Just In
- 41 min ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
- 1 hr ago ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- 2 hrs ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 2 hrs ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರನ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
Don't Miss!
- News Lok Sabha Election: ಚಾಮರಾಜನಗರ ಕ್ಷೇತ್ರ ಸಿಎಂಗೆ ಪ್ರತಿಷ್ಠೆಯ ಕಣ
- Finance ಬೆಂಗಳೂರು, ನೋಯ್ಡಾ, ಪುಣೆಯಲ್ಲಿ ಶೀಘ್ರದಲ್ಲೇ ಹೊಸ ಆಪಲ್ ಸ್ಟೋರ್ ಪ್ರಾರಂಭ
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ಹಿನ್ನಲೆ: ಡೀಲರ್ಸ್ಗಳ ಸಹಾಯಕ್ಕೆ ಧಾವಿಸಿದ ಆಟೋ ಉತ್ಪಾದನಾ ಕಂಪನಿಗಳು
ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರವು 21 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿರುವುದರಿಂದ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಆಟೋ ಉತ್ಪಾದನಾ ವಲಯವು ಸಹ ಭಾರೀ ಪ್ರಮಾಣದ ನಷ್ಟ ಅನುಭವಿಸಿವೆ.
ವಾಹನ ಉತ್ಪಾದನೆ ಮತ್ತು ಮಾರಾಟವನ್ನು ಬಂದ್ ಮಾಡಿರುವುದರಿಂದ ಕಾರು ಉತ್ಪಾದನಾ ಕಂಪನಿಗಳಿಂತ ಕಾರು ಮಾರಾಟಗಾರರು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ಸಂಕಷ್ಟದ ಸಮಯದಲ್ಲೂ ಕಾರು ಕಂಪನಿಗಳು ಮಾರಾಟಗಾರರ ಕೈ ಹಿಡಿದಿವೆ. ಹೌದು, ಕಾರು ಮಾರಾಟ ಪ್ರಕ್ರಿಯೆ ಬಂದ್ ಆಗಿದ್ದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಮಾರಾಟಗಾರರಿಗೆ ಹಣಕಾಸು ನೆರವು ಮಾಡಿರುವ ಆಟೋ ಕಂಪನಿಗಳು ರೂ.1800 ಕೋಟಿ ಪರಿಹಾರ ಘೋಷಣೆ ಮಾಡಿವೆ.
ಪರಿಹಾರದ ಹಣದಲ್ಲಿ ಮಾರಾಟ ಮಳಿಗೆಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನದ ಖರ್ಚು ಬಗೆಹರಿಯಲಿದ್ದು, ಮಾರಾಟವಾಗದೆ ಉಳಿದಿರುವ ಹಳೆಯ ಸ್ಟಾಕ್ ಮೇಲೂ ಹೆಚ್ಚಿನ ಮಟ್ಟದ ಧನಸಹಾಯ ನೀಡುವುದಾಗಿ ಘೋಷಿಸಿವೆ.
ಇದರಲ್ಲಿ ದೇಶದ ನಂ.1 ಕಾರು ಮಾರಾಟ ಕಂಪನಿ ಮಾರುತಿ ಸುಜುಕಿ ಒಂದೇ ರೂ.900 ಕೋಟಿ ಪರಿಹಾರ ಘೋಷಣೆ ಮಾಡಿದ್ದು, ಇನ್ನುಳಿದ ಕಾರು ಕಂಪನಿಗಳು ತಮ್ಮಅಧಿಕೃತ ಡೀಲರ್ಸ್ಗಳಿಗೆ ರೂ.900 ಕೋಟಿ ಪರಿಹಾರ ನೀಡಿವೆ.
ಇನ್ನು ಬಿಎಸ್-4 ವಾಹನಗಳು ಆಟೋ ಕಂಪನಿಗಳು ಭಾರೀ ಪ್ರಮಾಣದ ನಷ್ಟ ಉಂಟು ಮಾಡಲಿದ್ದು, ಏಪ್ರಿಲ್ 1ರಿಂದ ಬಿಎಸ್-6 ವಾಹನಗಳ ಮಾರಾಟವು ಕಡ್ಡಾಯವಾಗಿ ಜಾರಿ ಮಾಡಿರುವುದು ವಾಹನ ಉತ್ಪಾದನಾ ಕಂಪನಿಗಳಿಗೆ ಹಳೆಯ ಸ್ಟಾಕ್ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಎಸ್-4 ವಾಹನಗಳನ್ನು ಬ್ಯಾನ್ ಮಾಡಲಾಗಿದ್ದರೂ ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ಸದ್ಯಕ್ಕೆ ಕೆಲವು ವಿನಾಯ್ತಿಗಳನ್ನು ನೀಡಿರುವ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದೆ.
2018ರಲ್ಲೇ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಯನ್ನು ಬ್ಯಾನ್ ಮಾಡಿದ್ದ ಸುಪ್ರೀಂಕೋರ್ಟ್ ಕೊನೆಯ ಕ್ಷಣದಲ್ಲಿ ಬ್ಯಾನ್ ಅಸ್ತ್ರವನ್ನು ಸಡಿಲಿಸಿದ್ದು, ಕರೋನಾ ವೈರಸ್ ತಡೆ ಉದ್ದೇಶದಿಂದ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ಡೌನ್ ಹಿನ್ನಲೆಯಲ್ಲಿ ಆಟೋ ಕಂಪನಿಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದೆ.
ಬಿಎಸ್-6 ಜಾರಿಗೆ ಮುನ್ನ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಹೇರಲಾಗಿತ್ತು. ಕೊನೆಯ ಗಳಿಗೆಯಲ್ಲಿ ಮಾರಾಟವಾಗಬೇಕಿದ್ದ ಲಕ್ಷಾಂತರ ಬಿಎಸ್-4 ವಾಹನಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ.
ಇದರಿಂದ ಆಟೋ ಕಂಪನಿಗಳಿಗೆ ವಿನಾಯ್ತಿಯೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಮಾರಾಟಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ಬ್ಯಾನ್ ನಷ್ಟ ತಡೆಗೆ ಸಹಕರಿಸಿದೆ.
ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿನಾಯ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇಂಡಿಯನ್ ಆಟೋ ಡೀಲರ್ಸ್ ಅಸೋಶಿಯೇಷನ್ ಸಂಸ್ಥೆಗೆ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಮಾರಾಟ ಅವಧಿಯನ್ನು ವಿಸ್ತರಣೆ ಮಾಡಿದೆ.
ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ.