Just In
- 1 hr ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 1 hr ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 2 hrs ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 3 hrs ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತ ಗಾಯಾಳುಗಳಿಗೆ ಸಿಗಲಿದೆ ಕ್ಯಾಶ್ ಲೆಸ್ ಚಿಕಿತ್ಸೆ
ಭಾರತದಲ್ಲಿ ಪ್ರತಿವರ್ಷ ಸುಮಾರು 4.6 ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಈ ರಸ್ತೆ ಅಪಘಾತಗಳಲ್ಲಿ ಸರಾಸರಿ 1.48 ಲಕ್ಷ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಭಾರತದ ಕೆಲ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳಾಗುತ್ತವೆ.
ಅಂತಹ ರಾಜ್ಯಗಳಲ್ಲಿ ಉತ್ತರ ಪ್ರದೇಶವೂ ಸೇರಿದೆ. ಇವುಗಳ ಜೊತೆಗೆ ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲೂ ಹೆಚ್ಚಿನ ಸಂಖ್ಯೆಯ ಅಪಘಾತಗಳಾಗುತ್ತವೆ. ಈ ಮೂರು ರಾಜ್ಯಗಳ ರಸ್ತೆ ಅಪಘಾತಗಳ ಒಟ್ಟು ಶೇಕಡವಾರು ಪ್ರಮಾಣವು ಇಡೀ ದೇಶದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಗಿಂತ 30%ನಷ್ಟು ಹೆಚ್ಚಾಗಿದೆ.
ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವ ಜನರ ಚಿಕಿತ್ಸೆಗಾಗಿ ಹೊಸ ಕ್ಯಾಶ್ ಲೆಸ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ. ಮೂಲಗಳ ಪ್ರಕಾರ, ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವವರಿಗೆ ರೂ.2.5 ಲಕ್ಷಗಳವರೆಗಿನ ಚಿಕಿತ್ಸೆ ನೀಡಲು ಭಾರತ ಸರ್ಕಾರವು ಚಿಂತನೆ ನಡೆಸುತ್ತಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಅಪಘಾತಗಳಲ್ಲಿ ಗಾಯಗೊಳ್ಳುವವರ ಚಿಕಿತ್ಸೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ತನ್ನದೇ ಆದ ಕೊಡುಗೆಯ ಮೂಲಕ ಮೋಟಾರು ವಾಹನ ಅಪಘಾತ ನಿಧಿಯನ್ನು ಸ್ಥಾಪಿಸಲಿದೆ.
ಈ ಯೋಜನೆಯಲ್ಲಿ ಸಾರಿಗೆ ಇಲಾಖೆಗೆ ಸಾಮಾನ್ಯ ವಿಮಾ ಕಂಪನಿಗಳು ನೆರವು ನೀಡಲಿವೆ. ಅಪಘಾತಗಳಲ್ಲಿ ಬಲಿಯಾದವರ ವೆಚ್ಚವನ್ನು ಜಿಐಸಿ ಭರಿಸಿದರೆ, ವಿಮೆ ಮಾಡಿದ ವಾಹನಗಳಿಗೆ ಸಂಬಂಧಿಸಿದ ಪ್ರಕರಣಗಳು ಹಾಗೂ ಅಪಘಾತಕ್ಕೀಡಾದ ವಾಹನಗಳ ವೆಚ್ಚವನ್ನು ರಸ್ತೆ ಸಾರಿಗೆ ಇಲಾಖೆಯು ಭರಿಸಲಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಐಟಿ ಪ್ಲಾಟ್ಫಾರಂ ಅನ್ನು ಬಳಸಿಕೊಳ್ಳಲಾಗುತ್ತದೆ. ಅಪಘಾತವಾದ ಮೊದಲ ಒಂದು ಗಂಟೆಯ ಅವಧಿಯನ್ನೂ ಸಹ ಪರಿಗಣಿಸಲಾಗುತ್ತದೆ.
ಈ ಐಟಿ ಪ್ಲಾಟ್ಫಾರಂ ಅನ್ನು ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆಗಾಗಿಯೂ ದೇಶಾದ್ಯಂತ ಬಳಸಿಕೊಳ್ಳಲಾಗುತ್ತಿದೆ. ರಸ್ತೆ ಅಪಘಾತ ಸಂತ್ರಸ್ತರಿಗೆ ಈ ಯೋಜನೆಯಡಿ ನೆರವು ನೀಡಲು ಕೇಂದ್ರ ರಸ್ತೆ ಇಲಾಖೆಯಡಿಯಲ್ಲಿ ಖಾತೆಯನ್ನು ಸ್ಥಾಪಿಸಲಾಗುವುದು.