Just In
- 4 min ago ಅದ್ಭುತ ಫೀಚರ್ಸ್ ಪಡೆದುಕೊಂಡ ಟಾಟಾ ಟಿಯಾಗೋ ಇವಿ: ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ
- 47 min ago ಭರ್ಜರಿ ಮೈಲೇಜ್ನ ಹೈಬ್ರಿಡ್ ಮಾರುತಿ ಸ್ವಿಫ್ಟ್: ಇವಿ ಕಾರುಗಳನ್ನೂ ಹಿಂದಿಕ್ಕಲಿದೆ ಎಂದ ಭವಿಷ್ಯವಾಣಿ!
- 2 hrs ago ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago BAJAJ CNG ಬೈಕ್ ಚಿತ್ರಗಳು ಸೋರಿಕೆ: ಬೆಲೆ ಕೇಳಿದರೆ ಶಾಕ್ ಆಗುವುದಂತೂ ಪಕ್ಕಾ!
Don't Miss!
- Sports IPL 2024: ಗಾಯದ ಕಾರಣದಿಂದ ಆಟಗಾರ ಲೀಗ್ನಿಂದ ಹೊರ ನಡೆದರೆ ಸಿಗುವ ಹಣವೆಷ್ಟು?
- News ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ: ಪ್ರಯಾಣಿಕರಿಗೆ ತೊಂದರೆ
- Movies ಬಾಲಿವುಡ್ ಹಾಟ್ ಕಪಲ್ ರೊಮ್ಯಾನ್ಸ್ ನೋಡಿ ಪೂಜಾ ಹೆಗ್ಡೆಗೆ ಅಸೂಯೆ!; ವಿಡಿಯೋ ವೈರಲ್
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ಎಫೆಕ್ಟ್: ಕ್ಯಾಬ್ಗಳಲ್ಲಿ ಎಸಿ ಬಳಕೆ ಕಡ್ಡಾಯವಲ್ಲ
ಕರೋನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಳನ್ನು ಬಳಸುವಾಗ ಕೆಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಸರ್ಕಾರವು ಸೂಚನೆ ನೀಡಿದೆ. ಕ್ಯಾಬ್ ಅಥವಾ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವಾಗ ಎಸಿ ಬಳಸದಂತೆ ಸೂಚಿಸಲಾಗಿದೆ. ಗಾಳಿಯಾಡಲು ಅನುಕೂಲವಾಗುವಂತೆ ಕಾರುಗಳ ವಿಂಡೋಗಳನ್ನು ತೆರೆದಿಡುವಂತೆ ಸೂಚನೆ ನೀಡಲಾಗಿದೆ.
ಇದರಿಂದಾಗಿ ಕ್ಯಾಬ್ ಚಾಲಕರು ಹಾಗೂ ಪ್ರಯಾಣಿಕರು ಉಸಿರುಗಟ್ಟುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಬಹುತೇಕ ಕ್ಯಾಬ್ ಪ್ರಯಾಣಿಕರು ಪ್ರಯಾಣದ ಸಮಯದಲ್ಲಿ ಎಸಿ ಆನ್ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಕ್ಯಾಬ್ ಚಾಲಕರು ಸಹ ಎಸಿ ಇಲ್ಲದೇ ಉಸಿರುಗಟ್ಟುವ ಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ತಿಳಿಸಿದ್ದಾರೆ.
ಎಸಿ ಇಲ್ಲದಿರುವುದರಿಂದ ಕಾರಿನೊಳಗಿನ ಶಾಖ ಹೆಚ್ಚಾಗುತ್ತಿದ್ದು, ಕ್ಯಾಬ್ ಚಾಲಕರು ಹಾಗೂ ಪ್ರಯಾಣಿಕರು ತೊಂದರೆಯನ್ನು ಎದುರಿಸುತ್ತಿದ್ದಾರೆ. ಇದರಿಂದಾಗಿ ಪ್ರಯಾಣವನ್ನು ಆರಂಭಿಸುವ ಮುನ್ನ ಎಸಿ ಆನ್ ಮಾಡಬೇಕೆಂದು ಗ್ರಾಹಕರು ಒತ್ತಾಯಿಸುತ್ತಿದ್ದಾರೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಕ್ಯಾಬ್ ಚಾಲಕರು ಗ್ರಾಹಕರಿಲ್ಲದ ಕಾರಣಕ್ಕೆ ಗಂಟೆಗಳ ಕಾಲ ನಿಂತಲ್ಲೇ ನಿಲ್ಲಬೇಕಾಗಿದೆ. ಇದರ ಜೊತೆಗೆ ಕೆಲ ಗ್ರಾಹಕರು ಬುಕ್ಕಿಂಗ್ಗಳನ್ನು ರದ್ದುಪಡಿಸುತ್ತಿದ್ದಾರೆ. ಓಲಾ ಹಾಗೂ ಉಬರ್ ಕಂಪನಿಗಳು ಯಾವುದೇ ಸಮಸ್ಯೆ ಎದುರಾದರೆ ಬುಕ್ಕಿಂಗ್ಗಳನ್ನು ರದ್ದುಪಡಿಸುವ ಅವಕಾಶವನ್ನು ನೀಡಿವೆ.
ಲಾಕ್ಡೌನ್ನಲ್ಲಿ ವಿನಾಯಿತಿ ದೊರೆತಿದ್ದರೂ ವ್ಯವಹಾರವು ಸಹಜ ಸ್ಥಿತಿಗೆ ಬರಲು ಇನ್ನೂ ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಕ್ಯಾಬ್ ಚಾಲಕರು ತಿಳಿಸಿದ್ದಾರೆ. ಕರೋನಾ ವೈರಸ್ ಹರಡಬಹುದೆಂಬ ಭೀತಿಯಿಂದ ಜನರು ಕ್ಯಾಬ್, ಟ್ಯಾಕ್ಸಿ ಹಾಗೂ ಆಟೋಗಳಲ್ಲಿ ಹೆಚ್ಚು ಪ್ರಯಾಣಿಸುತ್ತಿಲ್ಲ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಲಾಕ್ಡೌನ್ನಲ್ಲಿ ವಿನಾಯಿತಿ ನೀಡಲಾದ ನಂತರ ಗ್ರೀನ್ ಹಾಗೂ ಆರೆಂಜ್ ಝೋನ್ಗಳಲ್ಲಿರುವ ನಗರಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಪುನರಾರಂಭವಾಗಿವೆ. ದೇಶಿಯ ವಿಮಾನಯಾನಗಳು ಪುನರಾರಂಭವಾದ ನಂತರ ಓಲಾ ಕಂಪನಿಯು ಭಾರತದ 22 ವಿಮಾನ ನಿಲ್ದಾಣಗಳಲ್ಲಿ ಕ್ಯಾಬ್ ಸೇವೆಗಳನ್ನು ಆರಂಭಿಸಿದೆ.
ಲಾಕ್ಡೌನ್ನಿಂದ ಉಂಟಾದ ನಷ್ಟವನ್ನು ಸರಿಪಡಿಸಲು ಓಲಾ ಕಂಪನಿಯು 1,400 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ. ಲಾಕ್ಡೌನ್ನಿಂದಾಗಿ ವ್ಯವಹಾರವು 95%ನಷ್ಟು ಕುಸಿದಿದ್ದು, ಕಾರ್ಯಾಚರಣೆ ಮುಂದುವರಿಸಲು ಹಲವಾರು ಸಮಸ್ಯೆಗಳು ಎದುರಾಗಲಿವೆ ಎಂದು ಓಲಾ ಕಂಪನಿಯು ತಿಳಿಸಿದೆ.