Just In
- 10 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 10 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 12 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 13 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಂಡಬ್ಲ್ಯು ಇಂಡಿಯಾ ಅಧ್ಯಕ್ಷ ಮತ್ತು ಸಿಇಒ ರುದ್ರತೇಜ್ ಸಿಂಗ್ ಇನ್ನಿಲ್ಲ
ಇಡೀ ದೇಶವೇ ಕರೋನಾ ವೈರಸ್ ಮಾಹಾಮಾರಿಯಿಂದಾಗಿ ಸ್ಥಬ್ತವಾಗಿದ್ದು, ಈ ನಡುವೆ ಆಟೋ ಉದ್ಯಮಕ್ಕೆ ವಿಷಾದಕರ ಸಂಗತಿಯೊಂದು ಆಘಾತವನ್ನುಂಟು ಮಾಡಿದೆ. ಅತಿ ಕಿರಿಯ ವಯಸ್ಸಿನಲ್ಲೇ ಐಷಾರಾಮಿ ಕಾರು ಕಂಪನಿಯೊಂದರ ಮುಖ್ಯಸ್ಥರಾಗಿದ್ದ ರುದ್ರತೇಜ್ ಸಿಂಗ್(46) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬಿಎಂಡಬ್ಲ್ಯು ಇಂಡಿಯಾ ಅಧ್ಯಕ್ಷ ಮತ್ತು ಸಿಇಒ ಆಗಿ ಕಳೆದ ವರ್ಷ ಅಗಸ್ಟ್ 1ರಂದು ನೇಮಕಗೊಂಡಿದ್ದ ರುದ್ರತೇಜ್ ಸಿಂಗ್ ಅತಿಕಡಿಮೆ ಅವಧಿಯಲ್ಲಿ ಹಲವಾರು ಬದಲಾವಣೆ ತರುವ ಮೂಲಕ ಐಷಾರಾಮಿ ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ಕಾರಣರಾಗಿದ್ದರು. ಆದರೆ ಕಳೆದ ಒಂದು ತಿಂಗಳಿನಿಂದ ತೀವ್ರ ಆಘಾತಕ್ಕೆ ಒಳಾಗಿದ್ದ ರುದ್ರತೇಜ್ ಸಿಂಗ್ ಅವರು ಇಂದು ತೀವ್ರ ಹೃದಾಯಘಾತದಿಂದ ಸಾವನ್ನಪ್ಪಿದ್ದು, ರೂಢಿ ಅವರ ನಿಧನಕ್ಕೆ ಇಡೀ ಆಟೋ ಉದ್ಯಮ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕಿರಿಯ ವಯಸ್ಸಿನಲ್ಲೇ ಹಲವಾರು ಅತ್ಯುನ್ನತ ಜವಾಬ್ದಾರಿಯನ್ನು ವಹಿಸಿಕೊಂಡು ಉನ್ನತ ಸ್ಥಾನಕ್ಕೇರಿದ್ದ ರುದ್ರತೇಜ್ ಅವರು ಇತ್ತೀಚೆಗೆ ರಾಯಲ್ ಎನ್ಫೀಲ್ಡ್ ಗ್ಲೊಬ್ಲಲ್ ಬೈಕ್ ಮಾರಾಟ ವಿಭಾಗದ ಅಧ್ಯಕ್ಷ ಸ್ಥಾನದಿಂದ ಬಿಎಂಡಬ್ಲ್ಯು ಇಂಡಿಯಾ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಂಡಿದ್ದರು.
MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!
ಆಟೋ ಉದ್ಯಮದಲ್ಲಿ ರೂಢಿ ಎಂದೇ ಚಿರಪರಿಚಿತರಾಗಿರುವ ರುದ್ರತೇಜ್ ಅವರು ಆಟೋ ಉದ್ಯಮದ ಜೊತೆಗೆ ವಿವಿಧ ಕ್ಷೇತ್ರಗಳಲ್ಲೂ 25 ವರ್ಷಗಳ ನಾಯಕತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ್ದರು.
ಆಟೋ ಉದ್ಯಮಕ್ಕೂ ಬರುವ ಮುನ್ನ ಸುಮಾರು 16 ವರ್ಷಗಳ ಕಾಲ ಯೂನಿಲಿವರ್ ಸೇರಿದಂತೆ ಹಲವಾರು ಅಂತರಾಷ್ಟ್ರೀಯ ಕಂಪನಿಗಳಲ್ಲಿ ಅಧ್ಯಕ್ಷ ಸ್ಥಾನವಹಿಸಿಕೊಂಡಿದ್ದ ರುದ್ರತೇಜ್ ಅವರು ಟ್ರಯಂಫ್ ಮೋಟಾರ್ಸೈಕಲ್ ಮತ್ತು ರಾಯಲ್ ಎನ್ಫೀಲ್ದ್ ಬೈಕ್ ಮಾರಾಟ ವಿಭಾಗದಲ್ಲೂ ಭಾರೀ ಬದಲಾವಣೆಗೆ ಕಾರಣರಾಗಿದ್ದರು.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು
ತದನಂತರ ಇತ್ತೀಚೆಗೆ ಬಿಎಂಡಬ್ಲ್ಯು ಇಂಡಿಯಾ ವಿಭಾಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ರೂಢಿ, ಸಂಕಷ್ಟದ ಸಮಯದಲ್ಲೂ ಕೆಲವು ಆತಂರಿಕ ಬದಲಾವಣೆಗಳನ್ನು ತರುವ ಮೂಲಕ ಐಷಾರಾಮಿ ಕಾರು ಮಾರಾಟದಲ್ಲಿ ಎರಡನೇ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಸಾಕಷ್ಟು ಶ್ರಮವಹಿಸಿದ್ದರು.
ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿದ್ದ ರೂಢಿ ಅವರು ತದನಂತರ ಗಾಜಿಯಾಬಾದ್ನಲ್ಲಿ ಮಾರುಕಟ್ಟೆ ಮತ್ತು ಹಣಕಾಸು ವಿಭಾಗದಲ್ಲಿ ಎಂಬಿವಿ ಪದವಿ ಪಡೆದುಕೊಂಡಿದ್ದರು.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್
ಆದರೆ ಸಂಕಷ್ಟಕರ ಸಮಯದಲ್ಲಿ ರೂಢಿಯವರು ಸಾವಿನ ಸುದ್ದಿಯು ಬಿಎಂಡಬ್ಲ್ಯು ಇಂಡಿಯಾ ಕಂಪನಿಗೆ ಆಘಾತ ಉಂಟು ಮಾಡಿದ್ದು, ಹಣಕಾಸು ವಿಭಾಗದ ಮುಖ್ಯಸ್ಥ ಅರ್ಲಿಂಡೋ ಟಿಕ್ಸೆರ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.