Just In
- 10 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 11 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 12 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 12 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೂಲ್ಸ್ ಬ್ರೇಕ್ ಮಾಡಿದ್ರೆ ದುಬಾರಿ ದಂಡದ ಜೊತೆ ಹೆಚ್ಚುವರಿ ಇನ್ಸುರೆನ್ಸ್ ಪಾವತಿಸಬೇಕಾಗುತ್ತೆ ಹುಷಾರ್..!
ದೇಶಾದ್ಯಂತ ಹೊಸ ಮೋಟಾರ್ ವೆಹಿಕಲ್ ಆಕ್ಟ್ ಜಾರಿಯಿಂದಾಗಿ ವಾಹನ ಸವಾರರು ದುಬಾರಿ ದಂಡ ಪಾವತಿಸಲಾಗದೇ ಪರದಾಟುವಂತ ಪರಿಸ್ಥಿತಿ ಎದುರಾಗಿದೆ. ಈ ಮಧ್ಯೆ ಮತ್ತೊಂದು ಹೊಸ ನಿಯಮ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರವು ಹೆಚ್ಚು ನಿಯಮ ಉಲ್ಲಂಘಿಸುವ ವಾಹನ ಮಾಲೀಕರಿಗೆ ಹೆಚ್ಚುವರಿ ಇನ್ಸುರೆನ್ಸ್ ವಿಧಿಸುವ ನಿಯಮ ಜಾರಿಗೆ ಸಿದ್ದತೆ ನಡೆಸಿದೆ.
ಪ್ರಸ್ತುತ ನಿಯಮಗಳ ಪ್ರಕಾರ ಪ್ರತಿ ವಾಹನವು ಕೂಡಾ ಥರ್ಡ್ ಪಾರ್ಟಿ ವಿಮೆ ಹೊಂದಿರಲೇಬೇಕಿದ್ದು, ಎದುರಾಳಿ ವಾಹನವು ಅಪಘಾತಕ್ಕೀಡಾಗಿ ಅದರಲ್ಲಿ ಜೀವಹಾನಿಯಾಗಿ ಇಲ್ಲವೇ ವಾಹನಕ್ಕೆ ಹಾನಿಯಾದ ಸಂದರ್ಭದಲ್ಲಿ ನಷ್ಟ ಪರಿಹಾರಕ್ಕಾಗಿ ಥರ್ಡ್ ಪಾರ್ಟಿ ವಿಮೆ ವಾಹನ ಮಾಲೀಕರ ನೆರವಿಗೆ ಬರಲಿದೆ. ಹೀಗಾಗಿ ಈ ನಿಯಮವನ್ನು ಈಗಾಗಲೇ ಕಡ್ಡಾಯಗೊಳಿಸಿರುವ ಕೇಂದ್ರ ಸಾರಿಗೆ ಇಲಾಖೆಯು ಮುಂಬರುವ ದಿನಗಳಲ್ಲಿ ಇದೇ ಥರ್ಡ್ ಪಾರ್ಟಿ ವಿಮಾ ಪಾಲಿಸಿಯಲ್ಲಿ ಕೆಲವು ಬದಲಾವಣೆಗೆ ಮುಂದಾಗಿದೆ.
ಹೌದು, ಅಪಘಾತದ ಸಂದರ್ಭದಲ್ಲಿ ಸಾವನ್ನಪ್ಪಿದವರಿಗೆ ಇತ್ತೀಚೆಗೆ ಪರಿಹಾರದ ಮೊತ್ತವನ್ನು ದ್ವಿಗುಣಗೊಳಿಸಿರುವ ಕೇಂದ್ರ ಸರ್ಕಾರವು ಥರ್ಡ್ ಪಾರ್ಟಿ ವಿಮಾ ಪಾಲಿಸಿಯ ಪ್ರೀಮಿಯಂ ಮೊತ್ತಗಳ ಏರಿಕೆಗೆ ಮುಂದಾಗಿದ್ದು, ಇನ್ಸುರೆನ್ಸ್ ದರ ನಿಗದಿಯ ಮಾನದಂಡಗಳಲ್ಲಿ ಮಹತ್ವದ ಬದಲಾವಣೆ ತರಲಾಗುತ್ತಿದೆ.
ಹೀಗಾಗಿ ಕಾರು ಖರೀದಿ ಪ್ರಕ್ರಿಯೆಯು ಇನ್ಮುಂದೆ ಮತ್ತಷ್ಟು ದುಬಾರಿಯಾಗಿ ಪರಿಣಮಿಸಲಿದ್ದು, ಇನ್ಸುರೆನ್ಸ್ ರೆಗ್ಯೂಲೆಟರಿ ಆ್ಯಂಡ್ ಡೆವೆಲಪ್ಮೆಂಟ್ ಅಥಾರಟಿ ಆಫ್ ಇಂಡಿಯಾ (IRDAI) ಸಂಸ್ಥೆಯ ಶಿಫಾರಸ್ಸು ಅನ್ವಯ ಹೆಚ್ಚು ತಪ್ಪು ಮಾಡುವ ವಾಹನ ಮಾಲೀಕರಿಗೆ ಹೆಚ್ಚು ಇನ್ಸುರೆನ್ಸ್ ದರವಿಧಿಸುವ ಹೊಸ ನಿಯಮವನ್ನು ಜಾರಿಗೆ ತರಲು ಯೋಜನೆ ರೂಪಿಸಿದೆ.
ವಿಮಾ ಪ್ರೀಮಿಯಂ ಮೊತ್ತ ಪಾವತಿಸುವಲ್ಲಿ ಆಗುತ್ತಿರುವ ಕೆಲವು ಲೋಪಗಳನ್ನು ಸರಿಪಡಿಸಲು ಟೆಲಿಮ್ಯಾಟ್ರಿಕ್ಸ್ ತಂತ್ರಜ್ಞಾನ ಬಳಕೆಗೆ ಮುಂದಾಗಿದ್ದು, ಕಾರು ಮಾಲೀಕರ ಚಾಲನಾ ಪದ್ದತಿಯ ಮೇಲೆ ಹೆಚ್ಚಿನ ಮಟ್ಟದ ದರ ನಿಗದಿ ಮಾಡುವ ಬಗೆಗೆ ಚಿಂತನೆ ನಡೆಸಲಾಗಿದೆ. ಈ ಯೋಜನೆಯನ್ನು ಪ್ರಾಯೋಗಿಕ ದೆಹಲಿ ಮತ್ತು ಸುತ್ತುಮತ್ತಲಿನ ಎನ್ಸಿಆರ್ ನಗರ ಪ್ರದೇಶಗಳಲ್ಲಿ ಜಾರಿಗೆ ತರಲಾಗಿದ್ದು, ಯೋಜನೆಯ ಸಾಧಕ-ಬಾಧಕಗಳ ಕುರಿತು ಅಧ್ಯಯನ ನಡೆಸಲಾಗುತ್ತಿದೆ.
ಟೆಲಿಮ್ಯಾಟ್ಕಿಕ್ಸ್ ತಂತ್ರಜ್ಞಾನವನ್ನು ಕಾರುಗಳಲ್ಲಿ ಅಳವಡಿಸಿದ್ದಲ್ಲಿ ಕಾರು ಮಾಲೀಕನು ಸಾರಿಗೆ ನಿಯಮಗಳಿಗೆ ಅನುಗುಣವಾಗಿ ಚಾಲನೆ ಮಾಡುತ್ತಿದ್ದಾನೋ ಇಲ್ಲವೋ ಅಥವಾ ಸಾರಿಗೆ ನಿಯಮಗಳಿಗೆ ವಿರುದ್ದವಾಗಿ ಬೇಕಾಬಿಟ್ಟಿ ಚಾಲನೆ ಮಾಡುತ್ತಾನೋ ಎನ್ನುವುದನ್ನ ಟೆಲಿಮ್ಯಾಟ್ರಿಕ್ ತಂತ್ರಜ್ಞಾನವು ಸಂಪೂರ್ಣ ಮಾಹಿತಿ ಕಲೆಹಾಕುತ್ತಿರುತ್ತೆ.
ಒಂದು ವೇಳೆ ಅಪಘಾತಗಳನ್ನು ಮಾಡಿ ಪರಿಹಾರಕ್ಕಾಗಿ ವಿಮಾ ಸಂಸ್ಥೆಗಳಿಗೆ ಬಳಿ ಹೋದಾಗ ಟೆಲಿಮ್ಯಾಟ್ರಿಕ್ಸ್ ತಂತ್ರಜ್ಞಾನ ಸಹಾಯದಿಂದ ಕಾರು ಮಾಲೀಕನ ಬಂಡವಾಳವನ್ನು ಬಿಚ್ಚಿಡಲಾಗುತ್ತೆ. ಆಗ ಬೇಕೆಂದೇ ತಪ್ಪು ಮಾಡಿದ್ದಲ್ಲಿ ಕಾರು ಮಾಲೀಕನಿಂದ ಹೆಚ್ಚುವರಿ ವಿಮಾ ಮೊತ್ತವನ್ನು ವಸೂಲಿ ಮಾಡುವ ಪದ್ಧತಿ ಇದಾಗಿದೆ.
MOST READ: ದಂಡದಿಂದ ತಪ್ಪಿಸಿಕೊಳ್ಳಲು ವಾಹನ ಸವಾರರಿಗೆ ಹೊಸ ಮಾರ್ಗ ಸೂಚಿಸಿದ ಬೆಂಗಳೂರು ಪೊಲೀಸರು..!
ಈ ಹೊಸ ಪದ್ದತಿ ಈಗಾಗಲೇ ವಿದೇಶಿಗಳಲ್ಲಿ ಜಾರಿಗೆಯಲ್ಲಿದ್ದು, ಭಾರತದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ತಗ್ಗಿಸಲು ಈ ಯೋಜನೆಯನ್ನು ಪರಿಚಯಿಸುವ ಸಲುವಾಗಿ ಕೇಂದ್ರ ಸಾರಿಗೆ ಇಲಾಖೆಯೊಂದಿಗೆ ಚರ್ಚಿಸಿರುವ ಐಆರ್ಡಿಎಆರ್ ಸಂಸ್ಥೆಯು ಸದ್ಯದಲ್ಲೇ ವಾಹನ ಮಾಲೀಕರಿಗೆ ಭರ್ಜರಿ ಶಾಕ್ ನೀಡಲು ತಯಾರಿ ನಡೆಸಿದೆ.
MOST READ: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಈ ಸ್ಕೂಟರ್ ಮಾಲೀಕ ಮಾಡಿದ್ದೇನು ಗೊತ್ತಾ?
ಮೋಟಾರು ವಿಮೆಯ ಅಗತ್ಯವೇನು?
ಭಾರತೀಯ ಮೋಟಾರು ವಾಹನ ಕಾಯ್ದೆ 1988 ಪ್ರಕಾರ ಎಲ್ಲ ವಾಹನಗಳ ಮಾಲಿಕರು ಕಾರು ವಿಮೆ ಮಾಡಿಸತಕ್ಕದ್ದು. ಒಂದು ವೇಳೆ ಅಪಘಾತ ಸಂದರ್ಭದಲ್ಲಿ ವ್ಯಕ್ತಿಯ ಸುರಕ್ಷತೆ ಹಾಗೂ ಪರಿಹಾರ ಒದಗಿಸುವುದು ಮುಖ್ಯ.
MOST READ: ಭಾರತದಲ್ಲಿ ಬಿಡುಗಡೆಯಾಗಲಿರುವ 5 ಎಲೆಕ್ಟ್ರಿಕ್ ಕಾರುಗಳಿವು
ಬಹುಶಃ ನಿಮ್ಮ ವಾಹನ ನೀವು ಖರೀದಿಸುವ ವಸ್ತುಗಳಲ್ಲಿ ಅತ್ಯಂತ ದುಬಾರಿಯಾಗಿರಬಹುದು. ವಿಮೆಯು ಈ ಸ್ವತ್ತಿಗೆ ರಕ್ಷಣೆ ಒದಗಿಸುವುದಲ್ಲದೆ ಅಪಘಾತ, ಹಾನಿ ಅಥವಾ ಕಳ್ಳತನ ಸಂಭವಿಸಿದ ಸಂದರ್ಭದಲ್ಲಿ ಆರ್ಥಿಕ ನಷ್ಟವನ್ನು ನಿಭಾಯಿಸಲು ಸಹಕಾರಿಯಾಗುತ್ತದೆ.