Just In
- 3 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 6 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 6 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 8 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Movies Bhagyalakshmi: ಕೆಲಸ ಹುಡುಕುವುದೇ ಭಾಗ್ಯಾಗೆ ಸವಾಲು; ಶ್ರೇಷ್ಠಾಳಿಂದ ತಾಂಡವ್ಗಿಲ್ಲ ಉಳಿಗಾಲ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈತರ ಪ್ರತಿಭಟನೆಯಿಂದಾಗಿ ಅಸ್ತವ್ಯಸ್ತಗೊಂಡ ಸಂಚಾರ ವ್ಯವಸ್ಥೆ
ದೆಹಲಿ - ನೋಯ್ಡಾ ಗಡಿಯಲ್ಲಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ರಾಷ್ಟ್ರೀಯ ಹೆದ್ದಾರಿ 44 ಅನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. ಇದರಿಂದಾಗಿ ದೆಹಲಿಯಲ್ಲಿ ವ್ಯಾಪಕ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ 44ರ ಮೂಲಕ ದೆಹಲಿಯ ಜೊತೆಗೆ ಸಂಪರ್ಕ ಸಾಧಿಸುತ್ತಿದ್ದ ಹರಿಯಾಣ ಹಾಗೂ ಉತ್ತರ ಪ್ರದೇಶಗಳ ಸಂಪರ್ಕವು ಸ್ಥಗಿತಗೊಂಡಿದೆ. ದೆಹಲಿ ಸಂಚಾರ ಪೊಲೀಸರು ವಾಹನ ಸವಾರರಿಗೆ ಟ್ವಿಟರ್ ಮೂಲಕ ಮಾಹಿತಿ ನೀಡುತ್ತಿದ್ದಾರೆ. ಸಿಂಧು, ಲ್ಯಾಂಪೂರ್, ಸಫಿಯಾಬಾದ್, ಪಿಯಾವೊ ಮಣಿಯಾರಿ ಹಾಗೂ ಸಬೋಲಿ ಗಡಿಗಳನ್ನು ಮುಚ್ಚಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 44 ಅನ್ನು ಎರಡೂ ಕಡೆಯಿಂದ ಮುಚ್ಚಲಾಗಿರುವ ಕಾರಣಕ್ಕೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸಂಚಾರಿ ಪೊಲೀಸರು ಸೂಚಿಸಿದ್ದಾರೆ. ದೆಹಲಿಯಿಂದ ಭೋಪ್ರಾ, ಅಪ್ಸರಾ ಬಾರ್ಡರ್ ಹಾಗೂ ಪೆರಿಫೆರಲ್ ಎಕ್ಸ್ಪ್ರೆಸ್ವೇಗಳಿಗೆ ತೆರಳಲು ರಾಷ್ಟ್ರೀಯ ಹೆದ್ದಾರಿ 8 ಅನ್ನು ಬಳಸುವಂತೆ ಪೊಲೀಸರು ಟ್ವೀಟ್ ಮಾಡಿದ್ದಾರೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಮುಕರ್ಬಾ ಹಾಗೂ ಜಿಟಿಕೆ ರಸ್ತೆಯಲ್ಲಿನ ಸಂಚಾರವನ್ನು ತಿರುಗಿಸಲಾಗಿದ್ದು, ಮುಕರ್ಬಾ, ಜಿಟಿಕೆ, ಔಟರ್ ರಿಂಗ್ ರೋಡ್ ಹಾಗೂ ಎನ್ಎಚ್ 44ರಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಟಿಕ್ರಿ ಹಾಗೂ ಜರೋಡಾ ಗಡಿಯನ್ನು ಮುಚ್ಚಲಾಗಿದ್ದು, ಬದುಸರಾಯ್ ಗಡಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.ಜಟಿಕರಾ ಮೂಲಕ ದ್ವಿಚಕ್ರ ವಾಹನಗಳು ಮಾತ್ರ ಸಂಚರಿಸಬಹುದು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ಹರಿಯಾಣದ ಕಡೆಗೆ ಸಾಗುವವರು ಧನ್ಸಾ, ದೌರಾಲಾ, ಕಪಶೇರಾ, ರಾಜೋಖರಿ ರಾಷ್ಟ್ರೀಯ ಹೆದ್ದಾರಿ 8, ಬಿಜ್ವಾಸನ್ / ಬಜ್ಘೇರಾ, ಪಾಲಂ ವಿಹಾರ್ ಹಾಗೂ ದುಂಡಹೇರಾ ಗಡಿಯ ಮೂಲಕ ಸಾಗಬಹುದು.
ಚಿಲ್ಲಾ ಬಾರ್ಡರ್ ಬಳಿಯ ನೋಯ್ಡಾ ಲಿಂಕ್ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಲ್ಲಿಸಲಾಗಿದೆ. ಗೌತಮ್ ಬುದ್ಧ ನಗರದ ಗೇಟ್ ಬಳಿ ರೈತರ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಜನರು ನೋಯ್ಡಾ ಲಿಂಕ್ ರಸ್ತೆಯನ್ನು ತಪ್ಪಿಸಿ ಡಿಎನ್ಡಿ ಮೂಲಕ ದೆಹಲಿಗೆ ಬರಲು ಸೂಚಿಸಲಾಗಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಪ್ರತಿಭಟನೆಯಿಂದಾಗಿ ಗಾಜಿಪುರ ಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -24ರಲ್ಲಿ ಸಂಚಾರ ಸ್ಥಗಿತಗೊಂಡಿರುವುದರಿಂದ, ಗಾಜಿಯಾಬಾದ್ನಿಂದ ದೆಹಲಿಗೆ ಬರುವ ಪ್ರಯಾಣಿಕರಿಗೆ ಅಪ್ಸರಾ ಅಥವಾ ಭೋಪ್ರಾ ಗಡಿ ಅಥವಾ ದೆಹಲಿ-ನೋಯ್ಡಾ ಡೈರೆಕ್ಟ್ ಎಕ್ಸ್ಪ್ರೆಸ್ವೇ ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ.