Just In
- 8 min ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು.. ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 2 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 15 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
- 18 hrs ago Air Taxi: ಬೆಂಗಳೂರು ಸೇರಿ ಈ ನಗರಗಳಲ್ಲಿ ಏರ್ ಟ್ಯಾಕ್ಸಿ.. ಆಕಾಶದಲ್ಲೇ ಆಫೀಸ್ಗೆ ಹೋಗಬಹುದು, ಕಡಿಮೆ ಖರ್ಚು!
Don't Miss!
- Movies "ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
- News Helicopters Crash: ಸೇನೆಯ ಎರಡು ಹೆಲುಕಾಪ್ಟರ್ ಡಿಕ್ಕಿ: 10 ಜನರ ಸಾವು
- Finance ಬೆಂಗಳೂರಿನಲ್ಲಿ ಈ ಜಾಗದಲ್ಲಿ ಸೈಟು ಖರೀದಿಸಬೇಡಿ: BDAಯಿಂದ 279 ಅಕ್ರಮ ಬಡಾವಣೆ ಪತ್ತೆ
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶೀಘ್ರದಲ್ಲೇ ಆಟೋ ರಿಕ್ಷಗಳಿಗೂ ಬರಲಿದೆ ಸಮ ಬೆಸ ನಿಯಮ
ಕರೋನಾ ವೈರಸ್ ಪ್ರಪಂಚದ ಎಲ್ಲಾ ರಾಷ್ಟ್ರಗಳನ್ನು ಕಾಡುತ್ತಿದೆ. ಈ ಮಹಾಮಾರಿ ವೈರಸ್ ನಿಂದಾಗಿ ಜನಜೀವನವೇ ತತ್ತರಿಸಿದೆ. ಜನರ ಜೀವನ ಶೈಲಿಯು ಬದಲಾಗಿದೆ. ಹೊಸ ಹೊಸ ಉದ್ಯಮಗಳು ತಲೆ ಎತ್ತುತ್ತಿವೆ. ವಿನಾ ಕಾರಣ ಮನೆಯಿಂದ ಹೊರಬಾರದಂತೆ ಜನರಿಗೆ ಸರ್ಕಾರಗಳು ಸೂಚನೆ ನೀಡುತ್ತಿವೆ.
ಆದರೂ ಜನ ಕರೋನಾ ವೈರಸ್ ಭಾರತಕ್ಕೆ ಕಾಲಿಟ್ಟೆ ಇಲ್ಲ ಎನ್ನುವ ರೀತಿಯಲ್ಲಿ ವಾಹನಗಳಲ್ಲಿ ಎಲ್ಲೆಂದರಲ್ಲಿ ತಿರುಗಾಡುತ್ತಿದ್ದಾರೆ. ಭಾರತದಲ್ಲಿ ಮಹಾರಾಷ್ಟ್ರ ರಾಜ್ಯವು ಕರೋನಾ ವೈರಸ್ ನಿಂದ ಹೆಚ್ಚು ತತ್ತರಿಸಿದೆ. ಆದರೂ ಮಹಾರಾಷ್ಟ್ರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯ ಸಾರಿಗೆ ಇಲಾಖೆಯು ಮಹಾರಾಷ್ಟ್ರದಲ್ಲಿ ಚಾಲನೆಯಲ್ಲಿರುವ ಆಟೋರಿಕ್ಷಾಗಳ ಸಂಚಾರಕ್ಕೆ ಸಮ ಬೆಸ ನಿಯಮವನ್ನು ಜಾರಿಗೆ ತರುವ ಚಿಂತನೆಯಲ್ಲಿದೆ.
ಸಂಚಾರ ದಟ್ಟಣೆಯನ್ನು ತಡೆಯುವುದರಿಂದ ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಬಹುದು ಎಂಬುದು ಇದರ ಹಿಂದಿರುವ ಉದ್ದೇಶ. ಈ ನಿಯಮದನ್ವಯ, ರಿಜಿಸ್ಟ್ರೇಷನ್ ನಂಬರಿನ ಕೊನೆಯಲ್ಲಿ ಬೆಸ ಸಂಖ್ಯೆಯನ್ನು ಹೊಂದಿರುವ ಆಟೋರಿಕ್ಷಾಗಳು ಬೆಸ ದಿನಗಳಲ್ಲಿ ರಸ್ತೆಗಿಳಿದರೆ, ಸಮ ಸಂಖ್ಯೆಯನ್ನು ಹೊಂದಿರುವ ಆಟೊಗಳು ಸಮ ದಿನಗಳಂದು ರಸ್ತೆಗಿಳಿಯಲಿವೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಸಾರ್ವಜನಿಕ ಸಾರಿಗೆ ಪುನರಾರಂಭಕ್ಕೆ ಸಲಹೆ ನೀಡಲು ನೇಮಿಸಲಾಗಿರುವ ಟಾಸ್ಕ್ ಫೋರ್ಸ್ ಮುಂದಿನ ಬಾರಿ ಸಭೆ ಸೇರಿದಾಗ ಈ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್ ಹೇಳಿದ್ದಾರೆ. ಸಾರ್ವಜನಿಕ ಸಾರಿಗೆಯನ್ನು ಸಂಘಟಿತ ರೀತಿಯಲ್ಲಿ ಪುನರಾರಂಭಿಸಿ, ಸಾರಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಶೀಲಿಸುವುದು ಇದರ ಉದ್ದೇಶ.
ಸದ್ಯಕ್ಕೆ ಆಟೋರಿಕ್ಷಾಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು, ಬಸ್ ಗಳು ಕಾರ್ಯನಿರ್ವಹಿಸುತ್ತಿಲ್ಲ. ಎಲ್ಲಾ ರೀತಿಯ ಸಾರ್ವಜನಿಕ ಸಾರಿಗೆಗಳನ್ನು ಹಲವು ನಿಯಮಗಳೊಂದಿಗೆ ಹಂತ ಹಂತವಾಗಿ ಪುನರಾರಂಭಿಸಲಾಗುವುದು. ಇವುಗಳಲ್ಲಿ ಸಮ ಬೆಸ ನಿಯಮಗಳು ಸಹ ಸೇರಿವೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಮಹಾರಾಷ್ಟ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಈ ನಿಯಮವನ್ನು ಟೀಕಿಸಿರುವ ರಿಕ್ಷಾ ಪಂಚಾಯತ್ನ ನಿತಿನ್ ಪವಾರ್ ರವರು ರಾಜ್ಯ ಸರ್ಕಾರವು ಮೊದಲು ಮುಕ್ತ ಪರವಾನಗಿ ವ್ಯವಸ್ಥೆಯನ್ನು ರದ್ದುಪಡಿಸಬೇಕು. ಸದ್ಯಕ್ಕೆ 40%ರಿಂದ 50% ಆಟೋರಿಕ್ಷಾಗಳು ಮಾತ್ರ ಸಂಚರಿಸುತ್ತಿವೆ. ಬೆಸ-ಸಮ ನಿಯಮವನ್ನು ಅಳವಡಿಸಿಕೊಂಡರೆ ಚಾಲಕರಿಗೆ ಮತ್ತಷ್ಟು ಸಮಸ್ಯೆಯಾಗುತ್ತದೆ ಎಂದು ಹೇಳಿದ್ದಾರೆ.
ಬದಲಿಗೆ ರಾಜ್ಯ ಸರ್ಕಾರವು ಈ ನಿಯಮವನ್ನು ಖಾಸಗಿ ವಾಹನಗಳ ಸಂಚಾರವನ್ನು ನಿಯಂತ್ರಿಸಲು ಬಳಸಬೇಕು ಎಂದು ನಿತಿನ್ ಪವಾರ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ 10 ಲಕ್ಷಕ್ಕೂ ಹೆಚ್ಚು ಆಟೋರಿಕ್ಷಾಗಳಿದ್ದು, ಇವುಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಆಟೋರಿಕ್ಷಾಗಳು ಪುಣೆ ಹಾಗೂ ಮುಂಬೈ ನಗರಗಳಲ್ಲಿ ಸಂಚರಿಸುತ್ತಿವೆ.