Just In
- 9 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 12 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 12 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 14 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಎಫೆಕ್ಟ್: ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬರಲಿವೆ ವಿಶೇಷ ಬಸ್ಸುಗಳು
ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮವು (ಎಪಿಎಸ್ಆರ್ಟಿಸಿ) ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಉದ್ದೇಶದಿಂದ 26 ಸೀಟುಗಳನ್ನು ಹೊಂದಿರುವ ವಿಶೇಷ ಬಸ್ ಅನ್ನು ವಿನ್ಯಾಸಗೊಳಿಸಿದೆ. ಆಂಧ್ರಪ್ರದೇಶ ಸರ್ಕಾರವು ಈ ರೀತಿಯ ವಿಶೇಷ ಬಸ್ಸುಗಳನ್ನು ಸಿದ್ಧಪಡಿಸುತ್ತಿದ್ದು, ಲಾಕ್ಡೌನ್ ಮುಗಿದ ನಂತರ ಬಳಸಲಾಗುವುದು.
ಈ ಬಸ್ನ ವಿನ್ಯಾಸದ ಮೂಲಮಾದರಿಯನ್ನು ಪರಿಶೀಲನೆಗಾಗಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರಿಗೆ ಕಳುಹಿಸಲಾಗಿದೆ. ಶೀಘ್ರದಲ್ಲೇ ಸಾರ್ವಜನಿಕ ಸಾರಿಗೆ ಬಸ್ಸುಗಳ ಸೇವೆಯನ್ನು ಪುನರಾರಂಭಿಸಲಾಗುವುದೆಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿರವರು ಇತ್ತೀಚೆಗೆ ತಿಳಿಸಿದ್ದರು. ಈ ಕಾರಣಕ್ಕೆ ಎಪಿಎಸ್ಆರ್ಟಿಸಿ ವಿಶೇಷ ಬಸ್ಸುಗಳನ್ನು ವಿನ್ಯಾಸಗೊಳಿಸುತ್ತಿದೆ.
ಇದರ ಅಂಗವಾಗಿ ಎಪಿಎಸ್ಆರ್ಟಿಸಿ ಅಧಿಕಾರಿಗಳು ಪ್ರಯಾಣಿಕರ ನಡುವೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು 36 ಸೀಟುಗಳ ಸೂಪರ್ ಐಷಾರಾಮಿ ಬಸ್ ಬಳಸಿ ಮೂರು ಸಾಲಿನ 26 ಸೀಟುಗಳ ಬಸ್ ಅನ್ನು ವಿನ್ಯಾಸಗೊಳಿಸಿದ್ದಾರೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ತನ್ನ ಪಾಲುದಾರ ಬಸ್ಗಳಲ್ಲಿ ನಗದು ರಹಿತ ಟಿಕೆಟಿಂಗ್ ವ್ಯವಸ್ಥೆಯನ್ನು ಉತ್ತೇಜಿಸಲು ನಿಯಮಗಳನ್ನು ಮಾಡಲಾಗುತ್ತಿದೆ. ಇದರ ಅಡಿಯಲ್ಲಿ ಆನ್ಲೈನ್ ಮೂಲಕ ಟಿಕೆಟ್ಗಳನ್ನು ಮೊದಲೇ ಬುಕ್ಕಿಂಗ್ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.
ಕರೋನಾ ವೈರಸ್ ರಾಜ್ಯದಲ್ಲಿ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಎಪಿಎಸ್ಆರ್ಟಿಸಿ ಮಾರ್ಚ್ 25ರಿಂದ ಎಲ್ಲಾ ಪ್ರಯಾಣಿಕರ ಸೇವೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಮೇ 17ರಂದು ಲಾಕ್ಡೌನ್ ಮುಗಿದ ನಂತರ ಮೇ 18ರಿಂದ ಆಂಧ್ರದಲ್ಲಿ ಬಸ್ ಸೇವೆ ಪುನರಾರಂಭವಾಗಲಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಮೇ 18ರೊಳಗೆ ಈ ರೀತಿಯ 100 ಬಸ್ಗಳನ್ನು ಸಿದ್ಧಪಡಿಸಲಾಗುವುದೆಂದು ಎಪಿಎಸ್ಆರ್ಟಿಸಿ ತಿಳಿಸಿದೆ. ಈ ಎಲ್ಲಾ ಬಸ್ಸುಗಳು ತಮ್ಮ ಸಾಮರ್ಥ್ಯಕ್ಕಿಂತ 70%ನಷ್ಟು ಕಡಿಮೆ ಪ್ರಯಾಣಿಕರನ್ನು ಸಾಗಿಸಲಿವೆ. ಲಾಕ್ಡೌನ್ ಮುಗಿದ ನಂತರ ಎಪಿಎಸ್ಆರ್ಟಿಸಿ ಬಸ್ಗಳ ಪ್ರಯಾಣ ದರವನ್ನು ಹೆಚ್ಚಿಸುತ್ತಿಲ್ಲ.
ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜನರಿಗೆ ಮನವಿ ಮಾಡುತ್ತಿರುವುದಾಗಿ ಎಪಿಎಸ್ಆರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಅಧಿಕೃತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
ಸೂಚನೆ: ಕೆಲವು ಚಿತ್ರಗಳನ್ನು ರೆಫರೆನ್ಸ್ಗಾಗಿ ಬಳಸಲಾಗಿದೆ.