Just In
- 6 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 7 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 9 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 9 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ನಿಯಮ ಉಲ್ಲಂಘನೆ- 24 ಗಂಟೆಗಳಲ್ಲಿ ರೂ.1.89 ಲಕ್ಷ ದಂಡ ವಸೂಲಿ
ಲಾಕ್ಡೌನ್ ಸಡಿಲಿಕೆಯಿಂದಾಗಿ ಕರೋನಾ ಸೋಂಕಿತರ ಪ್ರಮಾಣವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಈಗಾಗಲೇ ಕೆಲವು ಕಠಿಣ ನಿಯಮಗಳ ಮೂಲಕ ಜನರ ಓಡಾದ ಮೇಲೆ ನಿರ್ಬಂಧ ಹೇರಲಾಗುತ್ತಿದೆ.
ವೈರಸ್ ಹೆಚ್ಚಳದಿಂದಾಗಿ ದೇಶದ ಪ್ರಮುಖ ನಗರಗಳಲ್ಲಿ ಇದೀಗ ಎರಡನೇ ಬಾರಿಗೆ ಲಾಕ್ಡೌನ್ ಮಾಡಲಾಗುತ್ತಿದ್ದು, ವೈರಸ್ ಹರಡದಂತೆ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪರಿಸ್ಥಿತಿ ಹೀಗಿದ್ದರೂ ಜನರು ಮಾತ್ರ ಸೋಂಕು ಹತ್ತಿಕ್ಕಲು ಲಾಕ್ಡೌನ್ ನಿಯಮಗಳನ್ನು ಪಾಲನೆ ಮಾಡದಿರುವುದು ವೈರಸ್ ಪ್ರಮಾಣದಲ್ಲಿ ಗಣನೀಯ ಹೆಚ್ಚಳಕ್ಕೆ ಕಾರಣವಾಗಿದ್ದು, ಕೆಲವು ಕಡೆಗಳಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ.
ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೆ ತಂದರೂ ವಾಹನ ಸವಾರರು ಮಾತ್ರ ನಿಯಮಗಳನ್ನು ಪಾಲನೆ ಮಾಡದೆ ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿದ್ದು, ಇತರರಿಗೂ ಸೋಂಕು ಹರಡಿಸುವ ಮೂಲಕ ಮತ್ತಷ್ಟು ಸಂಕಷ್ಟ ಎದುರಾಗುವಂತೆ ಮಾಡುತ್ತಿದ್ದಾರೆ.
ಹೀಗಾಗಿ ವಿವಿಧ ರಾಜ್ಯಗಳಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಹಲವು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ನೋಯ್ಡ ಪೊಲೀಸರು ಅನಾವಶ್ಯಕವಾಗಿ ಓಡಾಡುವ ವಾಹನ ಸವಾರರ ವಿರುದ್ಧ ಒಂದೇ ದಿನದಲ್ಲಿ ಸಾವಿರಾರು ಪ್ರಕರಣಗಳನ್ನು ದಾಖಲಿಸಿದ್ದಾರೆ.
ತುರ್ತು ಪರಿಸ್ಥಿತಿ ವಾಹನಗಳು ಮತ್ತು ಅಗತ್ಯ ಸೇವೆಯ ಕೆಲವು ಕೆಲವು ವಾಹನಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಮಾದರಿಗಳ ವಾಹನ ಓಡಾಟವನ್ನು ನಿಯಂತ್ರಿಸಲಾಗುತ್ತಿದ್ದು, ನಿಯಮ ಪಾಲನೆ ಮಾಡದ ಸಾವಿರಾರು ವಾಹನಗಳನ್ನು ಸೀಜ್ ಮಾಡಲಾಗಿದೆ.
ನೋಯ್ಡಾದಲ್ಲಿ ನಿನ್ನೆ ಒಂದೇ ದಿನಗಳಲ್ಲಿ ಬರೋಬ್ಬರಿ 1,200 ವಾಹನಗಳನ್ನು ಸೀಜ್ ಮಾಡುವ ಮೂಲಕ ರೂ.1,89,400 ದಂಡ ವಸೂಲಿ ಮಾಡಲಾಗಿದ್ದು, ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ವಾಹನಗಳು ಓಡಾಡದಂತೆ ನಿಯಂತ್ರಿಸಲು ಬರೋಬ್ಬರಿ 200 ಬ್ಯಾರಿಕೇಡ್ಗಳನ್ನು ಹಾಕಲಾಗಿದೆ.
MOST READ: ಇನ್ನು ಕೆಲ ದಿನಗಳಲ್ಲಿ ಕಣ್ಮರೆಯಾಗಲಿವೆ ಕಪ್ಪು-ಹಳದಿ ಟ್ಯಾಕ್ಸಿಗಳು
ಹಾಗೆಯೇ ಮುಂಬೈನಲ್ಲೂ ವೈರಸ್ ತಡೆಯುವುದಕ್ಕಾಗಿ ವಾಹನ ಸವಾರರು ತಮ್ಮ ವಾಸದ ಸ್ಥಳದಿಂದ 2 ಕಿ.ಮೀ ವ್ಯಾಪ್ತಿ ಮೀರಿ ಹೊರಹೋಗದಂತೆ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಅನಾಶ್ಯಕವಾಗಿ ಹೊರಹೋಗುವ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ.
ಮುಂಬೈ ಪೊಲೀಸರು ಕಳೆದ ಭಾನುವಾರದಿಂದಲೇ ಕೆಲವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಹೊಸ ಮಾರ್ಗಸೂಚಿಗಳ ಅನ್ವಯ ಯಾವುದೇ ವಾಹನ ಸವಾರರು ಕಾರಣವಿಲ್ಲದೆ ಮನೆಯಿಂದ ಹೊರ ಬಂದರೆ ಕಠಿಣ ಕ್ರಮ ಎದುರಿಸುವಂತಹ ನಿಯಮ ಜಾರಿಗೆ ತರಲಾಗಿದೆ.
MOST READ: ಕರೋನಾ ವೈರಸ್ ಎಫೆಕ್ಟ್ : ಹಣ್ಣು ವ್ಯಾಪಾರಿಗಳಾದ ಕ್ಯಾಬ್ ಚಾಲಕರು
ಸದ್ಯ ದೇಶದ ಪ್ರಮುಖ ನಗರಗಳಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ಸೋಂಕು ಹರಡುವಿಕೆಯನ್ನು ತಡೆಯಲು ಮತ್ತೆ ಲಾಕ್ಡೌನ್ ವಿಧಿಸುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಸಾರ್ವಜನಿಕರು ಕೂಡಾ ಜವಾಬ್ದಾರಿಯಿಂದ ನಡೆದುಕೊಳ್ಳಬೇಕಿದ್ದು, ಅವಶ್ಯಕ ಸಂದರ್ಭಗಳನ್ನು ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅನಾವಶ್ಯಕವಾಗಿ ಸುತ್ತಾಡುವುದನ್ನು ಕಡಿಮೆ ಮಾಡುವ ಮೂಲಕ ಸೋಂಕು ಹರಡುವುದನ್ನು ತಪ್ಪಿಸಬೇಕಿದೆ.