Just In
- 1 hr ago Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- 1 hr ago ಯಾವುದೇ ಬೆಟ್ಟ, ಗುಡ್ಡಗಳು ಇದರ ಮುಂದೆ ಲೆಕ್ಕಕ್ಕಿಲ್ಲ: ಫೋರ್ಸ್ ಗೂರ್ಖಾ 5-ಡೋರ್ ಬಿಡುಗಡೆಗೆ ಸಜ್ಜು
- 1 hr ago 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- 2 hrs ago ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ
Don't Miss!
- Movies ನಟ ದರ್ಶನ್ ಚುನಾವಣೆ ಪ್ರಚಾರದ ಬಗ್ಗೆ ಫ್ಯಾನ್ಸ್ ಬೇಸರ!: ಕಾರಣ ಬೇರೇನೆ ಇದೆ!
- News Lok Sabha Election 2024: ಬೆಂಗಳೂರಿನಲ್ಲಿ ಈ ದಿನಗಳಂದು ಮದ್ಯ ಮಾರಾಟ ಸಂಪೂರ್ಣ ನಿಷೇಧ-ಯಾವ್ಯಾವಾಗ ಹಾಗೂ ಕಾರಣವೇನು?
- Technology ಸದ್ಯ ನೀವೇನಾದರೂ ಹೊಸ ರೆಡ್ಮಿ ಫೋನ್ ಖರೀದಿಸ್ತೀರಾ?..ಹಾಗಿದ್ರೆ, ಇಲ್ಲಿ ಗಮನಿಸಿ!
- Lifestyle ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- Finance Binance: ಫೈನ್ ಕಟ್ಟಿ ಭಾರತಕ್ಕೆ ಮರಳಿ ಬರಲಿದೆ ಕ್ರಿಫ್ಟೋಕರೆನ್ಸಿ ವಿನಿಮಯ ಕೇಂದ್ರ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏರ್ ಟಿಕೆಟ್ ಹೊಂದಿದವರಿಗೆ ಬೇಕಿಲ್ಲ ಅಂತರ್ರಾಜ್ಯ ಪಾಸ್
ಕರೋನಾ ವೈರಸ್ ಸೋಂಕು ಹರಡದಂತೆ ತಡೆಯಲು ಜಾರಿಗೊಳಿಸಿರುವ ನಾಲ್ಕನೇ ಹಂತದ ಲಾಕ್ಡೌನ್ ಇನ್ನೂ ಮುಂದುವರೆದಿದೆ. ಈ ಲಾಕ್ಡೌನ್ನಲ್ಲಿ ಹಲವು ರೀತಿಯ ವಿನಾಯಿತಿಗಳನ್ನು ನೀಡಲಾಗಿದ್ದರೂ, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಚಲಿಸಲು ಪಾಸ್ ಅಗತ್ಯವಿದೆ. ಈ ಪಾಸ್ ಇಲ್ಲದೆ, ಮತ್ತೊಂದು ರಾಜ್ಯದ ಗಡಿಯನ್ನು ದಾಟುವಂತಿಲ್ಲ.
ಇದೇ ನಿಯಮವನ್ನು ದೆಹಲಿಯಲ್ಲಿಯೂ ಜಾರಿಗೆ ತರಲಾಗಿದೆ. ಗ್ರೇಟರ್ ನೋಯ್ಡಾದಿಂದ ಹೆಚ್ಚಿನ ಸಂಖ್ಯೆಯ ಜನರು ದೆಹಲಿಯನ್ನು ಪ್ರವೇಶಿಸುತ್ತಾರೆ. ಈ ರೀತಿ ಪ್ರವೇಶಿಸುವವರನ್ನು ದೆಹಲಿಯ ಗಡಿಯಲ್ಲಿ ತಡೆದು ನಿಲ್ಲಿಸಲಾಗುತ್ತಿದೆ. ಈಗ ದೆಹಲಿ ಪೊಲೀಸರು ವಿಮಾನಗಳ ಟಿಕೆಟ್ ಹೊಂದಿರುವವರಿಗೆ ಪಾಸ್ ಅಗತ್ಯವಿಲ್ಲವೆಂದು ತಿಳಿಸಿದ್ದಾರೆ.
ದೆಹಲಿಯ ಗೌತಮ್ ಬುದ್ಧ ನಗರ ಪೊಲೀಸರು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ದೇಶಿಯ ವಿಮಾನ ಹಾಗೂ ರೈಲು ಸೇವೆಗಳನ್ನು ಪುನರಾರಂಭಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಸದ್ಯಕ್ಕೆ ದೆಹಲಿ-ನೋಯ್ಡಾ ಗಡಿಯನ್ನು ಬಂದ್ ಮಾಡಲಾಗಿದೆ. ಅಗತ್ಯ ಸೇವೆಗಳನ್ನು ಒದಗಿಸುತ್ತಿರುವವರಿಗೆ ಹಾಗೂ ಸ್ಥಳೀಯ ಆಡಳಿತವು ನೀಡುವ ಪಾಸ್ ಹೊಂದಿರುವವರಿಗೆ ಮಾತ್ರ ಈ ಗಡಿಯನ್ನು ದಾಟಲು ಅನುಮತಿ ನೀಡಲಾಗುತ್ತದೆ.
ಮೇ 25ರಿಂದ ಕೆಲವು ನಗರಗಳ ಮಧ್ಯೆ ದೇಶಿಯ ವಿಮಾನಗಳನ್ನು ಪುನರಾರಂಭಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ರೈಲ್ವೆ ಇಲಾಖೆಯು ಜೂನ್ 1ರಿಂದ ರೈಲು ಸಂಚಾರವನ್ನು ಆರಂಭಿಸಲಿದ್ದು, ಆನ್ಲೈನ್ನಲ್ಲಿ ಟಿಕೆಟ್ ಬುಕ್ಕಿಂಗ್ಗಳನ್ನು ಆರಂಭಿಸಲಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ಬಗ್ಗೆ ಮಾತನಾಡಿದ ದೆಹಲಿಯ ಕಾನೂನು ಹಾಗೂ ಸುವ್ಯವಸ್ಥೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶುತೋಷ್ ದ್ವಿವೇದಿರವರು, ವಿಮಾನ ಟಿಕೆಟ್ ಅಥವಾ ಟಿಕೆಟ್ಗಳನ್ನು ಬುಕ್ಕಿಂಗ್ ಮಾಡಿರುವ ಜನರು ವಿಮಾನ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಕ್ಕೆ ಹೋಗಲು ಅನುಮತಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಟಿಕೆಟ್ಗಳನ್ನು ಹೊಂದಿರುವವರಿಗೆ ದೆಹಲಿ-ನೋಯ್ಡಾ ಗಡಿ ದಾಟಲು ಯಾವುದೇ ರೀತಿಯ ಪಾಸ್ ಅಗತ್ಯವಿಲ್ಲವೆಂದು ಅವರು ಹೇಳಿದರು. ಕರೋನಾ ವೈರಸ್ ಹರಡದಂತೆ ತಡೆಯಲು ಅಗತ್ಯ ಸೇವೆಗಳನ್ನು ನೀಡುವವರನ್ನು ಹೊರತುಪಡಿಸಿ ಉಳಿದವರಿಗೆ ನೋಯ್ಡಾ-ದೆಹಲಿ ಗಡಿಯನ್ನು ಬಂದ್ ಮಾಡಲಾಗಿದೆ.