Just In
- 43 min ago ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- 1 hr ago Nissan Magnite: ನಿಸ್ಸಾನ್ ಮ್ಯಾಗ್ನೆಟ್ನ ಈ ಮಾದರಿಗಳನ್ನು ಹಿಂಪಡೆಯಲು ನಿರ್ಧಾರ.. ಕಾರಣವೇನು?
- 3 hrs ago Maruti Suzuki: ಮಾರುತಿ ಸುಜುಕಿಯ ಸುರಕ್ಷಿತ ಕಾರುಗಳಿವು.. 8 ಲಕ್ಷ ಆರಂಭಿಕ ಬೆಲೆ
- 3 hrs ago 11 ರೀತಿಯ ವಾಹನಗಳ ಲೈಸೆನ್ಸ್ ಹೊಂದಿರುವ ಅಜ್ಜಿ: ಇವರ ಜೀವನೋತ್ಸಾಹಕ್ಕೆ ನೆಟ್ಟಿಗರು ಫಿಧಾ
Don't Miss!
- News ಯುದ್ಧದ ಬೆಂಕಿಗೆ ಕರಗಿದ ಲಕ್ಷ, ಲಕ್ಷ ಕೋಟಿ ಸಂಪತ್ತು!
- Sports KKR vs RR IPL 2024: ಟೇಬಲ್ ಟಾಪರ್ ಸ್ಥಾನಕ್ಕಾಗಿ ಹಣಾಹಣಿ; ಟಾಸ್ ವರದಿ, ಆಡುವ 11ರ ಬಳಗ
- Lifestyle ಸೌದಿಯಲ್ಲಿ ಮಳೆ, ಪ್ರವಾಹ...ಮರುಭೂಮಿ ಮರೆಯಾಗಿ ನಳನಳಿಸುವ ಹಸಿರು...! ಇದು ಹೇಗೆ ಸಾಧ್ಯ ಗೊತ್ತಾ?
- Movies ಪ್ರಚಂಡ ಕುಳ್ಳ ದ್ವಾರಕೀಶ್ ಅಗಲಿಕೆಗೆ ರಜನಿಕಾಂತ್, ದರ್ಶನ್, ಸುದೀಪ್, ಶಿವಣ್ಣ ಸಂತಾಪ
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೌಕ್ ಡೌನ್ ಹಿನ್ನಲೆ: ವಾಹನ ಮಾಲೀಕರಿಗೆ ಮತ್ತಷ್ಟು ವಿನಾಯ್ತಿಗಳನ್ನು ನೀಡಿದ ಕೇಂದ್ರ ಸರ್ಕಾರ
ಕರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಹಲವಾರು ಕಠಿಣ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರವು ವಾಣಿಜ್ಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದು, ಆರ್ಥಿಕ ಸಂಕಷ್ಟದ ಪರಿಸ್ಥಿತಿಯಲ್ಲೂ ದೇಶದ ಜನತೆಗೆ ಹಲವಾರು ವಿನಾಯ್ತಿಗಳನ್ನು ನೀಡಿದೆ.
ಬ್ಯಾಂಕ್ಗಳ ಸಾಲ ಮರುಪಾವತಿಯಿಂದ ಹಿಡಿದು ಹಲವಾರು ವಿನಾಯ್ತಿ ಘೋಷಣೆ ಮಾಡಿರುವ ಕೇಂದ್ರ ಸರ್ಕಾರವು ಭಾರೀ ನಷ್ಟ ಅನುಭವಿಸುತ್ತಿರುವ ಆಟೋ ಉದ್ಯಮದ ಸುಧಾರಣೆಗೂ ಕೆಲವು ಮಹತ್ವದ ಕ್ರಮಗಳನ್ನು ಜಾರಿಗೆ ತಂದಿದೆ. ವಾಹನಗಳ ಸಾಲದ ಇಎಂಐ ಮರುಪಾವತಿ, ಬಿಎಸ್-4 ವಾಹನ ಮಾರಾಟ ಅವಧಿ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ಕ್ರಮಗಳನ್ನು ಪ್ರಕಟಿಸಿದ್ದು, ಇದೀಗ ವಾಹನ ವಿಮೆ ಅವಧಿಯನ್ನು ಸಹ ವಿಸ್ತರಿಸಿದೆ.
ಹೌದು, ಬಹುತೇಕ ವಾಹನ ಮಾಲೀಕರು ಮಾರ್ಚ್ ಅಂತ್ಯಕ್ಕೆ ಕೊನೆಗೂಳ್ಳುವಂತೆ ವಿಮೆ ಖರೀದಿ ಮಾಡಿರುತ್ತಾರೆ. ಆದ್ರೆ ತುರ್ತು ಪರಿಸ್ಥಿತಿಯ ನಡುವೆ ವಿಮೆ ಖರೀದಿ ಪ್ರಕ್ರಿಯೆಯು ಕುಂಠಿತವಾಗಿದ್ದು, ಕೇಂದ್ರ ಸರ್ಕಾರವು ಈ ಹಿನ್ನಲೆಯಲ್ಲಿ ಕೆಲವು ವಿನಾಯ್ತಿಗಳನ್ನು ನೀಡಿದೆ.
ಮಾರ್ಚ್ ಅಂತ್ಯಕ್ಕೆ ಅಥವಾ ಎಪ್ರಿಲ್ ಅವಧಿಯಲ್ಲಿ ಮುಕ್ತಾಯುಗೊಳ್ಳುವ ವಿಮಾ ಪಾಲಿಸಿಯ ಅವಧಿಯನ್ನು ಇದೇ ತಿಂಗಳ 21ರ ತನಕ ವಿಸ್ತರಣೆ ಮಾಡಲಾಗಿದ್ದು, ಈ ಅವಧಿಯಲ್ಲಿ ವಿಮೆ ಇಲ್ಲದೇ ವಾಹನಗಳನ್ನು ಹೊರತೆಗೆದರೂ ಯಾವುದೇ ಭಯಪಡಬೇಕಿಲ್ಲ.
ಆದರೆ ವಾಹನ ವಿಮೆ ಖರೀದಿಗಾಗಿ ಲಾಕ್ ಡೌನ್ ಉಲ್ಲಂಘನೆ ಮಾಡದಿರುವಂತೆ ಎಚ್ಚರಿಸಿರುವ ಕೇಂದ್ರ ಸರ್ಕಾರವು ಅನಾವಶ್ಯಕವಾಗಿ ಮನೆಹೊರಹೊಗದಂತೆ ಮನವಿ ಮಾಡಿದ್ದು, ಅವಧಿ ಮುಗಿದರೂ ವಾಹನ ವಿಮೆಯನ್ನು ತಡವಾಗಿ ಪಡೆದುಕೊಳ್ಳಲು ಈ ಸಹಕಾರಿಯಾಗಿದೆ. ಇದಲ್ಲದೇ ಫೆಬ್ರವರಿ 1ಕ್ಕೆ ರಿಜಿಸ್ಟ್ರೇಶನ್ ಹಾಗೂ ಲೈಸೆನ್ಸ್ ಅವಧಿ ಮುಗಿದಿರುವ ಎಲ್ಲಾ ವಾಹನಗಳಿಗೂ ಜೂನ್ 30ರವರೆಗೆ ವ್ಯಾಲಿಡಿಟಿ ವಿಸ್ತರಿಸಲಾಗಿದ್ದು, ತುರ್ತು ಸೇವೆಯ ವಾಹನಗಳು, ಟ್ರಕ್ಗಳು ಹಾಗೂ ಸರಕುಗಳನ್ನು ಸಾಗಿಸುವ ವಾಹನಗಳಿಗೆ ಯಾವುದೇ ತೊಂದರೆ ಎದುರಿಸದೆ ಸಂಚರಿಸುವಂತಾಗಲಿ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರವು ಈ ಕ್ರಮ ಕೈಗೊಂಡಿದೆ.
ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಬರುವ ಫಿಟ್ನೆಸ್ ಸರ್ಟಿಫಿಕೇಟ್, ಪರ್ಮಿಟ್, ಡ್ರೈವಿಂಗ್ ಲೈಸೆನ್ಸ್, ರಿಜಿಸ್ಟ್ರೇಶನ್ ಹಾಗೂ ಇತರ ದಾಖಲೆಗಳು ಇವುಗಳಲ್ಲಿ ಸೇರಿವೆ. ಈ ಹೊಸ ನಿಯಮವನ್ನು ತಕ್ಷಣದಿಂದ ಜಾರಿಗೊಳಿಸಬೇಕೆಂದು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದೆ.
ಇದರೊಂದಿಗೆ ಭಾರತದಲ್ಲಿ ಜಾರಿಗೆ ತರಲಾಗಿರುವ ಬಿಎಸ್-6 ವಾಹನಗಳ ಮಾರಾಟ ಕಡ್ಡಾಯದಿಂದ ಬಿಎಸ್-4 ವಾಹನಗಳು ಬ್ಯಾನ್ ಆಗಿದ್ದರೂ ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ಇನ್ನು ಕೂಡಾ ಬಿಎಸ್-4 ವಾಹನಗಳ ಮಾರಾಟವನ್ನು ಮುಂದಿನ ಕೆಲ ದಿನಗಳ ಕಾಲ ಮುಂದುವರಿಸಲಾಗಿದೆ.
2020ರ ಏಪ್ರಿಲ್ 1ರಿಂದಲೇ ಬಿಎಸ್-4 ವಾಹನಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಯನ್ನು ಬ್ಯಾನ್ ಮಾಡಿದ್ದ ಸುಪ್ರೀಂಕೋರ್ಟ್ ಕೊನೆಯ ಕ್ಷಣದಲ್ಲಿ ಬ್ಯಾನ್ ಅಸ್ತ್ರವನ್ನು ಸಡಿಲಿಸಿದ್ದು, ಕರೋನಾ ವೈರಸ್ ತಡೆ ಉದ್ದೇಶದಿಂದ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ಡೌನ್ ಹಿನ್ನಲೆಯಲ್ಲಿ ಆಟೋ ಕಂಪನಿಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದೆ.
ಬಿಎಸ್-6 ಜಾರಿಗೆ ಮುನ್ನ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಹೇರಲಾಗಿತ್ತು. ಕೊನೆಯ ಗಳಿಗೆಯಲ್ಲಿ ಮಾರಾಟವಾಗಬೇಕಿದ್ದ ಲಕ್ಷಾಂತರ ಬಿಎಸ್-4 ವಾಹನಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ.
ಇದರಿಂದ ಆಟೋ ಕಂಪನಿಗಳಿಗೆ ವಿನಾಯ್ತಿಯೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಮಾರಾಟಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ಬ್ಯಾನ್ ನಷ್ಟ ತಡೆಗೆ ಸಹಕರಿಸಿದೆ.
ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿನಾಯ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇಂಡಿಯನ್ ಆಟೋ ಡೀಲರ್ಸ್ ಅಸೋಶಿಯೇಷನ್ ಸಂಸ್ಥೆಗೆ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಮಾರಾಟ ಅವಧಿಯನ್ನು ವಿಸ್ತರಣೆ ಮಾಡಿದೆ.
ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ.