಡೆದಿದ್ದವು. ಆದರೆ ಈಗ ರಸ್ತೆ ಅಪಘಾತ ಪ್ರಮಾಣವು ಕುಸಿದಿರುವ ಕಾರಣಕ್ಕೆ ಕೇಂದ್ರ ಸರ್ಕಾರದ ಕ್ರಮವು ಸರಿಯಾಗಿದೆ ಎಂದು ಹೇಳಲಾಗುತ್ತಿದೆ.
ಭಾರೀ ಪ್ರಮಾಣದ ದಂಡಕ್ಕೆ ಹೆದರಿರುವ ಜನರು ಸಂಚಾರಿ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಈ ಕಾರಣಕ್ಕೆ ರಸ್ತೆ ಅಪಘಾತ ಪ್ರಮಾಣವು ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ.