Just In
- 8 min ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- 1 hr ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 2 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
Don't Miss!
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೋಗೋ ಮೂಲಕವೇ ಕರೋನಾ ವೈರಸ್ ಬಗೆಗೆ ಜನಜಾಗೃತಿ ಮೂಡಿಸಿದ ಆಟೋ ಕಂಪನಿಗಳು
ಮಹಾಮಾರಿ ಕರೋನಾ ವೈರಸ್ ಅಟ್ಟಹಾಸಕ್ಕೆ ಇಡಿ ವಿಶ್ವವೇ ತಲ್ಲಣಗೊಂಡಿದ್ದು, ವೈರಸ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ.
ಕರೋನಾ ವೈರಸ್ ತಡೆಯಲು ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಇಲ್ಲದಿರುವುದೇ ದೊಡ್ಡ ಆತಂಕಕ್ಕೆ ಕಾರಣವಾಗಿದ್ದು, ಈ ವೇಳೆ ವೈರಸ್ ಹರಡದಂತೆ ನಮ್ಮನ್ನು ನಾವೇ ಸ್ವಯಂರಕ್ಷಣೆ ಮಾಡಿಕೊಳ್ಳುವುದೇ ಪ್ರಮುಖ ಜವಾಬ್ದಾರಿಯಾಗಿದೆ. ವೈರಸ್ ಹರಡುವಿಕೆಯನ್ನು ತಡೆಯಲು ಸರ್ಕಾರಗಳು ಲಾಕ್ ಡೌನ್ ವಿಧಿಸಲಾಗಿದ್ದರೂ ನಿಯಮ ಉಲ್ಲಂಘನೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಸಂಕಷ್ಟಕರ ಪರಿಸ್ಥಿತಿಯಲ್ಲೂ ಸಾಮಾಜಿಕ ಅಂತರವನ್ನು ಕಾಯ್ದಕೊಳ್ಳುವಲ್ಲಿ ಅಸಡ್ಡೆ ತೋರುತ್ತಿರುವ ಕೆಲವರು ಮಾಹಾಮಾರಿ ವೈರಸ್ಗೆ ತುತ್ತಾಗುತ್ತಿದ್ದಾರೆ.
ಈ ಕುರಿತು ಜಾಗೃತಿಯೊಂದು ಮೂಡಿಸುತ್ತಿರುವ ಆಟೋ ಕಂಪನಿಗಳು ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿಯೊಂದಿಗೆ ದೇಣಿಗೆ ನೀಡಿ ಸರ್ಕಾರದ ಪ್ರಯತ್ನಕ್ಕೆ ಶಕ್ತಿ ತುಂಬಿರುವುದಲ್ಲದೆ ಜನತೆಯಲ್ಲಿ ಸೋಂಕು ಹರಡದಂತೆ ಹಲವಾರು ಜಾಗೃತಿ ಕ್ರಮಗಳನ್ನು ಕೈಗೊಂಡಿವೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್
ಹ್ಯುಂಡೈ ಕಂಪನಿಯು ತನ್ನದೇ ಶೈಲಿಯಲ್ಲಿ ಜನತೆಗೆ ಒಂದು ಉತ್ತಮ ಸಂದೇಶ ನೀಡಿದೆ. ಲೋಗೋ ಮೂಲಕವೇ ಜನತೆಯಲ್ಲಿ ಜಗ್ಗಟ್ಟಿನ ಜೊತೆ ಸಾಮಾಜಿಕ ಅಂತರ ಕಾಯ್ದಕೊಳ್ಳುವ ಬಗ್ಗೆ ಸಂದೇಶ ನೀಡಲಾಗಿದ್ದು, ಎಲ್ಲರೂ ಒಟ್ಟಾಗಿ ಕರೋನಾ ತೊಲಗಿಸುವ ವಿಶ್ವಾಸ ವ್ಯಕ್ತಪಡಿಸಿವೆ.
ಹಾಗೆಯೇ ಆಡಿ ಕಂಪನಿ ಕೂಡಾ ತನ್ನ ಲೋಗೋ ಶೈಲಿಯನ್ನು ಬದಲಾವಣೆಗೊಳಿಸುವ ಮೂಲಕ ಸಾಮಾಜಿಕ ಅಂತರದ ಕುರಿತು ಗಮನಸೆಳೆದಿದ್ದು, ಫೋರ್ಕ್ಸ್ವ್ಯಾಗನ್ ಮತ್ತು ಮರ್ಸಿಡಿಸ್ ಬೆಂಝ್ ಕಂಪನಿ ಸಹ ಲೋಗೋ ಬದಲಾವಣೆಗೊಳಿಸಿರುವುದು ಗಮನಸೆಳೆದಿದೆ.
MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ
ಇನ್ನು ಜಗತ್ತಿನಾದ್ಯಂತ ದಿನಂಪ್ರತಿ ಸಾವಿರಾರು ಜನರ ಜೀವವನ್ನು ಬಲಿಪಡೆಯುತ್ತಿರುವ ವೈರಸ್ನಿಂದ ಬಚಾವ್ ಆಗಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಪ್ರಮುಖ ಅಂಶವಾಗಿದ್ದು, ಪ್ರತಿಯೊಬ್ಬರು ವೈರಸ್ ತಡೆಯುವುದಕ್ಕಾಗಿ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.
ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಭಾರತ ಸೇರಿ ವಿಶ್ವದ ಹಲವು ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದೆ. ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.
MOST READ: ಲಾಕ್ ಡೌನ್: ಮಗನಿಗಾಗಿ 1400 ಕಿ.ಮೀ ಪ್ರಯಾಣಿಸಿದ ತಾಯಿ
ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮುಂದಾಗಿವೆ.
ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.
MOST READ: ಕರೋನಾ ವೈರಸ್: ವೆಂಟಿಲೆಟರ್ ಉತ್ಪಾದನೆ ಚಾಲನೆ ನೀಡಿದ ಮಾರುತಿ ಸುಜುಕಿ
ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.
ಚೀನಾದಿಂದ ಶುರುವಾದ ಕರೋನಾ ವೈರಸ್ ಹರಡುವಿಕೆಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 17 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 1.03 ಲಕ್ಷ ಜನ ಪ್ರಾಣಕಳೆದುಕೊಂಡಿದ್ದಾರೆ. ಸೋಂಕು ಪಿಡಿತರಲ್ಲಿ ಇದುವರೆಗೆ ಸುಮಾರು 3.82 ಲಕ್ಷ ಜನ ಗುಣಮುಖರಾಗಿದ್ದು, ಶೇ.5 ರಷ್ಟು ಜನರ ಸ್ಥಿತಿ ಶೋಚನೀಯವಾಗಿದೆ.