Just In
- 16 min ago Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
- 1 hr ago ಭಾರತದ ರಸ್ತೆಯಲ್ಲಿ ಘರ್ಜಿಸಲು ಬಂದ ಪವರ್ಫುಲ್ ಎಪ್ರಿಲಿಯಾ ಬೈಕ್ ವಿತರಣೆ ಮಾಹಿತಿ ಬಹಿರಂಗ
- 1 hr ago 28 ಲಕ್ಷದ ಬೈಕನ್ನು ಲೀಲಾಜಾಲವಾಗಿ ಓಡಿಸಿದ ಲೇಡಿ ಸೂಪರ್ಸ್ಟಾರ್: ಇಂತಹ ಗರ್ಲ್ಫ್ರೆಂಡ್ ಬೇಕೆಂದ ನೆಟ್ಟಿಗರು!
- 2 hrs ago Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
Don't Miss!
- News ಲೋಕಸಭೆ ಚುನಾವಣೆ: ಕಲಬುರಗಿ ಮತದಾರರು, ವಿಧಾನಸಭಾ ಕ್ಷೇತ್ರ ಮಾಹಿತಿ
- Lifestyle ನಿಮಗೆ ಬೀಳುವ ಕನಸುಗಳ ಹಿಂದಿರುವ ಅರ್ಥ, ಉದ್ದೇಶವೇನು ಗೊತ್ತಾ?
- Movies ರಾಘಣ್ಣಗೆ ಸ್ಟೋಕ್ ಆದಾಗ ಸಿಂಗಾಪುರದಲ್ಲಿ ಶಿವಣ್ಣ, ಅಪ್ಪು ಹೇಗೆ ನೋಡ್ಕೊಂಡ್ರು?
- Finance ನೀರಿನ ಬಿಕ್ಕಟ್ಟು: ಬೆಂಗಳೂರು ತೊರೆಯಲು ಮುಂದಾದ ಅನೇಕ ನಿವಾಸಿಗಳು!
- Technology ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- Sports ಆರ್ಸಿಬಿ ಸ್ಟಾರ್ ಶ್ರೇಯಾಂಕಾ ಪಾಟೀಲ್ ಬಗ್ಗೆ ನಿಮಗೆಷ್ಟು ಗೊತ್ತು?; ಶಿಕ್ಷಣ, ವಯಸ್ಸು, ಕೌಟುಂಬಿಕ ಹಿನ್ನೆಲೆ ಬಗ್ಗೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಗಾರು ಸರ್ವೀಸ್ ಯೋಜನೆ ಘೋಷಿಸಿದ ಮಾರುತಿ ಸುಜುಕಿ
ಭಾರತದ ನಂ 1 ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಇಂಡಿಯಾ ತನ್ನ ಗ್ರಾಹಕರಿಗಾಗಿ ಮಾನ್ಸೂನ್ ಅಭಿಯಾನವನ್ನು ಘೋಷಿಸಿದೆ. ಈ ಯೋಜನೆಯಡಿಯಲ್ಲಿ ಮಳೆಗಾಲದ ಪ್ರಯಾಣಕ್ಕೆ ಅನುಕೂಲವಾಗುವ ರೀತಿಯಲ್ಲಿ ಕಾರುಗಳನ್ನು ಸಿದ್ದಪಡಿಸಲಾಗುವುದು.
ಇದಕ್ಕಾಗಿ ಕಂಪನಿಯು ದೇಶಾದ್ಯಂತ ವಾಹನಗಳ ತಪಾಸಣೆ ನಡೆಸಲು ಕ್ಯಾಂಪ್ ಗಳನ್ನು ತೆರೆಯಲಿದೆ. ಮಾರುತಿ ಸುಜುಕಿ ಕಂಪನಿಯ ತರಬೇತಿ ಪಡೆದ ತಾಂತ್ರಿಕ ಸಿಬ್ಬಂದಿ ಹಾಗೂ ಪರಿಣಿತರು ಮಳೆಗಾಲದ ಪ್ರಯಾಣಕ್ಕೆ ತಕ್ಕಂತೆ ಕಾರುಗಳನ್ನು ಸಿದ್ದಪಡಿಸಲಿದ್ದಾರೆ. ಮಾರುತಿ ಕಂಪನಿಯ ಟೆಕ್ನಿಷಿಯನ್ ಗಳು ಕಾರಿನಲ್ಲಿರುವ ದೋಷಗಳನ್ನು ಸರಿಪಡಿಸಿ ಗ್ರಾಹಕರಿಗೆ ಮಳೆಗಾಲದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಿದ್ದಾರೆ.
ಮಾರುತಿ ಸುಜುಕಿ ಕಂಪನಿಯ ಗ್ರಾಹಕರು ಜುಲೈ 31ರವರೆಗೆ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು. ಮಳೆಗಾಲದಲ್ಲಿ ಕಾರುಗಳ ಕಾರ್ಯಕ್ಷಮತೆಯನ್ನು ಕಾಪಾಡುವುದು ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಮಾರುತಿ ಸುಜುಕಿ ಕಂಪನಿಯು ಈ ಮಾನ್ಸೂನ್ ಅಭಿಯಾನವನ್ನು ಆಯೋಜಿಸಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ಅಭಿಯಾನದಲ್ಲಿ ಮುಖ್ಯವಾಗಿ ನೀರು ಹೆಚ್ಚು ನುಗ್ಗುವ ಸಾಧ್ಯತೆಗಳಿರುವ ಕಾರಿನ ಭಾಗಗಳನ್ನು ಬದಲಿಸುವ ಅಥವಾ ಸರಿಪಡಿಸುವತ್ತ ಗಮನ ಹರಿಸಲಾಗುವುದು. ಈ ಬಿಡಿಭಾಗಗಳಲ್ಲಿ ವೈಪರ್ ಬ್ಲೇಡ್, ಬ್ರೇಕ್ ಪ್ಯಾಡ್, ಬ್ರೇಕ್ ಫ್ಲೂಯಿಡ್ ಮುಂತಾದವುಗಳು ಸೇರಿವೆ.
ಮಾರುತಿ ಸುಜುಕಿ ಕಂಪನಿಯು ಅಸಲಿ ಉಪಕರಣ ಹಾಗೂ ಬಿಡಿಭಾಗಗಳನ್ನು ಮಾತ್ರ ಖರೀದಿಸುವಂತೆ ತನ್ನ ಗ್ರಾಹಕರಿಗೆ ಸಲಹೆ ನೀಡಿದೆ. ಅಸಲಿ ಬಿಡಿಭಾಗಗಳಿಂದ ಕಾರಿನ ಪರ್ಫಾಮೆನ್ಸ್ ಹೆಚ್ಚುವುದರ ಜೊತೆಗೆ, ನಿರ್ವಹಣಾ ವೆಚ್ಚವು ಕಡಿಮೆಯಾಗಲಿದೆ ಎಂದು ಕಂಪನಿ ಹೇಳಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಮಾರುತಿ ಸುಜುಕಿ ಕಂಪನಿಯು ಕಾರುಗಳನ್ನು ಗುತ್ತಿಗೆ ಮೇಲೆ ನೀಡುವ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಲ್ಲಿ ಮಾರುತಿಯ ನೆಕ್ಸಾ ಹಾಗೂ ಅರೆನಾ ಡೀಲರ್ ಗಳಿಂದ ಮಾರಾಟವಾಗುವ ಕಾರುಗಳು ಸೇರಿವೆ.
ಮಾರುತಿ ಕಾರ್ ಲೀಸ್ ಸೇವೆಯು ಚಂದಾದಾರಿಕೆ ಯೋಜನೆಯಾಗಿ ಕಾರ್ಯನಿರ್ವಹಿಸಲಿದೆ. ಈ ಯೋಜನೆಯಡಿಯಲ್ಲಿ ಗ್ರಾಹಕರಿಗೆ 24 ತಿಂಗಳು, 36 ತಿಂಗಳು ಹಾಗೂ 48 ತಿಂಗಳುಗಳವರೆಗೆ ಚಂದಾದಾರಿಕೆ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳುವ ಆಯ್ಕೆಯನ್ನು ನೀಡಲಾಗುತ್ತದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಮಾರುತಿ ಸುಜುಕಿ ಕಂಪನಿಯು ಕೆಲ ದಿನಗಳ ಹಿಂದಷ್ಟೇ, ತನ್ನ ಜೂನ್ ತಿಂಗಳ ಮಾರಾಟ ವರದಿಯನ್ನು ಬಿಡುಗಡೆಗೊಳಿಸಿತ್ತು. ಈ ವರದಿಯ ಪ್ರಕಾರ ಮಾರುತಿ ಸುಜುಕಿ ಕಂಪನಿಯು ಜೂನ್ ತಿಂಗಳಿನಲ್ಲಿ 52,300 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಮಾರಾಟದಲ್ಲಿ 53.7%ನಷ್ಟು ಕುಸಿತವಾಗಿದೆ ಎಂದು ಹೇಳಲಾಗಿದೆ.