Just In
- 4 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 6 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 7 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 8 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತ ಗಾಯಾಳುಗಳಿಗೆ ಸಿಗಲಿದೆ ಕ್ಯಾಶ್ ಲೆಸ್ ಚಿಕಿತ್ಸೆ
ಭಾರತದಲ್ಲಿ ಪ್ರತಿವರ್ಷ ಸುಮಾರು 4.6 ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಈ ರಸ್ತೆ ಅಪಘಾತಗಳಲ್ಲಿ ಸರಾಸರಿ 1.48 ಲಕ್ಷ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಭಾರತದ ಕೆಲ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳಾಗುತ್ತವೆ.
ಅಂತಹ ರಾಜ್ಯಗಳಲ್ಲಿ ಉತ್ತರ ಪ್ರದೇಶವೂ ಸೇರಿದೆ. ಇವುಗಳ ಜೊತೆಗೆ ಮಹಾರಾಷ್ಟ್ರ ಹಾಗೂ ತಮಿಳುನಾಡು ರಾಜ್ಯಗಳಲ್ಲೂ ಹೆಚ್ಚಿನ ಸಂಖ್ಯೆಯ ಅಪಘಾತಗಳಾಗುತ್ತವೆ. ಈ ಮೂರು ರಾಜ್ಯಗಳ ರಸ್ತೆ ಅಪಘಾತಗಳ ಒಟ್ಟು ಶೇಕಡವಾರು ಪ್ರಮಾಣವು ಇಡೀ ದೇಶದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಗಿಂತ 30%ನಷ್ಟು ಹೆಚ್ಚಾಗಿದೆ.
ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವ ಜನರ ಚಿಕಿತ್ಸೆಗಾಗಿ ಹೊಸ ಕ್ಯಾಶ್ ಲೆಸ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ. ಮೂಲಗಳ ಪ್ರಕಾರ, ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವವರಿಗೆ ರೂ.2.5 ಲಕ್ಷಗಳವರೆಗಿನ ಚಿಕಿತ್ಸೆ ನೀಡಲು ಭಾರತ ಸರ್ಕಾರವು ಚಿಂತನೆ ನಡೆಸುತ್ತಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಅಪಘಾತಗಳಲ್ಲಿ ಗಾಯಗೊಳ್ಳುವವರ ಚಿಕಿತ್ಸೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ತನ್ನದೇ ಆದ ಕೊಡುಗೆಯ ಮೂಲಕ ಮೋಟಾರು ವಾಹನ ಅಪಘಾತ ನಿಧಿಯನ್ನು ಸ್ಥಾಪಿಸಲಿದೆ.
ಈ ಯೋಜನೆಯಲ್ಲಿ ಸಾರಿಗೆ ಇಲಾಖೆಗೆ ಸಾಮಾನ್ಯ ವಿಮಾ ಕಂಪನಿಗಳು ನೆರವು ನೀಡಲಿವೆ. ಅಪಘಾತಗಳಲ್ಲಿ ಬಲಿಯಾದವರ ವೆಚ್ಚವನ್ನು ಜಿಐಸಿ ಭರಿಸಿದರೆ, ವಿಮೆ ಮಾಡಿದ ವಾಹನಗಳಿಗೆ ಸಂಬಂಧಿಸಿದ ಪ್ರಕರಣಗಳು ಹಾಗೂ ಅಪಘಾತಕ್ಕೀಡಾದ ವಾಹನಗಳ ವೆಚ್ಚವನ್ನು ರಸ್ತೆ ಸಾರಿಗೆ ಇಲಾಖೆಯು ಭರಿಸಲಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಐಟಿ ಪ್ಲಾಟ್ಫಾರಂ ಅನ್ನು ಬಳಸಿಕೊಳ್ಳಲಾಗುತ್ತದೆ. ಅಪಘಾತವಾದ ಮೊದಲ ಒಂದು ಗಂಟೆಯ ಅವಧಿಯನ್ನೂ ಸಹ ಪರಿಗಣಿಸಲಾಗುತ್ತದೆ.
ಈ ಐಟಿ ಪ್ಲಾಟ್ಫಾರಂ ಅನ್ನು ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆಗಾಗಿಯೂ ದೇಶಾದ್ಯಂತ ಬಳಸಿಕೊಳ್ಳಲಾಗುತ್ತಿದೆ. ರಸ್ತೆ ಅಪಘಾತ ಸಂತ್ರಸ್ತರಿಗೆ ಈ ಯೋಜನೆಯಡಿ ನೆರವು ನೀಡಲು ಕೇಂದ್ರ ರಸ್ತೆ ಇಲಾಖೆಯಡಿಯಲ್ಲಿ ಖಾತೆಯನ್ನು ಸ್ಥಾಪಿಸಲಾಗುವುದು.