Just In
- 53 min ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 1 hr ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 2 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 4 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- News ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಉಳುವಿಗಾಗಿ ಸೆಣಸಾಟ: ಕಾಂಗ್ರೆಸ್ ಅವಕಾಶಕ್ಕಾಗಿ ಹೋರಾಟ
- Movies ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏರ್ ಟಿಕೆಟ್ ಹೊಂದಿದವರಿಗೆ ಬೇಕಿಲ್ಲ ಅಂತರ್ರಾಜ್ಯ ಪಾಸ್
ಕರೋನಾ ವೈರಸ್ ಸೋಂಕು ಹರಡದಂತೆ ತಡೆಯಲು ಜಾರಿಗೊಳಿಸಿರುವ ನಾಲ್ಕನೇ ಹಂತದ ಲಾಕ್ಡೌನ್ ಇನ್ನೂ ಮುಂದುವರೆದಿದೆ. ಈ ಲಾಕ್ಡೌನ್ನಲ್ಲಿ ಹಲವು ರೀತಿಯ ವಿನಾಯಿತಿಗಳನ್ನು ನೀಡಲಾಗಿದ್ದರೂ, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಚಲಿಸಲು ಪಾಸ್ ಅಗತ್ಯವಿದೆ. ಈ ಪಾಸ್ ಇಲ್ಲದೆ, ಮತ್ತೊಂದು ರಾಜ್ಯದ ಗಡಿಯನ್ನು ದಾಟುವಂತಿಲ್ಲ.
ಇದೇ ನಿಯಮವನ್ನು ದೆಹಲಿಯಲ್ಲಿಯೂ ಜಾರಿಗೆ ತರಲಾಗಿದೆ. ಗ್ರೇಟರ್ ನೋಯ್ಡಾದಿಂದ ಹೆಚ್ಚಿನ ಸಂಖ್ಯೆಯ ಜನರು ದೆಹಲಿಯನ್ನು ಪ್ರವೇಶಿಸುತ್ತಾರೆ. ಈ ರೀತಿ ಪ್ರವೇಶಿಸುವವರನ್ನು ದೆಹಲಿಯ ಗಡಿಯಲ್ಲಿ ತಡೆದು ನಿಲ್ಲಿಸಲಾಗುತ್ತಿದೆ. ಈಗ ದೆಹಲಿ ಪೊಲೀಸರು ವಿಮಾನಗಳ ಟಿಕೆಟ್ ಹೊಂದಿರುವವರಿಗೆ ಪಾಸ್ ಅಗತ್ಯವಿಲ್ಲವೆಂದು ತಿಳಿಸಿದ್ದಾರೆ.
ದೆಹಲಿಯ ಗೌತಮ್ ಬುದ್ಧ ನಗರ ಪೊಲೀಸರು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ದೇಶಿಯ ವಿಮಾನ ಹಾಗೂ ರೈಲು ಸೇವೆಗಳನ್ನು ಪುನರಾರಂಭಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಸದ್ಯಕ್ಕೆ ದೆಹಲಿ-ನೋಯ್ಡಾ ಗಡಿಯನ್ನು ಬಂದ್ ಮಾಡಲಾಗಿದೆ. ಅಗತ್ಯ ಸೇವೆಗಳನ್ನು ಒದಗಿಸುತ್ತಿರುವವರಿಗೆ ಹಾಗೂ ಸ್ಥಳೀಯ ಆಡಳಿತವು ನೀಡುವ ಪಾಸ್ ಹೊಂದಿರುವವರಿಗೆ ಮಾತ್ರ ಈ ಗಡಿಯನ್ನು ದಾಟಲು ಅನುಮತಿ ನೀಡಲಾಗುತ್ತದೆ.
ಮೇ 25ರಿಂದ ಕೆಲವು ನಗರಗಳ ಮಧ್ಯೆ ದೇಶಿಯ ವಿಮಾನಗಳನ್ನು ಪುನರಾರಂಭಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ರೈಲ್ವೆ ಇಲಾಖೆಯು ಜೂನ್ 1ರಿಂದ ರೈಲು ಸಂಚಾರವನ್ನು ಆರಂಭಿಸಲಿದ್ದು, ಆನ್ಲೈನ್ನಲ್ಲಿ ಟಿಕೆಟ್ ಬುಕ್ಕಿಂಗ್ಗಳನ್ನು ಆರಂಭಿಸಲಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ಬಗ್ಗೆ ಮಾತನಾಡಿದ ದೆಹಲಿಯ ಕಾನೂನು ಹಾಗೂ ಸುವ್ಯವಸ್ಥೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶುತೋಷ್ ದ್ವಿವೇದಿರವರು, ವಿಮಾನ ಟಿಕೆಟ್ ಅಥವಾ ಟಿಕೆಟ್ಗಳನ್ನು ಬುಕ್ಕಿಂಗ್ ಮಾಡಿರುವ ಜನರು ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಹೋಗಲು ಅನುಮತಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಟಿಕೆಟ್ಗಳನ್ನು ಹೊಂದಿರುವವರಿಗೆ ದೆಹಲಿ-ನೋಯ್ಡಾ ಗಡಿ ದಾಟಲು ಯಾವುದೇ ರೀತಿಯ ಪಾಸ್ ಅಗತ್ಯವಿಲ್ಲವೆಂದು ಅವರು ಹೇಳಿದರು. ಕರೋನಾ ವೈರಸ್ ಹರಡದಂತೆ ತಡೆಯಲು ಅಗತ್ಯ ಸೇವೆಗಳನ್ನು ನೀಡುವವರನ್ನು ಹೊರತುಪಡಿಸಿ ಉಳಿದವರಿಗೆ ನೋಯ್ಡಾ-ದೆಹಲಿ ಗಡಿಯನ್ನು ಬಂದ್ ಮಾಡಲಾಗಿದೆ.