Just In
- 11 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 11 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 12 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 14 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News Lok Sabha Election 2024 Phase 1 Polling LIVE: ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ನಂತರ ವಿಮಾನಯಾನಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ
ಭಾರತವು ಕರೋನಾ ವೈರಸ್ ಸಂಕಷ್ಟದಿಂದ ಹೊರ ಬರುವ ಮುನ್ನವೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮಿಡತೆಗಳು ಏಕಾಏಕಿ ಜಮೀನುಗಳಿಗೆ ದಾಳಿ ಮಾಡುತ್ತಿವೆ. ಮಿಡತೆಗಳು ರೈತರಿಗೆ ಮಾತ್ರವಲ್ಲದೇ ವಿಮಾನಗಳು ಹಾಗೂ ಪ್ರಯಾಣಿಕರಿಗೂ ಅಪಾಯವನ್ನುಂಟು ಮಾಡಲಿವೆ.
ಈ ಹಿನ್ನೆಲೆಯಲ್ಲಿ ವಿಮಾನ ಪೈಲಟ್ಗಳು ಹಾಗೂ ಎಂಜಿನಿಯರ್ಗಳಿಗಾಗಿ ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (ಡಿಜಿಸಿಎ) ಸುತ್ತೋಲೆಯನ್ನು ಹೊರಡಿಸಿದ್ದಾರೆ. ಮಿಡತೆಗಳ ಸಮೂಹವು ವಿಮಾನಗಳಿಗೆ ಅಪಾಯಕಾರಿ ಎಂದು ಡಿಜಿಸಿಎ ವರದಿ ಮಾಡಿದೆ. ಮಿಡತೆಗಳು ಕೆಳಕ್ಕೆ ಹಾರಿ ವಿಮಾನಗಳು ಟೇಕ್-ಆಫ್ ಅಥವಾ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಅಪಘಾತಗಳಿಗೆ ಕಾರಣವಾಗಲಿವೆ. ಮಿಡತೆಗಳು ಹಿಂಡು ಹಿಂಡಾಗಿ ಬರುವುದರಿಂದ ಪೈಲಟ್ಗಳಿಗೆ ಏನು ಕಾಣದಂತಾಗುತ್ತದೆ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತವೆ.
ಭಾರತವು 21 ವರ್ಷಗಳ ನಂತರ ಈ ಮರುಭೂಮಿ ಮಿಡತೆಗಳ ಸಮಸ್ಯೆಯನ್ನು ಎದುರಿಸುತ್ತಿದೆ. ಮರುಭೂಮಿ ಮಿಡತೆಗಳ ಗುಂಪು ಪಾಕಿಸ್ತಾನದ ಮೂಲಕ ರಾಜಸ್ಥಾನವನ್ನು ಪ್ರವೇಶಿಸಿವೆ. ನಂತರ ಪಂಜಾಬ್, ಗುಜರಾತ್, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶಗಳಿಗೆ ಹರಡಿವೆ. ಹೋದ ಕಡೆಯಲ್ಲೆಲ್ಲಾ ಬೆಳೆಗಳನ್ನು ನಾಶಪಡಿಸುತ್ತಿವೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಮಿಡತೆಗಳು ಭೂಮಿಯ ಮೇಲ್ಮೈ ಬಳಿ ಹಾರಾಟ ನಡೆಸುತ್ತವೆ. ಇದರಿಂದಾಗಿ ಹೆಚ್ಚಿನ ಅಪಾಯ ಎದುರಾಗಲಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಪೈಲಟ್ಗಳು ಟೇಕಾಫ್ ಮಾಡುವಾಗ ಅಥವಾ ಲ್ಯಾಂಡಿಂಗ್ ಮಾಡುವಾಗ ಜಾಗರೂಕರಾಗಿರುವಂತೆ ಹೇಳಲಾಗಿದೆ.
ವಿಮಾನಗಳು ಹತ್ತಿರ ಬಂದಾಗ ಮಿಡತೆಗಳು ವಿಮಾನದೊಳಗೆ ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಮಿಡತೆಗಳು ಎಂಜಿನ್, ಏರ್ ಕಂಡಿಷನರ್ ಪ್ಯಾಕ್ಗಳನ್ನು ಸೇರಿವಿಮಾನಗಳನ್ನು ಹಾನಿಗೊಳಿಸುತ್ತವೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಮಿಡತೆಗಳು ವಿಮಾನಗಳ ವೈರ್ಲೆಸ್ ಸಂಪರ್ಕ, ಗಾಳಿಯ ವೇಗ ಹಾಗೂ ದಿಕ್ಕನ್ನು ಪತ್ತೆಹಚ್ಚುವ ಸಾಧನಗಳಿಗೂ ಹಾನಿಯನ್ನುಂಟು ಮಾಡಬಹುದು ಎಂದು ಡಿಜಿಸಿಎ ವರದಿ ಹೇಳಿದೆ. ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರಕ್ಕೆ ತುರ್ತು ಯೋಜನೆಯನ್ನು ಜಾರಿಗೆ ತರುವಂತೆ ಕೋರಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಎನ್ಜಿಒ ಸಲ್ಲಿಸಿದ ಅರ್ಜಿಯಲ್ಲಿ, ತುರ್ತು ಯೋಜನೆಗಳ ಹೊರತಾಗಿಯೂ ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ ರಾಜ್ಯಗಳು ಫೆಬ್ರವರಿಯಿಂದ ಮಿಡತೆ ದಾಳಿಯನ್ನು ಎದುರಿಸುತ್ತಿದ್ದು, ಹಲವು ಪ್ರದೇಶಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಹೇಳಲಾಗಿದೆ.