50%ನಷ್ಟು ಟೋಲ್ ಶುಲ್ಕವನ್ನು ಮಾತ್ರ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದ ಹೈಕೋರ್ಟ್

ಚೆನ್ನೈನಿಂದ ಬೆಂಗಳೂರನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಧುರಾವೋಯಲ್ ವಲಾಜಪೇಟೆವರೆಗಿನ ಮಾರ್ಗವು ಹಲವಾರು ವರ್ಷಗಳಿಂದ ಸರಿಯಾದ ನಿರ್ವಹಣೆ ಇಲ್ಲದೆ ಸೊರಗುತ್ತಿದೆ. ಈ ಮಾರ್ಗದಲ್ಲಿ ರಸ್ತೆ ಗುಂಡಿಗಳಿರುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ.

50%ನಷ್ಟು ಟೋಲ್ ಶುಲ್ಕವನ್ನು ಮಾತ್ರ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದ ಹೈಕೋರ್ಟ್

ಈ ಮಾರ್ಗದಲ್ಲಿ ಹಲವಾರು ಪ್ರಮುಖ ಕಾರ್ಖಾನೆಗಳಿವೆ. ಜೊತೆಗೆ ಈ ಮಾರ್ಗವು ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತದೆ. ಆದರೂ ಈ ರಸ್ತೆಯನ್ನು ಸರಿಯಾಗಿ ನಿರ್ವಹಿಸಿಲ್ಲ. ಈ ಬಗ್ಗೆ ಹಲವು ಬಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ವಾಹನ ಚಾಲಕರು ದೂರಿದ್ದಾರೆ.

50%ನಷ್ಟು ಟೋಲ್ ಶುಲ್ಕವನ್ನು ಮಾತ್ರ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದ ಹೈಕೋರ್ಟ್

ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಈ ರಸ್ತೆಯು ಮತ್ತಷ್ಟು ಹದಗೆಟ್ಟಿದೆ. ಮಧುರಾವೋಯಲ್ - ವಾಲಾಜಪೇಟೆಯವರೆಗಿನ ಮಾರ್ಗವು ಹದಗೆಟ್ಟ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿ ಕೊಂಡಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

50%ನಷ್ಟು ಟೋಲ್ ಶುಲ್ಕವನ್ನು ಮಾತ್ರ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದ ಹೈಕೋರ್ಟ್

ಈ ಪ್ರಕರಣವು ನ್ಯಾಯಮೂರ್ತಿಗಳಾದ ಸತ್ಯನಾರಾಯಣನ್ ಹಾಗೂ ಹೇಮಲತಾ ಅವರಿದ್ದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ವಿಚಾರಣೆಯ ಸಂದರ್ಭದಲ್ಲಿ ಹದಗೆಟ್ಟಿರುವ ಮಧುರಾವೋಯಲ್ - ವಲಾಜಪೇಟೆ ರಸ್ತೆಯ ಫೋಟೋಗಳನ್ನು ನ್ಯಾಯಾಧೀಶರ ಮುಂದೆ ಸಲ್ಲಿಸಲಾಯಿತು.

50%ನಷ್ಟು ಟೋಲ್ ಶುಲ್ಕವನ್ನು ಮಾತ್ರ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದ ಹೈಕೋರ್ಟ್

ಈ ಮಾರ್ಗದ ಹಲವು ಭಾಗಗಳಲ್ಲಿ ರಸ್ತೆ ದೀಪಗಳು ಇಲ್ಲದಿರುವ ಬಗ್ಗೆ ಹಾಗೂ ರಸ್ತೆಯ ಮಧ್ಯದಲ್ಲಿ ಸಸ್ಯಗಳು ಇಲ್ಲದಿರುವ ಬಗ್ಗೆ ನ್ಯಾಯಾಧೀಶರಿಗೆ ದೂರು ನೀಡಲಾಯಿತು. ನ್ಯಾಯಾಧೀಶರು ರಾಷ್ಟ್ರೀಯ ಹೆದ್ದಾರಿಯ ಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

50%ನಷ್ಟು ಟೋಲ್ ಶುಲ್ಕವನ್ನು ಮಾತ್ರ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದ ಹೈಕೋರ್ಟ್

ರಸ್ತೆಯನ್ನು ನಿರ್ವಹಿಸದೇ ಇರುವ ಬಗ್ಗೆ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಪ್ರಶ್ನಿಸಿದರು. ಮುಂದಿನ 10 ದಿನಗಳಲ್ಲಿ ಮಧುರಾವೋಯಲ್ -ವಲಾಜಾಪೇಟೆಯ ರಸ್ತೆಯನ್ನು ಸರಿಪಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನ್ಯಾಯಪೀಠಕ್ಕೆ ತಿಳಿಸಿದೆ.

50%ನಷ್ಟು ಟೋಲ್ ಶುಲ್ಕವನ್ನು ಮಾತ್ರ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದ ಹೈಕೋರ್ಟ್

ಈ ಕಾರಣಕ್ಕೆ ಮಧುರಾವೋಯಲ್ ವಲಾಜಾಪೇಟೆಯ ನಡುವಿನ ಎರಡು ಟೋಲ್ ಪ್ಲಾಜಾಗಳಲ್ಲಿ, ಮುಂದಿನ ಎರಡು ವಾರಗಳವರೆಗೆ ನಿಗದಿಪಡಿಸಿದ ಟೋಲ್‌ಗಿಂತ ಶೇಕಡಾ 50 ರಷ್ಟು ಶುಲ್ಕವನ್ನು ಮಾತ್ರ ವಾಹನ ಸವಾರಿರಿಂದ ಪಡೆಯುವಂತೆ ಹೈಕೋರ್ಟ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

50%ನಷ್ಟು ಟೋಲ್ ಶುಲ್ಕವನ್ನು ಮಾತ್ರ ಪಡೆಯುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಆದೇಶ ನೀಡಿದ ಹೈಕೋರ್ಟ್

ಚೆನ್ನೈ ಹಾಗೂ ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ಸುವರ್ಣ ಚತುರ್ಭುಜ ಯೋಜನೆಯಡಿ ನಿರ್ಮಿಸಲಾಗಿದೆ. ಈ ಯೋಜನೆಯಡಿ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿಗಳು ದೆಹಲಿ, ಕೋಲ್ಕತಾ, ಚೆನ್ನೈ ಹಾಗೂ ಮುಂಬೈ ನಗರಗಳನ್ನು ಸಂಪರ್ಕಿಸುತ್ತವೆ.

Most Read Articles

Kannada
English summary
High court directs NHAI to collect only 50 percent toll fee between Maduravoyal Walajapet Toll. Read in Kannada.
Story first published: Friday, December 11, 2020, 14:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X