Just In
- just now HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 4 min ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
- 30 min ago ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- 1 hr ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
Don't Miss!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ತಡೆಗಾಗಿ ಸಾಮಾಜಿಕ ಅಂತರ ಕುರಿತು ಟಾಟಾದಿಂದ ವಿನೂತನ ಜಾಹೀರಾತು
ಮಹಾಮಾರಿ ಕರೋನಾ ವೈರಸ್ ಹೊಡೆತಕ್ಕೆ ಇಡಿ ವಿಶ್ವವೇ ತಲ್ಲಣಗೊಂಡಿದ್ದು, ವೈರಸ್ ಹರಡುವಿಕೆಯನ್ನು ಪರಿಣಾಮಕಾರಿ ತಗ್ಗಿಸಲು ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಕರೋನಾ ವೈರಸ್ ತಡೆಯಲು ಸೂಕ್ತವಾದ ವೈದ್ಯಕೀಯ ಚಿಕಿತ್ಸೆ ಇಲ್ಲದಿರುವುದೇ ದೊಡ್ಡ ಆತಂಕಕ್ಕೆ ಕಾರಣವಾಗಿದ್ದು, ಈ ವೇಳೆ ವೈರಸ್ ಹರಡದಂತೆ ನಮ್ಮನ್ನು ನಾವೇ ಸ್ವಯಂರಕ್ಷಣೆ ಮಾಡಿಕೊಳ್ಳುವುದೇ ಪ್ರಮುಖ ಜವಾಬ್ದಾರಿಯಾಗಿದೆ.
ವೈರಸ್ ಹರಡುವಿಕೆಯನ್ನು ತಡೆಯಲು ಸರ್ಕಾರಗಳು ಲಾಕ್ ಡೌನ್ ವಿಧಿಸಲಾಗದ್ದರೂ ನಿಯಮ ಉಲ್ಲಂಘನೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಅಂತಹ ವಾಹನಗಳನ್ನು ಈಗಾಗಲೇ ಸೀಜ್ ಮಾಡುತ್ತಿದೆ. ಆದರೂ ಕೂಡಾ ಈ ಸಂಕಷ್ಟಕರ ಪರಿಸ್ಥಿತಿಯಲ್ಲೂ ಸಾಮಾಜಿಕ ಅಂತರವನ್ನು ಕಾಯ್ದಕೊಳ್ಳುವಲ್ಲಿ ಅಸಡ್ಡೆ ತೋರುತ್ತಿರುವ ಕೆಲವರು ಮಾಹಾಮರಿ ವೈರಸ್ಗೆ ತುತ್ತಾಗುತ್ತಿದ್ದು, ಈ ಕುರಿತು ಜಾಗೃತಿಯೊಂದು ಮೂಡಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ತಮ್ಮದೇ ಶೈಲಿಯಲ್ಲಿ ಜನತೆಗೆ ಒಂದು ಉತ್ತಮ ಸಂದೇಶ ನೀಡಿದೆ.
ಜಗತ್ತಿನಾದ್ಯಂತ ದಿನಂಪ್ರತಿ ಸಾವಿರಾರು ಜನರ ಜೀವವನ್ನು ಬಲಿಪಡೆಯುತ್ತಿರುವ ವೈರಸ್ನಿಂದ ಬಚಾವ್ ಆಗಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಎಷ್ಟು ಮುಖ್ಯ ಎಂಬುವುದನ್ನು ವಿಡಿಯೋ ಮುಖಾಂತರ ಉತ್ತಮ ಸಂದೇಶ ನೀಡಲಾಗಿದೆ.
ಇನ್ನು ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಭಾರೀ ಪ್ರಮಾಣದ ದೇಣಿಗೆ ನೀಡಿರುವ ಟಾಟಾ ಸಮೂಹ ಸಂಸ್ಥೆಗಳು ಪ್ರಧಾನಮಂತ್ರಿಗಳ ತುರ್ತು ಪರಿಹಾರ ನಿಧಿಗೆ ರೂ.1,500 ಕೋಟಿ ಧನಸಹಾಯ ನೀಡಿದ್ದು, ಅಗತ್ಯ ವೈದ್ಯಕೀಯ ಉಪಕರಣಗಳ ನಿರ್ಮಾಣಕ್ಕೂ ಒಪ್ಪಿಗೆ ನೀಡಿದೆ.
ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಭಾರತ ಸೇರಿ ವಿಶ್ವದ ಹಲವು ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದೆ. ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.
ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮುಂದಾಗಿವೆ. ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.
ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.
ಚೀನಾದಿಂದ ಶುರುವಾದ ಕರೋನಾ ವೈರಸ್ ಹರಡುವಿಕೆಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 13 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 76 ಸಾವಿರ ಜನ ಪ್ರಾಣಕಳೆದುಕೊಂಡಿದ್ದಾರೆ. 13 ಲಕ್ಷ ಜನರಲ್ಲಿ ಇದುವರೆಗೆ ಸುಮಾರು 2.93 ಲಕ್ಷ ಜನ ಗುಣಮುಖರಾಗಿದ್ದು, ಶೇ.5 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.
ಹೀಗಾಗೀ ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಎದ್ದುಕಾಣುತ್ತಿದೆ.
ಈ ಹಿನ್ನಲೆಯಲ್ಲಿ ಸದ್ಯ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ನಿರ್ಧರಿಸಲಾಗಿದ್ದು, ವೆಂಟಿಲೆಟರ್, ಮಾಸ್ಕ್, ಟೆಸ್ಟಿಂಗ್ ಕಿಟ್ ಉತ್ಪಾದನೆ ಪ್ರಮುಖ ಕಾರು ಕಂಪನಿಗಳು ಒಪ್ಪಿಗೆ ಸೂಚಿಸಿವೆ.