Just In
- 3 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 4 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 6 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 6 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಎಫೆಕ್ಟ್: ಕ್ಯಾಬ್ಗಳಲ್ಲಿ ಎಸಿ ಬಳಕೆ ಕಡ್ಡಾಯವಲ್ಲ
ಕರೋನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಳನ್ನು ಬಳಸುವಾಗ ಕೆಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸರ್ಕಾರವು ಸೂಚನೆ ನೀಡಿದೆ. ಕ್ಯಾಬ್ ಅಥವಾ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವಾಗ ಎಸಿ ಬಳಸದಂತೆ ಸೂಚಿಸಲಾಗಿದೆ. ಗಾಳಿಯಾಡಲು ಅನುಕೂಲವಾಗುವಂತೆ ಕಾರುಗಳ ವಿಂಡೋಗಳನ್ನು ತೆರೆದಿಡುವಂತೆ ಸೂಚನೆ ನೀಡಲಾಗಿದೆ.
ಇದರಿಂದಾಗಿ ಕ್ಯಾಬ್ ಚಾಲಕರು ಹಾಗೂ ಪ್ರಯಾಣಿಕರು ಉಸಿರುಗಟ್ಟುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಬಹುತೇಕ ಕ್ಯಾಬ್ ಪ್ರಯಾಣಿಕರು ಪ್ರಯಾಣದ ಸಮಯದಲ್ಲಿ ಎಸಿ ಆನ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಕ್ಯಾಬ್ ಚಾಲಕರು ಸಹ ಎಸಿ ಇಲ್ಲದೇ ಉಸಿರುಗಟ್ಟುವ ಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ.
ಎಸಿ ಇಲ್ಲದಿರುವುದರಿಂದ ಕಾರಿನೊಳಗಿನ ಶಾಖ ಹೆಚ್ಚಾಗುತ್ತಿದ್ದು, ಕ್ಯಾಬ್ ಚಾಲಕರು ಹಾಗೂ ಪ್ರಯಾಣಿಕರು ತೊಂದರೆಯನ್ನು ಎದುರಿಸುತ್ತಿದ್ದಾರೆ. ಇದರಿಂದಾಗಿ ಪ್ರಯಾಣವನ್ನು ಆರಂಭಿಸುವ ಮುನ್ನ ಎಸಿ ಆನ್ ಮಾಡಬೇಕೆಂದು ಗ್ರಾಹಕರು ಒತ್ತಾಯಿಸುತ್ತಿದ್ದಾರೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಕ್ಯಾಬ್ ಚಾಲಕರು ಗ್ರಾಹಕರಿಲ್ಲದ ಕಾರಣಕ್ಕೆ ಗಂಟೆಗಳ ಕಾಲ ನಿಂತಲ್ಲೇ ನಿಲ್ಲಬೇಕಾಗಿದೆ. ಇದರ ಜೊತೆಗೆ ಕೆಲ ಗ್ರಾಹಕರು ಬುಕ್ಕಿಂಗ್ಗಳನ್ನು ರದ್ದುಪಡಿಸುತ್ತಿದ್ದಾರೆ. ಓಲಾ ಹಾಗೂ ಉಬರ್ ಕಂಪನಿಗಳು ಯಾವುದೇ ಸಮಸ್ಯೆ ಎದುರಾದರೆ ಬುಕ್ಕಿಂಗ್ಗಳನ್ನು ರದ್ದುಪಡಿಸುವ ಅವಕಾಶವನ್ನು ನೀಡಿವೆ.
ಲಾಕ್ಡೌನ್ನಲ್ಲಿ ವಿನಾಯಿತಿ ದೊರೆತಿದ್ದರೂ ವ್ಯವಹಾರವು ಸಹಜ ಸ್ಥಿತಿಗೆ ಬರಲು ಇನ್ನೂ ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಕ್ಯಾಬ್ ಚಾಲಕರು ತಿಳಿಸಿದ್ದಾರೆ. ಕರೋನಾ ವೈರಸ್ ಹರಡಬಹುದೆಂಬ ಭೀತಿಯಿಂದ ಜನರು ಕ್ಯಾಬ್, ಟ್ಯಾಕ್ಸಿ ಹಾಗೂ ಆಟೋಗಳಲ್ಲಿ ಹೆಚ್ಚು ಪ್ರಯಾಣಿಸುತ್ತಿಲ್ಲ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಲಾಕ್ಡೌನ್ನಲ್ಲಿ ವಿನಾಯಿತಿ ನೀಡಲಾದ ನಂತರ ಗ್ರೀನ್ ಹಾಗೂ ಆರೆಂಜ್ ಝೋನ್ಗಳಲ್ಲಿರುವ ನಗರಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಪುನರಾರಂಭವಾಗಿವೆ. ದೇಶಿಯ ವಿಮಾನಯಾನಗಳು ಪುನರಾರಂಭವಾದ ನಂತರ ಓಲಾ ಕಂಪನಿಯು ಭಾರತದ 22 ವಿಮಾನ ನಿಲ್ದಾಣಗಳಲ್ಲಿ ಕ್ಯಾಬ್ ಸೇವೆಗಳನ್ನು ಆರಂಭಿಸಿದೆ.
ಲಾಕ್ಡೌನ್ನಿಂದ ಉಂಟಾದ ನಷ್ಟವನ್ನು ಸರಿಪಡಿಸಲು ಓಲಾ ಕಂಪನಿಯು 1,400 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ. ಲಾಕ್ಡೌನ್ನಿಂದಾಗಿ ವ್ಯವಹಾರವು 95%ನಷ್ಟು ಕುಸಿದಿದ್ದು, ಕಾರ್ಯಾಚರಣೆ ಮುಂದುವರಿಸಲು ಹಲವಾರು ಸಮಸ್ಯೆಗಳು ಎದುರಾಗಲಿವೆ ಎಂದು ಓಲಾ ಕಂಪನಿಯು ತಿಳಿಸಿದೆ.