Just In
- 1 hr ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 2 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 3 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 3 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Movies Swathi Royal; ಒಂಬತ್ತನೇ ಕ್ಲಾಸ್ ನಲ್ಲೇ ಲವ್ವಲ್ಲಿ ಬಿದ್ದ ಅಮೃತಧಾರೆ ಅಪರ್ಣಾ..!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಸಂಗ್ರಹಕ್ಕೆ ಬ್ರೇಕ್
ಕರೋನಾ ವೈರಸ್ ಹಿನ್ನಲೆಯಲ್ಲಿ ಇಡೀ ರಾಷ್ಟ್ರಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದಕ್ಕಾಗಿ ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತಲಾಗಿದೆ.
ವಿಶ್ವಾದ್ಯಂತ ಈಗಾಗಲೇ 21 ಸಾವಿರಕ್ಕಿಂತಲೂ ಹೆಚ್ಚು ಜನರನ್ನು ಬಲಿ ಪಡೆದಿರುವ ಕರೋನಾ ವೈರಸ್ ಮಹಾಮಾರಿಯ ತಡೆಗೆ ಜಗತ್ತಿನ ಎಲ್ಲಾ ರಾಷ್ಟ್ರಗಳು ಶಕ್ತಿ ಮೀರಿ ಪ್ರಯತ್ನಗಳನ್ನು ನಡೆಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹ ಹಲವು ಕಠಿಣ ಕ್ರಮಗಳನ್ನು ಜಾರಿಗೆ ತಂದಿವೆ. ಕರೋನಾ ವೈರಸ್ ಅನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಈಗಗಾಲೇ ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯಗಳು ಸಹ ಗರಿಷ್ಠ ಮಟ್ಟದ ಮುಂಜಾಗ್ರತ ಕ್ರಮಗಳೊಂದಿಗೆ ಲಾಕ್ ಡೌನ್ ಮಾಡಲಾಗಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಸಂಗ್ರಹಕ್ಕೆ ಬ್ರೇಕ್ ಹಾಕಲಾಗಿದೆ.
ರಾಜ್ಯದ ಗಡಿಭಾಗಗಳನ್ನು ಈಗಾಗಲೇ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ತುರ್ತು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಹೀಗಿದ್ದರೂ ವೈರಸ್ ಭೀತಿ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಯಾವುದೇ ಟೋಲ್ ಸಂಗ್ರಹ ಮಾಡದಿರಲು ನಿರ್ಧರಿಸಲಾಗಿದೆ.
ಜೊತೆಗೆ ಹೆದ್ದಾರಿಗಳಲ್ಲಿ ಸಂಚರಿಸುತ್ತಿರುವ ತುರ್ತುವಾಹನಗಳಿಗೆ ವೈರಸ್ ಹರಡದಂತೆ ನಂಜು ನಿರೋಧಕ(ಡಿಸ್ ಇನ್ಫೆಕ್ಷನ್) ರಾಸಾಯನಿಕವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಯ ಸಹಾಯದೊಂದಿಗೆ ಸಿಂಪರಣೆ ಮಾಡಲಾಗುತ್ತಿದೆ.
ಈ ಹಿಂದೆ ಪ್ರತಿ ದಿನ ಸರಾಸರಿಯಾಗಿ ರೂ.85 ಕೋಟಿ ಶುಲ್ಕ ಸಂಗ್ರಹ ಮಾಡುತ್ತಿದ್ದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ(ಫಾಸ್ಟ್ಟ್ಯಾಗ್) ಮೂಲಕ ಹೊಸ ಬದಲಾವಣೆಗೆ ಕಾರಣವಾಗಿದ್ದು, ಆದರೆ ವೈರಸ್ ಭೀತಿ ಹಿನ್ನಲೆಯಲ್ಲಿ ಗಡಿಭಾಗಗಳು ಮುಚ್ಚಿಕೊಂಡಿರುವುದರಿಂದ ಟೋಲ್ ಸಂಗ್ರಹವನ್ನು ಮುಂದಿನ ತಿಂಗಳು 15ರ ತನಕ ಸಂಗ್ರಹ ಮಾಡದಿರಲು ನಿರ್ಧರಿಸಲಾಗಿದೆ.
ಇನ್ನು ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಮುಂದಿನ 21 ದಿನ ತನಕ ಇಡೀ ದೇಶವನ್ನೇ ಲಾಕ್ಡೌನ್ ಮಾಡಿರುವುದರಿಂದ ಸಾಕಷ್ಟು ಅನಾನುಕೂಲಕತೆಗಳನ್ನು ಉಂಟಾಗಿದ್ದರೂ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡೌನ್ ಅನಿವಾರ್ಯವಾಗಿದೆ.
ಭಾರತದಲ್ಲಿ ಇದುವರೆಗೆ 606 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವುದಲ್ಲದೆ 10ಕ್ಕೂ ಹೆಚ್ಚು ಜನ ಪ್ರಾಣಕಳೆದುಕೊಂಡಿದ್ದು, ವೈರಸ್ ಹರಡುವಿಕೆಯ ಮೂರನೇ ಮತ್ತು ನಾಲ್ಕನೇ ಹಂತವನ್ನು ತಗ್ಗಿಸುವುದು ಮಹತ್ವದ ಘಟ್ಟವಾಗಿದೆ.
ಇದಕ್ಕಾಗಿಯೇ ಸಾರ್ವಜನಿಕರು ಲಾಕ್ ಡೌನ್ಗೆ ಸಹಕರಿಸಬೇಕೆಂದು ಸರಕಾರಗಳು ಸಹ ಪದೇ ಪದೇ ಮನವಿ ಮಾಡಿಕೊಳ್ಳುತ್ತಿದ್ದು, ಇದನ್ನು ಸಾರ್ವಜನಿಕರು ಸಹ ಗಂಭೀರವಾಗಿ ತೆಗೆದುಕೊಂಡು ಪಾಲನೆ ಮಾಡಲೇಬೇಕಿದೆ.
ಇನ್ನು ವೈರಸ್ ಹರಡದಂತೆ ಅಗತ್ಯ ಕ್ರಮ ಕೈಗೊಂಡಿರುವ ಸ್ಥಳೀಯ ಸರ್ಕಾರಗಳು ಸೋಂಕು ಪಿಡಿತ ಸ್ಥಳಗಳಲ್ಲಿ ನಂಜು ನಿರೋಧಕ(ಡಿಸ್ ಇನ್ಫೆಕ್ಷನ್) ರಾಸಾಯನಿಕವನ್ನು ಸಿಂಪರಣೆ ಮಾಡಲಾಗುತ್ತಿದ್ದು, ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ನಂಜು ನಿರೋಧಕ(ಡಿಸ್ ಇನ್ಫೆಕ್ಷನ್) ಸಿಂಪರಣೆಗಾಗಿ ಡ್ರೋನ್ ಬಳಕೆ ಮಾಡುತ್ತಿದ್ದು, ಅತಿ ಕಡಿಮೆ ಸಮಯದಲ್ಲಿ ಇದು ಗರಿಷ್ಠ ಪ್ರದೇಶಗಳಲ್ಲಿ ನಂಜು ನಿರೋಧಕವನ್ನು ಸಿಂಪರಣೆ ಮಾಡಲು ಸಾಧ್ಯವಾಗುತ್ತಿದೆ.
ಇದರೊಂದಿಗೆ ಕರೋನಾ ವೈರಸ್ ಸೋಂಕಿತರ ಮೇಲೆ ನಿಗಾ ಇಡಲು ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದ್ದು, ಇದು ಚಿಕಿತ್ಸೆ ನೀಡುವ ವೈದ್ಯರಿಗೂ ವೈರಸ್ ಹರಡುವ ಸಾಧ್ಯತೆಗಳನ್ನು ತಗ್ಗಿಸಲು ಸಹಕಾರಿಯಾಗಲಿದೆ.