Just In
- 1 min ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- 1 hr ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 1 hr ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 1 hr ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
Don't Miss!
- Movies "ಸದಾ ನನ್ನ ಹಿಂಭಾಗವನ್ನೇ ಸದಾ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- News Mangalsutra Row: ಸಾಧನೆ ಹೇಳಿ ಮತ ಕೇಳಲು ಮುಖವಿಲ್ಲದ ಪ್ರಧಾನಿ: ಕಾಂಗ್ರೆಸ್
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದ ನಡುವೆಯೂ ಉದ್ಯೋಗ ಕಡಿತವಿಲ್ಲವೆಂದ ಎಂಜಿ ಮೋಟಾರ್
ಕರೋನಾ ವೈರಸ್ ಪ್ರಪಂಚದೆಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಬಡವರು, ಶ್ರೀಮಂತರು ಎಂಬುದನ್ನು ನೋಡದೇ ಪ್ರಪಂಚದ ಎಲ್ಲಾ ದೇಶಗಳಿಗೂ ಹಬ್ಬಿದೆ. ಈಗಾಗಲೇ 10 ಲಕ್ಷಕ್ಕೂ ಹೆಚ್ಚು ಜನರು ಈ ಮಹಾಮಾರಿ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. 50 ಸಾವಿರಕ್ಕೂ ಹೆಚ್ಚು ಜನ ಈ ಮಾರಣಾಂತಿಕ ವೈರಸ್ ಗೆ ಬಲಿಯಾಗಿದ್ದಾರೆ.
ಕರೋನಾ ವೈರಸ್ ಭಾರತಕ್ಕೂ ಹಬ್ಬಿದೆ. ಹೆಚ್ಚು ಜನರಿಗೆ ಸೋಂಕು ಹರಡದಿರಲಿ ಎಂಬ ಕಾರಣಕ್ಕೆ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ದೇಶಾದ್ಯಂತ ಮುಂದುವರೆದಿರುವ ಈ ಲಾಕ್ಡೌನ್ನಿಂದಾಗಿ ಆಟೋ ಮೊಬೈಲ್ ಸೇರಿದಂತೆ ಎಲ್ಲಾ ಕ್ಷೇತ್ರಗಳು ನಷ್ಟವನ್ನು ಅನುಭವಿಸುತ್ತಿವೆ. ಇದರಿಂದಾಗಿ ಬಹುತೇಕ ಉದ್ಯೋಗಗಳು ಅನಿಶ್ಚತತೆಯನ್ನು ಎದುರಿಸುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ಎಂಜಿ ಮೋಟಾರ್ ಕಂಪನಿಯು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಎಂಜಿ ಮೋಟಾರ್ ಕಂಪನಿಯು ತನ್ನ ಕಂಪನಿಯ ಉತ್ಪಾದನೆಯು ಸ್ಥಗಿತಗೊಂಡಿದ್ದರೂ ಯಾವುದೇ ವ್ಯಕ್ತಿಯನ್ನು ಕೆಲಸದಿಂದ ತೆಗೆದು ಹಾಕುವುದಿಲ್ಲವೆಂದು ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಂಜಿ ಮೋಟಾರ್ನ ವ್ಯವಸ್ಥಾಪಕ ನಿರ್ದೇಶಕರು 2020ರಲ್ಲಿ ಯಾವುದೇ ಉದ್ಯೋಗಿಯ ಉದ್ಯೋಗ ಕಡಿತವಾಗುವುದಿಲ್ಲವೆಂದು ತಿಳಿಸಿದ್ದಾರೆ. ಇಂತಹ ಕೆಟ್ಟ ಪರಿಸ್ಥಿತಿಯಲ್ಲಿಯೂ ಎಂಜಿ ಮೋಟಾರ್ ಯಾರೊಬ್ಬರ ಕೆಲಸವನ್ನು ಕಸಿದುಕೊಳ್ಳುವುದಿಲ್ಲವೆಂದು ಅವರು ಹೇಳಿದ್ದಾರೆ.
ಎಂಜಿ ಮೋಟಾರ್ ಕಂಪನಿಯ ಈ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಬೇರೆ ಕಂಪನಿಗಳು ಸಹ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಎಂಜಿ ಮೋಟಾರ್ನ ಕಂಪನಿಯ ಉದ್ಯೋಗಿಗಳು ಕಂಪನಿಯ ಈ ನಿರ್ಧಾರದಿಂದ ಖುಷಿಯಾಗಿದ್ದಾರೆ ಎಂದು ಹೇಳಲಾಗಿದೆ. ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿರುವ ಎಂಜಿ ಮೋಟಾರ್ ಕಂಪನಿಯು ರೂ.2 ಕೋಟಿ ದೇಣಿಗೆ ನೀಡಿದೆ.
ಇದರ ಜೊತೆಗೆ, ಎಂಜಿ ಮೋಟಾರ್ ಕಂಪನಿಯು ಕಡಿಮೆ ಬೆಲೆಯ ವೆಂಟಿಲೇಟರ್ ಸವಾಲನ್ನು ಹಾಕಿದೆ. ಈ ಸವಾಲಿನಿಂದಾಗಿ ಸುಲಭವಾಗಿ ಹಾಗೂ ವೇಗವಾಗಿ ತ್ವರಿತವಾಗಿ ತಯಾರಿಸಿದ ವೆಂಟಿಲೇಟರ್ ಗಳನ್ನು ತಯಾರಿಸಲು ಅನುಕೂಲವಾಗಲಿದೆ.
ಎಂಜಿ ಮೋಟಾರ್ ಕಂಪನಿಯು ತನ್ನ ಕಾರುಗಳನ್ನು ಸೋಂಕು ನಿವಾರಕಗೊಳಿಸಿದ ನಂತರವೇ ತಲುಪಿಸುತ್ತಿದೆ, ಇದಕ್ಕಾಗಿ ಕಂಪನಿಯು ಸೋಂಕು ನಿವಾರಕ ಹಾಗೂ ವಿತರಣೆ ಎಂಬ ಯೋಜನಯನ್ನು ಹಮ್ಮಿಕೊಂಡಿದೆ.