Just In
- 9 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 10 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 11 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 11 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಎಫೆಕ್ಟ್- ಇನ್ಮುಂದೆ ಮಾಸ್ಕ್ ಇಲ್ಲದೆ ಪೆಟ್ರೋಲ್ ಬಂಕ್ಗೆ ಬರಲೇಬೇಡಿ..
ಮಾಹಾಮಾರಿ ಕರೋನಾ ವೈರಸ್ ತಡೆಯುವುದಕ್ಕಾಗಿ ಈಗಾಗಲೇ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಸೋಂಕು ಹರಡದಂತೆ ಜಾರಿಗೆ ತರವಾಗಿರುವ ಲಾಕ್ಡೌನ್ ಅನ್ನು ಉಲ್ಲಂಘನೆ ಮಾಡಿ ಜೀವಕ್ಕೆ ಅಪಾಯ ತಂದುಕೊಳ್ಳುವವರ ಸಂಖ್ಯೆಗೇನು ಕಡಿಮೆಯಿಲ್ಲ.
ಲಾಕ್ಡೌನ್ ನಿಯಮ ಉಲ್ಲಂಘಿಸಿ ಸೋಂಕಿಗೆ ತುತ್ತಾಗದಿರುವಂತೆ ಎಷ್ಟೇ ಎಚ್ಚರಿಕೆ ನೀಡಿದರೂ ಕೂಡಾ ಕೆಲವರು ಮಾತ್ರ ನಿಯಮ ಉಲ್ಲಂಘಿಸಿ ಹೊರಗೆ ತಿರುವುದನ್ನು ನಿಲ್ಲಿಸುತ್ತಿಲ್ಲ. ಜೊತೆಗೆ ಹಲವಾರು ವಾಹನ ಸವಾರರು ಅನಗತ್ಯವಾಗಿ ವಾಹನಗಳ ಚಾಲನೆ ಮಾಡುತ್ತಿದ್ದು, ಯಾವುದೇ ಮುನ್ನೆಚ್ಚೆರಿಕೆ ಕ್ರಮ ಕೈಗೊಳ್ಳದಿರುವುದು ಅಪಾಯವನ್ನು ತಾವೇ ಆಹ್ವಾನ ಮಾಡುತ್ತಿದ್ದಾರೆ. ಇದರಿಂದ ಸುರಕ್ಷಾ ಕ್ರಮಗಳನ್ನು ಪಾಲಿಸದ ವಾಹನ ಸವಾರರಿಗೆ ಅರುಣಾಚಲಪ್ರದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.
ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್ ಹಾಕುವ ವಾಹನ ಸವಾರರಿಗೆ ಮಾತ್ರವೇ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ಮಾರಾಟ ಮಾಡಲಾಗುತ್ತಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆಯೂ ವಾಹನ ಸವಾರರಿಗೆ ಜಾಗೃತಿ ಮೂಡಿಸಲಾಗುತ್ತಿದೆ.
MOST READ: ಲಾಕ್ಡೌನ್ ವೇಳೆ ಕಾರು ಚಾಲನೆ ಮಾಡಿ ಸಿಕ್ಕಿಬಿದ್ದ ಮಹಿಳೆಯಿಂದ ಹೈಡ್ರಾಮಾ..
ಅರುಣಾಚಲಪ್ರದೇಶದಲ್ಲಿ ಮಾತ್ರವಲ್ಲದೆ ಓಡಿಸ್ಸಾದಲ್ಲೂ ಕೂಡಾ ಮಾಸ್ಕ್ ಧರಿಸದ ವಾಹನ ಸವಾರರಿಗೆ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆ ಮಾಡುವುದನ್ನು ನಿರ್ಬಂಧಿಸಲಾಗಿದ್ದು, ಸೋಂಕು ಹರಡದಿರುವಂತೆ ಎಚ್ಚರಿಕೆ ವಹಿಸಲಾಗುತ್ತಿದೆ.
ದೇಶಾದ್ಯಂತ ಈಗಾಗಲೇ 30 ಸಾವಿರ ಕರೋನಾ ವೈರಸ್ ಪಾಸಿಟಿವ್ ಕೇಸ್ಗಳು ದಾಖಲಾಗಿದ್ದು, ಬರೋಬ್ಬರಿ 940 ಜನ ಪ್ರಾಣಕಳೆದುಕೊಂಡಿದ್ದಾರೆ. ಸದ್ಯಕ್ಕೆ ದೇಶದಲ್ಲಿ ಕರೋನಾ ನಿಯಂತ್ರಣದಲ್ಲಿದ್ದರೂ ಎಚ್ಚರಿಕೆ ವಹಿಸದೆ ಹೋದಲ್ಲಿ ಮತ್ತಷ್ಟು ಪ್ರಾಣಹಾನಿಯಾಗುವುದರಲ್ಲಿ ಎರಡು ಮಾತಿಲ್ಲ.
MOST READ: ಲಾಕ್ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..
ಇದಕ್ಕಾಗಿ ಪ್ರತಿಯೊಬ್ಬರು ಲಾಕ್ಡೌನ್ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುವ ಮೂಲಕ ವೈರಸ್ ಹೊಡೆದೊಡಿಸಲು ನೆರವಾಗಬೇಕಿದ್ದು, ಅನಗತ್ಯವಾಗಿ ಹೊರಗೆ ತಿರುಗುವುದನ್ನು ಕಡಿಮೆ ಮಾಡುವ ಮೂಲಕ ಅಗತ್ಯ ಸುರಕ್ಷಾ ನಿಯಮಗಳನ್ನು ಪಾಲನೆ ಮಾಡಬೇಕಿದೆ.
ಇದಕ್ಕಾಗಿಯೇ ವಿವಿಧ ರಾಜ್ಯಗಳಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದ್ದು, ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳೊಂದಿಗೆ ಲಾಠಿ ರುಚಿ ಸಹ ತೋರಿಸುತ್ತಿದ್ದಾರೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು
ಇದರ ಜೊತೆಗೆ ಸಾರ್ವಜನಿಕರಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಪೊಲೀಸ್ ಸಿಬ್ಬಂದಿಯು ಅನಾವಶ್ಯಕವಾಗಿ ಹೊರಗೆ ತಿರುಗುವವರ ವಿರುದ್ಧದ ಕೇಸ್ ದಾಖಲಿಸುತ್ತಿರುವುದಲ್ಲದೇ ವೈರಸ್ ಹರಡದಂತೆ ಏನೆಲ್ಲಾ ಮುನ್ನಚ್ಚೆರಿಕೆ ವಹಿಸಬೇಕೆಂಬುವುದನ್ನು ಅಚ್ಚುಕಟ್ಟಾಗಾಗಿ ಸಾರ್ವಜನಿಕರಿಗೆ ತಿಳಿಹೇಳುತ್ತಿದ್ದಾರೆ.
ಈ ನಡುವೆ ರಾಜಧಾನಿ ದೆಹಲಿಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ಪೊಲೀಸ್ ಇಲಾಖೆಯು ಲಾಕ್ ಡೌನ್ ಯಶಸ್ವಿಗೊಳಿಸಲು ಪ್ರತ್ಯೇಕ ಪ್ಯಾಟ್ರೋಲ್ ವಾಹನಗಳೊಂದಿಗೆ ಗಸ್ತು ನಿರ್ವಹಣೆ ಮಾಡುತ್ತಿದ್ದು, ವೈರಸ್ ಕುರಿತು ಜಾಗೃತಿಯೊಂದಿಗೆ ಲಾಕ್ ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಶುರುಮಾಡಿದೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್
ವಲಯವಾರು ಕಾರ್ಯಾಚರಣೆ ನಡೆಸಿರುವ ದೆಹಲಿ ಪೊಲೀಸರು ಲಾಕ್ ಡೌನ್ ಉಲ್ಲಂಘಿಸಿ ತಿರುಗುವವರ ವಿರುದ್ಧ ಕಠಿಣ ಕ್ರಮ ಜರಗಿಸುತ್ತಿದ್ದು, ಈಗಾಗಲೇ ಸಾವಿರಾರು ವಾಹನಗಳನ್ನು ಜಪ್ತಿಗೊಳಿಸಲಾಗಿದೆ.