Just In
- 2 min ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- 1 hr ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 1 hr ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 1 hr ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
Don't Miss!
- Movies "ಸದಾ ನನ್ನ ಹಿಂಭಾಗವನ್ನೇ ಸದಾ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಭೀತಿ- ಮತ್ತೆ ಹೆಚ್ಚಳವಾಗಲಿದೆಯೆಂತೆ ಹೊಸ ವಾಹನಗಳ ಖರೀದಿ ಪ್ರಮಾಣ..!?
ಕರೋನಾ ವೈರಸ್ನಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಲಾಗಿದೆ. ಈ ನಡುವೆ ಕರೋನಾ ವೈರಸ್ ಪರಿಣಾಮದಿಂದಾಗಿ ದೇಶದಲ್ಲಿ ಮತ್ತಷ್ಟು ವಾಹನಗಳು ಹೆಚ್ಚಾಗುವುದರೊಂದಿಗೆ ಭಾರೀ ಪ್ರಮಾಣದ ಟ್ರಾಫಿಕ್ ದಟ್ಟಣೆ ಉಂಟಾಗಬಹುದು ಎನ್ನಲಾಗುತ್ತಿದೆ.
ಮಾಲಿನ್ಯ ತಡೆಯುವ ಉದ್ದೇಶದಿಂದ ಸರ್ಕಾರಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಹೆಚ್ಚು ಒತ್ತು ನೀಡುತ್ತಿದ್ದರೂ ಕೂಡಾ ಟ್ರಾಫಿಕ್ ದಟ್ಟಣೆಯು ಉಂಟಾಗುತ್ತಿದ್ದು, ಇದೀಗ ಕರೋನಾ ವೈರಸ್ ಭಯದಿಂದ ಸಾರ್ವಜನಿಕರು ಮತ್ತೆ ಸ್ವಂತ ವಾಹನಗಳ ಬಳಕೆಯನ್ನು ಮುಂದುವರಿಸುವ ಸಾಧ್ಯತೆಗಳಿವೆ. ಜೊತೆಗೆ ಸ್ವಂತ ವಾಹನಗಳು ಇಲ್ಲದವರು ಕೂಡಾ ಹೊಸ ವಾಹನಗಳ ಖರೀದಿಗೆ ಆದ್ಯತೆ ನೀಡುವ ಸಾಧ್ಯತೆಗಳಿದ್ದು, ಸಾರ್ವಜನಿಕ ಸಾರಿಗೆ ಸೌಲಭ್ಯಗಳ ಬಳಕೆಗೆ ಹಿಂದೇಟು ಹಾಕಬಹುದಾಗಿದೆ.
ಸಾರ್ವಜನಿಕ ಸಾರಿಗೆ ಸೌಲಭ್ಯಗಳನ್ನು ಬಳಕೆ ಮಾಡಿದ್ದಲ್ಲಿ ವೈರಸ್ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿಗೆ ಎನ್ನುವ ಭಯ ಕಾಡತೊಡಗಿದ್ದು, ಸಾಮಾಜಿಕ ಅಂತರ ಕಾಯ್ದಕೊಳ್ಳುವುದಕ್ಕಾಗಿ ಸ್ವಂತ ವಾಹನಗಳ ಬಳಕೆ ಹೆಚ್ಚಾಗುವುದರಲ್ಲಿ ಎರಡು ಮಾತಿಲ್ಲ.
ಇದು ನೆರವಾಗಿ ಟ್ರಾಫಿಕ್ ದಟ್ಟಣೆ ಕಾರಣವಾಗುವುದಲ್ಲದೆ ಸಾರ್ವಜನಿಕ ಸಾರಿಗೆ ಸೌಲಭ್ಯಗಳಿಂದ ಸರ್ಕಾರಗಳಿಗೆ ನಷ್ಟ ಉಂಟಾಗುವ ಸಾಧ್ಯತೆಗಳಿದ್ದು, ಸದಾ ಜನದಟ್ಟಣೆಯಿಂದ ಕೂಡಿರುವ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲೂ ಕಡಿಮೆಯಾಗಬಹುದು ಎನ್ನಲಾಗುತ್ತಿದೆ.
ಇದಲ್ಲದೇ ಕರೋನಾ ವೈರಸ್ನಿಂದಾಗಿ ಇಡಿ ವಿಶ್ವವೇ ಆತಂಕದಲ್ಲಿದ್ದು, ವೈರಸ್ ಹರಡುವಿಕೆಯನ್ನು ತಡೆಯಲು ಎಲ್ಲಾ ರೀತಿಯ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೀಗಿರುವಾಗ ದೇಶದ ಆರ್ಥಿಕ ಪರಿಸ್ಥಿತಿಯು ದಿನದಿಂದ ದಿನಕ್ಕೆ ಶೋಚನೀಯವಾಗುತ್ತಿದ್ದು, ಆಟೋ ಉದ್ಯಮದವು ಕೂಡಾ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಮಾಲಿನ್ಯ ತಡೆಯುವ ಉದ್ದೇಶದಿಂದ ದೇಶದಲ್ಲಿ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಬಿಎಸ್-6(ಭಾರತ್ ಸ್ಟೆಜ್-6) ಜಾರಿಗೆ ತರಲಾಗುತ್ತಿದ್ದು, ಹೊಸ ಎಮಿಷನ್ ನಿಯಮ ಜಾರಿ ನಂತರ ಬಿಎಸ್-4 ವಾಹನ ಮಾರಾಟ ಮತ್ತು ನೋಂದಣಿಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುತ್ತಿದೆ.
ಆದರೆ ನಿಗದಿತ ಅವಧಿಯೊಳಗೆ ಬಿಎಸ್-4 ವಾಹನಗಳನ್ನು ಮಾರಾಟ ಮಾಡಬೇಕೆಂದರೆ ಕರೋನಾ ವೈರಸ್ ಹಿನ್ನಲೆ ಸಂಪೂರ್ಣವಾಗಿ ಲಾಕ್ ಡೌನ್ ಮಾಡಿರುವುದರಿಂದ ವಾಹನ ಉತ್ಪಾದನಾ ಕಂಪನಿಗಳು ಸಂಕಷ್ಟಕ್ಕೆ ಸಿಲುಕಿವೆ.
ಮಾಹಿತಿಗಳ ಪ್ರಕಾರ ವಿವಿಧ ಆಟೋ ಕಂಪನಿಗಳ ಬಳಿ ಸುಮಾರು 7 ಲಕ್ಷ ಬಿಎಸ್-4 ವಾಹನ ಸ್ಟಾಕ್ ಇದ್ದು, ಇದು ರೂ.6,400 ಕೋಟಿ ಮೌಲ್ಯವನ್ನು ಹೊಂದಿದೆ. ಇದರಿಂದ ಮಾರಾಟವಾಗದೆ ಉಳಿದಿರುವ ಬಿಎಸ್-4 ವಾಹನಗಳು ಇದೀಗ ಆರ್ಥಿಕ ಹೊರೆಯಾಗಿ ಪರಿಣಮಿಸಿವೆ.
ಹೀಗಾಗಿ ಬಿಎಸ್-4 ವಾಹನ ಮಾರಾಟವನ್ನು ಮಾಡಲೇಬೇಕಾದ ಅನಿವಾರ್ಯತೆಯಲ್ಲಿರುವ ಆಟೋ ಕಂಪನಿಗಳು ಕರೋನಾ ವೈರಸ್ ನೆಪವೊಡ್ಡಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟುವ ಸಾಧ್ಯತೆಗಳಿವೆ.
ಆದರೆ ಪರಿಸ್ಥಿತಿಗೆ ಅನುಗುಣವಾಗಿ ಹಲವಾರು ವಿನಾಯ್ತಿಗಳನ್ನು ನೀಡಿರುವ ಕೇಂದ್ರ ಸರ್ಕಾರವು ಬಿಎಸ್-4 ವಾಹನ ಮಾರಾಟಕ್ಕೆ ಮತ್ತಷ್ಟು ಅವಕಾಶ ನೀಡುವ ಸಾಧ್ಯತೆಗಳಿದ್ದು, ಮುಂಬರುವ ದಿನಗಳಲ್ಲಿ ಕೈಗೊಳ್ಳಲಿರುವ ಆರ್ಥಿಕ ನಿರ್ಧಾರಗಳ ಮೇಲೆ ಬಿಎಸ್-4 ವಾಹನಗಳ ಭವಿಷ್ಯ ನಿರ್ಧಾರವಾಗಲಿದೆ.