Just In
- 7 min ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 42 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 50 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 59 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಎಫೆಕ್ಟ್: ಕಾರ್ಮಿಕರಿಗೆ ಸಾರಿಗೆ ಸೇವೆ ಒದಗಿಸಲು ಮುಂದಾದ ಕರ್ನಾಟಕ ಸರ್ಕಾರ
ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗಾಗಿ ವಿಶೇಷ ಬಸ್ ಸೌಲಭ್ಯವನ್ನು ಒದಗಿಸಲು ಕರ್ನಾಟಕ ಸರ್ಕಾರವು ಮುಂದಾಗಿದೆ. ಲಾಕ್ಡೌನ್ ಅವಧಿಯಲ್ಲಿ ಕೇಂದ್ರ ಸರ್ಕಾರವು ವಿಶೇಷ ಆರ್ಥಿಕ ವಲಯ (ಎಸ್ಇಝಡ್) ಹಾಗೂ ಹಸಿರು ವಲಯದಲ್ಲಿರುವ ಕೈಗಾರಿಕೆ ಹಾಗೂ ಉದ್ಯಮಗಳಿಗೆ ವಿನಾಯಿತಿ ನೀಡಿದೆ.
ರಾಜ್ಯದ ಆರ್ಥಿಕ ವ್ಯವಸ್ಥೆಗೆ ಉತ್ತೇಜನ ನೀಡಲು ಕರ್ನಾಟಕ ಸರ್ಕಾರವು ಈ ನಿರ್ಧಾರಕ್ಕೆ ಬಂದಿದೆ. ಮಾರ್ಚ್ 24ರ ನಂತರ ಮೊದಲ ಬಾರಿಗೆ 2,500ಕ್ಕೂ ಹೆಚ್ಚು ಉದ್ಯಮಗಳನ್ನು ತೆರೆಯಲಾದರೂ, ಕಾರ್ಮಿಕರ ಕೊರತೆ ಎದುರಾಗಿದೆ. ದೇಶಾದ್ಯಂತ ಲಾಕ್ಡೌನ್ ಘೋಷಿಸುವ ಮೊದಲೇ ಮುನ್ನೆಚ್ಚರಿಕಾ ಕ್ರಮವಾಗಿ ಅನೇಕ ಕಂಪನಿಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದವು.
ಲಾಕ್ಡೌನ್ ಘೋಷಣೆಯಾದ ನಂತರ ಈ ಕಾರ್ಖಾನೆಗಳಲ್ಲಿದ್ದ ಕಾರ್ಮಿಕರು ಹಾಗೂ ಸಿಬ್ಬಂದಿಗಳು ತಮ್ಮ ಊರುಗಳಿಗೆ ಮರಳಿದರು. ಬಸ್ಸು, ರೈಲು ಹಾಗೂ ವಿಮಾನಯಾನ ಸೇವೆಗಳನ್ನು ರದ್ದುಪಡಿಸಿರುವುದರಿಂದ ಕಾರ್ಮಿಕರು ಮತ್ತೆ ಹಿಂದಿರುಗಲು ತೊಂದರೆಯಾಗಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಮುಂದಿನ ವಾರದಿಂದ ರಾಜ್ಯದಲ್ಲಿ ಇನ್ನೂ 3,000 ಕಾರ್ಖಾನೆಗಳನ್ನು ತೆರೆಯುವ ಯೋಜನೆ ಇದೆ. ಮತ್ತೆ ಕಾರ್ಮಿಕರ ಕೊರತೆ ಎದುರಾಗಲಿದೆ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾಜಿಕ ಅಂತರವನ್ನು ಪಾಲಿಸುವ ಮೂಲಕ ಕಾರ್ಮಿಕರನ್ನು ಮತ್ತೆ ಕೆಲಸಕ್ಕೆ ಕರೆತರಲು ಸಾರಿಗೆ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಅಧಿಕಾರಿಯೊಬ್ಬರು ಮಾತನಾಡಿ ಅನೇಕ ಕಂಪನಿಗಳು ತಮ್ಮ ಕಾರ್ಮಿಕರನ್ನು ಮರಳಿ ಕರೆತರಲು ವಿಶೇಷ ಸೌಲಭ್ಯಗಳನ್ನು ಒದಗಿಸುತ್ತಿವೆ. ಕರ್ನಾಟಕ ಸರ್ಕಾರವು ಕಂಪನಿಗಳಿಗೆ ನೆರವಾಗಲಿದೆ ಎಂದು ಹೇಳಿದರು.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಕೈಗಾರಿಕೆಗಳು ಹಾಗೂ ಉದ್ಯಮಗಳನ್ನು ಮತ್ತೆ ಸರಿ ದಾರಿಗೆ ತರಲು ಪ್ರಸ್ತಾವನೆಯನ್ನು ರೂಪಿಸಲಾಗಿದೆ ಎಂದು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಸ್ತಾವನೆಯಲ್ಲಿ ವಿದ್ಯುತ್ ಹಾಗೂ ನೀರಿನ ಬಿಲ್ಗಳಿಗೆ ವಿನಾಯಿತಿ ನೀಡುವುದರ, ಕೆಲವು ತೆರಿಗೆಗಳಿಗೂ ಸಹ ವಿನಾಯಿತಿ ನೀಡಲಾಗುವುದು.
ಉದ್ಯಮಿಗಳು 2,500 ಕೈಗಾರಿಕಾ ಘಟಕಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲು ಅನುಮತಿ ಕೋರಿದ್ದಾರೆ. ಸೋಂಕಿನ ಭಯದಿಂದ ಕಾರ್ಮಿಕರು ಕಾರ್ಖಾನೆಗಳಿಗೆ ಬರದ ಕಾರಣ ಹೆಚ್ಚಿನ ಕಾರ್ಖಾನೆಗಳಲ್ಲಿ ಇನ್ನೂ ಕೆಲಸ ಆರಂಭವಾಗಿಲ್ಲ.