Just In
- 7 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 9 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 10 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ಹಿನ್ನಲೆ: ಡೀಲರ್ಸ್ಗಳ ಸಹಾಯಕ್ಕೆ ಧಾವಿಸಿದ ಆಟೋ ಉತ್ಪಾದನಾ ಕಂಪನಿಗಳು
ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರವು 21 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿರುವುದರಿಂದ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಆಟೋ ಉತ್ಪಾದನಾ ವಲಯವು ಸಹ ಭಾರೀ ಪ್ರಮಾಣದ ನಷ್ಟ ಅನುಭವಿಸಿವೆ.
ವಾಹನ ಉತ್ಪಾದನೆ ಮತ್ತು ಮಾರಾಟವನ್ನು ಬಂದ್ ಮಾಡಿರುವುದರಿಂದ ಕಾರು ಉತ್ಪಾದನಾ ಕಂಪನಿಗಳಿಂತ ಕಾರು ಮಾರಾಟಗಾರರು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ಸಂಕಷ್ಟದ ಸಮಯದಲ್ಲೂ ಕಾರು ಕಂಪನಿಗಳು ಮಾರಾಟಗಾರರ ಕೈ ಹಿಡಿದಿವೆ. ಹೌದು, ಕಾರು ಮಾರಾಟ ಪ್ರಕ್ರಿಯೆ ಬಂದ್ ಆಗಿದ್ದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಮಾರಾಟಗಾರರಿಗೆ ಹಣಕಾಸು ನೆರವು ಮಾಡಿರುವ ಆಟೋ ಕಂಪನಿಗಳು ರೂ.1800 ಕೋಟಿ ಪರಿಹಾರ ಘೋಷಣೆ ಮಾಡಿವೆ.
ಪರಿಹಾರದ ಹಣದಲ್ಲಿ ಮಾರಾಟ ಮಳಿಗೆಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನದ ಖರ್ಚು ಬಗೆಹರಿಯಲಿದ್ದು, ಮಾರಾಟವಾಗದೆ ಉಳಿದಿರುವ ಹಳೆಯ ಸ್ಟಾಕ್ ಮೇಲೂ ಹೆಚ್ಚಿನ ಮಟ್ಟದ ಧನಸಹಾಯ ನೀಡುವುದಾಗಿ ಘೋಷಿಸಿವೆ.
ಇದರಲ್ಲಿ ದೇಶದ ನಂ.1 ಕಾರು ಮಾರಾಟ ಕಂಪನಿ ಮಾರುತಿ ಸುಜುಕಿ ಒಂದೇ ರೂ.900 ಕೋಟಿ ಪರಿಹಾರ ಘೋಷಣೆ ಮಾಡಿದ್ದು, ಇನ್ನುಳಿದ ಕಾರು ಕಂಪನಿಗಳು ತಮ್ಮಅಧಿಕೃತ ಡೀಲರ್ಸ್ಗಳಿಗೆ ರೂ.900 ಕೋಟಿ ಪರಿಹಾರ ನೀಡಿವೆ.
ಇನ್ನು ಬಿಎಸ್-4 ವಾಹನಗಳು ಆಟೋ ಕಂಪನಿಗಳು ಭಾರೀ ಪ್ರಮಾಣದ ನಷ್ಟ ಉಂಟು ಮಾಡಲಿದ್ದು, ಏಪ್ರಿಲ್ 1ರಿಂದ ಬಿಎಸ್-6 ವಾಹನಗಳ ಮಾರಾಟವು ಕಡ್ಡಾಯವಾಗಿ ಜಾರಿ ಮಾಡಿರುವುದು ವಾಹನ ಉತ್ಪಾದನಾ ಕಂಪನಿಗಳಿಗೆ ಹಳೆಯ ಸ್ಟಾಕ್ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಎಸ್-4 ವಾಹನಗಳನ್ನು ಬ್ಯಾನ್ ಮಾಡಲಾಗಿದ್ದರೂ ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ಸದ್ಯಕ್ಕೆ ಕೆಲವು ವಿನಾಯ್ತಿಗಳನ್ನು ನೀಡಿರುವ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದೆ.
2018ರಲ್ಲೇ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಯನ್ನು ಬ್ಯಾನ್ ಮಾಡಿದ್ದ ಸುಪ್ರೀಂಕೋರ್ಟ್ ಕೊನೆಯ ಕ್ಷಣದಲ್ಲಿ ಬ್ಯಾನ್ ಅಸ್ತ್ರವನ್ನು ಸಡಿಲಿಸಿದ್ದು, ಕರೋನಾ ವೈರಸ್ ತಡೆ ಉದ್ದೇಶದಿಂದ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ಡೌನ್ ಹಿನ್ನಲೆಯಲ್ಲಿ ಆಟೋ ಕಂಪನಿಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದೆ.
ಬಿಎಸ್-6 ಜಾರಿಗೆ ಮುನ್ನ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಹೇರಲಾಗಿತ್ತು. ಕೊನೆಯ ಗಳಿಗೆಯಲ್ಲಿ ಮಾರಾಟವಾಗಬೇಕಿದ್ದ ಲಕ್ಷಾಂತರ ಬಿಎಸ್-4 ವಾಹನಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ.
ಇದರಿಂದ ಆಟೋ ಕಂಪನಿಗಳಿಗೆ ವಿನಾಯ್ತಿಯೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಮಾರಾಟಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ಬ್ಯಾನ್ ನಷ್ಟ ತಡೆಗೆ ಸಹಕರಿಸಿದೆ.
ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿನಾಯ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇಂಡಿಯನ್ ಆಟೋ ಡೀಲರ್ಸ್ ಅಸೋಶಿಯೇಷನ್ ಸಂಸ್ಥೆಗೆ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಮಾರಾಟ ಅವಧಿಯನ್ನು ವಿಸ್ತರಣೆ ಮಾಡಿದೆ.
ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ.