Just In
- 11 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 12 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 13 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 14 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- News Realme: ಅಗ್ಗದ 5G ಸ್ಮಾರ್ಟ್ಫೋನ್ ಬಿಡುಗಡೆ ರೆಡಿ; ಇದರ ಬೆಲೆ ಎಷ್ಟು ಗೊತ್ತಾ?
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಸ್ 6 ಎಫೆಕ್ಟ್- ಸುಮೊ, ಬೊಲ್ಟ್ ಮತ್ತು ಜೆಸ್ಟ್ ಕಾರುಗಳ ಉತ್ಪಾದನೆಗೆ ಗುಡ್ ಬೈ ಹೇಳಿದ ಟಾಟಾ
ದೇಶಾದ್ಯಂತ ಸದ್ಯ ಬಿಎಸ್-4 ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ತಾಂತ್ರಿಕ ಗುಣವೈಶಿಷ್ಟ್ಯತೆಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿದ್ದು, ಇದು ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ನಿಷೇಧವಾಗುವುದು ಖಚಿತವಾಗಿದೆ.
ಈ ಹಿಂದೆ ಕೇಂದ್ರ ಸರ್ಕಾರವು 2017ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ದೇಶಾದ್ಯಂತ ಬಿಎಸ್-3 (ಭಾರತ್ ಸ್ಟೇಜ್) ಸೌಲಭ್ಯಗಳನ್ನು ಒಳಗೊಂಡ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆ ಮೇಲೆ ನಿಷೇಧ ನಿಷೇಧ ಹೇರಿದ್ದಲ್ಲದೆ ಬಿಎಸ್-4 ಮತ್ತು ಅದಕ್ಕೂ ಮೇಲ್ಪಟ್ಟ ವಾಹನ ಮಾದರಿಗಳ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಿತ್ತು.
ಇದೀಗ ಮತ್ತೊಂದು ಮಹತ್ವದ ಹೆಜ್ಜೆಯಿಡುತ್ತಿರುವ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ಸೂಚನೆಯೆಂತೆ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ನಿಷೇಧ ಹೇರುವುದು ಖಚಿತವಾಗಿದ್ದು, ಬಿಎಸ್-6 ವಾಹನಗಳು ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ವಾಹನ ಮಾದರಿಗಳಿಗೆ ಮಾತ್ರವೇ ಅವಕಾಶ ನೀಡಲಿದೆ.
ಹೀಗಾಗಿ ಕೇಂದ್ರ ಸರ್ಕಾರದ ಡೆಡ್ಲೈನ್ಗೂ ಮುನ್ನವೇ ಬಿಎಸ್ 6 ವೈಶಿಷ್ಟ್ಯತೆಯುಳ್ಳ ಎಂಜಿನ್ ಪ್ರೇರಿತ ಕಾರು ಮಾದರಿಗಳನ್ನು ಬಿಡುಗಡೆ ಮಾಡಬೇಕಿರುವ ಪ್ರಮುಖ ಆಟೋ ಉತ್ಪಾದನಾ ಸಂಸ್ಥೆಗಳು ಹೊಸ ನಿಯಮ ಪಾಲಿಸಲು ಸಾಧ್ಯವಾಗದ ಕೆಲವು ಕಾರು ಮಾದರಿಗಳಿಗೆ ಗುಡ್ಬೈ ಹೇಳಬೇಕಾದ ಅನಿವಾರ್ಯತೆ ಎದುರಾಗಿದೆ.
ಇದರಿಂದ ಟಾಟಾ ನಿರ್ಮಾಣದ ಸುಮೊ ಗೋಲ್ಡ್, ಬೊಲ್ಟ್ ಮತ್ತು ಜೆಸ್ಟ್ ಕಾರುಗಳ ಜೊತೆಗೆ ಟಿಗೋರ್ ಮತ್ತು ಟಿಯಾಗೋ ಕಾರಿನ 1.2-ಲೀಟರ್ ಡೀಸೆಲ್ ವರ್ಷನ್ಗಳನ್ನು ಕೈಬಿಡಲು ನಿರ್ಧರಿಸಲಾಗಿದ್ದು, ಬಿಎಸ್ 6 ನಿಯಮಾವಳಿಗಳನ್ನು ಪಾಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೆಲವು ಹಳೆಯ ಕಾರು ಆವೃತ್ತಿಗಳನ್ನು ಸ್ಥಗಿತಗೊಳಿಸುವುದು ಬಹುತೇಕ ಖಚಿತವಾಗಿದೆ.
ಒಂದು ವೇಳೆ ಸ್ಥಗಿತಗೊಳಿಸಲಾಗುತ್ತಿರುವ ಕಾರುಗಳ ಎಂಜಿನ್ ಗುಣಮಟ್ಟವನ್ನು ಹೆಚ್ಚಿಸಿದರೂ ಕೂಡಾ ಮಾರುಕಟ್ಟೆಯಲ್ಲಿ ಗರಿಷ್ಠ ಬೇಡಿಕೆ ಪಡೆಯುವ ಸಾಧ್ಯತೆಗಳು ಕಡಿಮೆ ಇದ್ದು, ಇದರಿಂದ ಎಂಜಿನ್ ಗುಣಮಟ್ಟ ಮತ್ತು ಸುರಕ್ಷತೆಯಿಲ್ಲದ ಕಾರುಗಳ ಉತ್ಪಾದನೆ ಬಿಟ್ಟು ಹೊಸ ಕಾರುಗಳ ಉತ್ಪಾದನೆ ಹೆಚ್ಚಿನ ಒತ್ತು ನೀಡಲು ಟಾಟಾ ಮಹತ್ವದ ಯೋಜನೆ ರೂಪಿಸಿದೆ.
ಇನ್ನು ವಿಶ್ವಾದ್ಯಂತ ಈಗಾಗಲೇ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್ನಲ್ಲಿ ಯುರೋ-6, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳಿಗೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ ಬಿಎಸ್-6 ವಾಹನಗಳು ರಸ್ತೆಗಿಳಿಯಲಿವೆ.
ಯುರೋಪ್ನಲ್ಲಿ ಈ ಹಿಂದೆ 2017ರಿಂದಲೇ ಯುರೋ-6 ತಾಂತ್ರಿಕ ಅಂಶಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶ ನೀಡಲಾಗುತ್ತಿದ್ದು, ಇದು ಬಿಎಸ್-6 ವೈಶಿಷ್ಟ್ಯತೆಗೆ ಸರಿಸಮನಾಗಿದೆ.
MOST READ: ನಿಶ್ಚಿಂತೆಯಿಂದ ಸಂಚರಿಸಿ; ಇಲ್ಲಿವೆ ರೂ.10 ಲಕ್ಷದೊಳಗಿನ ಟಾಪ್ 5 ಸುರಕ್ಷಿತ ಕಾರುಗಳು..!
ಹೊಸ ನಿಯಮ ಜಾರಿಯಿಂದಾಗಿ ವಾಹನ ಎಂಜಿನ್ ಮಾದರಿಗಳಲ್ಲಿ ಭಾರೀ ಬದಲಾವಣೆಯಾಗಲಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಎಂಜಿನ್ ಮಾದರಿಗಿಂತಲೂ ಬಿಎಸ್-6 ಹೆಚ್ಚಿನ ಗುಣಮಟ್ಟದೊಂದಿಗೆ ಹೊಗೆ ಉಗುಳುವ ಪ್ರಮಾಣದಲ್ಲಿ ಪರಿಣಾಮಕಾರಿ ತಗ್ಗಿಸಲಿದೆ.
ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಇದೀಗ ಸುಪ್ರೀಂಕೋರ್ಟ ಕೂಡಾ ಈ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿರುವುದು ಕೇಂದ್ರ ಸರ್ಕಾರವು ಪಾಲನೆ ಮಾಡಲೇಬೇಕಾದ ಅನಿವಾರ್ಯತೆಯಲ್ಲಿದೆ.
MOST READ: ಮುಕೇಶ್ ಅಂಬಾನಿ ಕಾರ್ ಕಲೆಕ್ಷನ್ ಕಂಡ ಮುಂಬೈ ಇಂಡಿಯನ್ಸ್ ಆಟಗಾರರಿಗೆ ಅಚ್ಚರಿ..!
ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದ ತೀರ್ಪಿನ ಪ್ರಕಾರ, ಮುಂಬರುವ ದಿನಗಳಲ್ಲಿ ಮಾಲಿನ್ಯ ತಡೆಯಲು ಬಿಎಸ್-6 ತಾಂತ್ರಿಕ ಅಂಶಗಳ ಅಳವಡಿಕೆ ಅವಶ್ಯವಿದ್ದು, 2020ರ ಏಪ್ರಿಲ್ 1ರಿಂದಲೇ ಹೊಸ ನಿಯಮ ಜಾರಿಗೆ ಸಿದ್ದತೆ ಮಾಡಿಕೊಳ್ಳುವಂತೆ ಕೇಂದ್ರಕ್ಕೆ ಖಡಕ್ ಸೂಚನೆ ನೀಡಿದೆ.
ಬೆಲೆ ಏರಿಕೆಯ ಬಿಸಿ..!
ಹೌದು, ಬಿಎಸ್ 4 ವಾಹನಗಳಿಂತಲೂ ಬಿಎಸ್ 6 ಎಂಜಿನ್ ಪ್ರೇರಿತ ವಾಹನಗಳ ಎಂಜಿನ್ ಮಾದರಿಯು ಹೆಚ್ಚಿನ ಗುಣಮಟ್ಟ ಪಡೆದುಕೊಂಡಿರಲಿದ್ದು, ಇದರಿಂದ ಸಹಜವಾಗಿಯೇ ಸದ್ಯ ರೂ.5 ಲಕ್ಷಕ್ಕೆ ದೊರೆಯುತ್ತಿರುವ ಕಾರುಗಳು ಮುಂಬರುವ ದಿನಗಳಲ್ಲಿ ರೂ. 6.50 ಲಕ್ಷದಿಂದ ರೂ. 7 ಲಕ್ಷಕ್ಕೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.