Just In
- 1 hr ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 2 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 3 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2ನೇ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಶಾಕ್ ನೀಡಿದ ಕೇಂದ್ರ ಸರ್ಕಾರ..!
ಭಾರತದಲ್ಲಿ ಕಳೆದ 10 ವರ್ಷಗಳಿಂದ ಈಚೆಗೆ ವಾಹನ ಉದ್ಯಮವು ನೀರಿಕ್ಷೆಗೂ ಮೀರಿ ಬೆಳೆದುನಿಂತಿದ್ದು, ವರ್ಷದಿಂದ ವರ್ಷಕ್ಕೆ ವಾಹನ ಉತ್ಪಾದನೆ ಮತ್ತು ಮಾರಾಟ ಪ್ರಮಾಣವು ದ್ವಿಗುಣಗೊಳ್ಳುತ್ತಿದೆ. ಇದರಿಂದಾಗಿ ಮಾಲಿನ್ಯ ಪ್ರಮಾಣವು ಕೂಡಾ ಅಷ್ಟೇ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಇದನ್ನು ನಿಯಂತ್ರಿಸಲು ಹಲವಾರು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ರಾಷ್ಟ್ರೀಯ ಹಸಿರು ಪೀಠದ ಆದೇಶದ ಅನ್ವಯ ಕಳೆದ ತಿಂಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೊಸ ರಾಜ್ಯಗಳ ಕಾರುಗಳಿಗೆ ಪ್ರವೇಶ ನಿರ್ಬಂಧಿಸಿರುವ ಕೇಂದ್ರ ಸಾರಿಗೆ ಇಲಾಖೆಯು ಇದೀಗ ಮತ್ತೊಂದು ಮಹತ್ವದ ಹೆಜ್ಜೆಯಿರಿಸಿದ್ದು, ಒಂದಕ್ಕಿಂತ ಹೆಚ್ಚು ಕಾರು ಖರೀದಿಸುವ ಮಾಲೀಕರಿಗೆ ಹೈ ಟ್ಯಾಕ್ಸ್ ಶಾಕ್ ನೀಡಲು ಮುಂದಾಗಿದೆ.
ಹೊಸ ನಿಯಮದ ಪ್ರಕಾರ, ಪ್ರಥಮ ಬಾರಿಗೆ ಕಾರು ಖರೀದಿಸುವ ಮಾಲೀಕರನ್ನು ಹೊರತುಪಡಿಸಿ 2ನೇ ಕಾರು ಖರೀದಿಸುವ ಗ್ರಾಹಕರು ಒಂದನೇ ಕಾರಿಗೆ ಪಾವತಿಸಲಾದ ತೆರಿಗೆ ಮೊತ್ತಕ್ಕಿಂತ ಎರಡು ಪಟ್ಟು ಹೆಚ್ಚು ಪಾವತಿ ಮಾಡಬೇಕಾಗುತ್ತದೆ.
ಅಂದ್ರೆ, ಒಂದನೇ ಕಾರು ಖರೀದಿ ಮೇಲೆ ಶೇ.3 ರಷ್ಟು ತೆರೆಗೆ ವಿಧಿಸಿದ್ದಲ್ಲಿ 2ನೇ ಕಾರಿಗೂ ಅಷ್ಟೇ ಪ್ರಮಾಣದಲ್ಲಿದ್ದ ತೆರಿಗೆ ಸ್ತರವನ್ನು ಇದೀಗ ಬದಲಾಯಿಸಿರುವ ಕೇಂದ್ರ ಸಾರಿಗೆ ಇಲಾಖೆಯು 2ನೇ ಮತ್ತು 3ನೇ ಕಾರು ಖರೀದಿಗೆ ಮುಂದಾಗುವ ಕಾರು ಮಾಲೀಕರಿಗೆ ಹೆಚ್ಚುವರಿಯಾಗಿ ಶೇ.3 ರಷ್ಟು ತೆರಿಗೆ ವಿಧಿಸುತ್ತಿದೆ.
ಹೀಗಾಗಿ 2ನೇ ಕಾರು ಖರೀದಿ ಬಯಸುವ ಗ್ರಾಹಕರು ಶೇ.6 ರಷ್ಟು ತೆರಿಗೆ ಪಾವತಿಸುವ ಅನಿವಾರ್ಯತೆಗಳಿದ್ದು, ಒಂದಕ್ಕಿಂತ ಹೆಚ್ಚು ಕಾರುಗಳನ್ನು ಖರೀದಿಸುವ ಗ್ರಾಹಕರಿಗೆ ಇದು ಹೊರೆಯಾಗಿ ಪರಿಣಮಿಸಲಿದೆ. ಇದರಿಂದ ಮೀತಿ ಮಿರುತ್ತಿರುವ ವಾಹನ ಸಂಖ್ಯೆಯನ್ನು ಹತೋಟಿಗೆ ತರಬಹುದು ಎನ್ನುವುದು ಕೇಂದ್ರ ಸಾರಿಗೆ ಇಲಾಖೆಯ ಲೆಕ್ಕಾಚಾರ.
ಇದರಿಂದ ಪ್ರಾಯೋಗಿಕವಾಗಿ ಜಾರ್ಖಂಡ್ ರಾಜ್ಯದಲ್ಲಿ ಹೊಸ ತೆರಿಗೆ ಪದ್ದತಿಯನ್ನು ಜಾರಿ ಮಾಡಲಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಇದು ಇತರೆ ರಾಜ್ಯಗಳಲ್ಲೂ ಹೊಸ ತೆರಿಗೆ ಪದ್ದತಿಯನ್ನು ಜಾರಿ ಮಾಡುವ ಸಂಬಂಧ ಈಗಾಗಲೇ ಮಹತ್ವದ ಸಭೆ ನಡೆಸಲಾಗಿದೆ.
ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳನ್ನು ಗಣನೀಯವಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಸಬ್ಸಡಿ ಮತ್ತು ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.
ಎಲೆಕ್ಟ್ರಿಕ್ ಕಾರು ಮತ್ತು ದ್ವಿಚಕ್ರ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸುವುದಲ್ಲದೇ ಪ್ರತಿ ಎಲೆಕ್ಟ್ರಿಕ್ ಕಾರಿನ ಮೇಲೂ ರೂ.50 ಸಾವಿರ ತೆರಿಗೆ ವಿನಾಯ್ತಿ ನೀಡುವುದಾಗಿ ಈಗಾಗಲೇ ಅಧಿಕೃತ ಸುತ್ತೋಲೆ ಹೊರಡಿಸಿದೆ.
ಇದಲ್ಲದೇ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯುವಿಕೆಯ ಪ್ರಕ್ರಿಯೆಯನ್ನು ಸಹ ಸಡಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಹಣಕಾಸು ಇಲಾಖೆಗೆ ಮಹತ್ವದ ಸುತ್ತೋಲೆ ಹೊರಡಿಸಿರುವ ಪ್ರಧಾನಿ ಮಂತ್ರಿ ಕಾರ್ಯಾಲಯವು ಎಲೆಕ್ಟ್ರಿಕ್ ವಾಹನ ಹೆಚ್ಚಳಕ್ಕೆ ಪೂರಕವಾದ ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೆಶನ ಮಾಡಲಾಗಿದೆ.
MOST READ: ಕಾರು ಖರೀದಿಸಲು ಬಂದ ಮಹಿಳೆ ಮಾಡಿದ ಎಡವಟ್ಟಿನಿಂದ ಡೀಲರ್ಸ್ ಕಕ್ಕಾಬಿಕ್ಕಿ
ಸದ್ಯ ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹಲವು ಅವಕಾಶಗಳಿದ್ದರೂ ಸಹ ಗ್ರಾಹಕರು ಮಾತ್ರ ಪೆಟ್ರೋಲ್ ಮತ್ತು ಡಿಸೇಲ್ ಕಾರುಗಳ ಮೇಲೆಯೇ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಗ್ರಾಹಕರನ್ನು ಸೆಳೆಯಲು ಕೇಂದ್ರ ಸರ್ಕಾರವು ಇಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ.
ಇನ್ನೊಂದು ಪ್ರಮುಖ ವಿಚಾರ ಅಂದ್ರೆ, 2020ರ ವೇಳೆಗೆ ಕನಿಷ್ಠ 25ರಷ್ಟು ಆದರೂ ಎಲೆಕ್ಟ್ರಿಕ್ ಕಾರು ಮತ್ತು ಬೈಕ್ಗಳು ಮಾರಾಟವಾಗುವಂತೆ ಮಾಡಬೇಕೆಂಬ ಕೇಂದ್ರದ ಯೋಜನೆಯು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ ಎನ್ನುವಂತಾಗಿದ್ದು, ತೀವ್ರಗತಿಯ ಬೆಳವಣಿಗೆ ಕೆಲವು ಜನಪರ ಯೋಜನೆಗಳನ್ನು ಘೋಷಣೆ ಮಾಡಲೇಬೇಕಾದ ಅವಶ್ಯಕತೆಯಿದೆ.
MOST READ: ಆನ್ಲೈನ್ನಲ್ಲಿ ಬೈಕ್ ಮಾರಾಟ: ನಂಬಿ ಟೆಸ್ಟ್ ರೈಡ್ಗೆ ಕೊಟ್ರೆ ಪಂಗನಾಮ..!
ಮತ್ತೊಂದು ಪ್ರಮುಖ ವಿಚಾರ ಅಂದ್ರೆ, ನೀತಿ ಆಯೋಗ ಶಿಫಾರಸ್ಸು ಅನ್ವಯ ಎಲೆಕ್ಟ್ರಿಕ್ ಕಾರುಗಳಿಗೆ ಗ್ರಿನ್ ನಂಬರ್ ಪ್ಲೆಟ್ ಜೊತೆಗೆ ಟೋಲ್ ಶುಲ್ಕದಲ್ಲಿ ವಿನಾಯ್ತಿ ಸೌಲಭ್ಯವನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರವು ಸದ್ಯದಲ್ಲೇ ತನ್ನ ನಿಲವು ವ್ಯಕ್ತಪಡಿಸಲಿದ್ದು, ಇದರ ಜೊತೆಗೆ ಮತ್ತಷ್ಟು ಹೊಸ ಆಫರ್ಗಳನ್ನು ನೀಡುವ ಬಗ್ಗೆ ಸುಳಿವು ನೀಡಿದೆ.