Just In
- 12 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 13 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 14 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 14 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಗಾರು ಎದುರಿಸಲು ಹೊಸ ಮಾರ್ಗಸೂಚಿ ಹೊರಡಿಸಿದ ಎನ್ಹೆಚ್ಎಐ
ಮುಂಬರುವ ಮುಂಗಾರಿಗೆ ಹೊಂದಿಕೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿಗಳನ್ನು ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿಗಳ ನಿರ್ವಹಣೆಯ ಪ್ರಕ್ರಿಯೆಯನ್ನು ವೇಗಗೊಳಿಸಲು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆಗೆ ಪ್ರಾದೇಶಿಕ ಅಧಿಕಾರಿಗಳು ಹಾಗೂ ಯೋಜನಾ ನಿರ್ದೇಶಕರಿಗೆ ಹೆಚ್ಚಿನ ಆದ್ಯತೆಯ ಆಧಾರದ ಮೇಲೆ ಮಾರ್ಗಸೂಚಿಗಳನ್ನು ನೀಡಲಾಗಿದೆ.
ಇದರ ಮುಖ್ಯ ಉದ್ದೇಶವೆಂದರೆ ಮುಂಗಾರುಗಾಗಿ ಹೆದ್ದಾರಿಗಳನ್ನು ಸಿದ್ಧಪಡಿಸುವುದರಿಂದ ಸಂಚಾರವು ಸರಾಗವಾಗಿರಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆದ್ದಾರಿಗಳ ಬಾಕಿ ಇರುವ ಕಾಮಗಾರಿಗಳನ್ನು ಜೂನ್ 30ಕ್ಕೆ ಮೊದಲು ಇತ್ಯರ್ಥಪಡಿಸುವ ಗುರಿಯನ್ನು ಹೊಂದಿದೆ. ನಿರ್ವಹಣಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಪ್ರಾದೇಶಿಕ ಅಧಿಕಾರಿಗಳಿಗೆ ಹಣಕಾಸಿನ ಅಧಿಕಾರವನ್ನು ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕಾರ್-ಮೌಂಟೆಡ್ ಕ್ಯಾಮೆರಾ, ಡ್ರೋನ್ ಅಥವಾ ನೆಟ್ವರ್ಕ್ ಸರ್ವೆ ವಾಹನಗಳಲ್ಲಿರುವ ತಂತ್ರಜ್ಞಾನ-ಚಾಲಿತ ಸಾಧನಗಳ ಮೂಲಕ ಹೆದ್ದಾರಿಗಳ ಸ್ಥಿತಿಯನ್ನು ನಿರ್ಣಯಿಸಲು ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಎಲ್ಲಾ ಕ್ಷೇತ್ರ ಅಧಿಕಾರಿಗಳಿಗೆ ಗಡುವನ್ನು ಪಾಲಿಸಲು, ನಿರ್ವಹಣಾ ಕಾರ್ಯಗಳ ಪ್ರಗತಿಯನ್ನು ಕಾಲಕಾಲಕ್ಕೆ ಮೇಲ್ವಿಚಾರಣೆ ಮಾಡಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶಿಸಲಾಗಿದೆ.
ಮುಂದಿನ ಎರಡು ವರ್ಷಗಳಲ್ಲಿ ರಸ್ತೆ ನಿರ್ಮಾಣಕ್ಕಾಗಿ ರೂ.15 ಲಕ್ಷ ಕೋಟಿ ರೂ. ಖರ್ಚು ಮಾಡಲಾಗುವುದೆಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿರವರು ತಿಳಿಸಿದ್ದರು. ಆಟೋ ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೊಳಿಸಲಾಗುವುದೆಂದು ಅವರು ಹೇಳಿದ್ದರು.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಆಟೋ ಸ್ಕ್ರ್ಯಾಪಿಂಗ್ ನೀತಿಯನ್ನು ತ್ವರಿತವಾಗಿ ಜಾರಿಗೊಳಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆಟೋ ಮೊಬೈಲ್ ವಲಯನ್ನು ಆರ್ಥಿಕ ಹಿಂಜರಿತದಿಂದ ಹೊರತಂದು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸುವಂತೆ ಅವರು ಸಲಹೆ ನೀಡಿದ್ದಾರೆ.
ಕರೋನಾ ವೈರಸ್ ಬಿಕ್ಕಟ್ಟನ್ನು ವಿಶ್ವ ಮಾರುಕಟ್ಟೆಯಲ್ಲಿ ಪ್ರಾಬಲ್ಯವನ್ನು ಸ್ಥಾಪಿಸುವ ಅವಕಾಶವನ್ನಾಗಿ ಮಾಡಿಕೊಳ್ಳುವಂತೆ ಹೂಡಿಕೆದಾರರು ಹಾಗೂ ಉದ್ಯಮಗಳಿಗೆ ಗಡ್ಕರಿರವರು ಕರೆ ನೀಡಿದ್ದಾರೆ. ಕರೋನಾ ವೈರಸ್ನಿಂದ ಆರ್ಥಿಕತೆ ವ್ಯವಸ್ಥೆಯ ಮೇಲೆ ಬಿಕ್ಕಟ್ಟು ಉಂಟಾಗಿದ್ದು, ಈ ಬಿಕ್ಕಟ್ಟನ್ನು ಆಶೀರ್ವಾದವನ್ನಾಗಿ ಬದಲಿಸಿಕೊಳ್ಳಬೇಕೆಂದು ಹೇಳಿದ್ದಾರೆ.