Just In
- 11 hrs ago
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- 11 hrs ago
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಫೋರ್ಸ್ ನ್ಯೂ ಜನರೇಷನ್ ಗೂರ್ಖಾ
- 11 hrs ago
ಸೀಮನ್ಸ್ ಕಂಪನಿಯ ಜೊತೆಗೂಡಿ ಆಧುನಿಕ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಅಭಿವೃದ್ದಿಪಡಿಸಲಿದೆ ಓಲಾ
- 11 hrs ago
ಹೊಸ ವಿನ್ಯಾಸದ ಡ್ಯುಯಲ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಒಕಿನಾವ
Don't Miss!
- News
ಬೆಂಗಳೂರು: 20 ವಾರ್ಡ್ಗಳಲ್ಲಿ 104 ಬೋರ್ವೆಲ್ ಕೊರೆಯಲಿದೆ ಬಿಬಿಎಂಪಿ
- Movies
ಸ್ಯಾಂಡಲ್ ವುಡ್ ಸುಂದರಿಯರು; ಅಪರೂಪದ ಫೋಟೋ ಹಂಚಿಕೊಂಡ ಮಾಲಾಶ್ರೀ, ಶ್ರುತಿ
- Lifestyle
ಶುಕ್ರವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್
- Sports
ಐಎಸ್ಎಲ್: ಈಸ್ಟ್ ಬೆಂಗಾಲ್ ಅಜೇಯ ನಡೆಗೆ ಬೆಸ್ಟ್ ಮುಂಬೈ ಸವಾಲು
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಸ್ ಪ್ರಯಾಣ ದರವನ್ನು ನಿಗದಿಪಡಿಸಲಿದೆ ಹೊಸ ಸಾಫ್ಟ್ವೇರ್
ಡೀಸೆಲ್ ಬೆಲೆ ಏರಿಳಿತಗಳಿಗೆ ಅನುಗುಣವಾಗಿ ಬಸ್ ಶುಲ್ಕವನ್ನು ನಿಗದಿಪಡಿಸುವ ಸಾಫ್ಟ್ವೇರ್ ಅನ್ನು ಸಿದ್ಧಪಡಿಸಲಾಗುತ್ತಿದೆ. ಹಿಮಾಚಲ ಪ್ರದೇಶ ಸರ್ಕಾರವು ಈ ಸಾಫ್ಟ್ವೇರ್ ಅಭಿವೃದ್ಧಿಪಡಿಸಲು ಸಾಫ್ಟ್ವೇರ್ ಕಂಪನಿಯೊಂದಕ್ಕೆ ಸೂಚನೆ ನೀಡಿದೆ.

ಸಾಫ್ಟ್ವೇರ್ ಸಿದ್ಧವಾದ ನಂತರ ಅದನ್ನು ಬಳಸಲಾಗುತ್ತದೆ. ಇತ್ತೀಚೆಗಷ್ಟೇ ಹಿಮಾಚಲ ಪ್ರದೇಶ ಸರ್ಕಾರವು ತನ್ನ ಸಾರ್ವಜನಿಕ ಸಾರಿಗೆ ಬಸ್ ದರವನ್ನು 25%ನಷ್ಟು ಹೆಚ್ಚಿಸಿದೆ. ಸಾರಿಗೆ ಇಲಾಖೆಯ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ದರವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದು ಅಲ್ಲಿನ ಸಾರಿಗೆ ಸಚಿವರು ಹೇಳಿದ್ದಾರೆ. ಸಾರಿಗೆ ಇಲಾಖೆಯ ಸ್ಥಿತಿ ಹದಗೆಟ್ಟಿದ್ದು ಬೆಲೆ ಏರಿಕೆ ಮೂಲಕ ಅದನ್ನು ಸುಧಾರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

2012-17ರ ನಡುವೆ ಬಸ್ ಖರೀದಿಸಲು ರೂ.275 ಕೋಟಿ ವೆಚ್ಚ ಮಾಡಲಾಗಿದೆ. ಸಾರಿಗೆ ಇಲಾಖೆಯ ಅಭಿವೃದ್ಧಿಗೆ ಸರ್ಕಾರ ಹಾಗೂ ಸಾರ್ವಜನಿಕರು ಒಟ್ಟಾಗಿ ಸಹಕರಿಸಬೇಕೆಂದು ಹೇಳಿದರು. ಮಾರ್ಚ್ ಹಾಗೂ ಏಪ್ರಿಲ್ ನಲ್ಲಿ ಲಾಕ್ ಡೌನ್ ಕಾರಣದಿಂದಾಗಿ ಸಾರಿಗೆ ಇಲಾಖೆಗೆ ರೂ.166 ಕೋಟಿ ನಷ್ಟ ಉಂಟಾಗಿದೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ಎಲ್ಲಾ ಸರ್ಕಾರಿ ಬಸ್ಗಳ ದರವನ್ನು ಹೆಚ್ಚಿಸಲು ರಾಜ್ಯ ಸರ್ಕಾರವು ಇಂದು ಪ್ರಸ್ತಾಪವನ್ನಿಟ್ಟಿದೆ. ದರ ಹೆಚ್ಚಳವನ್ನು ರಾಜ್ಯದ ಸಾಮಾನ್ಯ ಜನರೂ ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ವಿರೋಧಿಸಿವೆ.

ಮೊದಲ 3 ಕಿ.ಮೀಗಳಿಗೆ ಬಸ್ ದರವನ್ನು ರೂ.5 ರಿಂದ ರೂ.7ವರೆಗೆ ಹೆಚ್ಚಿಸಲಾಗಿದೆ. ಕರೋನಾ ವೈರಸ್ ನ ಈ ಸಂಕಷ್ಟದ ಸಂದರ್ಭದಲ್ಲಿ ಸಾರಿಗೆ ಇಲಾಖೆಯು ಬಸ್ ಗಳ ಕಾರ್ಯಾಚರಣೆಯಲ್ಲಿ ಹಲವು ತೊಂದರೆಗಳನ್ನು ಎದುರಿಸುತ್ತಿದೆ ಎಂದು ಸರ್ಕಾರವು ಹೇಳಿದೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಸಾರಿಗೆ ಇಲಾಖೆಯ ಆದಾಯವು ಅರ್ಧಕ್ಕಿಂತ ಕಡಿಮೆಯಾಗಿದೆ. ಇಲಾಖೆಯ ಸಿಬ್ಬಂದಿ ಹಾಗೂ ಬಸ್ ಚಾಲಕರ ಸಂಬಳ, ಇತ್ಯಾದಿಗಳನ್ನು ಪಾವತಿಸುವುದಕ್ಕಾಗಿ ದರ ಏರಿಕೆ ಹೊರತುಪಡಿಸಿ ಬೇರೆ ಯಾವುದೇ ಮಾರ್ಗವಿಲ್ಲವೆಂದು ಸಾರಿಗೆ ಇಲಾಖೆ ಹೇಳಿದೆ.

ಪಶ್ಚಿಮ ಬಂಗಾಳ, ಪಂಜಾಬ್, ದೆಹಲಿ ಹಾಗೂ ಹರಿಯಾಣ ರಾಜ್ಯಗಳಲ್ಲಿ ಬಸ್ ಹಾಗೂ ಟ್ರಕ್ ಚಾಲಕರ ಸಂಘಗಳು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸುತ್ತಿವೆ. ಕಳೆದ 30 ದಿನಗಳಲ್ಲಿ ಡೀಸೆಲ್, ಪೆಟ್ರೋಲ್ ಬೆಲೆಯನ್ನು ಹಲವಾರು ಬಾರಿ ಹೆಚ್ಚಿಸಲಾಗಿದೆ. ಕರೋನಾ ಸಂಕಷ್ಟದ ಸಂದರ್ಭದಲ್ಲಿ ತೈಲ ಬೆಲೆ ಹೆಚ್ಚಳವು ಚಾಲಕರ ಸಂಘದ ಆಕ್ರೋಶಕ್ಕೆ ಕಾರಣವಾಗಿದೆ.