Just In
- 1 hr ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 1 hr ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 2 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 2 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಲಕ್ಕಾಗಿ ಮೊದಲ ಬಾರಿಗೆ ಜಾಹೀರಾತು ನೀಡಿದ ಬಿಎಂಟಿಸಿ..!
ಬೆಂಗಳೂರು ಮಹಾನಗರದ ಸಾರ್ವಜನಿಕ ಸಾರಿಗೆ ಸಂಸ್ಥೆಯಾದ ಬಿಎಂಟಿಸಿ ಸಾರ್ವಜನಿಕ ಜಾಹೀರಾತನ್ನು ನೀಡಿ, ರೂ.160 ಕೋಟಿಗಳ ಸಾಲವನ್ನು ಕೇಳಿದೆ. ಇದೇ ಮೊದಲ ಬಾರಿಗೆ ಈ ರೀತಿಯಲ್ಲಿ ವಿಚಿತ್ರವಾಗಿ, ವಿಶೇಷವಾಗಿ ಸಾಲ ಪಡೆಯಲಾಗುತ್ತಿದ್ದು, ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಈ ರೀತಿ ಮಾಡಿರುವುದಾಗಿ ಬಿಎಂಟಿಸಿ ಸ್ಪಷ್ಟನೆ ನೀಡಿದೆ.
ಬಿಎಂಟಿಸಿ ಆರ್ಥಿಕ ಸಂಕಷ್ಟದಲ್ಲಿದ್ದು, ಉದ್ಯೋಗಿಗಳ ಪಿಎಫ್, ವಿಮಾ ಕಂತು ಹಾಗೂ ಗ್ರಾಚುಟಿ ಹಣವನ್ನು ಕಟ್ಟಲು ಹೆಣಗಾಡುತ್ತಿದೆ. ಜೂನ್ 13ರಂದುಕೆಲವು ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲಾಗಿದ್ದು, ಈ ರೀತಿಯಾಗಿ ಜಾಹೀರಾತು ನೀಡಲು ರಾಜ್ಯ ಸರ್ಕಾರದಿಂದ ಅನುಮತಿ ಪಡೆದಿರುವುದಾಗಿ ಸಂಸ್ಥೆ ತಿಳಿಸಿದೆ. ಬಿಎಂಟಿಸಿ ಸಂಸ್ಥೆಯು ತನ್ನ ಬಾಕಿ ಪಾವತಿಗಾಗಿ ಸಾಲ ಪಡೆಯಲು ಚಿಂತಿಸಿದ್ದು, ರೂ.160 ಕೋಟಿ ಪಡೆಯುವ ಉತ್ತಮ ವಿಧಾನವನ್ನು ತಿಳಿಯಲು ಸಂಸ್ಥೆಯು ಬಯಸಿದೆ ಎಂದು ಜಾಹೀರಾತಿನಲ್ಲಿ ಹೇಳಲಾಗಿದೆ.
ಸಂಸ್ಥೆಯು ರಾಷ್ಟ್ರೀಕೃತ ಅಥವಾ ಸಹಕಾರಿ ಬ್ಯಾಂಕುಗಳಿಂದ ಸಾಲ ಪಡೆಯಲು ಬಯಸಿದೆ. ಬಿಎಂಟಿಸಿ ಅಧ್ಯಕ್ಷರಾದ ಎನ್ಎ ಹ್ಯಾರಿಸ್ ರವರು ಮಾತನಾಡಿ, ಬಿಎಂಟಿಸಿಯು ಸಾಲ ಪಡೆಯಲು ಪಾರದರ್ಶಕವಾದ ವಿಧಾನವನ್ನು ಅನುಸರಿಸುತ್ತಿದ್ದು, ಎಲ್ಲಾ ಸಾರ್ವಜನಿಕ ಸೇವೆ ನೀಡುವ ಸಂಸ್ಥೆಗಳು ಈ ವಿಧಾನವನ್ನೇ ಅನುಸರಿಸಬೇಕೆಂದು ಹೇಳಿದ್ದಾರೆ.
ಬ್ಯಾಂಕುಗಳೊಂದಿಗೆ ಪ್ರತ್ಯೇಕವಾಗಿ ಮಾತನಾಡುವ ಬದಲು ಜಾಹೀರಾತನ್ನು ನೀಡಿದ್ದೇವೆ. ನಮಗೆ ಹಣದ ಅವಶ್ಯಕತೆಯಿದೆ, ಬ್ಯಾಂಕುಗಳು ಈ ಜಾಹೀರಾತನ್ನು ನೋಡಿ ಮುಂದೆ ಬಂದು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡಲಿವೆ ಎಂಬ ಭರವಸೆಯಿದೆ ಎಂದು ತಿಳಿಸಿದರು.
ಜಾಹೀರಾತಿನಲ್ಲಿ ಕೆಲವು ಷರತ್ತುಗಳನ್ನು ಸಹ ವಿಧಿಸಲಾಗಿದೆ. ಸಾಲವನ್ನು ಒಂದೇ ಕಂತಿನಲ್ಲಿ ನೀಡಬೇಕು. ಸಾಲದ ಅವಧಿಯು ಏಳು ವರ್ಷಗಳಾಗಿದೆ. ಸಾಲದ ಮರುಪಾವತಿಯು ಎರಡು ತಿಂಗಳ ನಂತರ ಶುರುವಾಗಲಿದೆ. ಈ ಸಾಲವನ್ನು ನೀಡುವಾಗ ಯಾವುದೇ ಮುಂಗಡ ಶುಲ್ಕ ಹಾಗೂ ಡಾಕ್ಯುಮೆಂಟ್ ಶುಲ್ಕಗಳನ್ನು ಪಡೆಯಬಾರದು ಎಂದು ತಿಳಿಸಲಾಗಿದೆ. ಜಾಹೀರಾತಿನಲ್ಲಿ ಆಸಕ್ತಿ ಹೊಂದಿರುವ ಬ್ಯಾಂಕುಗಳು ಏಳು ದಿನಗಳ ಒಳಗೆ ಬಿಡ್ನಲ್ಲಿ ಭಾಗವಹಿಸಬಹುದೆಂದು ತಿಳಿಸಿದೆ.
ಬಿಎಂಟಿಸಿ ಮ್ಯಾನೇಜಿಂಗ್ ಡೈರೆಕ್ಟರ್ ಎನ್ವಿ ಪ್ರಸಾದ್ರವರು ಈ ಸಾಲವನ್ನು ಸಂಸ್ಥೆಯ ಪ್ರಾವಿಡೆಂಟ್ ಫಂಡ್ ಬಾಕಿ ಹಣವನ್ನು ಪಾವತಿಸಲು ಬಳಸಲಾಗುವುದು ಎಂದು ತಿಳಿಸಿದ್ದಾರೆ. ಬುಧವಾರದ ವೇಳೆಗೆ ಆಸಕ್ತಿ ಹೊಂದಿರುವ ಕೆಲ ಬ್ಯಾಂಕುಗಳು ಸಂಸ್ಥೆಗೆ ಅರ್ಜಿ ಸಲ್ಲಿಸಿವೆ.
ಎಷ್ಟು ಬ್ಯಾಂಕುಗಳು ಅರ್ಜಿ ಸಲ್ಲಿಸಿವೆ ಎಂಬುದನ್ನು ಸಂಸ್ಥೆ ಬಹಿರಂಗ ಪಡಿಸಿಲ್ಲ. ಗುರುವಾರ ಬಿಡ್ ಸಲ್ಲಿಸುವ ಕೊನೆಯ ದಿನವಾಗಿದ್ದು, ನಂತರ ಎಷ್ಟು ಬ್ಯಾಂಕುಗಳು ಅರ್ಜಿ ಸಲ್ಲಿಸಿವೆ ಎಂಬುದು ಸ್ಪಷ್ಟವಾಗಲಿದೆ.
MOST READ: ಈ ಕಾರಿನಲ್ಲಿ ಬಿಸಿ ನೀರಿನ ಸ್ನಾನ ಮಾಡಬಹುದಂತೆ..!
ಯೋಗೇಶ್ ಗೌಡ ಎಂಬುವವರು ಆರ್ಟಿಐನಲ್ಲಿ ಪಡೆದಿರುವ ಮಾಹಿತಿಯ ಪ್ರಕಾರ, ಬಿಎಂಟಿಸಿ ಸಂಸ್ಥೆಯು ರೂ.1,000 ಕೋಟಿಗೂ ಅಧಿಕ ಸಾಲವನ್ನು ಹೊಂದಿದೆ. ಕಳೆದ ಐದು ವರ್ಷಗಳಿಂದೀಚೆಗೆ ಸಂಸ್ಥೆಯು ರಾಷ್ಟ್ರೀಕೃತ ಬ್ಯಾಂಕುಗಳಿಂದ ರೂ.329 ಕೋಟಿ ಸಾಲ ಪಡೆದಿದೆ.
MOST READ: ಒಂದು ಲಕ್ಷ ಉತ್ಪಾದನಾ ಗುರಿ ತಲುಪಿದ ಸ್ಕೋಡಾ ರ್ಯಾಪಿಡ್
44 ವರ್ಷಗಳಿಂದ ಅಸ್ತಿತ್ವದಲ್ಲಿರುವ ಕೆಎಸ್ಆರ್ಟಿಸಿ ಸಿಬ್ಬಂದಿ ಹಾಗೂ ಕಾರ್ಮಿಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಹೆಚ್ವಿ ಅನಂತ ಸುಬ್ಬರಾವ್ರವರು ಈ ಜಾಹೀರಾತನ್ನು ನೋಡಿ ಆಶ್ಚರ್ಯ ವ್ಯಕ್ತಪಡಿಸಿ ಮಾತನಾಡಿದ್ದಾರೆ.
MOST READ: ವಾಹನಗಳ ಬೆಲೆ ಏರಿಕೆ ಮಾಡಿದ ಮಹೀಂದ್ರಾ
ಮೆಟ್ರೊಗೆ ರೂ.36,000 ಕೋಟಿ ನೀಡುವ ರಾಜ್ಯ ಸರ್ಕಾರವು, ಕಡೆಯ ಪಕ್ಷ ರೂ.2,000 ಕೋಟಿ ಸಬ್ಸಿಡಿ ನೀಡಿ ಬಿಎಂಟಿಸಿಯನ್ನು ಬೆಂಬಲಿಸಲು ಹಿಂಜರಿಯುತ್ತಿರುವುದು ವಿಷಾದಕರವಾಗಿದೆ ಎಂದು ಹೇಳಿದ್ದಾರೆ. ಬಿಎಂಟಿಸಿ ಸಂಸ್ಥೆಯು ನೌಕರರ ಗ್ರಾಚ್ಯುಟಿ, ಭವಿಷ್ಯನಿಧಿ ಮತ್ತು ವಿಮಾ ಪ್ರೀಮಿಯಂ ಪಾವತಿಗಳಿಗೆ ರೂ.300 ಕೋಟಿ ವ್ಯಯಿಸುತ್ತಿದೆ. ನಾವು ಮುಂದಿನ ವಾರ ರಾಜ್ಯ ಸರ್ಕಾರದಿಂದ ಹಣಕಾಸಿನ ನೆರವು ಕೋರಿ ಪ್ರತಿಭಟನೆ ನಡೆಸಲು ಚಿಂತಿಸುತ್ತಿದ್ದೇವೆ ಎಂದು ಅವರು ಹೇಳಿದರು.