Just In
- 22 min ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 22 min ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 38 min ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- 1 hr ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
Don't Miss!
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- News ಬಿಜೆಪಿ ತೊರೆದ ಕಾಂಗ್ರೆಸ್ ಸೇರ್ಪಡೆಯಾದ ಬಿಎಸ್ ಯಡಿಯೂರಪ್ಪ ಆಪ್ತ
- Movies ತಾತನಿಗೆ ಧನ್ಯಾ ರಾಮ್ಕುಮಾರ್ ಟ್ರಿಬ್ಯೂಟ್; ಕಿಶನ್ ಜೊತೆ ಡ್ಯುಯೆಟ್
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ಕೈಜೋಡಿಸಿದ ಎಂಜಿ ಮೋಟಾರ್
ವಿಶ್ವಾದ್ಯಂತ ಸಾವಿರಾರು ಜನರ ಬಲಿ ಪಡೆದಿರುವ ಕರೋನಾ ವೈರಸ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ಮಟ್ಟಹಾಕಲು ಹಲವಾರು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಭಾರತದಲ್ಲೂ ವೈರಸ್ ತಡೆಗಾಗಿ ಈಗಾಗಲೇ ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವೈರಸ್ ಮಟ್ಟ ಹಾಕಲು ಎಲ್ಲ ರೀತಿ ಕಠಿಣ ಕ್ರಮಗಳೊಂಗದಿಗೆ ಮುಂದಿನ 21 ದಿನಗಳ ತನಕ ಲಾಕ್ ಡೌನ್ ಮಾಡಿವೆ. ಹೀಗಿರುವಾಗ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪುತ್ತಿದ್ದು, ತುರ್ತು ಆರೋಗ್ಯ ಸೌಲಭ್ಯಗಳಿಗಾಗಿ ಅನೇಕ ಸಂಘ ಸಂಸ್ಥೆಗಳು ಮತ್ತು ಉದ್ಯಮಿಗಳು ಕೇಂದ್ರ ಸರ್ಕಾರದ ಜೊತೆಗೆ ಕೈಜೋಡಿಸಿವೆ. ಈಗಾಗಲೇ ಪ್ರಧಾನಿಮಂತ್ರಿಗಳ ತುರ್ತು ಪರಿಹಾರ ನಿಧಿಗೆ ಭಾರೀ ಪ್ರಮಾಣದ ಹಣಕಾಸು ನೆರವು ಹರಿದುಬರುತ್ತಿದ್ದು, ಎಂಜಿ ಮೋಟಾರ್ ಸಹ ನೆರವು ನೀಡಿದೆ.
ಎಂಜಿ ಮೋಟಾರ್ಸ್ ಸಂಸ್ಥೆಯು ಕರೋನಾ ವೈರಸ್ ಮಟ್ಟಹಾಕಲು ಕೇಂದ್ರ ಸರ್ಕಾರವು ಕೈಗೊಂಡಿರುವ ಕ್ರಮವನ್ನು ಬೆಂಬಲಿಸಿ ಪ್ರಧಾನಮಂತ್ರಿಗಳ ತುರ್ತು ಪರಿಹಾರ ನಿಧಿಗೆ ರೂ.2 ಕೋಟಿ ಹಣ ನೀಡಿದ್ದು ತುರ್ತು ಸಂದರ್ಭದಲ್ಲಿ ಸಿಬ್ಬಂದಿಗೂ ಯಾವುದೇ ತೊಂದರೆಯಾಗದಂತೆ ಹಲವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ 1 ಉತ್ಪಾದನಾ ಘಟಕ ಮತ್ತು ಸುಮಾರು 150ಕ್ಕೂ ಹೆಚ್ಚು ಮಾರಾಟ ಮಳಿಗೆಗಳನ್ನು ಹೊಂದಿದ್ದು, ಕಾರ್ಯನಿರ್ವಹಿಸುತ್ತಿರುವ ಬರೋಬ್ಬರಿ 5 ಸಾವಿರ ಉದ್ಯೋಗಿಗಳಿಗೆ ಗರಿಷ್ಠ ಪ್ರಮಾಣ ಸುರಕ್ಷತೆಯನ್ನು ಒದಗಿಸಿದೆ.
ಇನ್ನು ವಿಶ್ವಾದ್ಯಂತ ಕರೋನಾ ವೈರಸ್ ಅಟ್ಟಹಾಸ ಮುಂದುವರಿದ್ದು, ವೈರಸ್ನಿಂದಾಗಿ ಇದುವರೆಗೆ ಸುಮಾರು 19 ಸಾವಿರಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ಇದರಿಂದ ಜಗತ್ತಿನ ಎಲ್ಲಾ ಪ್ರಮುಖ ರಾಷ್ಟ್ರಗಳು ಹಲವು ಕಠಿಣ ಕ್ರಮಗಳೊಂದಿಗೆ ವೈರಸ್ ಹರಡುವಿಕೆಯನ್ನು ತಡೆಯಲು ಶ್ರಮಿಸುತ್ತಿವೆ. ಹೀಗಿರುವಾಗ ದೇಶದ ಆರ್ಥಿಕ ಪರಿಸ್ಥಿತಿಯು ದಿನದಿಂದ ದಿನಕ್ಕೆ ಶೋಚನೀಯವಾಗುತ್ತಿದ್ದು, ಆಟೋ ಉದ್ಯಮದವು ಕೂಡಾ ಸಂಕಷ್ಟಕ್ಕೆ ಸಿಲುಕಿಕೊಂಡಿದೆ.
ಮಾಲಿನ್ಯ ತಡೆಯುವ ಉದ್ದೇಶದಿಂದ ದೇಶದಲ್ಲಿ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಬಿಎಸ್-6(ಭಾರತ್ ಸ್ಟೆಜ್-6) ಜಾರಿಗೆ ತರಲಾಗುತ್ತಿದ್ದು, ಹೊಸ ಎಮಿಷನ್ ನಿಯಮ ಜಾರಿ ನಂತರ ಬಿಎಸ್-4 ವಾಹನ ಮಾರಾಟ ಮತ್ತು ನೋಂದಣಿಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗುತ್ತಿದೆ.
ಆದರೆ ನಿಗದಿತ ಅವಧಿಯೊಳಗೆ ಬಿಎಸ್-4 ವಾಹನ ಮಾರಾಟ ಮಾಡಲು ಕರೋನಾ ವೈರಸ್ ಹಿನ್ನಲೆ ಸಂಪೂರ್ಣವಾಗಿ ಲಾಕ್ ಡೌನ್ ಮಾಡಿರುವುದರಿಂದ ವಾಹನ ಉತ್ಪಾದನಾ ಸಂಕಷ್ಟಕ್ಕೆ ಸಿಲುಕಿವೆ.
ಈ ನಡುವೆ ಬಿಎಸ್-4 ವಾಹನಗಳ ಮಾರಾಟ ಅವಧಿಯನ್ನು ವಿಸ್ತರಿಸುವಂತೆ ಎರಡು ಬಾರಿ ಸುಪ್ರೀಂಕೋರ್ಟ್ ಮೊರೆಹೋಗಿದ್ದ ಆಟೋ ಕಂಪನಿಗಳ ಮನವಿಯನ್ನು ತಳ್ಳಿಹಾಕಲಾಗಿದ್ದು, ಇದರಿಂದ ಮಾರಾಟವಾಗದೆ ಉಳಿದಿರುವ ಬಿಎಸ್-4 ವಾಹನಗಳು ಆರ್ಥಿಕ ಹೊರೆಯಾಗಿ ಪರಿಣಮಿಸಿವೆ.
ಆದರೆ ಪರಿಸ್ಥಿತಿಗೆ ಅನುಗುಣವಾಗಿ ಹಲವಾರು ವಿನಾಯ್ತಿಗಳನ್ನು ನೀಡಿರುವ ಕೇಂದ್ರ ಸರ್ಕಾರವು ಬಿಎಸ್-4 ವಾಹನ ಮಾರಾಟಕ್ಕೂ ಕೆಲವು ವಿನಾಯ್ತಿಗಳನ್ನು ನೀಡುವ ಸಾಧ್ಯತೆಗಳಿದ್ದು, ಮುಂಬರುವ ದಿನಗಳಲ್ಲಿ ಕೈಗೊಳ್ಳಲಿರುವ ಆರ್ಥಿಕ ನಿರ್ಧಾರಗಳ ಮೇಲೆ ಬಿಎಸ್-4 ವಾಹನಗಳ ಭವಿಷ್ಯ ನಿರ್ಧಾರವಾಗಲಿದೆ.